• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎರಡೆರಡು ಮನೆ ಖರೀದಿಸಬಾರದಂತೆ NRIಗಳು 

by
February 7, 2020
in ದೇಶ
0
ಎರಡೆರಡು ಮನೆ ಖರೀದಿಸಬಾರದಂತೆ NRIಗಳು 
Share on WhatsAppShare on FacebookShare on Telegram

ಕೇಂದ್ರ ಸರ್ಕಾರದಿಂದ ಸರ್ವರಿಗೂ ಸೂರನ್ನೊದಗಿಸುವುದನ್ನು ಖಾತ್ರಿ ಮಾಡುಲು ಕೋರಿದ ಮದ್ರಾಸ್ ಹೈಕೋರ್ಟ್, ದೇಶದಲ್ಲಿ ಅನಿವಾಸಿ ಭಾರತೀಯರು ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮನೆ ಖರೀದಿ ಮಾಡದಂತೆ ನಿಷೇಧ ತರಲು ಸೂಚಿಸಿದೆ.

ADVERTISEMENT

ಅನಿವಾಸಿಗಳಿಗೆ ಮನೆ ಮಾರಾಟವನ್ನು ನಿಷೇಧಿಸಿ, ಎರಡನೇ ಮನೆ ಖರೀದಿ ಮೇಲೆ 100% ತೆರಿಗೆ ವಿಧಿಸಲು ಹೈಕೋರ್ಟ್ ಸೂಚಿಸಿದೆ.

ಕೇಂದ್ರ ಗೃಹ ನಿರ್ಮಾಣ ಹಾಗೂ ವಿತ್ತ ಸಚಿವಾಲಯಗಳನ್ನು ಪಾರ್ಟಿಗಳನ್ನಾಗಿ ಮಾಡಿಕೊಂಡಿರುವ ಮದ್ರಾಸ್ ಹೈಕೋರ್ಟ್‌, ಭಾರತ ಹಾಗೂ ತಮಿಳು ನಾಡಿನಲ್ಲಿ ಅದೆಷ್ಟು ಕುಟುಂಬಗಳಿಗೆ ಮೂಲ ಸೌಕರ್ಯವಾಗಿ ಮನೆಯ ಲಭ್ಯತೆ ಇದೆ ಎಂದು ಉತ್ತರಿಸುವಂತೆ ಕೋರಿ ಅನೇಕ ಪ್ರಶ್ನೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರದ “ಸರ್ವರಿಗೂ ಸೂರು” ಅಭಿಯಾನ ಯಾವಾಗ ಪೂರ್ಣಗೊಳ್ಳಲಿದೆ ಎಂದು ಹೈಕೋರ್ಟ್ ಇದೇ ಸಂದರ್ಭದಲ್ಲಿ ಪ್ರಶ್ನಿಸಿದೆ.

“ದೇಶದಲ್ಲಿರುವ ಸರ್ವರಿಗೂ ಸೂರು ಒದಗಿಸುವ ಉದ್ದೇಶದಿಂದ ಸರ್ಕಾರವೇಕೆ ಒಬ್ಬರಿಗೆ ಒಂದೊಂದೇ ಮನೆ ಎಂಬ ರೀತಿಯ ನಿಯಂತ್ರಣಗಳನ್ನು ಅನುಷ್ಠಾನಕ್ಕೆ ತಂದು ಹಿಂದುಳಿದ ಹಾಗೂ ಆರ್ಥಿವಾಗಿ ದುರ್ಬಲ ವರ್ಗಗಳಾಗಿರುವ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಡಬಾರದು? ಇಂಥ ಕ್ರಮಗಳ ಮೂಲಕ ದೇಶದಲ್ಲಿ ಗೃಹ ಖರೀದಿಯ ಬೆಲೆಗಳನ್ನೇಕೆ ನಿಯಂತ್ರಣಕ್ಕೆ ತರಬಾರದು,” ಎಂದು ಹೈಕೋರ್ಟ್ ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ಎನ್‌ ಕಿರುಬಾಕರನ್‌ ಹಾಗೂ ಅಬ್ದುಲ್‌ ಖುದ್ದೋಸ್ ಇದ್ದ ಪೀಠವು, “ಎರಡನೇ ಮನೆ ಖರೀದಿ ಮಾಡಲು ಬಯಸುವ ಕುಟುಂಬಗಳಿಗೆ ಸರ್ಕಾರವೇಕೆ 100% ತೆರಿಗೆ ವಿಧಿಸಬಾರದು? ಈ ಮೂಲಕ ಒಬ್ಬಬ್ಬರೇ ಹಲವು ಮನೆಗಳನ್ನು ಖರೀದಿ ಮಾಡದಂತೆ ನೋಡಿಕೊಳ್ಳಬಾರದು,” ಎಂದು ಹೇಳಿದೆ.

“ಪ್ಲಾಟ್‌ಫಾರಂಗಳು, ರಸ್ತೆಗಳ ಮೇಲೆಲ್ಲಾ ಲಕ್ಷಾಂತರ ಜೀವಿಸುತ್ತಿದ್ದು, ಸಿಮೆಂಟ್ ಪೈಪ್‌ಲೈನ್‌ಗಳು, ಸ್ಲಂಗಳು ಹಾಗೂ ಮರಗಳ ಬುಡಗಳಲ್ಲೆಲ್ಲಾ ಯಾವುದೇ ಸೂರಿಲ್ಲದೇ, ಸುರಕ್ಷತಾ ಕ್ರಮಗಳಿಲ್ಲದೇ ವಾಸ ಮಾಡುತ್ತಿದ್ದಾರೆ,” ಎಂದು ಪೀಠ ಸರ್ಕಾರದ ಗಮನಕ್ಕೆ ತಂದಿದೆ.

“ಕೇಂದ್ರ ಸರ್ಕಾರ ಎಲ್ಲರಿಗೂ ಸೂರು ಒದಗಿಸುವ ಮಹತ್ವದ ನೀತಿಯನ್ನು ಕೈಗೆತ್ತಿಕೊಂಡಿದೆ ಎಂಬುದು ಸತ್ಯ, ಆದರೆ ಇದನ್ನು ಸಾಧ್ಯವಾದಷ್ಟು ಬೇಗ ಸಾಧಿಸಬೇಕು,” ಎಂದು ಕೋರ್ಟ್ ಆಗ್ರಹಿಸಿದೆ.

ಗೃಹ ನಿರ್ಮಾಣ ಯೋಜನೆಗೆಂದು ಕೊಯಮತ್ತೂರಿನ ತುಡಿಯಲೂರ್‌ ಹಾಗೂ ವೆಲ್ಲಕಿನಾರ್‌ ಪ್ರದೇಶಗಳಲ್ಲಿ 369 ಎಕರೆಗಳಷ್ಟು ಖಾಸಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವ ನಡೆಯೊಂದನ್ನು ವಿರೋಧಿ ಮೇಲ್ಮನವಿ ಸಲ್ಲಿಸಿರುವ ತಮಿಳುನಾಡು ಗೃಹ ಮಂಡಳಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್‌ ಕೈಗೆತ್ತಿಕೊಂಡಿದೆ.

ತಮ್ಮದೇ ಸ್ವಂತ ಪರಿಶ್ರಮದಿಂದ ಯಾವುದೋ ಪರದೇಶಕ್ಕೆ ಹೋಗಿ ಬೆವರು ಹರಿವಂತೆ ಸಂಪಾದನೆ ಮಾಡಿ, ಅಲ್ಲಿನ ದುಬಾರಿ ಜೀವನ ಶೈಲಿಯಲ್ಲೂ ಸಹ ತ್ರಾಸದಾಯಕವಾಗಿ ಹಣ ಕೂಡಿಟ್ಟುಕೊಂಡು ಬಂದು ಸ್ವದೇಶದಲ್ಲಿ ಹಾಯಾಗಿ ಜೀವನ ನಡೆಸುವ ಮಂದಿಯ ಮೇಲೆ ನಿಯಂತ್ರಣ ತರುವ ಮುನ್ನ ಸಾವಿರಾರು ಎಕರೆಗಳ ಮಟ್ಟಿಗೆ ಭೂಮಿ ಕಬಳಿಸಿಕೊಂಡು, ಬೆಂಗಳೂರಿನಂಥ ಮಹಾನಗರಗಳಲ್ಲಿ ಏರಿಯಾಗಳನ್ನೇ ಆವರಿಸಿಕೊಂಡು, ರಿಯಲ್ ಎಸ್ಟೇಟ್ ಕುಳಗಳೊಂದಿಗೆ ಶಾಮೀಲಾಗಿ ಭೂತಾಯಿಯ ಒಡಲನ್ನೇ ಕೊರೆಯುತ್ತಿರುವ ರಾಜಕಾರಣಿಗಳು ಹಾಗೂ ಅಧಿಕಾರಶಾಹಿಗಳ ಮೇಲೂ ಇಂಥದ್ದೇ ನಿಯಂತ್ರಣಗಳನ್ನು ತಂದಿದ್ದರೆ? ಎಂಬ ಪ್ರಶ್ನೆ ಹಾಗೇ ಮನದಲ್ಲಿ ಬಂದು ಹೋಗುತ್ತೆ ಅಲ್ಲವೇ?

Tags: NRI
Previous Post

ಕರೋನಾವೈರಸ್ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆಯೇ ಚೀನಾ?

Next Post

ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada