• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉಳಿಯಲೇ ಇಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

by
December 7, 2019
in ದೇಶ
0
ಉಳಿಯಲೇ ಇಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ
Share on WhatsAppShare on FacebookShare on Telegram

ಇದೊಂದು ಇಡೀ ನಾಗರಿಕರ ಸಮಾಜವೇ ತಲೆ ತಗ್ಗಿಸುವಂತಹ ವಿಚಾರ. 2017 ರಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿ ಅದೇ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾಳೆ.

ADVERTISEMENT

ತನಗಾದ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಳ್ಳುವ ಮೊದಲೇ ದುರಂತ ಅಂತ್ಯ ಕಂಡಿದ್ದಾಳೆ ಈ ನತದೃಷ್ಟ ಯುವತಿ.

ಉತ್ತರ ಪ್ರದೇಶದ ಉನ್ನಾವೋದ ಈ ಯುವತಿಯ ಮೇಲೆ 2017 ರಲ್ಲಿ ದುಷ್ಕರ್ಮಿಗಳ ಗುಂಪು ಅತ್ಯಾಚಾರ ಮಾಡಿತ್ತು. ಈ ಪ್ರಕರಣದಿಂದ ನಲುಗಿಹೋಗಿದ್ದ ಯುವತಿ ನ್ಯಾಯಕ್ಕಾಗಿ ಪೊಲೀಸರು ಮತ್ತು ನ್ಯಾಯಾಲಯದ ಮೊರೆ ಹೋಗಿದ್ದಳು.

ಈಕೆಯ ಮೊರೆ ಕೇಳಿದ್ದ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿ ತ್ವರಿತವಾಗಿ ತನಿಖೆಯನ್ನು ಪೂರ್ಣಗೊಳಿಸುವಂತೆ ಆದೇಶ ನೀಡಿತ್ತು. ಅದರನ್ವಯ ಸಿಬಿಐ ಪೊಲೀಸರು ಇಬ್ಬರು ಕಾಮುಕರನ್ನು ಬಂಧಿಸಿ ಜೈಲಿಗೂ ಕಳಿಸಿದ್ದರು. ಆದರೆ, ದುಷ್ಕರ್ಮಿಗಳು ಜಾಮೀನಿನ ಮೇಲೆ ಹೊರಬಂದು ಮತ್ತೊಮ್ಮೆ ಅಟ್ಟಹಾಸ ಮೆರೆದು ಆ ಯುವತಿಯನ್ನೇ ಬಲಿ ತೆಗೆದುಕೊಂಡಿದ್ದಾರೆ.

ಗುರುವಾರ ಯುವತಿ ರಾಯ್ ಬರೇಲಿ ಕೋರ್ಟಿನಲ್ಲಿ ವಿಚಾರಣೆ ಇದ್ದ ಕಾರಣದಿಂದ ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ರೈಲು ನಿಲ್ದಾಣಕ್ಕೆ ಹೋಗುವ ವೇಳೆ ಕಾಮುಕರಿಬ್ಬರು ಮತ್ತು ಅವರ ಮೂವರು ಸಂಗಡಿಗರು ತೀವ್ರತೆರನಾದ ಹಲ್ಲೆ ನಡೆಸಿದ್ದಾರೆ. ಆಕೆಯ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾರೆ. ಅಷ್ಟೂ ಸಾಲದೆಂಬಂತೆ ಹೀಗೆ ಬಿಟ್ಟರೆ ಆಕೆ ತಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದೆನಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪೈಶಾಚಿಕ ಕೃತ್ಯ ಎಸಗಿದ್ದರು.

ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಯುವತಿ ಸುಮಾರು ಒಂದು ಕಿಲೋಮೀಟರ್ ದೂರದವರೆಗೆ ಓಡಿ ಹೋಗಿದ್ದಾಳೆ. ಆದರೂ ಆಕೆಯನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹಲ್ಲೆಯನ್ನು ಮುಂದುವರಿಸಿದ್ದರು. ಹೀಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಯುವತಿಯ ದೇಹದ ಶೇ.90 ಕ್ಕೂ ಹೆಚ್ಚು ಸುಟ್ಟು ಕರಕಲಾಗಿತ್ತು.

ಆಕೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸುಮಾರು 40 ಗಂಟೆಗಳ ಕಾಲ ಸಾವು ನೋವಿನ ಮಧ್ಯೆ ಹೋರಾಟ ನಡೆಸಿದ ಯುವತಿ ಶುಕ್ರವಾರ ತಡರಾತ್ರಿ ಕೊನೆಉಸಿರೆಳೆದಿದ್ದಾಳೆ.

ಈ ಉನ್ನಾವೋ ಪ್ರಕರಣದ ಹಿಂದೆ ದೆಹಲಿಯ ನಿರ್ಭಯಾ ಪ್ರಕರಣಕ್ಕಿಂತಲೂ ಘನಘೋರ ಪೈಶಾಚಿಕ ಕೃತ್ಯಗಳು ನಡೆದಿವೆ. ನಿರ್ಭಯಾ ಪ್ರಕರಣ ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರೆ, ಈ ಪ್ರಕರಣ ಹಲವು ಪೈಶಾಚಿಕ ಕೃತ್ಯಗಳಿಗೆ ಸಾಕ್ಷಿಯಾಗಿದೆ. ಈ ಯುವತಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಭಾವಿ ವ್ಯಕ್ತಿಗಳ ಕೈವಾಡವಿತ್ತು. ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗಾರ್ ಈ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ. ಈತನ ಎಡೆಮುರಿ ಕಟ್ಟಿದ್ದ ಜೈಲಿಗೆ ಅಟ್ಟಿದ್ದರು. ಆದರೆ ಆತ ಜಾಮೀನಿನ ಮೇಲೆ ಹೊರ ಬಂದಿದ್ದಾನೆ.

ಇಷ್ಟು ಸಾಲದೆಂಬಂತೆ ತನ್ನ ಮಗಳ ಮೇಲೆ ಅತ್ಯಾಚಾರ ಆಗಿದ್ದ ಹಿನ್ನೆಲೆಯಲ್ಲಿ ಆಕೆಯ ತಂದೆ ದೂರು ನೀಡಿದ್ದರು. ಈ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಆಕೆಯ ತಂದೆಯನ್ನೇ ಕೊಲೆಗೆ ಯತ್ನಿಸಿದ್ದರು. ಅತ್ಯಾಚಾರ ಮತ್ತು ಸಂತ್ರಸ್ತೆಯ ಕೊಲೆಗೆ ಸಂಬಂಧಿಸಿದಂತೆ ಕುಲದೀಪ್ ಸಿಂಗಾರ್ ವಿರುದ್ಧ ದೂರು ದಾಖಲಾಗಿದ್ದವು.

ಇದಾದ ಕೆಲವು ದಿನಗಳ ನಂತರ ಸಂತ್ರಸ್ತೆ ತನ್ನ ಚಿಕ್ಕಮ್ಮ ಮತ್ತು ವಕೀಲರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ನಿಗೂಢವಾಗಿ ಅಪಘಾತಕ್ಕೀಡಾಗಿತ್ತು. ಈ ಅಪಘಾತದ ಹಿಂದೆಯೂ ದುಷ್ಕರ್ಮಿಗಳ ಕೈವಾಡ ಇದೆ ಎಂಬ ಗುಮಾನಿಗಳು ದಟ್ಟವಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿತ್ತು. ಈ ಅಪಘಾತದಿಂದ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಆಕೆಯ ಚಿಕ್ಕಮ್ಮ ಅಸುನೀಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ಅದೃಷ್ಠವಶಾತ್ ಸಾವಿನಿಂದ ಪಾರಾಗಿದ್ದಳು.

ಈ ಎಲ್ಲಾ ಘಟನಾವಳಿಗಳು ನಡುವೆಯೇ ಕೇಸನ್ನು ವಾಪಸ್ ಪಡೆಯುವಂತೆ ನಾನಾ ವಿಧದಲ್ಲಿ ಬೆದರಿಕೆಗಳು, ಒತ್ತಡಗಳು ಬಂದಾಗ್ಯೂ ಗಟ್ಟಿಗಿತ್ತಿ ಈ ಯುವತಿ ಸುತಾರಾಂ ಬಗ್ಗಿರಲಿಲ್ಲ. ಇದರ ಪರಿಣಾಮ ದುಷ್ಕರ್ಮಿಗಳು ಹಲವು ಬಾರಿ ಆಕೆಯನ್ನು ಹತ್ಯೆ ಮಾಡಲು ಯತ್ನಿಸಿ ವಿಫಲರಾಗಿದ್ದರು. ಕಡೆಗೆ ಗುರುವಾರ ದುಷ್ಕರ್ಮಿಗಳು ಆಕೆ ನ್ಯಾಯಾಲಯಕ್ಕೆ ಹೋಗುತ್ತಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿದ್ದಾರೆ.

ತನ್ನ ದೇಹ ಧಗಧಗ ಉರಿಯುತ್ತಿದ್ದರೂ ಪ್ರಾಣ ರಕ್ಷಣೆಗಾಗಿ ಓಡಿ ಹೋಗುತ್ತಲೇ ಕೂಗಿಕೊಂಡಿದ್ದಾಳೆ. ಆದರೆ, ಆಕೆಯ ನೆರವಿಗೆ ನಾಗರಿಕ ಸಮಾಜದ ಯಾವ ವ್ಯಕ್ತಿಯೂ ನೆರವಿಗೆ ಬಾರದೇ ಮೂಕಪ್ರೇಕ್ಷಕರಂತೆ ನಿಂತಿದ್ದರು. ಆದರೆ, ಜೀವ ಉಳಿಸಿಕೊಳ್ಳಬೇಕು ಮತ್ತು ತನಗೆ ಅನ್ಯಾಯ ಮಾಡಿದವರಿಗೆ ಶಿಕ್ಷೆ ಕೊಡಿಸದೇ ವಿರಮಿಸಬಾರದು ಎಂದು ಛಲ ತೊಟ್ಟಿದ್ದ ಯುವತಿ 100 ಗೆ ಕರೆ ಮಾಡಿ ಆ್ಯಂಬ್ಯುಲೆನ್ಸ್ ಗೆ ಮನವಿ ಮಾಡಿ ಕುಸಿದು ಬಿದ್ದಿದ್ದಳು. ಅಷ್ಟರ ವೇಳೆಗೆ ದೇಹದ ಶೇ.90 ರಷ್ಟು ಭಾಗ ಸುಟ್ಟು ಹೋಗಿತ್ತು.

ಕೂಡಲೇ ಆಕೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಶುಕ್ರವಾರ ಮಧ್ಯಾಹ್ನದ ನಂತರ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟು ಬದುಕುಳಿಯುವುದು ಕಷ್ಟವಾಗಿತ್ತು. ತಡರಾತ್ರಿ ಆಕೆ ಕೊನೆ ಉಸಿರೆಳೆದಳು.

ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆಕೆ ನೀಡಿದ ಹೇಳಿಕೆ ದುಷ್ಕರ್ಮಿಗಳ ಪೈಶಾಚಿಕ ಕೃತ್ಯವನ್ನು ಎಳೆಎಳೆಯಾಗಿ ಬಿಡಿಸಿಡುತ್ತದೆ ಮತ್ತು ಮನ ಕಲಕುವಂತಿದೆ. ಆಕೆ ಪೊಲೀಸರಿಗೆ ನೀಡಿದ್ದ ಹೇಳಿಕೆ:- ಗುರುವಾರ ರಾಯ್ ಬರೇಲಿ ಕೋರ್ಟಿನಲ್ಲಿ ವಿಚಾರಣೆ ಇದ್ದುದರಿಂದ ನಾನು ಅಲ್ಲಿಗೆ ತೆರಳಲು ರೈಲಿಗೆ ಹೋಗಲೆಂದು ಬೆಳಗಿನ ಜಾವ 4 ಗಂಟೆ ವೇಳೆಗೆ ಮನೆಯಿಂದ ಹೊರಟಿದ್ದೆ. ಆದರೆ, ರಸ್ತೆ ಮಧ್ಯದಲ್ಲಿ ನನಗಾಗಿಯೇ ಕಾದು ನಿಂತಿದ್ದ ಐದು ಜನರು ನನ್ನನ್ನು ಅಡ್ಡಗಟ್ಟಿ ಬೈಯ್ಯಲಾರಂಭಿಸಿದರು. ನನ್ನ ಕಾಲಿಗೆ ಬಡಿಗೆಯಿದ ಬಲವಾಗಿ ಹೊಡೆದರೆ, ಮತ್ತೊಬ್ಬ ನನ್ನ ಕುತ್ತಿಗೆಗೆ ಚಾಕುವಿನಿಂದ ಇರಿದ. ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದೆನಾದರೂ ಅಷ್ಟರ ವೇಳೆಗೆ ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ಬೆಂಕಿ ಉರಿ ತಾಳಲಾಗದೇ ನಾನು ಆ ಸ್ಥಳದಿಂದ ಚೀರಾಡುತ್ತಾ ಸುಮಾರು ದೂರ ಓಡಿದೆ.

ಈ ಘನಘೋರ ಕೃತ್ಯ ಇಡೀ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಸಂತ್ರಸ್ತೆ ಇಹಲೋಕ ತ್ಯಜಿಸಿದ್ದಾಳೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಗಳಾಗಿದ್ದ ಆಕೆಯ ತಂದೆ, ಚಿಕ್ಕಮ್ಮ ಸಾವನ್ನಪ್ಪಿದ್ದಾರೆ. ಈಗ ಆಕೆಯೂ ದುರ್ಮರಣ ಹೊಂದಿದ್ದಾಳೆ. ಹೀಗೆ ಸಾಕ್ಷಿಗಳಾದವರು ಒಬ್ಬೊಬ್ಬರಾಗಿ ಸಾವನ್ನಪ್ಪಿದ್ದಾರೆ. ಇನ್ನು ನ್ಯಾಯಾಲಯ ಈ ಪೈಶಾಚಿಕ ಕೃತ್ಯದ ಹಿಂದಿರುವ ದುಷ್ಕರ್ಮಿಗಳಿಗೆ ಯಾವ ರೀತಿ ಶಿಕ್ಷೆಯನ್ನು ವಿಧಿಸುತ್ತದೆ ಎಂಬುದನ್ನು ಸಮಾಜ ಎದುರು ನೋಡುತ್ತಿದೆ ಮತ್ತು ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂಬುದನ್ನು ಬಯಸುತ್ತಿದೆ.

Tags: CourtDelhiDelhi PolicediesHospitalrapeset ablazeUnnaoUnnao AttackUnnao CaseUnnao rapeUnnao rape caseUnnao VictimUnnao Victim Nameಅತ್ಯಾಚಾರಆಸ್ಪತ್ರೆಉತ್ತರ ಪ್ರದೇಶಉನ್ನಾವೋದೆಹಲಿನ್ಯಾಯಾಲಯಬೆಂಕಿ ಹಚ್ಚುಸಾವು
Previous Post

ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಮತ್ತೊಂದು ಗರಿ

Next Post

ನೇಪಥ್ಯಕ್ಕೆ ಸರಿಯಲಿದೆಯೇ ಕರುನಾಡಿನ ಬಿಇಎಂಎಲ್?

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ನೇಪಥ್ಯಕ್ಕೆ ಸರಿಯಲಿದೆಯೇ ಕರುನಾಡಿನ ಬಿಇಎಂಎಲ್?

ನೇಪಥ್ಯಕ್ಕೆ ಸರಿಯಲಿದೆಯೇ ಕರುನಾಡಿನ ಬಿಇಎಂಎಲ್?

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada