Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಎರಡೆರಡು ಮನೆ ಖರೀದಿಸಬಾರದಂತೆ NRIಗಳು 

ಎರಡೆರಡು ಮನೆ ಖರೀದಿಸಬಾರದಂತೆ NRIಗಳು
ಎರಡೆರಡು ಮನೆ ಖರೀದಿಸಬಾರದಂತೆ NRIಗಳು 

February 7, 2020
Share on FacebookShare on Twitter

ಕೇಂದ್ರ ಸರ್ಕಾರದಿಂದ ಸರ್ವರಿಗೂ ಸೂರನ್ನೊದಗಿಸುವುದನ್ನು ಖಾತ್ರಿ ಮಾಡುಲು ಕೋರಿದ ಮದ್ರಾಸ್ ಹೈಕೋರ್ಟ್, ದೇಶದಲ್ಲಿ ಅನಿವಾಸಿ ಭಾರತೀಯರು ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮನೆ ಖರೀದಿ ಮಾಡದಂತೆ ನಿಷೇಧ ತರಲು ಸೂಚಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಅನಿವಾಸಿಗಳಿಗೆ ಮನೆ ಮಾರಾಟವನ್ನು ನಿಷೇಧಿಸಿ, ಎರಡನೇ ಮನೆ ಖರೀದಿ ಮೇಲೆ 100% ತೆರಿಗೆ ವಿಧಿಸಲು ಹೈಕೋರ್ಟ್ ಸೂಚಿಸಿದೆ.

ಕೇಂದ್ರ ಗೃಹ ನಿರ್ಮಾಣ ಹಾಗೂ ವಿತ್ತ ಸಚಿವಾಲಯಗಳನ್ನು ಪಾರ್ಟಿಗಳನ್ನಾಗಿ ಮಾಡಿಕೊಂಡಿರುವ ಮದ್ರಾಸ್ ಹೈಕೋರ್ಟ್‌, ಭಾರತ ಹಾಗೂ ತಮಿಳು ನಾಡಿನಲ್ಲಿ ಅದೆಷ್ಟು ಕುಟುಂಬಗಳಿಗೆ ಮೂಲ ಸೌಕರ್ಯವಾಗಿ ಮನೆಯ ಲಭ್ಯತೆ ಇದೆ ಎಂದು ಉತ್ತರಿಸುವಂತೆ ಕೋರಿ ಅನೇಕ ಪ್ರಶ್ನೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರದ “ಸರ್ವರಿಗೂ ಸೂರು” ಅಭಿಯಾನ ಯಾವಾಗ ಪೂರ್ಣಗೊಳ್ಳಲಿದೆ ಎಂದು ಹೈಕೋರ್ಟ್ ಇದೇ ಸಂದರ್ಭದಲ್ಲಿ ಪ್ರಶ್ನಿಸಿದೆ.

“ದೇಶದಲ್ಲಿರುವ ಸರ್ವರಿಗೂ ಸೂರು ಒದಗಿಸುವ ಉದ್ದೇಶದಿಂದ ಸರ್ಕಾರವೇಕೆ ಒಬ್ಬರಿಗೆ ಒಂದೊಂದೇ ಮನೆ ಎಂಬ ರೀತಿಯ ನಿಯಂತ್ರಣಗಳನ್ನು ಅನುಷ್ಠಾನಕ್ಕೆ ತಂದು ಹಿಂದುಳಿದ ಹಾಗೂ ಆರ್ಥಿವಾಗಿ ದುರ್ಬಲ ವರ್ಗಗಳಾಗಿರುವ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಡಬಾರದು? ಇಂಥ ಕ್ರಮಗಳ ಮೂಲಕ ದೇಶದಲ್ಲಿ ಗೃಹ ಖರೀದಿಯ ಬೆಲೆಗಳನ್ನೇಕೆ ನಿಯಂತ್ರಣಕ್ಕೆ ತರಬಾರದು,” ಎಂದು ಹೈಕೋರ್ಟ್ ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ಎನ್‌ ಕಿರುಬಾಕರನ್‌ ಹಾಗೂ ಅಬ್ದುಲ್‌ ಖುದ್ದೋಸ್ ಇದ್ದ ಪೀಠವು, “ಎರಡನೇ ಮನೆ ಖರೀದಿ ಮಾಡಲು ಬಯಸುವ ಕುಟುಂಬಗಳಿಗೆ ಸರ್ಕಾರವೇಕೆ 100% ತೆರಿಗೆ ವಿಧಿಸಬಾರದು? ಈ ಮೂಲಕ ಒಬ್ಬಬ್ಬರೇ ಹಲವು ಮನೆಗಳನ್ನು ಖರೀದಿ ಮಾಡದಂತೆ ನೋಡಿಕೊಳ್ಳಬಾರದು,” ಎಂದು ಹೇಳಿದೆ.

“ಪ್ಲಾಟ್‌ಫಾರಂಗಳು, ರಸ್ತೆಗಳ ಮೇಲೆಲ್ಲಾ ಲಕ್ಷಾಂತರ ಜೀವಿಸುತ್ತಿದ್ದು, ಸಿಮೆಂಟ್ ಪೈಪ್‌ಲೈನ್‌ಗಳು, ಸ್ಲಂಗಳು ಹಾಗೂ ಮರಗಳ ಬುಡಗಳಲ್ಲೆಲ್ಲಾ ಯಾವುದೇ ಸೂರಿಲ್ಲದೇ, ಸುರಕ್ಷತಾ ಕ್ರಮಗಳಿಲ್ಲದೇ ವಾಸ ಮಾಡುತ್ತಿದ್ದಾರೆ,” ಎಂದು ಪೀಠ ಸರ್ಕಾರದ ಗಮನಕ್ಕೆ ತಂದಿದೆ.

“ಕೇಂದ್ರ ಸರ್ಕಾರ ಎಲ್ಲರಿಗೂ ಸೂರು ಒದಗಿಸುವ ಮಹತ್ವದ ನೀತಿಯನ್ನು ಕೈಗೆತ್ತಿಕೊಂಡಿದೆ ಎಂಬುದು ಸತ್ಯ, ಆದರೆ ಇದನ್ನು ಸಾಧ್ಯವಾದಷ್ಟು ಬೇಗ ಸಾಧಿಸಬೇಕು,” ಎಂದು ಕೋರ್ಟ್ ಆಗ್ರಹಿಸಿದೆ.

ಗೃಹ ನಿರ್ಮಾಣ ಯೋಜನೆಗೆಂದು ಕೊಯಮತ್ತೂರಿನ ತುಡಿಯಲೂರ್‌ ಹಾಗೂ ವೆಲ್ಲಕಿನಾರ್‌ ಪ್ರದೇಶಗಳಲ್ಲಿ 369 ಎಕರೆಗಳಷ್ಟು ಖಾಸಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವ ನಡೆಯೊಂದನ್ನು ವಿರೋಧಿ ಮೇಲ್ಮನವಿ ಸಲ್ಲಿಸಿರುವ ತಮಿಳುನಾಡು ಗೃಹ ಮಂಡಳಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್‌ ಕೈಗೆತ್ತಿಕೊಂಡಿದೆ.

ತಮ್ಮದೇ ಸ್ವಂತ ಪರಿಶ್ರಮದಿಂದ ಯಾವುದೋ ಪರದೇಶಕ್ಕೆ ಹೋಗಿ ಬೆವರು ಹರಿವಂತೆ ಸಂಪಾದನೆ ಮಾಡಿ, ಅಲ್ಲಿನ ದುಬಾರಿ ಜೀವನ ಶೈಲಿಯಲ್ಲೂ ಸಹ ತ್ರಾಸದಾಯಕವಾಗಿ ಹಣ ಕೂಡಿಟ್ಟುಕೊಂಡು ಬಂದು ಸ್ವದೇಶದಲ್ಲಿ ಹಾಯಾಗಿ ಜೀವನ ನಡೆಸುವ ಮಂದಿಯ ಮೇಲೆ ನಿಯಂತ್ರಣ ತರುವ ಮುನ್ನ ಸಾವಿರಾರು ಎಕರೆಗಳ ಮಟ್ಟಿಗೆ ಭೂಮಿ ಕಬಳಿಸಿಕೊಂಡು, ಬೆಂಗಳೂರಿನಂಥ ಮಹಾನಗರಗಳಲ್ಲಿ ಏರಿಯಾಗಳನ್ನೇ ಆವರಿಸಿಕೊಂಡು, ರಿಯಲ್ ಎಸ್ಟೇಟ್ ಕುಳಗಳೊಂದಿಗೆ ಶಾಮೀಲಾಗಿ ಭೂತಾಯಿಯ ಒಡಲನ್ನೇ ಕೊರೆಯುತ್ತಿರುವ ರಾಜಕಾರಣಿಗಳು ಹಾಗೂ ಅಧಿಕಾರಶಾಹಿಗಳ ಮೇಲೂ ಇಂಥದ್ದೇ ನಿಯಂತ್ರಣಗಳನ್ನು ತಂದಿದ್ದರೆ? ಎಂಬ ಪ್ರಶ್ನೆ ಹಾಗೇ ಮನದಲ್ಲಿ ಬಂದು ಹೋಗುತ್ತೆ ಅಲ್ಲವೇ?

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI
ಇದೀಗ

AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI

by ಪ್ರತಿಧ್ವನಿ
March 23, 2023
ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!
Top Story

ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

by ಪ್ರತಿಧ್ವನಿ
March 20, 2023
PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?
ಇದೀಗ

PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?

by ಪ್ರತಿಧ್ವನಿ
March 23, 2023
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh
Top Story

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

by ಪ್ರತಿಧ್ವನಿ
March 20, 2023
ಚುನಾವಣೆ ಕರ್ತವ್ಯ ನಿರ್ಲಕ್ಷ ತೋರಿದ ಇಬ್ಬರು ಅಧಿಕಾರಿಗಳ ಅಮಾನತ್ತು..! : Suspension of Two Officials Who Neglected Election Duty..!
Top Story

ಚುನಾವಣೆ ಕರ್ತವ್ಯ ನಿರ್ಲಕ್ಷ ತೋರಿದ ಇಬ್ಬರು ಅಧಿಕಾರಿಗಳ ಅಮಾನತ್ತು..! : Suspension of Two Officials Who Neglected Election Duty..!

by ಪ್ರತಿಧ್ವನಿ
March 19, 2023
Next Post
ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

ಮೋದಿಗೆ ಉಘೇ ಎಂದಿದ್ದಕ್ಕೆ ರಜಿನಿಕಾಂತ್‌ ಬಚಾವ್

ಮೋದಿಗೆ ಉಘೇ ಎಂದಿದ್ದಕ್ಕೆ ರಜಿನಿಕಾಂತ್‌ ಬಚಾವ್, ವಿರೋಧಿಸಿ ವಿಜಯ್‌ಗೆ ಸಂಕಷ್ಟ

ಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ? 

ಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ? 

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist