• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎನ್ಆರ್ ಸಿ ಅನ್ಯಾಯ: ಒಂದು ಲಕ್ಷಕ್ಕೂ ಹೆಚ್ಚು ಗೋರ್ಖಾ ಸಮುದಾಯ ಹೊರಗೆ

by
October 3, 2019
in ದೇಶ
0
ಎನ್ಆರ್ ಸಿ ಅನ್ಯಾಯ: ಒಂದು ಲಕ್ಷಕ್ಕೂ ಹೆಚ್ಚು ಗೋರ್ಖಾ ಸಮುದಾಯ ಹೊರಗೆ
Share on WhatsAppShare on FacebookShare on Telegram

ಅಸ್ಸಾಂನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ನಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ – ಎನ್ ಆರ್ ಸಿ) ಪ್ರಕ್ರಿಯೆಯಿಂದಾಗಿ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಮುಸ್ಲಿಮರಿಗಷ್ಟೇ ತೊಂದರೆಯಾಗಿಲ್ಲ, ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲೇ ನೆಲೆಸಿರುವ ಗೋರ್ಖಾ ಸಮುದಾಯದವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಮಾರು 25 ಲಕ್ಷದಷ್ಟು ಜನಸಂಖ್ಯೆಯ ಗೋರ್ಖಾ ಸಮುದಾಯದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಎನ್ ಆರ್ ಸಿ ಪಟ್ಟಿಯಿಂದ ಹೊರಗಿಡಲಾಗಿದೆ.

ADVERTISEMENT

‘ಇವರು ಮತದಾರರು ಎಂಬುದು ಖಚಿತವಾಗಿಲ್ಲ ಎಂಬುದಾಗಿ ಯಾವುದೇ ಕಾರಣವಿಲ್ಲದೆ ಈ ಜನರನ್ನು ಪಟ್ಟಿಯಿಂದ ಹೊರಗಿಡಲಾಗಿದೆ’ ಎಂದು ಭಾರತೀಯ ಗೋರ್ಖಾ ಪರಿಸಂಘ (ಬಿಜಿಪಿ) ದೂರಿದೆ. ಪಟ್ಟಿಯಿಂದ ಹೊರಗಿಡಲಾಗಿರುವ ಜನರಿಗೆ ನೋಟಿಸ್ ಸಹ ಜಾರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

Also Read: ಎನ್.ಆರ್.ಸಿ. – ತಾನು ಹೆಣೆದ ಬಲೆಗೆ ತಾನೇ ಸಿಲುಕಿತೇ ಬಿಜೆಪಿ?

“ನಾವು ಭಾರತೀಯ ನಾಗರಿಕರು ಎಂಬುದನ್ನು ಸಾಬೀತುಪಡಿಸಲು ನಮ್ಮ ಬಳಿ ಎಲ್ಲಾ ಅಗತ್ಯ ದಾಖಲೆಗಳಿವೆ. ವಿದೇಶಿಯರ ನ್ಯಾಯಮಂಡಳಿಯಲ್ಲಿ ಗೋರ್ಖಾ ಜನರನ್ನು ವಿಚಾರಣೆಗೊಳಪಡಿಸುವುದನ್ನು ಸಹಿಸಲಾಗುವುದಿಲ್ಲ. ಅದು ನಮಗೆ ಮಾಡುವ ಅವಮಾನ. ಗೋರ್ಖಾ ಜನರ ಪೌರತ್ವ ಪ್ರಶ್ನೆ ಮಾಡಿರುವ ಮತ್ತು ನೇಪಾಳಿ ಭಾಷೆ ಮಾತನಾಡುವ ಜನರನ್ನು ವಿದೇಶಿಯರ ನ್ಯಾಯಮಂಡಳಿಯಲ್ಲಿ ವಿಚಾರಣೆಗೊಳಪಡಿಸುವ ಎನ್ ಆರ್ ಸಿ ವ್ಯವಸ್ಥೆ ವಿರುದ್ಧ ಮಾನನಷ್ಟ ದಾವೆ ಹೂಡಲಾಗುವುದು” ಎಂದು ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಸುಖ್ಮಾನ್ ಮೊಕ್ತಾನ್ ಎಚ್ಚರಿಸಿದ್ದಾರೆ.

“ಅಸ್ಸಾಂನಲ್ಲಿರುವ ಗೋರ್ಖಾ ಜನರಿಗೆ ಬಹಳ ದೀರ್ಘ ಇತಿಹಾಸವಿದೆ. ಈಸ್ಟ್ ಇಂಡಿಯಾ ಕಂಪನಿ ಮತ್ತು ನೇಪಾಳ ಸರ್ಕಾರದ ನಡುವೆ 1815 ರಲ್ಲಿ ನಡೆದ ಸುಗೌಲಿ ಒಪ್ಪಂದವು ಅಸ್ಸಾಂನಲ್ಲಿರುವ ಗೋರ್ಖಾ ಜನರ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ. ಬ್ರಿಟಿಷರು 1815 ರಲ್ಲೇ ಅಸ್ಸಾಂ ಲೈಟ್ ಇನ್ಫ್ಯಾಂಟ್ರಿಗೆ ಗೋರ್ಖಾ ಜನರನ್ನು ನೇಮಕ ಮಾಡಿಕೊಂಡಿದ್ದರು.

ಸಂವಿಧಾನದ 5ನೇ ವಿಧಿಯಲ್ಲಿರುವ ಯಾವುದೇ ಷರತ್ತುಗಳನ್ನು ಪೂರೈಸುವ ಗೋರ್ಖಾ ಸಮುದಾಯದ ಸದಸ್ಯರನ್ನು ಭಾರತೀಯ ನಾಗರಿಕರೆಂದೇ ಪರಿಗಣಿಸಬೇಕು ಮತ್ತು ವಿದೇಶಿಯರ ನ್ಯಾಯಮಂಡಳಿ ವಿಚಾರಣೆಗೆ ಕಳುಹಿಸಬಾರದು ಎಂಬುದಾಗಿ ಗೃಹ ಸಚಿವಾಲಯದ ವಿದೇಶಾಂಗ ವಿಭಾಗವು ಕಳೆದ 2018 ಸೆಪ್ಟೆಂಬರ್ ತಿಂಗಳಲ್ಲೇ ಸ್ಪಷ್ಟ ನಿರ್ದೇಶನ ನೀಡಿದೆ.

“ಸಂವಿಧಾನ ಅನುಷ್ಠಾನವಾದ ಸಂದರ್ಭದಲ್ಲಿ ಭಾರತೀಯ ನಾಗರಿಕರಾಗಿದ್ದ, ಅಥವಾ ಹುಟ್ಟಿನಿಂದ ಭಾರತೀಯ ನಾಗರಿಕರಾಗಿರುವ, ಅಥವಾ ನೋಂದಣಿ ಮೂಲಕ ಭಾರತೀಯ ಪೌರತ್ವ ಪಡೆದಿರುವ ಅಥವಾ ಭಾರತೀಯ ಪೌರತ್ವ ಕಾಯ್ದೆ 1955ರ ನಿಬಂಧನೆಗಳ ಅನುಸಾರ ದೇಶೀಕರಣಗೊಂಡಿರುವರಾರೂ ವಿದೇಶಿಯರ ಕಾಯ್ದೆ 1946 ರ ಪರಿಚ್ಛೇದ 2(ಎ) ನಿಯಮಗಳನ್ವಯವಾಗಲೀ ಅಥವಾ ವಿದೇಶಿಯರ ನೋಂದಣಿ ಕಾಯ್ದೆ 1939ರ ನಿಯಮಗಳನ್ವಯವಾಗಲಿ ‘ವಿದೇಶಿಯರಲ್ಲ’. ಆದ್ದರಿಂದ ಇಂತಹ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗೆ ಕಳುಹಿಸಬಾರದು” ಎಂಬುದಾಗಿ ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆ ಹೊರಡಿಸಿ ಸ್ಪಷ್ಟಪಡಿಸಿದೆ.

ಆದಾಗ್ಯೂ, ಈ ಅಧಿಸೂಚನೆಯ ಅನುಷ್ಠಾನದ ವಿಷಯದಲ್ಲಿ ಅಸ್ಸಾಂ ಸರ್ಕಾರವು ಸೋಮಾರಿತನ ಪ್ರದರ್ಶಿಸುತ್ತಿದೆ ಎಂಬುದು ಬಿಜಿಪಿಯ ಆರೋಪವಾಗಿದೆ. ಗುವಾಹಟಿ ಹೈಕೋರ್ಟ್ ನ ವಿದೇಶಿಯರ ನ್ಯಾಯಮಂಡಳಿ ಉಸ್ತುವಾರಿ ಪೀಠದ ಎದುರು ಅಸ್ಸಾಂ ಸರ್ಕಾರವು ಈ ಸಂಬಂಧ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿತ್ತು. ಆದರೆ ಪೀಠವು, ಇದು ತನ್ನ ವ್ಯಾಪ್ತಿಗೆ ಬರುವುದಿಲ್ಲವೆಂಬ ಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸಿದೆ. ರಾಜ್ಯ ಸರ್ಕಾರವು ವಿದೇಶಿಯರ ವಿಭಾಗೀಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದಿದ್ದರೆ ಈ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿರುವ ಬಿಜಿಪಿ ನಾಯಕರು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ದೇಶನದನ್ವಯ ತನ್ನ ಕರ್ತವ್ಯ ನಿರ್ವಹಿಸದಿದ್ದರೆ ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕಟಕಟೆಯಲ್ಲಿ ನಿಲ್ಲಿಸಲು ಹಿಂಜರಿಯುವುದಿಲ್ಲ ಎಂಬ ಎಚ್ಚರಿಕೆಯ ಮಾತುಗಳನ್ನೂ ಆಡಿದ್ದಾರೆ.

ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿದಿರುವವರಲ್ಲಿ ಸಾಮಾನ್ಯರಷ್ಟೇ ಅಲ್ಲದೆ, ಕೆಲ ಖ್ಯಾತನಾಮರು ಸೇರಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರೂ ಆಗಿದ್ದ ಛಬಿಲಾಲ್ ಉಪಾಧ್ಯಾಯ ಅವರ ಮೊಮ್ಮಗಳು ಮಂಜು ದೇವಿ ಮತ್ತು ಅವರ ಇಬ್ಬರು ಮಕ್ಕಳನ್ನು ಸಹ ಪಟ್ಟಿಯಿಂದ ಹೊರಗಿಡಲಾಗಿದೆ. ಆದರೆ ಮಂಜು ದೇವಿ ಅವರ ಪತಿಯ ಹೆಸರು ಮಾತ್ರ ಪಟ್ಟಿಯಲ್ಲಿ ಸೇರಿದೆ.

ಸಾಹಿತಿ ದುರ್ಗಾ ಖಾತಿವಾಡ ಮತ್ತು ಅವರ ಪತ್ನಿ

ಎನ್ ಆರ್ ಸಿ ಪಟ್ಟಿಯಿಂದ ಹೊರಗಿಡಲ್ಪಟ್ಟಿರುವ ಗೋರ್ಖಾ ಸಮುದಾಯದ ಮತ್ತೊಂದು ಪ್ರಮುಖ ಹೆಸರೆಂದರೆ, ಸಾಹಿತಿ ದುರ್ಗಾ ಖಾತಿವಾಡ ಅವರದು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಇವರ ಹೆಸರನ್ನು 1990 ರ ದಶಕದ ಖಚಿತವಲ್ಲದ ಮತದಾರ ಎಂಬುದಾಗಿ ಹೆಸರಿಸಿ ಪಟ್ಟಿಯಿಂದ ಕೈ ಬಿಡಲಾಗಿದೆ. ಆಶ್ಚರ್ಯ ಎಂದರೆ, ವಿದೇಶಿಯರ ನ್ಯಾಯಮಂಡಳಿಯು 2015 ರಲ್ಲಿ ದುರ್ಗಾ ಖಾತಿವಾಡ ಅವರನ್ನು ಭಾರತೀಯ ನಾಗರಿಕ ಎಂಬುದಾಗಿ ಘೋಷಿಸಿದೆ. ಇವರ ಹೆಸರನ್ನು ಎನ್ ಆರ್ ಸಿ ಪಟ್ಟಿಯ ಅಂತಿಮ ಕರಡಿನಲ್ಲಿ ಸೇರಿಸಲಾಗಿತ್ತಾದರೂ, ವರ್ಷದ ನಂತರ ಬಿಡುಗಡೆ ಮಾಡಿರುವ ಹೆಚ್ಚುವರಿ ಪಟ್ಟಿಯಿಂದ ಕೈಬಿಡಲಾಗಿದೆ.

“ಹಿಂದು, ಸಿಖ್, ಜೈನ, ಬುದ್ಧ ಮತ್ತು ಕ್ರೈಸ್ತ ನಿರಾಶ್ರಿತರನ್ನು ದೇಶ ಬಿಡುವಂತೆ ಒತ್ತಾಯಿಸುವುದಿಲ್ಲ” ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಭರವಸೆ ನೀಡಿ ಬಂದಿದ್ದಾರೆ. ಅವರ ಹೇಳಿಕೆಯಲ್ಲಿ ಮುಸ್ಲಿಮರಿಗೆ ಸ್ಥಾನ ಸಿಕ್ಕಿಲ್ಲ. ಹಾಗೆಯೇ ನೇಪಾಳಿಗಳಿಗೂ ಜಾಗ ಸಿಗುವುದಿಲ್ಲವೇ..?

ಕೃಪೆ: ದಿ ವೈರ್

Tags: Amit ShahAssam StateAssamese MuslimsBharatiya Gorkha ParisanghaGorkha CommunityGovernment of IndiaNational Register of CitizensPrime Minister Narendra Modiಅಮಿತ್ ಶಾಅಸ್ಸಾಮಿ ಮುಸ್ಲಿಂರುಅಸ್ಸಾಮ್ ರಾಜ್ಯಗೋರ್ಖಾ ಸಮುದಾಯಪ್ರಧಾನಿ ನರೇಂದ್ರ ಮೋದಿಭಾರತ ಸರ್ಕಾರಭಾರತೀಯ ಗೋರ್ಖಾ ಪರಿಸಂಘರಾಷ್ಟ್ರೀಯ ಪೌರತ್ವ ನೋಂದಣಿ
Previous Post

‘ಕುಂಡೆ ಹಬ್ಬ’ ಶುರುವಿಟ್ಟ ಭಜನಾ ಮಂಡಳಿ

Next Post

ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ, ಕರಿಮೆಣಸಿಗೆ ಕೊಳೆ ರೋಗ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ

ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ, ಕರಿಮೆಣಸಿಗೆ ಕೊಳೆ ರೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada