• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಮಿತ್‌ ಶಾ ಮನವಿಗೆ ಸ್ಪಂದಿಸುವಂತೆ ಅಮರೀಂದರ್‌ ಸಿಂಗ್‌ ಸಲಹೆ: ನಿರಾಕರಿಸಿದ ರೈತರು

by
November 29, 2020
in ದೇಶ
0
ಅಮಿತ್‌ ಶಾ ಮನವಿಗೆ ಸ್ಪಂದಿಸುವಂತೆ ಅಮರೀಂದರ್‌ ಸಿಂಗ್‌ ಸಲಹೆ: ನಿರಾಕರಿಸಿದ ರೈತರು
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಚಲೋ ಕೈಗೊಂಡಿರುವ ರೈತರು ಪ್ರತಿಭಟನೆ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲೇ ತಮ್ಮ ಹೋರಾಟವನ್ನು ಮುಂದುವರೆಸಿರುವ ರೈತರು ಪ್ರತಿಭಟನೆಯಿಂದ ಹಿಂದೆ ಸರಿಯುವ ಲಕ್ಷಣ ಸದ್ಯ ಗೋಚರಿಸುತ್ತಿಲ್ಲ.

ADVERTISEMENT

ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸರ್ಕಾರ ನಿಗದಿ ಪಡಿಸಿದ ಸ್ಥಳದಲ್ಲಿ ಪ್ರತಿಭಟನೆ ನಡೆಸುವಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಮಿತ್‌ ಶಾ ಅವರ ಮನವಿಯನ್ನು ಸ್ವೀಕರಿಸುವಂತೆ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಕೇಳಿಕೊಂಡಿದ್ದಾರೆ. ಆದರೆ, ಇದನ್ನು ನಿರಾಕರಿಸಿರುವ ರೈತ ಸಂಘಟನೆಗಳು, ಪ್ರತಿಭಟನಾ ಸ್ಥಳವನ್ನು ಸ್ಥಳಾಂತರಿಸಲು ತಯಾರಾಗಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೈತರು ಸರ್ಕಾರ ನಿಗದಿಪಡಿಸಿದ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಬೇಕು ಮತ್ತು ಶಾಂತಿಯುತ ಹೋರಾಟ ನಡೆಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳದಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯಗಳು, ಶೌಚಾಲಯ, ಆಂಬ್ಯುಲೆನ್ಸ್‌ ಮತ್ತು ನೀರಿನ ಪೂರೈಕೆಯಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಪ್ರತಿಭಟನೆಯನ್ನು ನಿಗದಿತ ಸ್ಥಳಕ್ಕೆ ಸ್ಥಳಾಂತರಿಸಿದರೆ ಸರ್ಕಾರ ರೈತರೊಂದಿಗೆ ಡಿ.3ಕ್ಕೂ ಮುನ್ನ ಮಾತುಕತೆ ನಡೆಸುತ್ತದೆ ಎಂದು ಅಮಿತ್ ಶಾ ಅವರು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಮರೀಂದರ್ ಸಿಂಗ್, ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ರೈತರು ದೆಹಲಿಯಲ್ಲಿ ನಿಗದಿಪಡಿಸಿರುವ ಸ್ಥಳಕ್ಕೆ ತಮ್ಮ ಪ್ರತಿಭಟನೆಯನ್ನು ಸ್ಥಳಾಂತರಿಸಿದ್ದೇ ಆದರೆ ಸಮಸ್ಯೆ ಬಗೆಹರಿಸುತ್ತೇವೆಂದು ಸರ್ಕಾರ ಹೇಳಿದೆ. ಹೀಗಾಗಿ ರೈತ ಸಂಘಟನೆಗಳು ಮನವಿಗೆ ಸ್ಪಂದನೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ಎರಡೂ ಕಡೆಗಳಿಂದಲೂ ಕುಳಿತು ಮಾತುಕತೆ ನಡೆಸಿದಾಗ ಮಾತ್ರ ಸಮಸ್ಯೆ ಬಗೆಹರಿಯುತ್ತದೆ. ಹೆದ್ದಾರಿಗಳನ್ನು ಬಂದ್ ಮಾಡುವುದು, ಜನರಿಗೆ ಸಮಸ್ಯೆ ತಂದೊಡ್ಡುವುದು ರೈತರ ಉದ್ದೇಶವಲ್ಲ. ತಮ್ಮ ಧ್ವನಿ ಕೇಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಉದ್ದೇಶವಾಗಿದೆ. ಕೇಂದ್ರ ಸರ್ಕಾರ ಗಮನ ಸೆಳೆಯುವ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Also Read: ರೈತರ ಸಮಸ್ಯೆ ಆಲಿಸಲು ಸರ್ಕಾರ ಸಿದ್ಧವಾಗಿದೆ: ಅಮಿತ್ ಶಾ

ಅಮರೀಂದರ್ ಸಿಂಗ್ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರೈತ ಸಂಘಟನೆಗಳು, ರಾಮ್’ಲೀಲಾ ಮೈದಾನದಲ್ಲಿಯೇ ಪ್ರತಿಭಟನೆಗಳು ನಡೆಯುತ್ತವೆ ಎಂದಿದೆ.

ನಾವೇಕೆ ಖಾಸಗಿ ಸೌಲಭ್ಯಗಳನ್ನು ಹೊಂದಿರುವ ನಿರಂಕಾರಿ ಭವನಕ್ಕೆ ತೆರಳಬೇಕು? ನಾವಿಂದು ಇಲ್ಲಿಯೇ ಇರುತ್ತೇವೆಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಹೇಳಿದ್ದಾರೆ.

ಅಮಿತ್ ಅವರು ಷರತ್ತುಗಳನ್ನು ನೀಡಿ ಮಾತುಕತೆಗೆ ಕರೆಯುವುದು ಸರಿಯಲ್ಲ. ಯಾವುದೇ ಷರತ್ತುಗಳನ್ನೂ ಹಾಕದೆ ಮಾತುಕತೆಗೆ ಕರೆಯಬೇಕು. ನಾಳೆ ಬೆಳಿಗ್ಗೆ ಮತ್ತೆ ನಾವು ಸಭೆ ನಡೆಸಿ ನಮ್ಮ ನಿಲುವು ಕುರಿತು ನಿರ್ಧಾರ ಕೈಗೊಳ್ಳಲಿದ್ದೇವೆಂದು ರಾಕೇಶ್ ತಿಳಿಸಿದ್ದಾರೆ.

ಡಿಸೆಂಬರ್ 3 ರ ಮೊದಲು ರೈತ ಸಂಘಗಳು ಚರ್ಚೆ ನಡೆಸಲು ಬಯಸಿದರೆ, ಪ್ರತಿಭಟನೆಯನ್ನು ಸರ್ಕಾರ ನಿಗದಿಪಡಿಸಿದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಸ್ಥಳಾಂತರಿಸಿದ, ಮರುದಿನವೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮಾತುಕತೆ ನಡೆಸುತ್ತದೆ ಎಂದು ಅಮಿತ್‌ ಶಾ ಷರತ್ತು ಹಾಕಿದ್ದರು.

Tags: delhi chaloFarmers protestಅಮರೀಂದರ್‌ ಸಿಂಗ್‌ಅಮಿತ್‌ ಶಾಕೃಷಿ ಮಸೂದೆದೆಹಲಿ ಚಲೋರೈತ ಪ್ರತಿಭಟನೆರೈತ ಹೋರಾಟ
Previous Post

ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ಕುರಿತು ಸ್ಪಷ್ಟನೆ ನೀಡಿದ ಲಕ್ಷ್ಮಣ್‌ ಸವದಿ

Next Post

GHMC ಚುನಾವಣೆ: ಬಿಜೆಪಿ ಪರ ಪ್ರಚಾರಕ್ಕೆ ಇನ್ನು ಟ್ರಂಪ್‌ ಮಾತ್ರ‌ ಬಾಕಿ – ಓವೈಸಿ ವ್ಯಂಗ್ಯ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
GHMC ಚುನಾವಣೆ: ಬಿಜೆಪಿ ಪರ ಪ್ರಚಾರಕ್ಕೆ ಇನ್ನು ಟ್ರಂಪ್‌ ಮಾತ್ರ‌ ಬಾಕಿ - ಓವೈಸಿ ವ್ಯಂಗ್ಯ

GHMC ಚುನಾವಣೆ: ಬಿಜೆಪಿ ಪರ ಪ್ರಚಾರಕ್ಕೆ ಇನ್ನು ಟ್ರಂಪ್‌ ಮಾತ್ರ‌ ಬಾಕಿ - ಓವೈಸಿ ವ್ಯಂಗ್ಯ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada