• Home
  • About Us
  • ಕರ್ನಾಟಕ
Saturday, June 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆದಾಯ ತೆರಿಗೆ ಕಡಿತ ಮಾಡಿದರೆ ನಿಮಗೆ ಲಾಭವಾಗಲಿದೆ ಗೊತ್ತೇ?

by
December 8, 2019
in ದೇಶ
0
ಆದಾಯ ತೆರಿಗೆ ಕಡಿತ ಮಾಡಿದರೆ ನಿಮಗೆ ಲಾಭವಾಗಲಿದೆ ಗೊತ್ತೇ?
Share on WhatsAppShare on FacebookShare on Telegram

ಕುಸಿಯುತ್ತಿರುವ ಆರ್ಥಿಕತೆಗೆ ಚೇತರಿಕೆ ನೀಡಲು ತಿಂಗಳ ಹಿಂದಷ್ಟೇ 1.40 ಲಕ್ಷ ಕೋಟಿ ರುಪಾಯಿಗಳಷ್ಟು ಕಾರ್ಪೊರೆಟ್ ತೆರಿಗೆ ಕಡಿತ ಮಾಡಿದ್ದ ಕೇಂದ್ರ ಸರ್ಕಾರವು ಈಗ ಜನರ ಖರೀದಿ ಶಕ್ತಿಯನ್ನು ಉದ್ದೀಪಿಸಲು ವೈಯಕ್ತಿಕ ಆದಾಯ ತೆರಿಗೆ ಕಡಿತ ಮಾಡಲು ಮುಂದಾಗಿದೆ. ಬರುವ ಬಜೆಟ್ ನಲ್ಲಿ ವೈಯಕ್ತಿಕ ಆದಾಯ ತೆರಿಗೆ ಕಡಿತ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದ ವರದಿಯಲ್ಲಿ ಜನರ ಖರೀದಿ ಶಕ್ತಿ ಕುಂದಿದ್ದು ಆರು ವರ್ಷಗಳ ಕನಿಷ್ಠಮಟ್ಟಕ್ಕೆ ಇಳಿದಿದೆ ಎಂದು ತಿಳಿಸಿತ್ತು. ಜತೆಗೆ ಕಳೆದವಾರ ಬಿಡುಗಡೆಯಾದ ಅಂಕಿಅಂಶಗಳ ಪ್ರಕಾರ ದ್ವಿತೀಯ ತ್ರೈಮಾಸಿಕದಲ್ಲಿ ಜಿಡಿಪಿ ಶೇ.4.5ಕ್ಕೆ ಕುಸಿದಿದ್ದು, ಇದೂ ಸಹ ಕಳೆದ ಆರು ವರ್ಷಗಳ ಕನಿಷ್ಠಮಟ್ಟವಾಗಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಚೇತರಿಕೆ ನೀಡುವ ಸಲುವಾಗಿ ನರೇಂದ್ರ ಮೋದಿ ಸರ್ಕಾರವು ಬರುವ ವಿತ್ತೀಯ ವರ್ಷದಲ್ಲಿ ವೈಯಕ್ತಿಕ ಆದಾಯ ತೆರಿಗೆ ಕಡಿತ ಮಾಡಲು ನಿರ್ಧರಿಸಿದೆ. ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಅವರು ಆರ್ಥಿಕ ಚೇತರಿಕೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ್ದಾರೆ. ಬರುವ ದಿನಗಳಲ್ಲಿ ಆರ್ಥಿಕತೆ ಚೇತರಿಸಿಕೊಂಡು, ಸರಿಹಾದಿಗೆ ಹೊರಳಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೈಯಕ್ತಿಕ ಆದಾಯ ತೆರಿಗೆ ಕಡಿತ ಮಾಡಿದರೆ ಯಾರಿಗೆ ಎಷ್ಟು ಅನುಕೂಲ ಆಗುತ್ತದೆ? ತೆರಿಗೆ ಕಡಿತ ಎಷ್ಟು ಎಂಬುದು ಬಜೆಟ್ ನಲ್ಲಿ ಪ್ರಕಟಿಸಿದ ನಂತರವೇ ತಿಳಿಯುತ್ತದೆ. ಆದರೆ, ಪ್ರಸ್ತುತ ಇರುವ ಆದಾಯ ತೆರಿಗೆ ಪ್ರಮಾಣಕ್ಕಿಂತ ಕಡಮೆ ಆಗಲಿದೆ ಎಂಬುದಂತೂ ನಿಚ್ಛಳ.

ಪ್ರಸ್ತುತ ಆದಾಯ ತೆರಿಗೆ ಎಷ್ಟಿದೆ ಎಂಬುದರತ್ತ ಗಮನ ಹರಿಸೋಣ. 2019-20ನೇ ಸಾಲಿನಲ್ಲಿ 2.50 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. 2.50-5 ಲಕ್ಷದವರೆಗೆ ಶೇ.5ರಷ್ಟಿದೆ. 5 -10 ಲಕ್ಷದವರೆಗೆ 12,500 ಜತೆಗೆ 5 ಲಕ್ಷ ಮೇಲ್ಪಟ್ಟ ಮೊತ್ತದ ಮೇಲೆ ಶೇ.20ರಷ್ಟು (ಅಂದರೆ ನಿಮ್ಮ ಆದಾಯ 9 ಲಕ್ಷ ಎಂದಿಟ್ಟುಕೊಂಡರೆ ನೀವು ಈಗ ಪಾವತಿಸುತ್ತಿರುವ ಆದಾಯ ತೆರಿಗೆಯು 92,500 ರುಪಾಯಿಗಳು.) 10 ಲಕ್ಷ ಮೇಲ್ಪಟ್ಟು ಆದಾಯ ಇರುವವರಿಗೆ 12,500 ಜತೆಗೆ 10 ಲಕ್ಷ ಮೇಲ್ಪಟ್ಟ ಮೊತ್ತದ ಮೇಲೆ ಶೇ.30ರಷ್ಟು.

ಮೇಲಿನ ತೆರಿಗೆ ದರಗಳು ಹೆಚ್ಚುವರಿ ಶುಲ್ಕ ಮತ್ತು ಸೆಸ್ ಅನ್ನು ಒಳಗೊಂಡಿಲ್ಲ. ಆದಾಯವು 50 ಲಕ್ಷ ಮೀರಿದರೆ ಆದರೆ 1 ಕೋಟಿ ವರೆಗೆ ಇದ್ದರೆ ಆದಾಯ ತೆರಿಗೆಯಲ್ಲಿ 10% ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ. ಆದಾಯವು 1 ಕೋಟಿ ಮೀರಿದರೆ ಆದಾಯ ತೆರಿಗೆಯಲ್ಲಿ 15% ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ. 4% ಆರೋಗ್ಯ ಮತ್ತು ಶಿಕ್ಷಣ ಸೆಸ್ ಆದಾಯ ತೆರಿಗೆ ಮತ್ತು ಅನ್ವಯವಾಗುವ ಹೆಚ್ಚುವರಿ ಶುಲ್ಕದ ಮೇಲೆ ಅನ್ವಯಿಸುತ್ತದೆ. ಆದಾಯ 5 ಲಕ್ಷಕ್ಕಿಂತ ಕಡಿಮೆ ಇರುವ ವ್ಯಕ್ತಿಗಳು, ಸೆಕ್ಷನ್ 87 ಎ ಅಡಿಯಲ್ಲಿ ಪೂರ್ಣ ತೆರಿಗೆ ರಿಯಾಯಿತಿಗೆ ಅರ್ಹರಾಗಿದ್ದಾರೆ. ಈಗ ಹಾಲಿ ತೆರಿಗೆ ದರ ಎಷ್ಟೆಂಬುದು ಗೊತ್ತಿರುವುದರಿಂದ ಮುಂದಿನ ವಿತ್ತೀಯ ವರ್ಷದಲ್ಲಿ ಆದಾಯ ತೆರಿಗೆ ಎಷ್ಟಾಗಬಹುದು ಎಂಬುದನ್ನು ಖಚಿತವಾಗಿ ಅಲ್ಲದಿದ್ದರೂ ಅಂಜಾಜಿಸಬಹುದು. ಪ್ರಸ್ತುತ 2.50 ಲಕ್ಷದಿಂದ 5 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ಇದ್ದರೂ ಸೆಕ್ಷೆನ್ 87ಎ ಅಡಿಯಲ್ಲಿ ಪೂರ್ಣ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಹೀಗಾಗಿ 5 ಲಕ್ಷದವರೆಗೆ ಯಾರು ಆದಾಯಗಳಿಸುತ್ತಿದ್ದಾರೋ ಅವರು ಆದಾಯ ತೆರಿಗೆ ಬಗ್ಗೆ ತೆಲೆಕೆಡಿಸಿಕೊಳ್ಳಬೇಕಿಲ್ಲ.

ಈಗ ಮುಖ್ಯವಾಗಿ ಇರುವುದು 5-10 ಲಕ್ಷ ರುಪಾಯಿ ಆದಾಯ ಇರುವ ವರ್ಗ. ಈ ವರ್ಗದಲ್ಲಿ 12,500 ಜತೆಗೆ 5 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.20ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಅಂದರೆ, 10 ಲಕ್ಷ ಆದಾಯ ಪಡೆಯುವವರು ಹೆಚ್ಚು ಕಮ್ಮಿ 1.10 ಲಕ್ಷ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಈ ವರ್ಗಕ್ಕೆ ವಿಧಿಸುತ್ತಿರುವ ತೆರಿಗೆ ದರವನ್ನುಶೇ.20ರಿಂದ ಶೇ.10ಕ್ಕೆ ತಗ್ಗಿಸಿದರೆ 5 ಲಕ್ಷ ಮೀರಿದ ಪ್ರತಿ ಲಕ್ಷಕ್ಕೂ 10,000 ರುಪಾಯಿ ತೆರಿಗೆ ಉಳಿತಾಯವಾಗುತ್ತದೆ. 10 ಲಕ್ಷ ಆದಾಯ ಪಡೆಯುವವರು 1.12 ಲಕ್ಷದ ಬದಲಿಗೆ 62,000 ರುಪಾಯಿ ತೆರಿಗೆ ಪಾವತಿಸಬೇಕಾಗುತ್ತದೆ. ಅಂದರೆ, 50000 ರುಪಾಯಿ ತೆರಿಗೆ ರೂಪದಲ್ಲಿ ಉಳಿತಾಯವಾಗುತ್ತದೆ. ಹಾಗೆಯೇ 10 ಲಕ್ಷ ಮೇಲ್ಪಟ್ಟವರಿಗೆ ವಿಧಿಸುತ್ತಿರುವ ಶೇ.30ರಷ್ಟು ಆದಾಯ ತೆರಿಗೆಯನ್ನು ಶೇ.25ಕ್ಕೆ ತಗ್ಗಿಸಿದರೂ 20 ಲಕ್ಷ ಆದಾಯ ಇರುವವರು 3,12,500 ರುಪಾಯಿ ಬದಲಿಗೆ 2,62,000 ರುಪಾಯಿ ತೆರಿಗೆ ಪಾವತಿಸಬೇಕಾಗುತ್ತದೆ. ಅಂದರೆ 50,000 ರುಪಾಯಿ ತೆರಿಗೆ ಉಳಿತಾಯವಾಗುತ್ತದೆ.

ಇದು ಸಾಂಕೇತಿಕ ಅಂದಾಜು ಅಷ್ಟೇ. ಖಚಿತವಾದ ತೆರಿಗೆ ಉಳಿತಾಯದಲ್ಲಿ ಏರಿಳಿತವಾಗುತ್ತದೆ. ಸ್ಟ್ಯಾಂಡರ್ಡ್ ಡಿಡಕ್ಷನ್ (ವೈದ್ಯಕೀಯ ಮತ್ತು ಪ್ರವಾಸ ಭತ್ಯೆ) 50,000 ಸೆಕ್ಷನ್ 80ಸಿ ಮತ್ತು ಮನೆಬಾಡಿಗೆ ಭತ್ಯೆ(ಎಚ್ಆರ್ಎ) ಮೂಲಕ ಕನಿಷ್ಠ ಎರಡು ಲಕ್ಷ ರುಪಾಯಿಗಳಷ್ಟು ಮೊತ್ತಕ್ಕೆ ತೆರಿಗೆ ವಿನಾಯ್ತಿ ಪಡೆಯಬಹುದು.

ತೆರಿಗೆ ಕಡಿತ ಮಾಡುವುದರಿಂದ ಜನರ ಬಳಿ ಖರ್ಚು ಮಾಡಬಹುದಾದ ನಗದು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುತ್ತದೆ. ಬಹುತೇಕ ಈ ಮೊತ್ತವನ್ನು ಜನರು ಉಪಭೋಗಕ್ಕಾಗಿ ವಿನಿಯೋಗಿಸುತ್ತಾರೆ ಎಂಬುದು ಸಾಮಾನ್ಯವಾಗಿ ಆರ್ಥಿಕ ತಜ್ಞರು ಮಾಡುವ ಅಂದಾಜು. ಅದು ನಿಜವೂ ಇರಬಹುದು.

ಆದರೆ, ಮುಖ್ಯ ಪ್ರಶ್ನೆ ಎಂದರೆ ಈಗಾಗಲೇ ಪ್ರಕಟಿಸಿರುವ ಕಾರ್ಪೊರೆಟ್ ತೆರಿಗೆ 1.45 ಲಕ್ಷ ಕೋಟಿ ರುಪಾಯಿಗಳ ಹೊರೆ ಬೊಕ್ಕಸದ ಮೇಲಿದೆ. ಇದು ಒಂದು ಸಲದ ಇಡುಗಂಟಿನ ಪರಿಹಾರವಲ್ಲ. ಪ್ರತಿವರ್ಷವೂ ಬೊಕ್ಕಸಕ್ಕೆ ಬರುತ್ತಿದ್ದ ಕಾರ್ಪೊರೆಟ್ ತೆರಿಗೆ ಪೈಕಿ 1.45 ಲಕ್ಷ ಕೋಟಿ ಕಡಿತವಾಗಲಿದೆ. ಇದನ್ನು ಸರ್ಕಾರ ಹೇಗೆ ಸರಿದೂಗಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ಆದಾಯ ತೆರಿಗೆ ಕಡಿತ ಮಾಡುವುದರಿಂದ ಬೊಕ್ಕಸದ ಮೇಲೆ ಬೀಳುವ ಹೊರೆ ಎಷ್ಟು ಎಂಬುದು ಕಡಿತ ಮಾಡಿದ ನಂತರವಷ್ಟೇ ಸ್ಪಷ್ಟವಾಗುತ್ತದೆ. ಆದರೆ, ಹೊರೆಯನ್ನು ಸರಿದೂಗಿಸುವ ದಾರಿಗಳಾವುವು? ಈಗಾಗಲೇ ಪ್ರಸಕ್ತ ಸಾಲಿನ ವಿತ್ತೀಯ ಕೊರತೆ ಶೇ.3.3ರ ಮಿತಿಯನ್ನು ದಾಟಿದೆ. ಬಾಕಿ ಇರುವ ನಾಲ್ಕು ತಿಂಗಳಲ್ಲಿ ಸರ್ಕಾರ ಮಾಡಲಿರುವ ವೆಚ್ಚವನ್ನು ಅಂದಾಜಿಸಿದರೂ ವಿತ್ತೀಯ ಕೊರತೆ ಶೇ.3.7-3.8ರ ಮಿತಿ ದಾಟುವ ಸಾಧ್ಯತೆ ಇದೆ.

Tags: Corporate Tax CutEconomic SlowdownIncome Tax DepartmentNarendra ModiNirmala SitaramanPersonal Income TaxTax Freeಆದಾಯ ತೆರಿಗೆಆರ್ಥಿಕ ಹಿಂಜರಿತಕಾರ್ಪೊರೆಟ್ ತೆರಿಗೆ ಕಡಿತತೆರಿಗೆ ಕಡಿತನರೇಂದ್ರ ಮೋದಿನಿರ್ಮಲ ಸೀತಾರಾಮನ್ವೈಯಕ್ತಿಕ ಆದಾಯ ತೆರಿಗೆ
Previous Post

ಜಿಎಸ್‌ಟಿ ಆದಾಯ ಹೆಚ್ಚಿಸಿಕೊಳ್ಳಲು ಹೊಸಮಾರ್ಗ ಹುಡುಕುತ್ತಿರುವ ಕೇಂದ್ರ ಸರ್ಕಾರ

Next Post

ಭಾರತ -ನೇಪಾಳದ ಮದ್ಯೆ ವಿವಾದಕ್ಕೆ ಕಾರಣವಾಗಿರುವ ಕಾಲಪಾನಿ  ಭೂ ಪ್ರದೇಶ

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025
Next Post
ಭಾರತ -ನೇಪಾಳದ ಮದ್ಯೆ ವಿವಾದಕ್ಕೆ ಕಾರಣವಾಗಿರುವ ಕಾಲಪಾನಿ  ಭೂ ಪ್ರದೇಶ

ಭಾರತ -ನೇಪಾಳದ ಮದ್ಯೆ ವಿವಾದಕ್ಕೆ ಕಾರಣವಾಗಿರುವ ಕಾಲಪಾನಿ  ಭೂ ಪ್ರದೇಶ

Please login to join discussion

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ
Top Story

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

by ನಾ ದಿವಾಕರ
June 14, 2025
Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

June 14, 2025

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada