Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಅನಧಿಕೃತ ಧಾರ್ಮಿಕ ಕಟ್ಟಡಗಳಿಗೆ ಇನ್ನು ಉಳಿಗಾಲವಿಲ್ಲ

ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಪೂಜಾಸ್ಥಳಗಳ ತೆರವು ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.
ಅನಧಿಕೃತ ಧಾರ್ಮಿಕ ಕಟ್ಟಡಗಳಿಗೆ ಇನ್ನು ಉಳಿಗಾಲವಿಲ್ಲ
Pratidhvani Dhvani

Pratidhvani Dhvani

June 28, 2019
Share on FacebookShare on Twitter

ರಸ್ತೆ, ಉದ್ಯಾನ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ವಿುಸಲಾಗಿರುವ ಧಾರ್ವಿುಕ ಕಟ್ಟಡಗಳ ತೆರವು ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿತ್ತು. ಇದೀಗ ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ

ಝೀ ವಾಹಿನಿಯಲ್ಲಿ ಅಂತರ್‌ ಕಲಹ; ಮತ್ತೊಂದು ಕೂಗುಮಾರಿ ವಾಹಿನಿಗೆ ಹಾದಿ

ಉಲ್ಬಣಿಸಿದ ಬಿಕ್ಕಟ್ಟು ಪಲಾಯನದ ಮಹಾಪೂರ

ಮಾಗಡಿ ರಸ್ತೆಯ ಪೊಲೀಸ್ ವಸತಿಗೃಹಗಳ ಸಮುಚ್ಚಯ ಸಮೀಪ ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾಯಿಬಾಬಾ ದೇವಾಲಯ ನಿರ್ವಿುಸಲಾಗಿದೆ ಎಂದು ಆರೋಪಿಸಿ ಎಸ್. ರವೀಂದ್ರ ಮತ್ತಿತರರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಪೀಠ, ಅನಧಿಕೃತ ಧಾರ್ವಿುಕ ಕಟ್ಟಡಗಳ ತೆರವು ಕುರಿತು ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲು ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿತು.

ರಾಷ್ಟ್ರಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಹೊಸ ಪೂಜಾಸ್ಥಳಗಳನ್ನು ನಿರ್ಮಿಸದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ನಿರ್ದೇಶನ ನೀಡಿತ್ತು. ಈ ನಿರ್ಬಂಧವು ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಮತ್ತಿತರ ಎಲ್ಲ ಸಮುದಾಯಗಳ ಪೂಜಾ ಸ್ಥಳಗಳಿಗೆ ಅನ್ವಯಿಸುತ್ತದೆ ಎಂಬುದಾಗಿ ನ್ಯಾಯಮೂರ್ತಿಗಳಾದ ದಲ್ವೀರ್ ಭಂಡಾರಿ ಹಾಗೂ ಮುಕುಂದಾಕಮ್ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ತನ್ನ ಮಧ್ಯಂತರ ಆಜ್ಞೆಯೊಂದರಲ್ಲಿ ಹೇಳಿತ್ತು.

“ನ್ಯಾಯಾಲಯವು ಸಾರ್ವಜನಿಕ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ತನಕ ಈ ಆದೇಶವು ಜಾರಿಯಲ್ಲಿರುತ್ತದೆ,” ಎಂಬುದಾಗಿ ನ್ಯಾಯಪೀಠ ಹೇಳಿತ್ತು. ಅಲ್ಲದೆ, ಪ್ರಸಕ್ತ ಅಸ್ತಿತ್ವದಲ್ಲಿರುವ ಪೂಜಾಸ್ಥಳಗಳ ಕುರಿತು ಆಯಾ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕು ಎಂದೂ ಸಲಹೆ ನೀಡಿತ್ತು. “ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಹೊಸ ಪೂಜಾಸ್ಥಳಗಳ ನಿರ್ಮಾಣ ಇಲ್ಲವೆಂದು ರಾಜ್ಯಗಳು ಹಾಗೂ ಕೇಂದ್ರವು ಒಮ್ಮತಕ್ಕೆ ಬಂದಿವೆ,” ಎಂದು ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣಿಯಮ್ ಮಾಹಿತಿ ನೀಡಿದ ಬಳಿಕ ನ್ಯಾಯಪೀಠ ಈ ನಿರ್ದೇಶನ ಪಾಸು ಮಾಡಿತ್ತು. ಅದಕ್ಕೂ ಮೊದಲು, ಸಾರ್ವಜನಿಕ ಸ್ಥಳವನ್ನು ಒತ್ತುವರಿ ಮಾಡುವ ಮೂಲಕ ಯಾವುದೇ ಪೂಜಾಸ್ಥಳಗಳ ನಿರ್ಮಾಣವಾಗುತ್ತಿಲ್ಲ ಎಂಬುದನ್ನು ಸರ್ಕಾರ ಖಚಿತಪಡಿಸಬೇಕು ಎಂಬುದಾಗಿ 2018ರ ಜು.31ರಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಮುಖ್ಯ ಕಾರ್ಯದರ್ಶಿಗಳು ಕಟಕಟೆಗೆ

ಈ ಕುರಿತ ಇತ್ತೀಚಿನ ವಿಚಾರಣೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟಿರುವ ಅನಧಿಕೃತ ದೇಗುಲಗಳನ್ನು ತೆರವುಗೊಳಿಸುವಂತೆ ಅಥವಾ ಸ್ಥಳಾಂತರಿಸುವಂತೆ ನೀಡಿರುವ ಆದೇಶ ಪಾಲಿಸಲು ರಾಜ್ಯ ಸರಕಾರಗಳು ವಿಫಲವಾದಲ್ಲಿ ಮುಖ್ಯ ಕಾರ್ಯದರ್ಶಿಗಳು ಸ್ವತಃ ನ್ಯಾಯಾಲಯದ ಮುಂದೆ ಹಾಜರಾಗಬೇಕಾದೀತು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಈ ವಿಚಾರದಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆ ದಾಖಲಿಸುವುದಕ್ಕೆ ಎರಡು ವಾರಗಳ ಕಾಲಾವಕಾಶವನ್ನು ನ್ಯಾಯಮೂರ್ತಿ ದಲ್ವೀರ್ ಭಂಡಾರಿ ನೇತೃತ್ವದ ಪೀಠ ನೀಡಿದೆ. ಅನೇಕ ವಿಚಾರಣೆಗಳು ನಡೆದರೂ ರಾಜ್ಯಗಳು ಈ ವಿಷಯದಲ್ಲಿ ಇದುವರೆಗೆ ತಮ್ಮ ಅಫಿಡವಿತ್ ಅಥವಾ ಅನುಷ್ಠಾನ ವರದಿ ಸಲ್ಲಿಸದಿರುವುದರಿಂದ ಸುಪ್ರೀಂ ಕೋರ್ಟ್ ಆಕ್ರೋಶಗೊಂಡಿದೆ.

ರಸ್ತೆ, ಕಾಲುದಾರಿ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಇನ್ನಿತರ ಯಾವುದೇ ಆರಾಧನಾಲಯಗಳಿಗೆ ಅವಕಾಶ ನೀಡಬಾರದು. ಇದರಿಂದ ದೇಶಾದ್ಯಂತ ಸಂಚಾರ ಅಡಚಣೆ, ಸ್ಥಳಾಭಾವ ಹಾಗೂ ಜನರಿಗೆ ತೊಂದರೆಯಾಗುತ್ತದೆಂದು ನ್ಯಾಯಪೀಠವು ಆದೇಶ ನೀಡಿತ್ತು. ತಮಿಳುನಾಡಿನಲ್ಲಿ 77,453 ಅನಧಿಕೃತ ಧಾರ್ಮಿಕ ಕಟ್ಟಡಗಳಿದ್ದು, ರಾಜಸ್ಥಾನದಲ್ಲಿ 58,253, ಮಧ್ಯಪ್ರದೇಶದಲ್ಲಿ 51,624, ಮಹಾರಾಷ್ಟ್ರದಲ್ಲಿ 17,385, ಗುಜರಾತಿನಲ್ಲಿ 15,000 ಹಾಗೂ ಕರ್ನಾಟಕದಲ್ಲಿ 2,814 ಸ್ಥಳಗಳ ಅಕ್ರಮ ಒತ್ತುವರಿ ನಡೆದಿದೆ. ದೆಹಲಿಯಲ್ಲಿ 52 ಪ್ರಕರಣ ಕಂಡುಬಂದಿದ್ದರೆ, ಸಿಕ್ಕಿಂ, ಮಿಜೋರಾಂ ಹಾಗೂ ನಾಗಾಲ್ಯಾಂಡಿನಲ್ಲಿ ಯಾವುದೇ ಅನಧಿಕೃತ ಧಾರ್ಮಿಕ ಕಟ್ಟಡಗಳಿಲ್ಲ ಎಂದು ದಾಖಲೆಗಳು ಹೇಳುತ್ತವೆ..

RS 500
RS 1500

SCAN HERE

don't miss it !

ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ
ಕರ್ನಾಟಕ

ವರುಷ ಎಂಟು; ಅವಾಂತರ ನೂರೆಂಟು ಸುಳ್ಳು ಎಂದು ಸಾಬೀತುಪಡಿಸಿ: ಪ್ರಹ್ಲಾದ್ ಜೋಷಿಗೆ ಸಿದ್ದರಾಮಯ್ಯ ಸವಾಲು

by ಪ್ರತಿಧ್ವನಿ
July 4, 2022
ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!
ಕರ್ನಾಟಕ

ದೊಣ್ಣೆಯಿಂದ ಹೊಡೆದು ಅಣ್ಣ-ತಮ್ಮಂದಿರನ್ನು ಕೊಂದ ಕೆಲಸದಾಳು!

by ಪ್ರತಿಧ್ವನಿ
July 1, 2022
ಪಾತಾಳಕ್ಕೆ ಕುಸಿದರೂ ಜಾಗತಿಕವಾಗಿ ರೂಪಾಯಿ ಉತ್ತಮ ಮಟ್ಟದಲ್ಲಿದೆ : ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ದೇಶ

ಪಾತಾಳಕ್ಕೆ ಕುಸಿದರೂ ಜಾಗತಿಕವಾಗಿ ರೂಪಾಯಿ ಉತ್ತಮ ಮಟ್ಟದಲ್ಲಿದೆ : ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್

by ಪ್ರತಿಧ್ವನಿ
July 1, 2022
ಬೇರ್ ಸ್ಟೊ-ರೂಟ್ ಫಿಫ್ಟಿ: ಕುತೂಹಲ ಘಟ್ಟದಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್
ಕ್ರೀಡೆ

ರೂಟ್‌- ಬೇರ್‌ ಸ್ಟೊ ಅಜೇಯ ಶತಕ: ಭಾರತ ವಿರುದ್ಧ ಇಂಗ್ಲೆಂಡ್‌ ಗೆ 7 ವಿಕೆಟ್‌ ಜಯ

by ಪ್ರತಿಧ್ವನಿ
July 5, 2022
ಹಲ್ಲು ಉಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ!
ದೇಶ

ಹಲ್ಲು ಉಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ!

by ಪ್ರತಿಧ್ವನಿ
June 29, 2022
Next Post
ಅಂತೂ ‘ರಾಮ’ನಿಗೆ ನೆಮ್ಮದಿ ಇಲ್ಲ ಅಂತಾಯಿತು!

ಅಂತೂ ‘ರಾಮ’ನಿಗೆ ನೆಮ್ಮದಿ ಇಲ್ಲ ಅಂತಾಯಿತು!

ದೂರದೃಷ್ಟಿಹೀನ ಸಮ್ಮಿಶ್ರ ಸರ್ಕಾರಕ್ಕೆ ಗ್ರಾಮ ವಾಸ್ತವ್ಯ ಶ್ರೀರಕ್ಷೆ ಆದೀತೇ?

ದೂರದೃಷ್ಟಿಹೀನ ಸಮ್ಮಿಶ್ರ ಸರ್ಕಾರಕ್ಕೆ ಗ್ರಾಮ ವಾಸ್ತವ್ಯ ಶ್ರೀರಕ್ಷೆ ಆದೀತೇ?

ಸಿಎಂ ಎಚ್‌ಡಿಕೆ

ಸಿಎಂ ಎಚ್‌ಡಿಕೆ, ಮಾಜಿ ಸಿಎಂ ಸಿದ್ದು, ವಿಪಕ್ಷದ ಬಿಎಸ್‌ವೈ ಮಾಡುತ್ತಿರೋದೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist