• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʼಅನ್ಯಥಾ ಭಾವಿಸಬೇಡಿʼ ಎಂದು ಹಿಂದೂ ಓಲೈಕೆ ರಾಜಕಾರಣಕ್ಕೆ ಇಳಿದರಾ ದೀದಿ?

by
September 15, 2020
in ರಾಜಕೀಯ
0
ʼಅನ್ಯಥಾ ಭಾವಿಸಬೇಡಿʼ ಎಂದು ಹಿಂದೂ ಓಲೈಕೆ ರಾಜಕಾರಣಕ್ಕೆ ಇಳಿದರಾ ದೀದಿ?
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಹರಸಾಹಸ ಪಡುತ್ತಿವೆ. ಬಿಜೆಪಿ ತನ್ನ ಹಿಂದುತ್ವ ಅಜೆಂಡಾದ ಮೇಲೆ ತೃಣಮೂಲ ಕಾಂಗ್ರೆಸ್‌ ನಾಯಕಿಯನ್ನು ಟೀಕಿಸಿದರೆ, ಮಮತಾ ಬ್ಯಾನರ್ಜಿ ಒಂದು ಹೆಜ್ಜೆ ಮುಂದೆ ಹೋಗಿ, ಈಗ ಹಿಂದೂ ಮತಗಳ ಓಲೈಕೆಗೆ ಪ್ರಯತ್ನ ಪಡುತ್ತಿದ್ದಾರೆ.

ADVERTISEMENT

ಕೇವಲ ನಾಲ್ಕು ದಿನಗಳ ಹಿಂದಷ್ಟೇ, ದೀದಿ ಹಿಂದೂ ವಿರೋಧಿ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ಜೆ ಪಿ ನಡ್ಡಾ ಟೀಕಿಸಿದ್ದರು. ಈಗ ಮಮತಾ ಬ್ಯಾನರ್ಜಿ, ಬಡ ಪುರೋಹಿತರಿಗೆ ಸರ್ಕಾರದ ಪರವಾಗಿ ತಿಂಗಳಿಗೆ ಒಂದು ಸಾವಿರ ಮಾಸಾಶನ ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂ ವಿರೋಧಿ ಎಂಬ ಪಟ್ಟವನ್ನು ಕಳಚಲು ಮತ್ತು ತಮ್ಮ ಪಕ್ಷ ಬೇರೆಯವರಿಗಿಂತ ಮುಸ್ಲಿಂರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂಬ ಅಪವಾದವನ್ನು ತೊಲಗಿಸಲು ಈ ಯೋಜನೆಯನ್ನು ಜಾರಿಗೆ ತಂದಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಡ ಪುರೋಹಿತರಿಗೆ ಮಾತ್ರವಲ್ಲದೇ, ದಲಿತರಿಗೂ ಯೋಜನೆಯನ್ನು ಘೊಷಿಸಿರುವ ಸಿಎಂ ಮಮತಾ ಬ್ಯಾನರ್ಜಿ, ದಲಿತ ಅಕಾಡೆಮಿಯನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಇದರೊಂದಿಗೆ, ಹಿಂದಿ ಅಕಾಡೆಮಿ ಹಾಗೂ ರಾಜಭಾಂಶಿ ಅಕಾಮಿಯನ್ನು ವಿಸ್ತರಿಸುವುದಾಗಿ ಕೂಡಾ ಘೋಷಣೆ ಮಾಡಿದ್ದಾರೆ.

ಇನ್ನು 14 ಶತಮಾನಗಳಿಗೂ ಪುರಾತನವಾದ ಬಂಕುರ ಬಿಷ್ಣುಪುರ್‌ ದೇವಸ್ಥಾನವನ್ನು ಅಭಿವೃದ್ದಿಗೊಳಿಸುವುದರ ಜೊತೆಗೆ, ಕೊಲ್ಕತ್ತಾದಲ್ಲಿರುವ ದೇವಸ್ಥಾನ, ಗುರುದ್ವಾರ ಹಾಗೂ ಮಸೀದಿಗಳನ್ನೂ ಅಭಿವೃಧ್ದಿಗೊಳಿಸುವುದಾಗಿ ಹೇಳಿದ್ದಾರೆ. ಈ ಯೋಜನೆಗಳು ಸರ್ಕಾರದ ʼಸರ್ಬ ಧರ್ಮ ಸಮನ್ವಯ್‌ʼ (ಸರ್ವ ಧರ್ಮ ಸಮನ್ವಯ) ಧೋರಣೆಯನ್ನು ಪ್ರತಿಪಾದಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.

“ಅನ್ಯಥಾ ಭಾವಿಸಬೇಡಿ. ಸುಮಾರು 8,000 ಬಡ ಬ್ರಾಹ್ಮಣರು ಮನವಿ ಮಾಡಿಕೊಂಡ ಕಾರಣಕ್ಕೆ, ರೂ. ಒಂದು ಸಾವಿರ ಮಾಸಾಶನ ನಿಗದಿ ಪಡಿಸಿದ್ದೇವೆ. ಇದರೊಂದಿಗೆ ಬಾಂಗ್ಲಾ ಅಬಾಸ್‌ ಯೋಜನಾ (ಬಾಂಗ್ಲಾ ವಾಸ್ತವ್ಯ ಯೋಜನೆ)ಯಡಿಯಲ್ಲಿ ಅವರಿಗೆ ಮನೆ ನಿರ್ಮಿಸಲು ಸಹಾಯ ಮಾಡಲಾಗುವುದು. ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ಆರಂಬವಾಗುವ ದುರ್ಗಾ ಪೂಜೆಯ ಸಮಯದಿಂದ 8,000 ಬ್ರಾಹ್ಮಣರಿಗೆ ಈ ಯೋಜನೆ ತಲುಪುವುದು,” ಎಂದು ಸಿಎಂ ಕಾರ್ಯಾಲಯ ತಿಳಿಸಿದೆ.

Tags: CM Mamata BanerjeeWest Bengal Assembly Electionಪಶ್ಚಿಮ ಬಂಗಾಳ ಚುನಾವಣೆಸಿಎಂ ಮಮತಾ ಬ್ಯಾನರ್ಜಿಹಿಂದೂ ಓಲೈಕೆ ರಾಜಕಾರಣಕ್ಕೆ
Previous Post

ಕೋವಿಡ್‌ 19: ದೇಶದ 11 ಜಿಲ್ಲೆಗಳಲ್ಲಿ ಶೇ. 42ರಷ್ಟು ಸಾವುಗಳು ದಾಖಲು

Next Post

ದೆಹಲಿ ಗಲಭೆ ತನಿಖೆ: ಪೊಲೀಸರ ವಿರುದ್ಧ ವ್ಯಾಪಕ ಟೀಕೆ, ಫೇಸ್‌ಬುಕ್‌ಗೆ ಛೀಮಾರಿ!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ದೆಹಲಿ ಗಲಭೆ ತನಿಖೆ: ಪೊಲೀಸರ ವಿರುದ್ಧ ವ್ಯಾಪಕ ಟೀಕೆ

ದೆಹಲಿ ಗಲಭೆ ತನಿಖೆ: ಪೊಲೀಸರ ವಿರುದ್ಧ ವ್ಯಾಪಕ ಟೀಕೆ, ಫೇಸ್‌ಬುಕ್‌ಗೆ ಛೀಮಾರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada