• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಧಿಕಾರ ಸ್ವೀಕರಿಸಿ ಮೂರು ದಿನದಲ್ಲಿ ರಾಜಿನಾಮೆ ನೀಡಿದ ಬಿಹಾರ ಶಿಕ್ಷಣ ಸಚಿವ

by
November 19, 2020
in ದೇಶ
0
ಅಧಿಕಾರ ಸ್ವೀಕರಿಸಿ ಮೂರು ದಿನದಲ್ಲಿ ರಾಜಿನಾಮೆ ನೀಡಿದ ಬಿಹಾರ ಶಿಕ್ಷಣ ಸಚಿವ
Share on WhatsAppShare on FacebookShare on Telegram

ಬಿಹಾರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೂರು ದಿನಗಳಲ್ಲಿ ಜೆಡಿಯು ಶಾಸಕ ಮೇವಲಾಲ್‌ ಚೌಧರಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ADVERTISEMENT

ನವೆಂಬರ್‌ 16 ರಂದು ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಿದ್ದು, ಅಧಿಕಾರ ಸ್ವೀಕರಿಸಿಕೊಂಡ ಮೂರೇ ದಿನಗಳಲ್ಲಿ ಸಚಿವರೊಬ್ಬರ ರಾಜಿನಾಮೆಯೊಂದಿಗೆ ತನ್ನ ಆಡಳಿತಕ್ಕೆ ನಿತೀಶ್‌ ಮುನ್ನುಡಿಯಿಟ್ಟಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮೇವ ಲಾಲ್‌ ಚೌಧರಿ ವಿರುದ್ಧ ಮೂರು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣವೊಂದು ಬಾಕಿಯಿದ್ದು, ಚೌಧರಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ನೂತನ ಸರ್ಕಾರವನ್ನು ಪ್ರತಿಪಕ್ಷಗಳು ಟೀಕೆಗೆ ಗುರಿಯಾಗಿಸಿದ್ದವು. ಈ ಹಿನ್ನೆಲೆಯಲ್ಲಿ ಚೌಧರಿ ರಾಜಿನಾಮೆ ಸಲ್ಲಿಸಿದ್ದಾರೆ.

ಭಾಗಲ್ಪುರ್ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಾರಾಪುರದ ಜೆಡಿಯು ಶಾಸಕ ಮೇವಲಾಲ್‌ ಚೌಧರಿ ವಿರುದ್ಧ 2017 ರಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು.

Also Read: ಬಿಹಾರ: ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಬಿಹಾರದ ಆಗಿನ ರಾಜ್ಯಪಾಲರಾಗಿದ್ದ ರಾಮನಾಥ್‌ ಕೋವಿಂದ್‌ ಅವರ ಅನುಮೋದನೆಯೊಂದಿಗೆ ಮೇವಲಾಲ್‌ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆ ಶುರು ಮಾಡಿತ್ತು. ಅದಾಗ್ಯೂ, ಇದುವರೆಗೆ ಅವರ ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ರೀತಿಯ ಚಾರ್ಜ್‌ ಶೀಟ್‌ ಸಲ್ಲಿಸಿರಲಿಲ್ಲ.

ಅಷ್ಟೇ ಅಲ್ಲದೆ, ಮೇವಲಾಲ್‌ ಚೌಧರಿಗೆ ರಾಷ್ಟ್ರ ಗಾನ ಹಾಡಲು ಬರುವುದಿಲ್ಲವೆಂಬ ವಿಡಿಯೋ ಒಂದನ್ನು ಆರ್‌ಜೆಡಿ ದಿನದ ಹಿಂದೆ ಹಂಚಿಕೊಂಡಿತ್ತು. ಇದು ಸಾಕಷ್ಟು ವೈರಲ್‌ ಆಗಿದ್ದು, ಮೇವಲಾಲ್‌ ವಿರುದ್ಧ ಟೀಕೆಗೂ ಗುರಿಯಾಗಿತ್ತು.

Tags: Bihar MinisterEducation MinisterNitish Kumar
Previous Post

ಮೈಸೂರು: ದಲಿತರಿಗೆ ಕ್ಷೌರ ಮಾಡಿದ ಕ್ಷೌರಿಕನಿಗೆ ಸಾಮಾಜಿಕ ಬಹಿಷ್ಕಾರ

Next Post

ಸಂಪುಟ ವಿಸ್ತರಣೆಗೆ ದೆಹಲಿ ಭೇಟಿ: ಬರಿಗೈಲಿ ಹಿಂದಿರುಗಿದ ಯಡಿಯೂರಪ್ಪ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ಸಂಪುಟ ವಿಸ್ತರಣೆಗೆ ದೆಹಲಿ ಭೇಟಿ: ಬರಿಗೈಲಿ ಹಿಂದಿರುಗಿದ ಯಡಿಯೂರಪ್ಪ

ಸಂಪುಟ ವಿಸ್ತರಣೆಗೆ ದೆಹಲಿ ಭೇಟಿ: ಬರಿಗೈಲಿ ಹಿಂದಿರುಗಿದ ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada