• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ

by
November 6, 2020
in ದೇಶ
0
ಅರ್ನಾಬ್ ಬಂಧನಕ್ಕೆ 40 ಮಂದಿಯ ತಂಡ ರಚಿಸಿದ್ದ ಮಹಾರಾಷ್ಟ್ರ ಗೃಹ ಇಲಾಖೆ
Share on WhatsAppShare on FacebookShare on Telegram

ದೇಶದ ಮುಖ್ಯವಾಹಿನಿಯಾದ್ಯಂತ ಚರ್ಚೆಗೆ ಗ್ರಾಸವಾದ ಅರ್ನಾಬ್‌ ಗೋಸ್ವಾಮಿ ಬಂಧನ ಮಹಾರಾಷ್ಟ್ರದ ಸರ್ಕಾರದ ಏಕಾಏಕಿ ನಿರ್ಧಾರವಾಗಿರಲಿಲ್ಲ. ಅರ್ನಾಬ್‌ರನ್ನು ಬಂಧಿಸಲು ಮಹಾರಾಷ್ಟ್ರ ಗೃಹ ಇಲಾಖೆ ಸಾಕಷ್ಟು ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದೆ.

ADVERTISEMENT

ಇಂಟಿರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಹಾಗೂ ಅವರ ತಾಯಿಯ 2018 ರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮರು ಪ್ರಾರಂಭಿಸಲು ರಾಯಗಡ್‌ ಪೊಲೀಸರಿಗೆ ಅನುಮತಿ ಸಿಕ್ಕೊಡನೆಯೇ ಅರ್ನಾಬ್‌ರನ್ನು ಬಂಧಿಸಲು ʼಆಪರೇಷನ್‌ ಅರ್ನಾಬ್‌ʼ ಗಾಗಿ ಸಿದ್ಧತೆ ಪ್ರಾರಂಭವಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆಪರೇಷನ್‌ ಅರ್ನಾಬ್‌ ಸಲುವಾಗಿ ಕೊಂಕಣ್‌ ರೇಂಜ್‌ ಇನ್ಸ್ಪೆಕ್ಟರ್‌ ಜನರಲ್‌ ಸಂಜಯ್‌ ಮೊಹಿತೆ ಅವರ ನೇತೃತ್ವದಲ್ಲಿ 40 ಮಂದಿ ಪೊಲೀಸರ ತಂಡವನ್ನು ರಚಿಸಲಾಗಿತ್ತು. 40 ಮಂದಿ ಸಿಬ್ಬಂದಿಗಳನ್ನು ಮುಂಬೈ ಹಾಗೂ ರಾಯಗಢ ಪೊಲೀಸ್‌ ಪಡೆಯಿಂದ ಆಯ್ಕೆ ಮಾಡಲಾಗಿತ್ತು.

ಅರ್ನಾಬ್‌ ಬಂಧನಕ್ಕೆ ಸಂಜಯ್‌ ಮೊಹಿತೆ ಅವರು ಯೋಜನೆ ರೂಪಿಸಿದ್ದರು. ಆದರೆ ಅದನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಎನ್‌ಕೌಂಟರ್‌ ಸ್ಪೆಶಲಿಸ್ಟ್‌ ಸಚಿನ್‌ ವಾಝೆ ಅವರ ಹೆಗಲಿಗೆ ವಹಿಸಲಾಯಿತು.

Also Read: ಅರ್ನಾಬ್‌ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ʼಮೊಹಿತೆ ಅವರ ನೇತೃತ್ವದ ತಂಡಕ್ಕೆ ಪ್ರಬಲ ಅರ್ನಾಬ್‌ರನ್ನು ಸರಳವಾಗಿ ಬಂಧಿಸುವುದು ಸವಾಲಿನ ಕೆಲಸವಾಗಿತ್ತು. ತಂಡದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಪ್ರಚೋದನೆಗೆ ಒಳಗಾಗದಂತೆ ಸಂಯಮ ಪಾಲಿಸಿದರುʼ ಎಂದು ಹಿರಿಯ ಕ್ಯಾಬಿನೆಟ್‌ ಸದಸ್ಯರೊಬ್ಬರು ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್‌ ಕೈವಾಡವಿದೆಯೆಂದು ಮನವರಿಕೆಯಾಗಿತ್ತು. ನಮ್ಮ ಜನರು ಆತನ ನಿವಾಸದ ಸುತ್ತ ಹಲವು ಬಾರಿ ಗಸ್ತು ತಿರುಗಿದ್ದೆವು. ಇದೊಂದು ರಹಸ್ಯ ಕಾರ್ಯಾಚರಣೆಯಾಗಿತ್ತು. ಕಾರ್ಯಾಚರಣೆಯ ಮಾಹಿತಿ ಸೋರಿಕೆಯಾದರೆ ಬಂಧನದಿಂದ ತಪ್ಪಿಸಲು ಅರ್ನಬ್‌ ನಗರ ಬಿಟ್ಟು ಪಲಾಯನ ಮಾಡಬಹುದೆಂಬ ಆತಂಕ ನಮ್ಮನ್ನು ಕಾಡುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

Also Read: ಅರ್ನಾಬ್‌ ಬಂಧನ: ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರದ ಮಂತ್ರಿಗಳು

ಅರ್ನಾಬ್‌ ತನ್ನ ನಿವಾಸದಲ್ಲಿರುವುದನ್ನು ಖಚಿತಪಡಿಸಿದ ಪೊಲೀಸರು ಅವರನ್ನು ಬುಧವಾರ ಮುಂಜಾನೆ ಅವರ ನಿವಾಸದಿಂದ ಬಂಧಿಸಿದ್ದಾರೆ. ಇದು ಸಂಪೂರ್ಣ ಪೂರ್ವ ತಯಾರಿಯಿಂದ ನಡೆಸಿದ ಕಾರ್ಯಾಚರಣೆಯಾಗಿದ್ದು, ಕಾರ್ಯಾಚರಣೆಯ ಸಣ್ಣ ಸಣ್ಣ ವಿಷಯಗಳನ್ನೂ ಸೂಕ್ಷ್ಮವಾಗಿ ರೂಪುಗೊಳಿಸಲಾಗಿತ್ತು. ಅರ್ನಾಬ್‌ ನಿವಾಸದ ಬಾಗಿಲು ತಟ್ಟುವವರು ಯಾರು, ಅರ್ನಾಬ್‌ ಜೊತೆ ಮಾತನಾಡುವವರು ಯಾರು, ಅವರ ಕುಟುಂಬದವರನ್ನು ನಿಭಾಯಿಸುವವರು ಯಾರು, ತಮ್ಮ ಜೊತೆ ಬರಲು ಪ್ರತಿರೋಧಿಸಿದರೆ ಅದನ್ನು ನಿರ್ವಹಿಸುವುದು ಹೇಗೆ ಎಂಬ ಪ್ರತಿಯೊಂದನ್ನೂ ಮೊದಲೇ ನಿರ್ಧರಿಸಲಾಗಿತ್ತು ಎಂದು ಅವರು ತಿಳಿಸಿರುವುದಾಗಿ ವರದಿ ಹೇಳಿದೆ.

Also Read: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಬಂಧನ

ದೇವೇಂದ್ರ ಫಡ್ನವೀಸ್‌ ಸರ್ಕಾರದಲ್ಲಿ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು. ಮೃತ ಅನ್ವಯ್‌ ಅವರ ಪತ್ನಿ ಹಾಗೂ ಅವರ ಮಗಳಅಹವಾಲನ್ನು ಆಲಿಸಿದಾಗ ನನಗೆ ಆಘಾತವಾಯಿತು. ಮಹಾರಾಷ್ಟ್ರದಲ್ಲಿ ಇದು ಸಂಭವಿಸಬಹುದು ಎಂದು ನನಗೆ ನಂಬಲಾಗಿರಲಿಲ್ಲ. ನಾವು ಪ್ರಕರಣವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್‌ ದೇಶ್‌ಮುಖ್‌ ಹೇಳಿದ್ದಾರೆ.

Also Read: ಮತ್ತೆ ಸಂಕಷ್ಟದಲ್ಲಿ Republic Tv ಮುಖ್ಯಸ್ಥ ಅರ್ನಬ್ ಗೋಸ್ವಾಮಿ.!

ಬಿಜೆಪಿ ವಿರುದ್ಧ ನೇರ ಪ್ರಹಾರ ನಡೆಸಿದ ದೇಶ್‌ಮುಖ್‌, ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸಿತು, ಆದರೆ ಅನ್ವಯ್‌ ಪ್ರಕರಣದಲ್ಲಿ ಸ್ಪಷ್ಟ ಆತ್ಮಹತ್ಯೆ ಪತ್ರ ಇದ್ದರೂ ಬಿಜೆಪಿ ಪ್ರಕರಣವನ್ನು ನಿಗ್ರಹಿಸಿದ್ದಾರೆ. ನಾವು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ದೇಶ್ಮುಖ್‌ ತಿಳಸಿದ್ದಾರೆ.

Tags: Arnab GoswamiGovernment of MaharashtraOperation Arnabಅರ್ನಾಬ್ ಗೋಸ್ವಾಮಿಆಪರೇಷನ್ ಅರ್ನಾಬ್
Previous Post

ಬಿಹಾರ ಚುನಾವಣೆ: ಕೊನೆ ಹಂತದಲ್ಲಿ ರಾಜಕೀಯ ನಿವೃತ್ತಿಯ ದಾಳ ಪ್ರಯೋಗಿಸಿದ ನಿತೀಶ್!

Next Post

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಕುರಿತು ತಪ್ಪು ಮಾಹಿತಿ ಹಂಚಿಕೆ: ವಿಚಾರಣೆಗೆ ಆದೇಶ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada