Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆಮ್‌ ಆದ್ಮಿ ಪಾರ್ಟಿಗೆ ದಿಲ್ಲಿಯಲ್ಲಿ ಇವಿಎಂ ಹ್ಯಾಕ್ ಮಾಡುವ ಭೀತಿ ಕಾಡುತ್ತಿದೆಯೇ? 

ಆಮ್‌ ಆದ್ಮಿ ಪಾರ್ಟಿಗೆ ದಿಲ್ಲಿಯಲ್ಲಿ ಇವಿಎಂ ಹ್ಯಾಕ್ ಮಾಡುವ ಭೀತಿ ಕಾಡುತ್ತಿದೆಯೇ?
ಆಮ್‌ ಆದ್ಮಿ ಪಾರ್ಟಿಗೆ ದಿಲ್ಲಿಯಲ್ಲಿ ಇವಿಎಂ ಹ್ಯಾಕ್ ಮಾಡುವ ಭೀತಿ ಕಾಡುತ್ತಿದೆಯೇ? 

February 10, 2020
Share on FacebookShare on Twitter

ನಾಳೆ ದೆಹಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಆಮ್ ಆದ್ಮಿ ಪಾರ್ಟಿ ಗೆದ್ದು ಮತ್ತೆ ಅಧಿಕಾರ ಹಿಡಿಯಲಿದೆ ಎನ್ನುವ ಮಾಹಿತಿಗಳು ಬಂದಿವೆ. ಆದರೆ ಬಿಜೆಪಿ ನಾಯಕರು ಮಾತ್ರ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದು ತುಂಬಾ ಆತ್ಮವಿಶ್ವಾಸದಲ್ಲಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಈ ಹೇಳಿಕೆ ಆಮ್ ಆದ್ಮಿ ಪಾರ್ಟಿ ನಾಯಕರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುವಂತೆ ಅಗಿದೆ. ಆಮ್ ಆದ್ಮಿ ನಾಯಕರ ಈ ಸಂಕಷ್ಟಕ್ಕೆ ಕಾರಣ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಹ್ಯಾಕ್ ಮಾಡುವ ಭೀತಿ. ಬಿಜೆಪಿ ದೇಶಾದ್ಯಂತ ಜಯಭೇರಿ ಬಾರಿಸುತ್ತಾ ಸಾಗಿದಂತೆ ವಿರೋಧ ಪಕ್ಷದ ನಾಯಕರು ಇವಿಎಂ ಮೆಷಿನ್ ಹ್ಯಾಕ್ ಮಾಡಲಾಗುತ್ತಿದೆ ಎನ್ನುವ ಆರೋಪ ಮಾಡಿದ್ದರು. ಇವಿಎಂ ಹ್ಯಾಕ್ ಆಗುತ್ತಿರುವುದರಿಂದಲೇ ನಮಗೆ ಬರಬೇಕಾದ ಮತಗಳೂ ಕೂಡ ಬಿಜೆಪಿ ಪಾಲಾಗುತ್ತಿವೆ ಎಂದು ಆರೋಪಿಸಿದ್ರು. ಇದೀಗ ಅದೇ ಭೀತಿ ಎದುರಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ನಿಮ್ಮಂತಹ ಪುಕ್ಕಲು ಸರ್ವಾಧಿಕಾರಿಗೆ ಹೆದರಲ್ಲ: ಮೋದಿ ವಿರುದ್ಧ ಪ್ರಿಯಾಂಕ ಗುಡುಗು.!

ಚುನಾವಣೆಗೂ ಮುನ್ನ ಆಮ್ ಆದ್ಮಿ ಪಾರ್ಟಿ ಕೂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಅನ್ನು ಹ್ಯಾಕ್ ಮಾಡಬಹುದು ಎನ್ನುವುದನ್ನು ತೋರಿಸಿದ್ದರು. ಡೆಮೋ ಮಾಡಿ ತೋರಿಸಿದ್ದ ಆಪ್‌ನ ಎಂಜಿನಿಯರ್ ಟೀಂ ಯಾವುದೇ ಕಾರಣಕ್ಕೂ ಇವಿಎಂ ಮೆಷಿನ್ ಬಳಕೆ ಮಾಡಿ ಚುನಾವಣೆ ಮಾಡದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮಾತ್ರ ಆಮ್ ಅದ್ಮಿ ಪಾರ್ಟಿಯ ಆರೋಪವನ್ನು ಅಲ್ಲಗಳೆದಿದ್ದರು. ಯಾವುದೇ ಕಾರಣಕ್ಕೂ ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ. ಚುನಾವಣೆ ಮುಕ್ತಾಯವಾದ ಬಳಿಕ ಇವಿಎಂ ಮೆಷಿನ್ ಸ್ಟ್ರಾಂಗ್ ರೂಮ್ ಸೇರಲಿದೆ. ಅದಕ್ಕೂ ಮೊದಲೇ ಚುನಾವಣಾ ಕೇಂದ್ರದಲ್ಲೇ ಅದನ್ನು ಸಂಪರ್ಕ ರಹಿತವನ್ನಾಗಿ ಮಾಡಿ ಸೀಲ್ ಮಾಡಲಾಗುತ್ತದೆ. ಯಾವುದೇ ಇಂಟರ್ನೆಟ್ ಸಂಪರ್ಕ ಇಲ್ಲ ಎಂದ ಮೇಲೆ ಅದನ್ನು ಹ್ಯಾಕ್ ಮಾಡುವುದು ಹೇಗೆ ಎನ್ನುವ ಮರು ಪ್ರಶ್ನೆಯನ್ನು ಹಾಕಿತ್ತು. ಆದರೆ ಇವಿಎಂ ಮೆಷಿನ್ ಬದಲಾವಣೆ ಮಾಡಿದರೆ ಏನು ಮಾಡುವುದು ಎನ್ನುವ ಆತಂಕ ಬೇರೆ ಪಕ್ಷದವರನ್ನು ಕಾಡಲಾರಂಭಿಸಿತ್ತು. ಈ ಅನುಮಾನಕ್ಕೆ ಮತ್ತೊಂದು ಕಾರಣ ಬಿಜೆಪಿ ನಾಯಕ ಕೊಟ್ಟಿದ್ದ ಆ ಒಂದು ಹೇಳಿಕೆ.

ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಬಿಜೆಪಿ ನಾಯಕರೊಬ್ಬರು ನೀವು ಬಿಜೆಪಿಗೆ ಮತ ಹಾಕದಿದ್ದರೂ ನಿಮ್ಮ ಮತ ಬಿಜೆಪಿಗೆ ಬರಲಿದೆ ಎಂದಿದ್ದರು. ಆ ಬಳಿಕ ಇವಿಎಂ ಹ್ಯಾಕ್ ಮಾಡಲಾಗುತ್ತೆ ಎನ್ನುವ ಮಾತಿಗೆ ಬಲ ಬಂದಂತಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇವಿಎಂ ಹ್ಯಾಕ್ ಮಾಡುವ ವಿಡಿಯೋ ಶೇರ್ ಮಾಡುವ ಮೂಲಕ ಹ್ಯಾಕ್ ಮಾಡಲಾಗುತ್ತೆ ಎಂಬುದನ್ನು ಬೆಂಬಲಿಸಿದ್ದರು. ಇದೀಗ ಕರ್ನಾಟಕ ಬಿಜೆಪಿ ಕೂಡ ಇದೇ ಅರ್ಥ ಬರುವ ಹಾಗೆ ಟ್ವೀಟ್ ಮಾಡಿದೆ. ಈ ಟ್ವೀಟ್‌ನ ಅರ್ಥ, ಪ್ರೀತಿಯ ಇವಿಎಂ ನಿನ್ನನ್ನು ಎಲ್ಲಾ ವಿರೋಧ ಪಕ್ಷಗಳು ಮಂಗಳವಾರ ನಿನ್ನನ್ನು ದೂಷಿಸುತ್ತಾರೆ. ನೀನು ಅವರನ್ನು ಕ್ಷಮಿಸಿಬಿಡು. ಯಾಕಂದ್ರೆ ಅವರಿಗೆ ಏನ್ ಮಾಡ್ತಿದ್ದೀವಿ? ಏನನ್ನು ಹೇಳ್ತಿದ್ದೀವಿ ಎನ್ನುವುದು ಗೊತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಈ ಮೂಲಕ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲುವು ಸಾಧಿಸಲಿದೆ ಎಂದಿದೆ. ಆಮ್ ಆದ್ಮಿ ಪಾರ್ಟಿಗೆ ಎದುರಾಗಿರುವ ಇನ್ನೊಂದು ಸಂಕಷ್ಟ ಎಂದರೆ ಚುನಾವಣಾ ಆಯೋಗ ಮತದಾನ ಮುಕ್ತಾಯವಾಗಿ ಒಂದು ದಿನ ಕಳೆದರೂ ಇನ್ನೂ ಕೂಡ ಮತದಾನ ನಡೆದ ಅಂಕಿ ಅಂಶವನ್ನು ಅಧಿಕೃತವಾಗಿ ಘೋಷಣೆ ಮಾಡದೆ ಇರುವುದು. ಕೆಲವು ಕಡೆ ಇಂದು ಸಂಜೆಯವರೆಗೂ ಕೂಡ ಇವಿಎಂ ಮೆಷಿನ್ ಸ್ಟ್ರಾಂಗ್ ರೂಮ್ ಸೇರಿರಲ್ಲ. ಇದೂ ಕೂಡ ಅನುಮಾನ ಹೆಚ್ಚಾಗುವಂತೆ ಮಾಡಿದೆ

ಆಮ್ ಆದ್ಮಿ ಪಾರ್ಟಿ ನಾಯಕರು ಇವಿಎಂ ಮೆಷಿನ್ ಹ್ಯಾಕ್ ಮಾಡುವ ಭೀತಿಗೆ ಒಳಗಾಗಿದ್ದಾರೆ. ಯಾಕೆಂದ್ರೆ ಚುನಾವಣಾ ಆಯೋಗ ಸಂಜೆಯವರೆಗೂ ಶೇಕಡವಾರು ಮತದಾನದ ಅಂಕಿ ಅಂಶವನ್ನು ಘೋಷಣೆ ಮಾಡಿರಲಿಲ್ಲ. ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅಚ್ಚರಿಯ ಸಂಗತಿಯಾಗಿದ್ದು, ದೆಹಲಿ ಚುನಾವಣಾ ಆಯೋಗ ಮತದಾನ ಮುಗಿದು 22 ಗಂಟೆಗಳು ಕಳೆದರು ಮತದಾನದ ಶೇಕಡವಾರು ಅಂಕಿ ಅಂಶ ಪ್ರಕಟ ಮಾಡದೆ ಇರುವುದಕ್ಕೆ ಕಾರಣವೇನೆಂದು ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದೆ. ಮತದಾನ ಆದ ಬಳಿಕ ಮತವಂಚನೆ ಮಾಡಲು ಅಧಿಕಾರಿಗಳು ಸಾಥ್ ಕೊಡ್ತಿದ್ದಾರಾ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗದ ನಡೆ ಕೂಡ ಅನುಮಾನಕ್ಕೆ ಕಾರಣವಾಗಿದ್ದು, ಚುನಾವಣೆಯಲ್ಲಿ ಎಷ್ಟು ಜನರು ಮತದಾನ ಮಾಡಿದ್ದಾರೆ ಎನ್ನುವ ಅಂತಿಮ ಅಂಕಿ ಅಂಶ ಕೊಡದೆ ಇರುವುದು ಭಾರೀ ಅನುಮಾನ ಮೂಡಿಸಿದೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಆಮ್ ಆದ್ಮಿ ಪಾರ್ಟಿ ಗೆಲ್ಲಲಿದೆ ಎಂದರೂ ಬಿಜೆಪಿ ನಾಯಕರ ಆತ್ಮವಿಶ್ವಾಸದ ಹಿಂದಿನ ಶಕ್ತಿ ಇವಿಎಂ ಟ್ಯಾಂಪರಿಂಗ್ ಮಾಡೋದಾ..? ಎಂದು ದೆಹಲಿ ಜನರೇ ಪ್ರಶ್ನಿಸುವಂತಾಗಿದೆ.

ಇನ್ನು ಇದೀಗ ಪತ್ರಿಕಾಗೋಷ್ಟಿ ನಡೆಸಿರುವ ಚುನವಣಾ ಆಯೋಗವು ಅಧಿಕತೃ ಅಂಕಿ ಅಂಶಗಳನ್ನು ಪ್ರಕಟಿಸಿದ್ದು ಶೇಕಡಾ 62.59 ಮತದಾರರು ಮತ ಚಲಾಯಿಸಿದ್ದಾರೆಂದು ಹೇಳಿದೆ. ಆದರೆ ಚುನಾವಣೆ ಪ್ರಕ್ರಿಯೆಗಳೆಲ್ಲವೂ ಕೊನೆಗೊಂಡ 24 ತಾಸುಗಳ ನಂತರ ಚುನಾವಣಾ ಆಯೋಗವು ಈ ಪ್ರಕಟನೆಯ;ನ್ನು ಹೊರಡಿಸಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ
Top Story

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

by ಪ್ರತಿಧ್ವನಿ
March 24, 2023
PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?
ಇದೀಗ

PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?

by ಪ್ರತಿಧ್ವನಿ
March 23, 2023
PRANAYAM MOVIE ‘ಪ್ರಣಯಂ’ ಚಿತ್ರದ ರಿಲಿಕಲ್ ಸಾಂಗ್ ಲಾಂಚ್ ಮಾಡಿದ ಅಶ್ವಿನಿ ಮೇಡಂ..! #pratidhavni
ಇದೀಗ

PRANAYAM MOVIE ‘ಪ್ರಣಯಂ’ ಚಿತ್ರದ ರಿಲಿಕಲ್ ಸಾಂಗ್ ಲಾಂಚ್ ಮಾಡಿದ ಅಶ್ವಿನಿ ಮೇಡಂ..! #pratidhavni

by ಪ್ರತಿಧ್ವನಿ
March 21, 2023
ಇದೀಗ

Night Party in Shivamogga: ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ..

by ಪ್ರತಿಧ್ವನಿ
March 18, 2023
ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement
Top Story

ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement

by ಡಾ | ಜೆ.ಎಸ್ ಪಾಟೀಲ
March 19, 2023
Next Post
ವರ್ಷ ಕಾಲಾವಕಾಶವಿದ್ದರೂ ಚುನಾವಣಾ ಆಯೋಗವು ನಾಲ್ಕೇ ತಿಂಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ನಾಶಪಡಿಸಿದ್ದೇಕೆ?

ವರ್ಷ ಕಾಲಾವಕಾಶವಿದ್ದರೂ ಚುನಾವಣಾ ಆಯೋಗವು ನಾಲ್ಕೇ ತಿಂಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ನಾಶಪಡಿಸಿದ್ದೇಕೆ?

ಆರ್ ಎಸ್‌‌ ಎಸ್‌‌

ಆರ್ ಎಸ್‌‌ ಎಸ್‌‌, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಗೆ ಡಿಕೆಶಿ ಪ್ರತ್ಯುತ್ತರವೇನು?     

ಗೆದ್ದು ಸೋತ ಅರವಿಂದ್ ಕೇಜ್ರಿವಾಲ್! ಮೋದಿ ಆರ್ಭಟಕ್ಕೆ ಸಿಗಲಿಲ್ಲ ಕಿಮ್ಮತ್ತು!

ಗೆದ್ದು ಸೋತ ಅರವಿಂದ್ ಕೇಜ್ರಿವಾಲ್! ಮೋದಿ ಆರ್ಭಟಕ್ಕೆ ಸಿಗಲಿಲ್ಲ ಕಿಮ್ಮತ್ತು!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist