• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ

by
November 6, 2020
in ದೇಶ
0
ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ
Share on WhatsAppShare on FacebookShare on Telegram

ದೇಶದ ಮುಖ್ಯವಾಹಿನಿಯಾದ್ಯಂತ ಚರ್ಚೆಗೆ ಗ್ರಾಸವಾದ ಅರ್ನಾಬ್‌ ಗೋಸ್ವಾಮಿ ಬಂಧನ ಮಹಾರಾಷ್ಟ್ರದ ಸರ್ಕಾರದ ಏಕಾಏಕಿ ನಿರ್ಧಾರವಾಗಿರಲಿಲ್ಲ. ಅರ್ನಾಬ್‌ರನ್ನು ಬಂಧಿಸಲು ಮಹಾರಾಷ್ಟ್ರ ಗೃಹ ಇಲಾಖೆ ಸಾಕಷ್ಟು ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದೆ.

ADVERTISEMENT

ಇಂಟಿರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಹಾಗೂ ಅವರ ತಾಯಿಯ 2018 ರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮರು ಪ್ರಾರಂಭಿಸಲು ರಾಯಗಡ್‌ ಪೊಲೀಸರಿಗೆ ಅನುಮತಿ ಸಿಕ್ಕೊಡನೆಯೇ ಅರ್ನಾಬ್‌ರನ್ನು ಬಂಧಿಸಲು ʼಆಪರೇಷನ್‌ ಅರ್ನಾಬ್‌ʼ ಗಾಗಿ ಸಿದ್ಧತೆ ಪ್ರಾರಂಭವಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆಪರೇಷನ್‌ ಅರ್ನಾಬ್‌ ಸಲುವಾಗಿ ಕೊಂಕಣ್‌ ರೇಂಜ್‌ ಇನ್ಸ್ಪೆಕ್ಟರ್‌ ಜನರಲ್‌ ಸಂಜಯ್‌ ಮೊಹಿತೆ ಅವರ ನೇತೃತ್ವದಲ್ಲಿ 40 ಮಂದಿ ಪೊಲೀಸರ ತಂಡವನ್ನು ರಚಿಸಲಾಗಿತ್ತು. 40 ಮಂದಿ ಸಿಬ್ಬಂದಿಗಳನ್ನು ಮುಂಬೈ ಹಾಗೂ ರಾಯಗಢ ಪೊಲೀಸ್‌ ಪಡೆಯಿಂದ ಆಯ್ಕೆ ಮಾಡಲಾಗಿತ್ತು.

ಅರ್ನಾಬ್‌ ಬಂಧನಕ್ಕೆ ಸಂಜಯ್‌ ಮೊಹಿತೆ ಅವರು ಯೋಜನೆ ರೂಪಿಸಿದ್ದರು. ಆದರೆ ಅದನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಎನ್‌ಕೌಂಟರ್‌ ಸ್ಪೆಶಲಿಸ್ಟ್‌ ಸಚಿನ್‌ ವಾಝೆ ಅವರ ಹೆಗಲಿಗೆ ವಹಿಸಲಾಯಿತು.

Also Read: ಅರ್ನಾಬ್‌ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ʼಮೊಹಿತೆ ಅವರ ನೇತೃತ್ವದ ತಂಡಕ್ಕೆ ಪ್ರಬಲ ಅರ್ನಾಬ್‌ರನ್ನು ಸರಳವಾಗಿ ಬಂಧಿಸುವುದು ಸವಾಲಿನ ಕೆಲಸವಾಗಿತ್ತು. ತಂಡದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಪ್ರಚೋದನೆಗೆ ಒಳಗಾಗದಂತೆ ಸಂಯಮ ಪಾಲಿಸಿದರುʼ ಎಂದು ಹಿರಿಯ ಕ್ಯಾಬಿನೆಟ್‌ ಸದಸ್ಯರೊಬ್ಬರು ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್‌ ಕೈವಾಡವಿದೆಯೆಂದು ಮನವರಿಕೆಯಾಗಿತ್ತು. ನಮ್ಮ ಜನರು ಆತನ ನಿವಾಸದ ಸುತ್ತ ಹಲವು ಬಾರಿ ಗಸ್ತು ತಿರುಗಿದ್ದೆವು. ಇದೊಂದು ರಹಸ್ಯ ಕಾರ್ಯಾಚರಣೆಯಾಗಿತ್ತು. ಕಾರ್ಯಾಚರಣೆಯ ಮಾಹಿತಿ ಸೋರಿಕೆಯಾದರೆ ಬಂಧನದಿಂದ ತಪ್ಪಿಸಲು ಅರ್ನಬ್‌ ನಗರ ಬಿಟ್ಟು ಪಲಾಯನ ಮಾಡಬಹುದೆಂಬ ಆತಂಕ ನಮ್ಮನ್ನು ಕಾಡುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

Also Read: ಅರ್ನಾಬ್‌ ಬಂಧನ: ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರದ ಮಂತ್ರಿಗಳು

ಅರ್ನಾಬ್‌ ತನ್ನ ನಿವಾಸದಲ್ಲಿರುವುದನ್ನು ಖಚಿತಪಡಿಸಿದ ಪೊಲೀಸರು ಅವರನ್ನು ಬುಧವಾರ ಮುಂಜಾನೆ ಅವರ ನಿವಾಸದಿಂದ ಬಂಧಿಸಿದ್ದಾರೆ. ಇದು ಸಂಪೂರ್ಣ ಪೂರ್ವ ತಯಾರಿಯಿಂದ ನಡೆಸಿದ ಕಾರ್ಯಾಚರಣೆಯಾಗಿದ್ದು, ಕಾರ್ಯಾಚರಣೆಯ ಸಣ್ಣ ಸಣ್ಣ ವಿಷಯಗಳನ್ನೂ ಸೂಕ್ಷ್ಮವಾಗಿ ರೂಪುಗೊಳಿಸಲಾಗಿತ್ತು. ಅರ್ನಾಬ್‌ ನಿವಾಸದ ಬಾಗಿಲು ತಟ್ಟುವವರು ಯಾರು, ಅರ್ನಾಬ್‌ ಜೊತೆ ಮಾತನಾಡುವವರು ಯಾರು, ಅವರ ಕುಟುಂಬದವರನ್ನು ನಿಭಾಯಿಸುವವರು ಯಾರು, ತಮ್ಮ ಜೊತೆ ಬರಲು ಪ್ರತಿರೋಧಿಸಿದರೆ ಅದನ್ನು ನಿರ್ವಹಿಸುವುದು ಹೇಗೆ ಎಂಬ ಪ್ರತಿಯೊಂದನ್ನೂ ಮೊದಲೇ ನಿರ್ಧರಿಸಲಾಗಿತ್ತು ಎಂದು ಅವರು ತಿಳಿಸಿರುವುದಾಗಿ ವರದಿ ಹೇಳಿದೆ.

Also Read: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಬಂಧನ

ದೇವೇಂದ್ರ ಫಡ್ನವೀಸ್‌ ಸರ್ಕಾರದಲ್ಲಿ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು. ಮೃತ ಅನ್ವಯ್‌ ಅವರ ಪತ್ನಿ ಹಾಗೂ ಅವರ ಮಗಳಅಹವಾಲನ್ನು ಆಲಿಸಿದಾಗ ನನಗೆ ಆಘಾತವಾಯಿತು. ಮಹಾರಾಷ್ಟ್ರದಲ್ಲಿ ಇದು ಸಂಭವಿಸಬಹುದು ಎಂದು ನನಗೆ ನಂಬಲಾಗಿರಲಿಲ್ಲ. ನಾವು ಪ್ರಕರಣವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್‌ ದೇಶ್‌ಮುಖ್‌ ಹೇಳಿದ್ದಾರೆ.

Also Read: ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!

ಬಿಜೆಪಿ ವಿರುದ್ಧ ನೇರ ಪ್ರಹಾರ ನಡೆಸಿದ ದೇಶ್‌ಮುಖ್‌, ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸಿತು, ಆದರೆ ಅನ್ವಯ್‌ ಪ್ರಕರಣದಲ್ಲಿ ಸ್ಪಷ್ಟ ಆತ್ಮಹತ್ಯೆ ಪತ್ರ ಇದ್ದರೂ ಬಿಜೆಪಿ ಪ್ರಕರಣವನ್ನು ನಿಗ್ರಹಿಸಿದ್ದಾರೆ. ನಾವು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ದೇಶ್ಮುಖ್‌ ತಿಳಸಿದ್ದಾರೆ.

Tags: Arnab GoswamiGovernment of MaharashtraOperation Arnabಅರ್ನಾಬ್ ಗೋಸ್ವಾಮಿಆಪರೇಷನ್ ಅರ್ನಾಬ್
Previous Post

ಬಿಹಾರ ಚುನಾವಣೆ: ಕೊನೆ ಹಂತದಲ್ಲಿ ರಾಜಕೀಯ ನಿವೃತ್ತಿಯ ದಾಳ ಪ್ರಯೋಗಿಸಿದ ನಿತೀಶ್!

Next Post

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
Next Post
ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada