ADVERTISEMENT
  • Home
  • About Us
  • ಕರ್ನಾಟಕ
Saturday, May 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʼಕೋವಿಡ್-19‌ʼ ಅಟ್ಟಹಾಸದ ಮಧ್ಯೆಯೂ ಆಶಾದಾಯಕ ಬೆಳವಣಿಗೆ..

by
March 28, 2020
in ದೇಶ
0
ʼಕೋವಿಡ್-19‌ʼ ಅಟ್ಟಹಾಸದ ಮಧ್ಯೆಯೂ ಆಶಾದಾಯಕ ಬೆಳವಣಿಗೆ..
Share on WhatsAppShare on FacebookShare on Telegram

ಜಗತ್ತಿನಾದ್ಯಂತ ಕರೋನಾ ವೈರಸ್‌ ಮಹಾಮಾರಿ ಜನತೆಯಲ್ಲಿ ಆತಂಕದ ವಾತಾವರಣ ಮೂಡಿಸಿದೆ. ಸದಾ ತನ್ನ ಜೊತೆಗಿರುವ ಸ್ನೇಹಿತರು, ಕುಟುಂಬಿಕರ ಬಗ್ಗೆಯೇ ಸಂಶಯಿಸುವ ಸನ್ನಿವೇಶ ಒದಗಿ ಬಂದಿದೆ.. ಚೀನಾದಲ್ಲಿ ಆರಂಭವಾದ ಈ ಮಹಾಮಾರಿ ರೋಗ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದೆ. ಅಮೆರಿಕಾ, ಇಟಲಿ, ಸ್ಪೇನ್‌, ಇರಾನ್‌ ರಾಷ್ಟ್ರಗಳಂತೂ ಕರೋನಾ ಪೀಡಿತ ಭೂಮಿಯಾಗತೊಡಗಿದೆ. ಅಮೆರಿಕಾ ದೇಶವೊಂದರಲ್ಲಿಯೇ ಲಕ್ಷಕ್ಕೂ ಮಿಕ್ಕ ಕೋವಿಡ್-19‌ ಸೋಂಕಿತರು ಪತ್ತೆಯಾಗಿದ್ದಾರೆ. ಆರಂಭದಲ್ಲಿ ಚೀನಾದಲ್ಲಿ ಉಂಟು ಮಾಡಿದ್ದ ಸಾವು-ನೋವು ಈಗ ಇಟಲಿ, ಅಮೆರಿಕಾ, ಸ್ಪೇನ್‌ ನಂತಹ ರಾಷ್ಟ್ರಗಳಲ್ಲಿ ವ್ಯಾಪಕವಾಗ ತೊಡಗಿದೆ. ದಿನದಿಂದ ದಿನಕ್ಕೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ ಅಧಿಕವಾಗತೊಡಗಿದೆ. ಅಂತೆಯೇ ಕೋವಿಡ್-19‌ ರೋಗಿಗಳ ಗುಣಮುಖರಾಗುವ ಸಂಖ್ಯೆಯೂ ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವುದು ಸಮಾಧಾನಕರ ಸಂಗತಿ.

ADVERTISEMENT

ಸಾಮಾನ್ಯವಾಗಿ ಈ ಸೋಂಕು ವೃದ್ಧರು ಹಾಗೂ ಮಕ್ಕಳಿಗೆ ತಗುಲಿದರೆ ಅವರು ಬದುಕಿ ಉಳಿಯುವುದು ಕಷ್ಟ ಎನ್ನಲಾಗುತ್ತಿದೆ. ಆದರೆ ಅದೇ ಸಮಯಕ್ಕೆ ಇಟೆಲಿಯಲ್ಲಿ 101 ರ ಹರೆಯದ ವೃದ್ಧರೋರ್ವರು ಕೋವಿಡ್-19‌ ಸೋಂಕಿನ ವಿರುದ್ಧ ಗೆದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇದು ಕರೋನಾ ರೋಗಗ್ರಸ್ತ ಇಟೆಲಿಯಲ್ಲಿ ಒಂದು ರೀತಿಯ ಆಶಾಭಾವನೆ ಮೂಡಿಸಿದೆ. ಅಲ್ಲದೇ ಯಾವ ದೇಶ ತನ್ನಲ್ಲಿ ವೃದ್ಧರಿಗೆ ಚಿಕಿತ್ಸೆ ನೀಡಲು ನಿರಾಕರಿಸಿತ್ತೋ ಅದೇ ದೇಶದಲ್ಲಿ ಇಂತಹದ್ದೊಂದು ಪವಾಡ ನಡೆದಿದೆ.

ಈ ಮಧ್ಯೆ ಜಗತ್ತಿನಾದ್ಯಂತ ಕರೋನಾ ಸೋಂಕಿತರ ಸಂಖ್ಯೆ 6 ಲಕ್ಷ ಮೀರಿದೆ. ಪ್ರಸ್ತುತ ಜಗತ್ತಿನಾದ್ಯಂತ 6,01,478 ಮಂದಿಗೆ ಕೋವಿಡ್-19‌ ದೃಢಪಟ್ಟರೆ, ಅದರಲ್ಲಿ 27,862 ಮಂದಿ ಅಸುನೀಗಿದ್ದಾರೆ. ಆದರೆ ಸಮಧಾನದ ಸಂಗತಿ ಅಂದ್ರೆ 1,31,826 ಮಂದಿ ಕರೋನಾ ವಿರುದ್ಧದ ಹೋರಾಟದಲ್ಲಿ ಗೆದ್ದಿದ್ದಾರೆ, ಅರ್ಥಾತ್‌ ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲೂ ಪ್ರಸ್ತುತ 917 ಮಂದಿಯಲ್ಲಿ ಕೋವಿಡ್-19‌ ದೃಢಪಟ್ಟರೆ, 20 ಮಂದಿ ಸಾವನ್ನಪ್ಪಿದ್ದಾರೆ, ಜೊತೆಗೆ 83 ಮಂದಿ ಗುಣಮುಖರಾಗಿದ್ದಾರೆ.

ಇನ್ನು ಕರ್ನಾಟಕ ರಾಜ್ಯದಲ್ಲಿ ಸದ್ಯ 73 ಮಂದಿಗೆ ಕೋವಿಡ್-19 ದೃಢಪಟ್ಟರೆ, ಮೂರು ಮಂದಿ ಸಾವನ್ನಪ್ಪಿ, 65 ಮಂದಿ ಇನ್ನೂ ಆಸ್ಪತ್ರೆ ನಿಗಾದಲ್ಲಿದ್ದಾರೆ. 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಕಂಡಿದ್ದಾರೆ. ಇನ್ನು ಅತ್ಯಧಿಕ ಕೋವಿಡ್-19‌ ಪೀಡಿತ ಕೇರಳ ರಾಜ್ಯದಲ್ಲಿ 176 ಮಂದಿಯಲ್ಲಿ 12 ಮಂದಿ ಗುಣಮುಖರಾಗಿದ್ದರೆ, ಓರ್ವ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಏಕಾಏಕಿ ತವರಿಗೆ ಎನ್‌ಆರ್‌ಐಗಳು ವಾಪಾಸ್‌ ಬಂದ ಹಿನ್ನೆಲೆ ಏರುಗತಿಯಲ್ಲಿ ಸಾಗಿದ್ದ ಕೋವಿಡ್‌ -19 ಬಾಧಿತರ ಸಂಖ್ಯೆ 162 ತಲುಪಿದ್ದು‌ ಅದರಲ್ಲಿ 4 ಮಂದಿ ಸಾವನ್ನಪ್ಪಿ 25 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 40 ಸೋಂಕು ದೃಢಪಟ್ಟಿದ್ದು, ಅವರಲ್ಲಿ 6 ಮಂದಿ ಗುಣಮುಖರಾದರೆ ಓರ್ವ ಸಾವನ್ನಪ್ಪಿದ್ದಾರೆ.

ಇನ್ನು ಜಗತ್ತಿನ ವಿಚಾರಕ್ಕೆ ಬರೋದಾದರೂ ಅತೀ ಹೆಚ್ಚು ಕೋವಿಡ್-19‌ ಪೀಡಿತ ದೇಶ ಅಮೆರಿಕಾ. ಸದ್ಯ ಅಮೆರಿಕಾದಲ್ಲಿ ಕರೋನಾ ವೈರಸ್‌ ಲಕ್ಷಕ್ಕೂ ಅಧಿಕ ಮಂದಿ ಮೇಲೆ ದಾಳಿ ನಡೆಸಿದೆ. ಅಮೆರಿಕಾದಲ್ಲಿ ಸದ್ಯ 1,04,671 ಮಂದಿ ಸೋಂಕು ಪೀಡಿತರಾದರೆ 1,176 ಮಂದಿ ಸಾವನ್ನಪ್ಪಿದ್ದರೆ, 2387 ಮಂದಿ ಗುಣಮುಖ ಹೊಂದಿದ್ದಾರೆ. ಇನ್ನು ಇಟೆಲಿಯ 86,498 ಸೋಂಕು ಪೀಡಿತರಲ್ಲಿ 10950 ಗುಣಮುಖರಾದರೆ, 9134 ಮಂದಿ ಸಾವೀಗೀಡಾಗಿದ್ದಾರೆ. ಹಾಗೂ ಸ್ಪೇನ್ ನಲ್ಲಿ 65,719 ಕನ್ಫರ್ಮ್‌ ಆದರೆ, 9357 ಮಂದಿ ಗುಣಮುಖ ಹೊಂದಿದ್ದಾರೆ ಆದರೆ ಸಾವಿನ ಸಂಖ್ಯೆ ಮಾತ್ರ ಐದು ಸಾವಿರ ದಾಟಿವೆ. ಇನ್ನೂ ಕೋವಿಡ್-19‌ ನ ಮೂಲ ಚೀನಾದಲ್ಲಿ 74,971 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಚೀನಾದ ಪ್ರಕಾರ 81,394 ಕೋವಿಡ್-19 ಪೀಡಿತರಲ್ಲಿ 3295 ಮಂದಿ ಬಲಿಯಾಗಿದ್ದಾರೆ. ಇನ್ನು ಬಹರೇನ್‌ ದೇಶದಲ್ಲಿ ಸೋಂಕು ಪತ್ತೆಯಾದ ಅರ್ಧದಷ್ಟು ಮಂದಿ ಗುಣಮುಖರಾಗಿರುವುದು ಸಮಾಧಾನದ ಸಂಗತಿ. ಅಲ್ಲಿ ದೃಢಪಟ್ಟಿರುವ ಸೋಂಕಿನ ಸಂಖ್ಯೆ 466, ಅದಲ್ಲಿ ನಾಲ್ವರು ಸಾವನ್ನಪ್ಪಿದ್ದರೆ 235 ಮಂದಿ ಗುಣಮುಖ ಹೊಂದಿದ್ದಾರೆ.

ಒಟ್ಟಿನಲ್ಲಿ ಜಗತ್ತಿನ ಹಲವು ದೇಶಗಳಲ್ಲಿ ಕರ್ಫ್ಯೂ ಮಾದರಿ ಲಾಕ್‌ಡೌನ್‌ ಅಳವಡಿಸಲಾಗಿದ್ದು, ಕರೋನಾ ವೈರಸ್‌ ವಿರುದ್ಧ ಗೆಲ್ಲಲು ಅಣ್ವಸ್ತ್ರ ಹೊಂದಿರುವ ರಾಷ್ಟ್ರಗಳು ಪರದಾಡುತ್ತಿದೆ. ಅದರೆ ಸಮಾಧಾನದ ಸಂಗತಿ ಅಂದ್ರೆ ಭಾರತದಲ್ಲಿ ಇದುವರೆಗೆ ವಿಮಾನ ಮೂಲಕ ಆಗಮಿಸಿದ 15,24,266 ಮಂದಿಯನ್ನು ಸ್ಕ್ರೀನಿಂಗ್‌ ಮಾಡಲಾಗಿದ್ದು, ಅದರಲ್ಲಿ ಬಹುತೇಕ ಮಂದಿ ʼಹೋಮ್‌ ಕ್ವಾರೆಂಟೈನ್ʼ ಗೆ ಒಳಗಾಗಿದ್ದಾರೆ. ಅದಲ್ಲದೇ ಈ ರೀತಿ ಕೋವಿಡ್-19‌ ಏರಿಕೆಯ ನಡುವೆಯೂ ರೋಗಿಗಳು ಚಿಕಿತ್ಸೆ ಸ್ಪಂದಿಸುತ್ತಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಕೇವಲ ಕೋವಿಡ್-19‌ ಸಾವಿನ ಕುರಿತು ಲೆಕ್ಕಾಚಾರ ಹಾಕುವ ಸಂದರ್ಭದಲ್ಲಿಯೇ ಈ ರೀತಿಯಾಗಿ ಕೋವಿಡ್-19‌ ಪಾಸಿಟಿವ್‌ ಆದ ಬಳಿಕವೂ ಬದುಕಿ ಬಂದವರ ಲೆಕ್ಕಾಚಾರದ ಬಗ್ಗೆಯೂ ನಾವು ಗಮನಹರಿಸಬೇಕಿದೆ. ಆದರೆ ಒಂದು ಕಡೆಯಲ್ಲಿ ಕೋವಿಡ್‌-19 ಅಪಾಯದ ಮುನ್ಸೂಚನೆ ಬಗ್ಗೆಯೂ ಗಮನವಿಡುತ್ತ, ಗುಣಮುಖರಾದವರ ಬಗ್ಗೆಯೂ ತಿಳಿದುಕೊಳ್ಳುವ ಜೊತೆಗೆ ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕಿದೆ.

Tags: carona virusChinaCovid 19nation lockdownಕರೋನಾ ವೈರಸ್‌ಕರ್ನಾಟಕಚೀನಾಭಾರತ ಲಾಕ್‌ಡೌನ್‌
Previous Post

ಕರೋನಾ ಸೋಂಕನ್ನೂ ಕೋಮುವಾದಿ ಅಜೆಂಡಾದ ಅಸ್ತ್ರ ಮಾಡಿಕೊಂಡ ಮಾಧ್ಯಮ!

Next Post

ಸಿಎಂ ಯಡಿಯೂರಪ್ಪ ಮಾಡಿದ ಕರೋನಾ ಯಡವಟ್ಟು ಸರಿಪಡಿಸಲು ಬಿಜೆಪಿ ವರಿಷ್ಠರ ಮಧ್ಯಪ್ರವೇಶ!

Related Posts

ಕರ್ನಾಟಕ

ಅಧ್ಯಕ್ಷ ಸ್ಥಾನಕ್ಕೆ DKಸುರೇಶ್ ನಾಮಪತ್ರ ಸಲ್ಲಿಕೆ

by ಪ್ರತಿಧ್ವನಿ
May 17, 2025
0

https://youtu.be/1PWjkUhCOwo

Read moreDetails

ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಎಡವಿಬಿದ್ದ ಸಿಎಂ ಸಿದ್ದರಾಮಯ್ಯ

May 17, 2025

Operation Sindoora ಹಾಗೂ ಸೇನೆ ಬಗ್ಗೆ ಹಗುರವಾಗಿ ಮಾತನಾಡಿದಲ್ಲ

May 17, 2025

ಸಿಎಂಗೆ ಪತ್ರ ಬರೆದ ಸಂಸದ ಸಿಎನ್ ಮಂಜುನಾಥ

May 17, 2025
ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

May 17, 2025
Next Post
ಸಿಎಂ ಯಡಿಯೂರಪ್ಪ ಮಾಡಿದ ಕರೋನಾ ಯಡವಟ್ಟು ಸರಿಪಡಿಸಲು ಬಿಜೆಪಿ ವರಿಷ್ಠರ ಮಧ್ಯಪ್ರವೇಶ!

ಸಿಎಂ ಯಡಿಯೂರಪ್ಪ ಮಾಡಿದ ಕರೋನಾ ಯಡವಟ್ಟು ಸರಿಪಡಿಸಲು ಬಿಜೆಪಿ ವರಿಷ್ಠರ ಮಧ್ಯಪ್ರವೇಶ!

Please login to join discussion

Recent News

ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆಗಿ ಬದಲಾಗಿದ್ದಾರೆ..! ಸುಹಾಸ್ ಕೊಲೆ ಬಗ್ಗೆ ಸ್ಪೀಕರ್ ಯಾಕೆ ಮಾತಾಡಬೇಕಿತ್ತು..?! : ಶೋಭಾ ಕರಂದ್ಲಾಜೆ 
Top Story

ಪಾಕ್ ಪರವ ಮಾತನಾಡುವ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿಸಿ – ಸಿಎಂ ಸಿದ್ದು ತಿವಿದ ಶೋಭಾ ಕರಂದ್ಲಾಜೆ ! 

by Chetan
May 17, 2025
ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..
Top Story

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

by ಕೃಷ್ಣ ಮಣಿ
May 17, 2025
Top Story

ಕರಡಿ ಹಾಗೂ ಕರಡಿ ಮರಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್.

by ಪ್ರತಿಧ್ವನಿ
May 17, 2025
ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 
Top Story

ಭಾರತ..ಪಾಕಿಸ್ತಾನ ನಡುವಿನ ಕದನ ವಿರಾಮ ನಾಳೆ ಅಂತ್ಯ…! ಮುಂದೇನು ..?! 

by Chetan
May 17, 2025
ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಕೃಷ್ಣ ಮಣಿ
May 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಆಗಿ ಬದಲಾಗಿದ್ದಾರೆ..! ಸುಹಾಸ್ ಕೊಲೆ ಬಗ್ಗೆ ಸ್ಪೀಕರ್ ಯಾಕೆ ಮಾತಾಡಬೇಕಿತ್ತು..?! : ಶೋಭಾ ಕರಂದ್ಲಾಜೆ 

ಪಾಕ್ ಪರವ ಮಾತನಾಡುವ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿಸಿ – ಸಿಎಂ ಸಿದ್ದು ತಿವಿದ ಶೋಭಾ ಕರಂದ್ಲಾಜೆ ! 

May 17, 2025
ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

ಕೊತ್ತೂರು ಮಂಜುನಾಥ್​ಗೆ ಕಾಂಗ್ರೆಸ್​ – ಬಿಜೆಪಿ ನಾಯಕರ ಚಾಟಿ..

May 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada