• Home
  • About Us
  • ಕರ್ನಾಟಕ
Wednesday, June 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇನ್ನು ಹತ್ತೇ ದಿನ `ಫ್ರೀ ಕಾಲ್’ ಸೇವೆ!

by
November 19, 2019
in ದೇಶ
0
ಇನ್ನು ಹತ್ತೇ ದಿನ `ಫ್ರೀ ಕಾಲ್’ ಸೇವೆ!
Share on WhatsAppShare on FacebookShare on Telegram

ಲಕ್ಷ ಕೋಟಿ ರುಪಾಯಿಗಳ ಸಾಲದ ಹೊರೆಯಿಂದ ತತ್ತರಿಸಿರುವ ಮೊಬೈಲ್ ಕಂಪನಿಗಳು ಮೂರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮೊಬೈಲ್ ಸೇವೆಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಡಿಸೆಂಬರ್ 1ರಿಂದ ದರ ಏರಿಕೆ ಆಗಲಿದೆ. ಸದ್ಯಕ್ಕೆ ಅಗ್ರಸ್ಥಾನದಲ್ಲಿರುವ ಏರ್ಟೆಲ್ ಮತ್ತು ಇತ್ತೀಚೆಗಷ್ಟೇ ರಿಲಯನ್ಸ್ ಜಿಯೋ ಕಂಪನಿಗೆ ಎರಡನೇ ಸ್ಥಾನ ಬಿಟ್ಟುಕೊಂಡು ಮೂರನೇ ಸ್ಥಾನಕ್ಕೆ ಇಳಿದಿರುವ ವೊಡಾಫೋನ್ ಐಡಿಯಾ ದರ ಏರಿಕೆ ಮಾಡುವುದಾಗಿ ಪ್ರಕಟಿಸಿವೆ. ಈ ಎರಡೂ ಕಂಪನಿಗಳಿಗೆ ಸ್ಪರ್ಧೆ ನೀಡುತ್ತಿರುವ ರಿಲಯನ್ಸ್ ಜಿಯೋ ಮಾತ್ರ ಕೆಲವು ವಾರಗಳಲ್ಲಿ ದರ ಏರಿಕೆ ಮಾಡುವುದಾಗಿ ಹೇಳಿದೆ. ದಿನಾಂಕವನ್ನು ಪ್ರಕಟಿಸಿಲ್ಲ.

ADVERTISEMENT

ದರ ಏರಿಕೆ ಮಾಡಲು ಇದ್ದ ಪ್ರಮುಖ ಕಾರಣ ದೂರಸಂಪರ್ಕ ಇಲಾಖೆ ಹೊಂದಾಣಿಕೆ ಮಾಡಲಾದ ಒಟ್ಟು ಆದಾಯ (ಎಜಿಆರ್) ಕುರಿತಂತೆ ಸುಪ್ರೀಂಕೋರ್ಟ್ ನಲ್ಲಿ ವ್ಯಾಜ್ಯವನ್ನು ಗೆದ್ದಿದ್ದು, ಬೃಹತ್ ಬಾಕಿ ಮೊತ್ತವನ್ನು ಈ ಕಂಪನಿಗಳು ಪಾವತಿಸಬೇಕಿದೆ.

ಹೊಂದಾಣಿಕೆ ಮಾಡಲಾದ ಒಟ್ಟು ಆದಾಯ (ಎಜಿಆರ್) ಬಾಕಿ ಪಾವತಿಸುವ ಸಲುವಾಗಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಎಡರನೇ ತ್ರೈಮಾಸಿಕದಲ್ಲಿ ಭಾರಿ ನಷ್ಟವನ್ನು ಘೋಷಣೆ ಮಾಡಿವೆ. ವೊಡಾಫೋನ್ ಐಡಿಯಾ 50,921 ಕೋಟಿ ರುಪಾಯಿಗಳ ನಷ್ಟ ಘೋಷಣೆ ಮಾಡಿದ್ದರೆ, ಏರ್ಟೆಲ್ 23,045 ಕೋಟಿ ರುಪಾಯಿ ನಷ್ಟ ಘೋಷಣೆ ಮಾಡಿದೆ. ಘೋಷಣೆ ಮಾಡಲಾದ ನಷ್ಟದ ಅಷ್ಟೂ ಮೊತ್ತವನ್ನು ಈ ಕಂಪನಿಗಳು ಹೊಂದಾಣಿಕೆ ಮಾಡಲಾದ ಒಟ್ಟು ಆದಾಯದ ಮೇಲಿನ ತೆರಿಗೆ ಮತ್ತು ಶುಲ್ಕವನ್ನು ಸರ್ಕಾರಕ್ಕೆ ಪಾವತಿಸಬೇಕಿದೆ.

ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಬಿಟ್ಟರೆ, ಸ್ಪರ್ಧೆಯಲ್ಲಿ ಉಳಿದಿರುವ ಮೂರು ಪ್ರಮುಖ ಕಂಪನಿಗಳಾದ ಏರ್ಟೆಲ್, ಐಡಿಯಾ ಮತ್ತು ರಿಲಯನ್ಸ್ ಜಿಯೋ ಕಂಪನಿಗಳ ಮೇಲೆ ಬೃಹತ್ ಸಾಲದ ಹೊರೆಯೇ ಇದೆ. ಏರ್ಟೆಲ್ 1.17 ಲಕ್ಷ ಕೋಟಿ ಇದ್ದರೆ, ವೊಡಾಫೋನ್ 1.18 ಲಕ್ಷ ಕೋಟಿ ಮತ್ತು ರಿಲಯನ್ಸ್ ಜಿಯೋ 1.08 ಲಕ್ಷ ಕೋಟಿ ಸಾಲ ಹೊಂದಿವೆ. ಈ ಮೂರು ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ಸಾಲ ಹೊರೆ ಇದೆ. ಈ ಬೃಹತ್ ಸಾಲದ ಹೊರೆಯ ಜತೆಗೆ ಹೊಂದಾಣಿಕೆ ಮಾಡಲಾದ ಒಟ್ಟು ಆದಾಯದ ಮೇಲಿನ ಬಾಕಿ ತೆರಿಗೆ ಮತ್ತು ಶುಲ್ಕ ಪಾವತಿಸಬೇಕಿರುವುದರಿಂದ ಕಂಪನಿಗಳಿಗೆ ದರ ಏರಿಕೆ ಮಾಡದೇ ಅನ್ಯ ಮಾರ್ಗವೇ ಇರಲಿಲ್ಲ.

ಇತ್ತೀಚೆಗಷ್ಟೇ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಜಿಯೋಯೇತರ ಮೊಬೈಲ್ ಗಳಿಗೆ ಮಾಡುವ ಕರೆಗಳಿಗೆ ಐಯುಸಿ (ಇಂಟರ್ಕನೆಕ್ಟಿವಿಟಿ ಯೂಸೆಜ್ ಚಾರ್ಚ್) ಶುಲ್ಕ ಪ್ರತಿ ನಿಮಿಷಕ್ಕೆ 6 ಪೈಸೆ ವಿಧಿಸಲಾರಂಭಿಸಿದೆ. ಅಂದರೆ, ಜಿಯೋ ತಾನು ಉಚಿತ ಕರೆಗಳ ಸೇವೆ ಒದಗಿಸುವುದಾಗಿ ಹೇಳಿಕೊಂಡಿದ್ದರೂ ಈಗ ಪ್ರತಿ ಜಿಯೋಯೇತರ ಮೊಬೈಲ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ವಿಧಿಸುತ್ತಿದೆ. ಇದು ದರ ಏರಿಕೆಗೆ ಬರೆದ ಮುನ್ನುಡಿಯಾಗಿದೆ. ಆರಂಭದಲ್ಲಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತಾವು ನಿಜವಾಗಿಯೂ ಉಚಿತ ಕರೆಗಳ ಸೇವೆ ಒದಗಿಸುತ್ತಿರುವುದಾಗಿ ಪ್ರಚಾರ ಮಾಡಿಕೊಂಡವು. ಆದರೀಗ ದರ ಏರಿಕೆಗೆ ಮುಂದಾಗಿವೆ.

ಹೊಸ ಗ್ರಾಹಕರನ್ನು ಸೆಳೆಯುವ ಮತ್ತು ಹಾಲಿ ಗ್ರಾಹಕರನ್ನು ಉಳಿಸಿಕೊಳ್ಳುವ ಸಲುವಾಗಿ ಸ್ಪರ್ಧಾತ್ಮಕ ದರಸಮರಕ್ಕೆ ಇಳಿದಿದ್ದ ಮೂರು ಕಂಪನಿಗಳು ಭಾಗಷಃ ನಷ್ಟ ಅನುಭವಿಸುತ್ತಿದ್ದವು. ಜಿಯೋ ಮಾರುಕಟ್ಟೆಗೆ ಬಂದ ನಂತರ ಮೊಬೈಲ್ ದರ ಸಂರಚನೆಯೇ ಬದಲಾಯಿತು. ಕರೆಗೆ ಶುಲ್ಕ ನೀಡಬೇಕಿಲ್ಲ. ಡೇಟಾಗೆ ಮಾತ್ರ ಶುಲ್ಕ ಪಡೆದು ಉಚಿತ ಕರೆ ಮತ್ತು ಮೆಸೆಜ್ ಸೌಲಭ್ಯ ಒದಗಿಸಿ ಗ್ರಾಹಕರನ್ನು ಸೆಳೆಯಿತು. ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ರಕ್ಷಿಸಿಕೊಳ್ಳುವ ಸಲುವಾಗಿ ಏರ್ಟೆಲ್ ಮತ್ತು ಐಡಿಯಾ ಸಹ ಉಚಿತ ಕರೆ ಮತ್ತು ಮೆಸೆಜ್ ಸೌಲಭ್ಯವನ್ನು ಗ್ರಾಹಕರಿಗೆ ನೀಡಿದವು. ಡೇಟಾಗೆ ಭಾರಿ ಶುಲ್ಕ ವಿಧಿಸುತ್ತಿದ್ದ ಈ ಕಂಪನಿಗಳು ಅತ್ಯಲ್ಪ ದರಕ್ಕೆ ಭಾರಿ ಡೇಟಾ ನೀಡಲಾರಂಭಿಸಿದವು. ಈಗಲೂ ವಿಶ್ವದ ಎಲ್ಲಾ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿನ ಮೊಬೈಲ್ ಸೇವಾ ಶುಲ್ಕಗಳೇ ಅತ್ಯಂತ ಕಡಮೆ ಇವೆ.

ಅಷ್ಟಕ್ಕೂ ದರ ಏರಿಕೆ ಎಷ್ಟಾಗಬಹುದು?

ದರ ಏರಿಕೆ ಎಷ್ಟು ಎಂಬುದನ್ನು ಏರ್ಟೆಲ್ ಆಗಲೀ ಐಡಿಯಾ ಆಗಲೀ ಹೇಳಿಲ್ಲ. ಆದರೆ, ದರ ಪರಿಷ್ಕರಣೆ ಮಾಡುವುದಾಗಿ ಘೋಷಿಸಿವೆ. ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಶೇ.30ರಿಂದ 40ರಷ್ಟುದರ ಏರಿಕೆ ಆಗಬಹುದು. ಆದರೆ, ಏಕಾಏಕಿ ಶೇ.30-40ರಷ್ಟು ದರ ಏರಿಕೆ ಮಾಡಿದರೆ, ಅದರ ಲಾಭವನ್ನು ಇನ್ನೂ ದರ ಏರಿಕೆ ಪ್ರಸ್ತಾಪ ಮಾಡದ ರಿಲಯನ್ಸ್ ಜಿಯೋ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಆರಂಭದಲ್ಲಿ ಶೇ.5ರಿಂದ 10ರಷ್ಟು ದರ ಏರಿಕೆ ಮಾಡುವ ನಿರೀಕ್ಷೆ ಇದೆ.

ಅಂದರೆ, ಈಗ ಅತ್ಯಂತ ಜನಪ್ರಿಯವಾಗಿರುವ 399 ರುಪಾಯಿ ಮತ್ತು 499 ರುಪಾಯಿಗಳ ಪ್ರತಿನಿತ್ಯ ತಲಾ 2 ಮತ್ತು 3 ಜಿಬಿ ಡೇಟಾ ಪ್ಲಾನ್ ಗಳ ದರಗಳು ಕ್ರಮವಾಗಿ 440 ರುಪಾಯಿ ಮತ್ತು 550 ರುಪಾಯಿಗಳಿಗೆ ಏರಬಹುದು. ನಿತ್ಯವೂ 2- 3 ಜಿಬಿ ಡೇಟಾ ಪಡೆಯುವ ಗ್ರಾಹಕರಿಗೆ ಈ ಏರಿಕೆ ಹೆಚ್ಚಿನ ಹೊರೆ ಆಗಲಾರದು. ಆದರೆ, ಡೇಟಾ ಪಡೆಯದೇ ಬರೀ ಕರೆಗಳ ಸೇವೆ ಪಡೆಯುತ್ತಿರುವ ಗ್ರಾಹಕರು ಸಹ ಕರೆಗಳ ಮೇಲಿನ ದರದ ಮೇಲೆ ಶೇ.10ರಷ್ಟು ಹೆಚ್ಚಿನ ದರ ಪಾವತಿಸಬೇಕಾಗುತ್ತದೆ.

ಈಗ ಪ್ರಸ್ತುತ ಮಾಸಿಕ ಸಂಪರ್ಕ ಶುಲ್ಕವು ಡೇಟಾ ಇಲ್ಲದೇ 24 ರುಪಾಯಿಗಳು ಮತ್ತು ಡೇಟಾ ಸಹಿತಾ 33 ರುಪಾಯಿಗಳಿದೆ. ಬಹುತೇಕ ಎಲ್ಲಾ ಕಂಪನಿಗಳ ಮಾಸಿಕ ಶುಲ್ಕ ಇಷ್ಟೇ ಇದೆ. ನಂತರದ ಕರೆ ಮತ್ತು ಡೇಟಾ ಪ್ಲಾನ್ ಗಳಲ್ಲಿ ಏರಿಳಿತ ಇರಬಹುದು. ಕಂಪನಿಗಳು ಮಾಸಿಕ ಸಂಪರ್ಕ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಬಹುದು.

ಏರಿಕೆ ಶೇ.10ಕ್ಕೆ ಸೀಮಿತವಾಗುತ್ತದೆಯೇ? ಖಂಡಿತಾ ಇಲ್ಲಾ. ಗ್ರಾಹಕರು ದರ ಏರಿಕೆಗೆ ಹೊಂದಿಕೊಂಡಂತೆ ಒಂದೆರಡು ತಿಂಗಳ ನಂತರ ಶೇ.5ರಿಂದ 10ರಷ್ಟು ಮತ್ತೆ ದರ ಏರಿಕೆ ಮಾಡಬಹುದು. ಏರ್ಟೆಲ್ ಮತ್ತು ಐಡಿಯಾ ದರ ಏರಿಕೆ ಮಾಡಿದ ನಂತರ ಜಿಯೋ ಸಹ ಈಗ ಪ್ರಕಟಿಸಿರುವಂತೆ ಕೆಲವು ವಾರಗಳಲ್ಲಿ ದರ ಏರಿಕೆಗೆ ಮುಂದಾದರೆ, ಮಾರುಕಟ್ಟೆಯಲ್ಲಿ ದರ ಏರಿಕೆ ಅಬಾಧಿತವಾಗಿರುತ್ತದೆ. ಒಂದು ವೇಳೆ ಜಿಯೋ ದರ ಏರಿಕೆ ಮಾಡದೇ ಬೇರೆ ಕಂಪನಿಗಳ ದರ ಏರಿಕೆಯನ್ನು ತನ್ನ ಗ್ರಾಹಕರ ಸಂಖ್ಯೆ ಹೆಚ್ಚಿಸಲು ಬಳಸಿಕೊಳ್ಳಲಾರಂಭಿಸಿದರೆ, ಆರಂಭಿಕ ದರ ಏರಿಕೆಯು ಅಲ್ಪಪ್ರಮಾಣದಲ್ಲಿರುತ್ತದೆ. ಮತ್ತು ಅದು ಅಲ್ಪಾವಧಿಯಿಂದ ಮಧ್ಯಮಾವಧಿವರೆಗೂ ಮುಂದುವರೆಯಬಹುದು. ಎಲ್ಲಿಯವರೆಗೆ ಜಿಯೋ ತನ್ನ ದರ ಏರಿಕೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಏರ್ಟೆಲ್ ಮತ್ತು ಐಡಿಯಾ ಅಳೆದುತೂಗಿ ದರ ಏರಿಕೆ ಮಾಡಿ, ತಮ್ಮ ಗ್ರಾಹಕರನ್ನು ರಕ್ಷಿಸಿಕೊಳ್ಳಲು ಯತ್ನಿಸುತ್ತವೆ. ಅದು ಆ ಕಂಪನಿಗಳಿಗೆ ಅನಿವಾರ್ಯ ಕೂಡಾ.

Tags: 4G Internet4ಜಿ ಇಂಟರ್‌ನೆಟ್‌AirtelBSNLideaMobile CurrencyMobile Internet DataMobile NetworkMobile RechargeMTNLReliance Jioಎಂಟಿಎನ್ಎಲ್ಏರ್‌ಟೆಲ್‌ಐಡಿಯಾಬಿಎಸ್‌ಎನ್‌ಎಲ್ಮೊಬೈಲ್‌ ಇಂಟರ್‌ನೆಟ್‌ ಡೇಟಾಮೊಬೈಲ್‌ ಕರೆನ್ಸಿಮೊಬೈಲ್‌ ನೆಟ್‌ವರ್ಕ್‌ಮೊಬೈಲ್‌ ರಿಚಾರ್ಜ್‌ಮೊಬೈಲ್‌ ಸೇವೆರಿಲಯನ್ಸ್ ಜಿಯೋ
Previous Post

ಜೆ.ಎನ್.ಯು. ವಿದ್ಯಾರ್ಥಿಗಳೇ- ನೀವೇ ನಮ್ಮ ಏಕೈಕ ಆಶಾಕಿರಣ

Next Post

ಉಪಚುನಾವಣೆ ಅನರ್ಹರಿಗಷ್ಟೇ ಅಲ್ಲ, ಬಿಎಸ್ ವೈ, ಸಿದ್ದುಗೂ ಪ್ರತಿಷ್ಠೆಯ ಪ್ರಶ್ನೆ

Related Posts

Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 25, 2025
0

ಸರ್ಕಾರ, ನನ್ನ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ, ನಾಳೆ ಸಿಎಂ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಸಿಎಂ, ಡಿಸಿಎಂ(dcm dkshivakumar) ನನ್ನನ್ನು ಕರೆಸಿದ್ದಾರೆ. ಭೇಟಿಗೆ ಹೋಗುತ್ತೇನೆ, ನನ್ನ...

Read moreDetails

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

June 24, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

June 24, 2025

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

June 24, 2025
Next Post
ಉಪಚುನಾವಣೆ ಅನರ್ಹರಿಗಷ್ಟೇ ಅಲ್ಲ

ಉಪಚುನಾವಣೆ ಅನರ್ಹರಿಗಷ್ಟೇ ಅಲ್ಲ, ಬಿಎಸ್ ವೈ, ಸಿದ್ದುಗೂ ಪ್ರತಿಷ್ಠೆಯ ಪ್ರಶ್ನೆ

Please login to join discussion

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
Top Story

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

by ಪ್ರತಿಧ್ವನಿ
June 25, 2025
Top Story

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

by ಪ್ರತಿಧ್ವನಿ
June 25, 2025
ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…
Top Story

ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

by ಪ್ರತಿಧ್ವನಿ
June 25, 2025
Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

June 25, 2025

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada