Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್

ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್
ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್

December 17, 2019
Share on FacebookShare on Twitter

ಮಾಹಿತಿ ಹಕ್ಕು ಕಾಯ್ದೆಯನ್ನು ಸುಪ್ರೀಂಕೋರ್ಟ್ ವಿರೋಧಿಸುವುದಿಲ್ಲ. ಆದರೆ, ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯುವಾಗ ಕೆಲವೊಂದು ಮಾರ್ಗಸೂಚಿಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

ಮಾಹಿತಿ ಹಕ್ಕು ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು, ಇತ್ತೀಚಿನ ದಿನಗಳಲ್ಲಿ ಆರ್‌ಟಿಐ ಎಂದಾಕ್ಷಣ ಭಯದ ವಾತಾವರಣ ನಿರ್ಮಾಣವಾಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಹೇಳಿದೆ.

ಮುಖ್ಯನ್ಯಾಯಮೂರ್ತಿ ಬೊಬ್ಡೆ ಅವರು ಅಭಿಪ್ರಾಯ ವ್ಯಕ್ತಪಡಿಸುತ್ತಾ, ಹಾಗೆಂದ ಮಾತ್ರಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರುವ ಅಗತ್ಯವಿದೆ.

ಈ ಆರ್ ಟಿಐ ಭೀತಿಯಿಂದಾಗಿ ಹಲವಾರು ಅಧಿಕಾರಿಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ ನ್ಯಾಯಪೀಠವು, ಈ ಹಿನ್ನೆಲೆಯಲ್ಲಿ ಆರ್ ಟಿಐ ನಡಿ ಮಾಹಿತಿ ಪಡೆಯುವಾಗ ಮತ್ತು ನೀಡುವಾಗ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರಬೇಕಾದ ಅಗತ್ಯವಿದೆ ಎಂದು ಹೇಳಿದೆ.

ಆರ್ ಟಿಐ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್ ಪರ ವಕೀಲರಾದ ಪ್ರಶಾಂತ್ ಭೂಷಣ್ ಅವರು, ಅಧಿಕಾರಿಗಳು ಭ್ರಷ್ಟಾಚಾರಿಗಳಲ್ಲದಿದ್ದರೆ ಆರ್ ಟಿಐಗೆ ಏಕೆ ಹೆದರಬೇಕು? ಧೈರ್ಯವಾಗಿ ಮಾಹಿತಿಗಳನ್ನು ನೀಡಬಹುದಾಗಿದೆ ಎಂದು ವಾದ ಮಂಡಿಸಿದರು.

ಈ ವೇಳೆ ನ್ಯಾಯಪೀಠವು, ಇತ್ತೀಚಿನ ದಿನಗಳಲ್ಲಿ ತಾನೊಬ್ಬ ಆರ್ ಟಿಐ ಕಾರ್ಯಕರ್ತ ಎಂದು ಗುರುತಿಸಿಕೊಳ್ಳುವುದು ಒಂದು ಟ್ರೆಂಡ್ ಆಗಿದೆಯಲ್ಲವೇ? ಎಂದು ಪ್ರಶ್ನಿಸಿದರು.

ಹಾಗಾದರೆ ಆರ್ ಟಿಐ ಅರ್ಜಿ ಹಾಕುವುದು ಒಂದು ವೃತ್ತಿಯೇ ಎಂದು ವಕೀಲರಾದ ಪ್ರಶಾಂತ್ ಭೂಷಣ್ ಅವರನ್ನು ಪ್ರಶ್ನಿಸಿದರು ಮುಖ್ಯನ್ಯಾಯಾಧೀಶರಾದ ಬೊಬ್ಡೆ ಅವರು.

ಇನ್ನೂ ಮುಂದುವರಿದು ತಮಗೆ ಸಂಬಂಧವಿಲ್ಲದಿದ್ದರೂ ಕೆಲವರು ಆರ್ ಟಿಐ ನಡಿ ಮಾಹಿತಿಗಳನ್ನು ಕೇಳುತ್ತಾರೆ. ಇನ್ನೂ ಕೆಲವೊಮ್ಮೆ ಬ್ಲ್ಯಾಕ್ ಮೇಲ್ ಮಾಡಲೆಂದೇ ಪಡೆಯುತ್ತಾರೆ ಎಂದು ಗಂಭೀರವಾದ ಅಭಿಪ್ರಾಯಪಟ್ಟರು.

ಇದೇ ವೇಳೆ, ನ್ಯಾಯಾಲಯದ ಆದೇಶವಿದ್ದರೂ ಮಾಹಿತಿ ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಅರ್ಜಿ ಸಲ್ಲಿಸುವಂತೆ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಪೀಠ ಸೂಚನೆ ನೀಡಿತು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಎರಡು ಸುರಂಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ
Top Story

ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಎರಡು ಸುರಂಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ

by ಪ್ರತಿಧ್ವನಿ
October 3, 2023
ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ
Top Story

ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ

by ಪ್ರತಿಧ್ವನಿ
September 28, 2023
ಚರಿತ್ರೆ ಮತ್ತು ವರ್ತಮಾನಕ್ಕೆ ಸೇತುವೆಯಾಗಿ ಭಗತ್‌ ಸಿಂಗ್
ಅಂಕಣ

ಚರಿತ್ರೆ ಮತ್ತು ವರ್ತಮಾನಕ್ಕೆ ಸೇತುವೆಯಾಗಿ ಭಗತ್‌ ಸಿಂಗ್

by ನಾ ದಿವಾಕರ
September 28, 2023
ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ  ಮಾಡಿದ್ದ ಆರೋಪಿಗಳ ಬಂಧನ..!
ಇದೀಗ

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ ಮಾಡಿದ್ದ ಆರೋಪಿಗಳ ಬಂಧನ..!

by ಪ್ರತಿಧ್ವನಿ
September 28, 2023
ಬಿಜೆಪಿ ಮೈತ್ರಿ ಗಟ್ಟಿ ಮಾಡಿಕೊಂಡ ಜೆಡಿಎಸ್‌ ನಾಯಕರು: ಗೈರು ಹಾಜರಾತಿ ಬಗ್ಗೆ ಟೆನ್ಷನ್
Top Story

ಬಿಜೆಪಿ ಮೈತ್ರಿ ಗಟ್ಟಿ ಮಾಡಿಕೊಂಡ ಜೆಡಿಎಸ್‌ ನಾಯಕರು: ಗೈರು ಹಾಜರಾತಿ ಬಗ್ಗೆ ಟೆನ್ಷನ್

by ಕೃಷ್ಣ ಮಣಿ
October 2, 2023
Next Post
ಸಂಪುಟ ವಿಸ್ತರಣೆಯೋ

ಸಂಪುಟ ವಿಸ್ತರಣೆಯೋ, ಪುನಾರಚನೆಯೋ? ಡಿ. 22ರೊಳಗೆನಿರ್ಧಾರ

ಬಿಜೆಪಿ ಬೊಕ್ಕಸ ತುಂಬುವ ಎಲೆಕ್ಟೋರಲ್ ಬಾಂಡ್!

ಬಿಜೆಪಿ ಬೊಕ್ಕಸ ತುಂಬುವ ಎಲೆಕ್ಟೋರಲ್ ಬಾಂಡ್!

ಎನ್ಆರ್‌ಸಿ ಅಂತಿಮ ಪಟ್ಟಿಯಿಂದಲೂ ಮಾಜಿ ರಾಷ್ಟ್ರಪತಿ ಅಲಿ ಕುಟುಂಬ ನಾಪತ್ತೆ

ಎನ್ಆರ್‌ಸಿ ಅಂತಿಮ ಪಟ್ಟಿಯಿಂದಲೂ ಮಾಜಿ ರಾಷ್ಟ್ರಪತಿ ಅಲಿ ಕುಟುಂಬ ನಾಪತ್ತೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist