• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಕ್ಬರ್ ಹೆಸರು ಉಲ್ಲೇಖಿಸಲು ಅಣ್ಣಾಮಲೈ ಹಿಂಜರಿಕೆ: ನೆಟ್ಟಿಗರಿಂದ ತಪರಾಕಿ

by
September 6, 2020
in ದೇಶ
0
ಅಕ್ಬರ್ ಹೆಸರು ಉಲ್ಲೇಖಿಸಲು ಅಣ್ಣಾಮಲೈ ಹಿಂಜರಿಕೆ: ನೆಟ್ಟಿಗರಿಂದ ತಪರಾಕಿ
Share on WhatsAppShare on FacebookShare on Telegram

ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ (IPS Annamalai) ಬಿಜೆಪಿ ಸೇರಿದ ಬಳಿಕ ತನ್ನ ನಿಲುವಿನಲ್ಲಿಯೂ ಅದನ್ನು ಪ್ರದರ್ಶಿಸಿದ್ದಾರೆ. ಪೊಲೀಸ್‌ ಅಧಿಕಾರಿಯಾಗಿದ್ದಾಗ ಟಿಪ್ಪು ಸುಲ್ತಾನನನ್ನು ಹೊಗಳಿ ಭಾಷಣ ಮಾಡಿದ್ದ ಅಣ್ಣಾಮಲೈ ಇದೀಗ ಅಕ್ಬರ್‌ ಹೆಸರು ಉಲ್ಲೇಖಿಸಲೂ ಹಿಂಜರಿದಿದ್ದಾರೆ. ಇದು, ಇತಿಹಾಸವನ್ನು ಇತಿಹಾಸವನ್ನಾಗಿ ನೋಡಬೇಕು ಎಂದು ಭಾಷಣ ಮಾಡಿದ್ದ ಅವರದ್ದೇ ಮಾತುಗಳಿಗೆ ವಿರುದ್ಧವಾಗಿದೆ ಎಂದು ನೆಟ್ಟಿಗರು ಅಣ್ಣಾಮಲೈ ಅವರನ್ನು ಕಾಲೆಳೆಯುತ್ತಿದ್ದಾರೆ.

ಘಟನೆ ವಿವರ:

ತಮಿಳುನಾಡಿನಲ್ಲಿ ಶೂನ್ಯ ಸ್ಥಾನ ಇರುವ ಬಿಜೆಪಿಗೆ ಅಲ್ಲಿ ಕಮಲ ಅರಳಿಸಬೇಕೆಂಬ ಆಕಾಂಕ್ಷೆಯೊಂದಿಗೆ ಅಣ್ಣಾಮಲೈ, ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಮುಂತಾದವರನ್ನು ಹೊಸದಾಗಿ ಬಿಜೆಪಿಗೆ ಸೇರಿಸಿಕೊಂಡಿತ್ತು. ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿಯನ್ನು ಕಟ್ಟುವುದು ತನ್ನ ಕರ್ತವ್ಯ ಎಂದು ಹೇಳಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತಮಿಳುನಾಡು ಸಕ್ರಿಯ ರಾಜಕಾರಣಕ್ಕೆ ಅಣ್ಣಾಮಲೈ ಪ್ರವೇಶವನ್ನು ಅಲ್ಲಿನ ಸುದ್ದಿಗಾರರು ʼನಾಮ್‌ ತಮಿಳರ್‌ ಕಚ್ಚಿʼ ಮುಖ್ಯಸ್ಥ ಸೀಮನ್‌ ಅವರನ್ನು ಕೇಳಿದ್ದಾರೆ. ಅಣ್ಣಾಮಲೈ ಅವರನ್ನು ಗಂಭೀರವಾಗಿ ಪರಿಗಣಿಸದ ಸೀಮನ್‌, ಅಣ್ಣಾಮಲೈರನ್ನು ಆಸ್ಥಾನ ವಿಭೂಷಕ ಎಂದು ವಿಡಂಬಣಾತ್ಮಕವಾಗಿ ಉತ್ತರಿಸಿದ್ದಾರೆ. ತೆನಾಲಿ ರಾಮ, ಬೀರಬಲ್‌ ರೀತಿಯ ಓರ್ವ ವಿಧೂಷಕ ಅಷ್ಟೇ, ಅವರನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ ಎಂದು ಉತ್ತರಿಸಿದ್ದರು.

ಅಣ್ಣಾಮಲೈರ ಅಸಲು ರಾಜಕಾರಣಿ ಮುಖ ಅನಾವರಣ ಆಗುವುದು ಇಲ್ಲಿ. ಸೀಮನ್‌ ಅವರ ವ್ಯಂಗ್ಯಕ್ಕೆ ಉತ್ತರಿಸುವ ಭರದಲ್ಲಿ ಅಣ್ಣಾಮಲೈ ಎಡವಟ್ಟು ಮಾಡಿಕೊಂಡಿದ್ದಾರೆ. ಸೀಮನ್‌ ಮಾತಿಗೆ ಟ್ವೀಟ್‌ ಮೂಲಕ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಅಣ್ಣಾಮಲೈ,”ವಿಕಟಕವಿ ತೆನಾಲಿ ರಾಮನ್‌ ಓರ್ವ ತತ್ವಜ್ಞಾನಿ, ಶ್ರೇಷ್ಟ ಕೃಷ್ಣದೇವರಾಯನ ಸಲಹೆಗಾರ, ಅವನ ಬುದ್ಧಿ, ಕುಶಾಗ್ರಮತಿ ಮತ್ತು ಜ್ಞಾನಕ್ಕೆ ಯಾರೂ ಸಾಟಿಯಿಲ್ಲ. ಹಾಗೆಯೇ ಬೀರಬಲ್‌ ಕೂಡಾ ಓರ್ವ ಶ್ರೇಷ್ಟ ಅರಸನ ಶ್ರೇಷ್ಟ ಸಲಹೆಗಾರ. ವಿಧೂಷಕರು ಅವರನ್ನು ವಿಧೂಷಕರನ್ನಾಗಿ ನೋಡುವುದನ್ನು ಆಯ್ಕೆ ಮಾಡುತ್ತಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ಅಣ್ಣಾಮಲೈ ತಗಲಾಕಿಕೊಂಡದ್ದು ಇಲ್ಲಿ. ಬೀರಬಲ್‌ ಅಕ್ಬರ್‌ ಆಸ್ಥಾನದಲ್ಲಿದ್ದ ವಿಧೂಷಕ, ಮಂತ್ರಿ. ಹೆಸರು ಹೇಳದೆಯೇ ಅಕ್ಬರನನ್ನು ಶ್ರೇಷ್ಟ ಅರಸ ಎಂದು ಅಣ್ಣಾಮಲೈ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಕೃಷ್ಣದೇವರಾಯನ ಹೆಸರು ಉಲ್ಲೇಖಿಸಿರುವ ಅಣ್ಣಾಮಲೈ, ಅಕ್ಬರನ ಹೆಸರು ಉಲ್ಲೇಖಿಸಲು ಹಿಂಜರಿದಿದ್ದೇಕೆ ಎಂದು ಟ್ವಿಟರ್‌ ಬಳಕೆದಾರರು ಅಣ್ಣಾಮಲೈರನ್ನು ಪ್ರಶ್ನಿಸಿದ್ದಾರೆ.

Vikatakavi Tenali Raman can be seen as the philosopher – advisor to the great Krishnadevaraya. His wit, acumen and knowledge are unparalleled.

Birbal @ Mahesh Das was the greatest advisor to one of the greatest kings.

Jokers choose to see them as jokers. #just_see_man.

— K.Annamalai (@annamalai_k) August 28, 2020


ADVERTISEMENT

ಒಟ್ಟಿನಲ್ಲಿ, ಸರ್ಕಾರಿ ಹುದ್ದೆಯಲ್ಲಿದ್ದಾಗ ಇತಿಹಾಸ ಪುರುಷರನ್ನು ಧರ್ಮಾತೀತವಾಗಿ ಕಾಣಲು ಸಾಧ್ಯವಾಗುತ್ತಿದ್ದ ಅಣ್ಣಾಮಲೈಗೆ ಬಿಜೆಪಿ ಸೇರಿದ ಬಳಿಕ, ಧರ್ಮದ ಕನ್ನಡಕವಿಲ್ಲದೆ ಇತಿಹಾಸವನ್ನು ನೋಡಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ. ಇನ್ನೇನು ಅಣ್ಣಾಮಲೈ ವರ್ತಮಾನವನ್ನು ನೋಡುವ ದೃಷ್ಟಿಯಿಂದ ಅದು ಇನ್ನಷ್ಟು ಸ್ಪಷ್ಟವಾಗಲಿದೆ.

Tags: ಕೆ ಅಣ್ಣಾಮಲೈತಮಿಳುನಾಡುಸೀಮನ್‌
Previous Post

2021ರಲ್ಲೂ ಮುಂದುವರೆಯಲಿದೆ ಕೋವಿಡ್-19: ಡಾ. ರಣದೀಪ್ ಗುಲೇರಿಯಾ

Next Post

10 ದಿನ 30 ಮಸೂದೆಗಳು; ಮುಂಗಾರು ಅಧಿವೇಶನದಲ್ಲಿ ಮಸೂದೆಗಳ ಪ್ರವಾಹ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
10 ದಿನ 30 ಮಸೂದೆಗಳು; ಮುಂಗಾರು ಅಧಿವೇಶನದಲ್ಲಿ ಮಸೂದೆಗಳ ಪ್ರವಾಹ

10 ದಿನ 30 ಮಸೂದೆಗಳು; ಮುಂಗಾರು ಅಧಿವೇಶನದಲ್ಲಿ ಮಸೂದೆಗಳ ಪ್ರವಾಹ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada