Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಔರಾದ್ಕರ್ ವರದಿಗೆ ಗ್ರೀನ್ ಸಿಗ್ನಲ್: ಪೋಲಿಸರ ವೇತನ ಹೆಚ್ಚಳ

ಔರಾದ್ಕರ್ ವರದಿಗೆ ಗ್ರೀನ್ ಸಿಗ್ನಲ್: ಪೋಲಿಸರ ವೇತನ ಹೆಚ್ಚಳ
ಔರಾದ್ಕರ್ ವರದಿಗೆ ಗ್ರೀನ್ ಸಿಗ್ನಲ್: ಪೋಲಿಸರ ವೇತನ ಹೆಚ್ಚಳ
Pratidhvani Dhvani

Pratidhvani Dhvani

July 16, 2019
Share on FacebookShare on Twitter

ರಾಜಕೀಯ ಹೈ ಡ್ರಾಮದ ನಡುವೆ ರಾಜ್ಯ ಪೋಲಿಸರ ಮುಖದಲ್ಲಿ ಮಂದಹಾಸ ಮೂಡಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆ ಹಾಗೂ ಬಡ್ತಿ ತಾರತಮ್ಯ ನಿವಾರಣೆ ಸೇರಿದಂತೆ ಅನೇಕ ಬೇಡಿಕೆಗಳು ಹಾಗೂ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿಯ ಶಿಫಾರಸ್ಸು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿ ಹಾಕಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

ಔರಾದ್ಕರ್ ಸಮಿತಿ ಶೇಕಡ 30-35ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ವರದಿಯಲ್ಲಿ ಶಿಫಾರಸು ಮಾಡಿತ್ತು. ಆದರೆ, ಸರ್ಕಾರಕ್ಕೆ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಭಿಪ್ರಾಯ ಪಟ್ಟ ಸರ್ಕಾರ, ಮೂಲ ವರದಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿ, ಶೇಕಡ 30-35ರ ಬದಲಿಗೆ ಶೇಕಡ 12.5ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿರುವುದರಿಂದ ಪೋಲಿಸ್ ಸಿಬ್ಬಂದಿಗಳು ಅಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ. ಆದೇಶ ಹೊರಡಿಸಿದಂತೆ ನೂತನ ವೇತನ ಆಗಸ್ಟ್ 1ರಿಂದ ಅನ್ವಯವಾಗಲಿದೆ.

ಪರಿಷ್ಕೃತ ವೇತನದ ವಿವರ

ಏನಿದು ರಾಘವೇಂದ್ರ ಔರಾದ್ಕರ್ ವರದಿ?

ಪೊಲೀಸರ ವೇತನ ಪರಿಷ್ಕರಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ವೇತನ ತಾರತಮ್ಯ ನಿವಾರಿಸಲು ಅಧ್ಯಯನ ನಡೆಸಿ, ವರದಿ ನೀಡಲು ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಲಾಗಿತ್ತು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ವೇತನದಲ್ಲಿ ತಾರತಮ್ಯ ಇದೆ. ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್ಸೈ ಹಾಗೂ ಇನ್ಸಪೆಕ್ಟರ್‌ಗಳ ವೇತನ 50 ರಿಂದ 60 ಸಾವಿರ ವರೆಗೂ ಇದೆ. ಹಾಗೂ ಇಲಾಖೆಯಲ್ಲಿ ಪೇದೆಯಾಗಿ ಸೇರುವವರಿಗೆ 20-30 ವರ್ಷವಾದರೂ ಬಡ್ತಿ ಸಿಗದು. ಮುಖ್ಯಪೇದೆ ಅಥವಾ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದಾರೆ. ಪೊಲೀಸರ ವೇತನ ಶೇ 30 ರಿಂದ 35ರಷ್ಟು ಹೆಚ್ಚಿಸಬೇಕು ಎಂದು ಅಂದಿನ ಗೃಹ ಮಂತ್ರಿಯಾಗಿದ್ದ ಜಿ. ಪರಮೇಶ್ವರ್ ರವರಿಗೆ ವರದಿಯನ್ನು ಸಲ್ಲಿಸಲಾಗಿತ್ತು.

“ಪೊಲೀಸರ ವೇತನ ಕುರಿತು ಸಮಿತಿ ರಚನೆಯಾಗಿ ಹಲವು ಸುತ್ತಿನ ಸುದೀರ್ಘ ಸಭೆಗಳು ನಡೆದಿವೆ. ಬೇರೆ ರಾಜ್ಯಗಳ ಪೊಲೀಸರಿಗೆ ನೀಡುತ್ತಿರುವ ವೇತನ, ಇತರ ಸೌಲಭ್ಯ ಹಾಗೂ ಸರಕಾರದ ಬೇರೆ ಬೇರೆ ಇಲಾಖೆಗಳಲ್ಲಿನ ಸಿಬ್ಬಂದಿಗೆ ಸಿಗುತ್ತಿರುವ ವೇತನ ಪರಿಶೀಲಿಸಿ ವರದಿಯನ್ನು ಸಿದ್ಧಪಡಿಸಿದ್ದೆವು” – ಎಂದು ರಾಘವೇಂದ್ರ ಔರಾದ್ಕರ್ 2016ರಲ್ಲಿ ವರದಿ ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸಿದ್ದರು.

ರಾಜ್ಯದ ರಕ್ಷಣೆಗಾಗಿ ಹಗಲು ರಾತ್ರಿ ಎಂದು ಗಮನಿಸದೆ ಶ್ರಮಿಸುತ್ತಿರುವ ಪೋಲಿಸ್ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಕಲ್ಪಿಸುತ್ತೇನೆ ಎಂದು ಕಳೆದ 6 ತಿಂಗಳಿನಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುತ್ತಲೇ ಇದ್ದರು. ಆದರೆ ಆದೇಶ ಹೊರಡಿಸಿರಲಿಲ್ಲ. ಈಗ ಗೃಹ ಸಚಿವ ಎಂ ಬಿ ಪಾಟೀಲ್ ರವರು ವರದಿ ಜಾರಿಗಾಗಿ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸು ಆಧರಿಸಿ ವೇತನ ಪರಿಷ್ಕರಿಸಿದ ವರದಿಗೆ ಸಹಿ ಹಾಕಿದ್ದರೂ ವಿನಃ ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಆದರೆ ಸಮಯ ಕಳೆಯುತ್ತಿದ್ದಂತೆ ಸಂಜೆಯ ಹೊತ್ತಿಗೆ ಪೋಲಿಸ್ ಸಿಬ್ಬಂದಿಗಳಿಗೆ ಅಂತೂ ಸಿಹಿ ಸುದ್ದಿ ಮುಟ್ಟಿಸಿದರು.

ಡಾ.ಜಿ.ಪರಮೇಶ್ವರ್ ಅವರು ಸಮ್ಮಿಶ್ರ ಸರ್ಕಾರ ನುಡಿದಂತೆ ನಡೆದಿದೆ ಎಂದು ಪೊಲೀಸ್​ ಸಿಬ್ಬಂದಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
RS 500
RS 1500

SCAN HERE

don't miss it !

ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ರಾಕಿ v/s ರಾಕಿ ಎನ್ನುವಂತಿದೆ- ಶ್ರೀರಾಮುಲು
ಇದೀಗ

ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ರಾಕಿ v/s ರಾಕಿ ಎನ್ನುವಂತಿದೆ- ಶ್ರೀರಾಮುಲು

by ಪ್ರತಿಧ್ವನಿ
July 5, 2022
ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!
ದೇಶ

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

by ಪ್ರತಿಧ್ವನಿ
July 3, 2022
ಮಣಿಪುರದಲ್ಲಿ ಭೂಕುಸಿತ: 24 ಶವ ಪತ್ತೆ, 38 ಮಂದಿ ನಾಪತ್ತೆ!
ದೇಶ

ಮಣಿಪುರದಲ್ಲಿ ಭೂಕುಸಿತ: 24 ಶವ ಪತ್ತೆ, 38 ಮಂದಿ ನಾಪತ್ತೆ!

by ಪ್ರತಿಧ್ವನಿ
July 2, 2022
ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?
ದೇಶ

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

by ಪ್ರತಿಧ್ವನಿ
July 1, 2022
ಶಾಸಕರು EDಯಿಂದಾಗಿ ನಮ್ಮೊಂದಿಗೆ ಸೇರಿಕೊಂಡಿದ್ದಾರೆ : ದೇವೇಂದ್ರ ಫಡ್ನವೀಸ್
ದೇಶ

ಶಾಸಕರು EDಯಿಂದಾಗಿ ನಮ್ಮೊಂದಿಗೆ ಸೇರಿಕೊಂಡಿದ್ದಾರೆ : ದೇವೇಂದ್ರ ಫಡ್ನವೀಸ್

by ಪ್ರತಿಧ್ವನಿ
July 4, 2022
Next Post
ಕೊನೆಗೂ ಸಾಂಪ್ರದಾಯಿಕ ಜಲಸಂರಕ್ಷಣಾ ಪದ್ಥತಿಗೆ ಮೊರೆ ಹೋದ ಸರಕಾರ

ಕೊನೆಗೂ ಸಾಂಪ್ರದಾಯಿಕ ಜಲಸಂರಕ್ಷಣಾ ಪದ್ಥತಿಗೆ ಮೊರೆ ಹೋದ ಸರಕಾರ

ನಾಲ್ಕು ವರ್ಷಗಳಲ್ಲಿ ವ್ಯಯಿಸಲಾದ CSR ಹಣ 47

ನಾಲ್ಕು ವರ್ಷಗಳಲ್ಲಿ ವ್ಯಯಿಸಲಾದ CSR ಹಣ 47,199  ಕೋಟಿ

ಮಿತ್ರಪಕ್ಷಗಳಿಗೇ “ವಿಪ್” ಜಾರಿ ಮಾಡಿತೆ ಸುಪ್ರೀಂ ಕೋರ್ಟ್?

ಮಿತ್ರಪಕ್ಷಗಳಿಗೇ “ವಿಪ್” ಜಾರಿ ಮಾಡಿತೆ ಸುಪ್ರೀಂ ಕೋರ್ಟ್?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist