Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆಡಳಿತದಲ್ಲಿ ಕುಟುಂಬ ಹಸ್ತಕ್ಷೇಪ: CM BSYಗೆ ಚಾಟಿ ಬೀಸಿದ RSS

ಆಡಳಿತದಲ್ಲಿ ಕುಟುಂಬ ಹಸ್ತಕ್ಷೇಪ: CM BSYಗೆ ಚಾಟಿ ಬೀಸಿದ RSS
ಆಡಳಿತದಲ್ಲಿ ಕುಟುಂಬ ಹಸ್ತಕ್ಷೇಪ: CM BSYಗೆ ಚಾಟಿ ಬೀಸಿದ RSS

March 9, 2020
Share on FacebookShare on Twitter

ಬಿ.ಎಸ್ ಯಡಿಯೂರಪ್ಪ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಟ್ವೆಂಟಿ – 20 ಸರ್ಕಾರ ಮಾಡಿದ್ದರು. ಯಡಿಯೂರಪ್ಪ ಬೆಂಬಲದಿಂದಲೇ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ಆ ಬಳಿಕ ಬಿಜೆಪಿಗೆ ಜೆಡಿಎಸ್ ಅಧಿಕಾರ ಬಿಟ್ಟುಕೊಡಲಿಲ್ಲ ಎನ್ನುವ ಕಾರಣಕ್ಕಾಗಿ ನಂಬಿಕೆ ದ್ರೋಹ, ವಂಚನೆ ಮಾಡಿದರು, ವಚನ ಭ್ರಷ್ಟರ ವಿರುದ್ಧ ನನಗೆ ಮತ ನೀಡಿ ಎಂದು ರಾಜ್ಯದ ಜನರ ಮುಂದೆ ಯಡಿಯೂರಪ್ಪ ನಿಂತಾಗ, ಜನ ಅಭೂತಪೂರ್ವ ಗೆಲುವು ಕೊಟ್ಟು ಮುಖ್ಯಮಂತ್ರಿ ಪಟ್ಟಕ್ಕೇರುವಂತೆ ಮಾಡಿದರು. ಯಡಿಯೂರಪ್ಪ ಅಧಿಕಾರಕ್ಕೆ ಬರುತ್ತಿದ್ದ ಹಾಗೆ ಯಡಿಯೂರಪ್ಪ ಸುತ್ತಮುತ್ತ ಆಪ್ತ ಬಳಗದ ಹಸ್ತಕ್ಷೇಪ ಹೆಚ್ಚಾಗಿತ್ತು. ಶೋಭಾ ಕರಂದ್ಲಾಜೆ, ರೇಣುಕಾಚಾರ್ಯ, ಸೇರಿದಂತೆ ಕೆಲವೇ ಕೆಲವು ಮಂದಿ ಶಾಸಕರು, ಸಚಿವರು ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಸುತ್ತಮುತ್ತ ಕಾಣಿಸಿಕೊಳ್ಳುತ್ತಾ ಇದ್ದರು. ಆ ವೇಳೆ ಯಡಿಯೂರಪ್ಪ ಕೇವಲ ಆಪ್ತರ ಮಾತಿಗಷ್ಟೇ ಮನ್ನಣೆ ನೀಡುತ್ತಾರೆ, ಪಕ್ಷ ನಿಷ್ಟರನ್ನು ಕಡೆಗಣಿಸುತ್ತಿದ್ದಾರೆ ಎನ್ನುವ ಆರೋಪ ಸಹಜವಾಗಿಯೇ ಕೇಳಿ ಬಂದಿತ್ತು.

ಹೆಚ್ಚು ಓದಿದ ಸ್ಟೋರಿಗಳು

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಯತ್ನಾಳ್‌ ಕೋಪ ತಣಿಸಲು ಮುಂದಾದ ಬಿಜೆಪಿ ಹೈಕಮಾಂಡ್‌..! ಇವತ್ತೇ ನಿರ್ಧಾರ..!

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

ಇದೀಗ ಮತ್ತೆ ಯಡಿಯೂರಪ್ಪ ಅದೇ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ್ದಾರೆ. ಈ ಬಾರಿ ಯಡಿಯೂರಪ್ಪ ಹಳೆಯ ಆಪ್ತರನ್ನು ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ. ಆದರೆ ಈ ಬಾರಿಯ ಸರ್ಕಾರದಲ್ಲಿ ಕುಟುಂಬಸ್ಥರ ಹಸ್ತಕ್ಷೇಪ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಆಪರೇಷನ್ ಕಮಲದ ಸಮಯದಿಂದ ಹಿಡಿದು ಅಧಿಕಾರಕ್ಕೆ ಏರಿದ ಬಳಿಕ ವಿಜಯೇಂದ್ರ ಸಾಕಷ್ಟು ಕಡೆ ವಿಜೃಂಬಿಸುತ್ತಿದ್ದಾರೆ. ಕಳೆದ ಬಾರಿ ಆಪ್ತರ ವಿರುದ್ಧ ಕೇಳಿಬಂದಿದ್ದ ಆರೋಪದಂತೆ ಈ ಬಾರಿ ಕುಟುಂಬಸ್ಥರ ವಿರುದ್ಧ ಆರೋಪ ಸಾಮಾನ್ಯವಾಗಿದೆ.

ಸರ್ಕಾರದಲ್ಲಿ ಯಾವುದೇ ಕೆಲಸ ಕಾರ್ಯಗಳು ಆಗಬೇಕಿದ್ದರೂ ವಿಜಯೇಂದ್ರ ಅಪ್ಪಣೆ ಆಗಬೇಕು. ಕೆಲವೊಂದು ಸಚಿವರ ಖಾತೆಗಳಲ್ಲೂ ವಿಜಯೇಂದ್ರ ಕೈ ಆಡಿಸುತ್ತಿದ್ದಾರೆ ಎನ್ನುವ ದೂರು ಸಾಮಾನ್ಯ ಸಂಗತಿ ಆಗಿದೆ. ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ವಿಧಾನಸೌದದಲ್ಲಿ ಕುಳಿತು ವಿಜಯೇಂದ್ರ ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯೂ ಸದ್ದು ಮಾಡಿತ್ತು. ಕುಟುಂಬಸ್ಥರ ನಿಯಂತ್ರಣ ಮಾಡಬೇಕು ಎನ್ನುವ ದೂರು ಹೈಕಮಾಂಡ್‌ಗೂ ಮುಟ್ಟಿತ್ತು. ಇದೀಗ ಸ್ವತಃ ಆರ್‌ಎಸ್‌ಎಸ್ ಅಖಾಡಕ್ಕೆ ಇಳಿದಿದೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನಿನ್ನೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ತೆರಳಿದ್ದರು. ಆರ್‌ಎಸ್‌ಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಮೋಹನ್ ಭಾಗವತ್, ಆ ಬಳಿಕ ಸಿಎಂ ಯಡಿಯೂರಪ್ಪ ಅವರ ಬಳಿ ಮಾತನಾಡಿದ್ದಾರೆ ಎನ್ನಲಾಗಿದೆ. ಜನಸೇವಾ ವಿದ್ಯಾಕೇಂದ್ರ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಸಲಹೆ ರೀತಿಯಲ್ಲಿ ಮೋಹನ್ ಭಾಗವತ್ ಕೆಲವೊಂದು ಸೂಚನೆಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಆಡಳಿತದಲ್ಲಿ ಇರುವಾಗ ಕುಟುಂಬ ಸದಸ್ಯರನ್ನು ದೂರವಿಡಬೇಕು. ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಆಸ್ಪದ ಕೊಡಬಾರದು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಿವಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಆಡಳಿತದಿಂದ ಕುಟುಂಬ ಸದಸ್ಯರನ್ನು ದೂರವಿಡಿ ಎನ್ನುವ ಸಲಹೆಯನ್ನು ತುಂಬಾ ತಾಳ್ಮೆಯಿಂದಲೇ ಕೇಳಿಸಿಕೊಂಡು ಬಂದ ಯಡಿಯೂರಪ್ಪ ಚಿಂತಿತರಾಗಿದ್ದರು ಎನ್ನಲಾಗಿದೆ. ನಾನು ಮಾಡುವ ಎಲ್ಲಾ ಕೆಲಸಗಳ ಬಗ್ಗೆ ಹೈಕಮಾಂಡ್ ಬಳಿ ದೂರಲಾಗ್ತಿದೆ. ಆರ್‌ಎಸ್‌ಎಸ್ ಮುಖ್ಯಸ್ಥರ ಮೂಲಕ ಕುಟುಂಬಸ್ಥರನ್ನು ಆಡಳಿತದಿಂದ ದೂರ ಇಡುವುದಕ್ಕೆ ಸೂಚಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
6192
Next
»
loading
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
«
Prev
1
/
6192
Next
»
loading

don't miss it !

ಕ್ರಿಕೆಟ್- ಮೌಢ್ಯ ಮತ್ತು ಬಂಡವಾಳಶಾಹಿ ಮಾರುಕಟ್ಟೆ‌ – ನಾ ದಿವಾಕರ ಅವರ ಬರಹ
ಕ್ರೀಡೆ

ಕ್ರಿಕೆಟ್- ಮೌಢ್ಯ ಮತ್ತು ಬಂಡವಾಳಶಾಹಿ ಮಾರುಕಟ್ಟೆ‌ – ನಾ ದಿವಾಕರ ಅವರ ಬರಹ

by ನಾ ದಿವಾಕರ
November 25, 2023
28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹೆಚ್.ಡಿ.ಕೆ ಮತ್ತು ವಿಜಯೇಂದ್ರ
ಕರ್ನಾಟಕ

28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹೆಚ್.ಡಿ.ಕೆ ಮತ್ತು ವಿಜಯೇಂದ್ರ

by Prathidhvani
November 26, 2023
ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?
ಕರ್ನಾಟಕ

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

by Prathidhvani
November 30, 2023
ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚೋದು ಹೇಗೆ? ಬ್ಲಾಕ್‌ ಮಾಡೋದು ಹೇಗೆ? ಇಲ್ಲಿದೆ ಸುಲಭ ಪರಿಹಾರ!
ಇತರೆ

ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚೋದು ಹೇಗೆ? ಬ್ಲಾಕ್‌ ಮಾಡೋದು ಹೇಗೆ? ಇಲ್ಲಿದೆ ಸುಲಭ ಪರಿಹಾರ!

by Prathidhvani
November 30, 2023
ಇಂದಿನಿಂದ ಡಿಸೆಂಬರ್ 3 ರವರೆಗೂ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಸೂಚನೆ
ಕರ್ನಾಟಕ

ಇಂದಿನಿಂದ ಡಿಸೆಂಬರ್ 3 ರವರೆಗೂ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಸೂಚನೆ

by Prathidhvani
November 28, 2023
Next Post
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮವನ್ನು ನಿರ್ಬಂಧಿಸಿ ಸಂವಿಧಾನದ ಕುರಿತು ಚರ್ಚೆ!

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮವನ್ನು ನಿರ್ಬಂಧಿಸಿ ಸಂವಿಧಾನದ ಕುರಿತು ಚರ್ಚೆ!

ಷೇರುಪೇಟೆಯಲ್ಲಿ ನಿಲ್ಲದ ರಕ್ತದೋಕುಳಿ; ಒಂದೇ ದಿನದಲ್ಲಿ ₹7 ಲಕ್ಷ ಕೋಟಿ ನಷ್ಟ

ಷೇರುಪೇಟೆಯಲ್ಲಿ ನಿಲ್ಲದ ರಕ್ತದೋಕುಳಿ; ಒಂದೇ ದಿನದಲ್ಲಿ ₹7 ಲಕ್ಷ ಕೋಟಿ ನಷ್ಟ

ಯೆಸ್ ಬ್ಯಾಂಕ್ ಹಗರಣ: ಕೊಚ್ಚಿ ಹೋದ ಲಕ್ಷ ಕೋಟಿ ಹಣದ ಮೇಲೆ ಕೊಚ್ಚೆ ರಾಜಕೀಯ!

ಯೆಸ್ ಬ್ಯಾಂಕ್ ಹಗರಣ: ಕೊಚ್ಚಿ ಹೋದ ಲಕ್ಷ ಕೋಟಿ ಹಣದ ಮೇಲೆ ಕೊಚ್ಚೆ ರಾಜಕೀಯ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist