• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಸೋಂಕು; ಕೇಂದ್ರ ಆರೋಗ್ಯ ಮಂತ್ರಿ ಮೇಲೆ ಹರಿಹಾಯ್ದ ಜನತೆ

by
March 30, 2020
in ದೇಶ
0
ಕರೋನಾ ಸೋಂಕು; ಕೇಂದ್ರ ಆರೋಗ್ಯ ಮಂತ್ರಿ ಮೇಲೆ ಹರಿಹಾಯ್ದ ಜನತೆ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕರೋನಾ ವೈರಸ್ ಸೋಂಕು ತಡೆಗಟ್ಟುವಲ್ಲಿ ಸಾಕಷ್ಟು ಮುತುರ್ಜಿ ವಹಿಸಿದ್ಯಾ ಅಂದರೆ ಜನಸಾಮಾನ್ಯರು ಕೊಡುವ ಉತ್ತರ ಇಲ್ಲ ಎಂದು. ಕರೋನಾ ಸೋಂಕು ನಮ್ಮ ದೇಶದಲ್ಲಿ ಕಾಣಿಸಿಕೊಂಡ ಮೇಲೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳು ಸೂಕ್ತವಾಗಿ ಇವೆಯಾ ಎಂದರೆ ಜನರ ಉತ್ತರ ಇಲ್ಲ. ಸರೀ, ಮೊದಲಿಗೆ ಎಡವಿದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಸೋಂಕು ಹರಡುತ್ತಿರುವ ವೇಗಕ್ಕೆ ಕಡಿವಾಣ ಹಾಕಲು ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿವೆಯಾ? ಚಿಕಿತ್ಸೆ ಸರಿಯಾಗಿ ಸಿಗುತ್ತಿದ್ಯಾ? ಶಂಕಿತರ ತಪಾಸಣೆ ಸರಿಯಾದ ದಿಕ್ಕಿನಲ್ಲಿ ಸಾಗಿದ್ಯಾ ಎಂದಾಗಲು ಜನರಿಂದ ಬರುವ ಉತ್ತರ ಇಲ್ಲ ಎಂದು. ಒಟ್ಟಾರೆ, ವಿಶ್ವದ ಬೇರೆಲ್ಲಾ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತ ಸರ್ಕಾರ ತೆಗೆದುಕೊಂಡ ನಿಲುವುಗಳು ಅಷ್ಟಕಷ್ಟೆ. ಭಾರತ ಸರ್ಕಾರ ಮಾಡಿದ ಏಕೈಕ ಕ್ರಮ ಎಂದರೆ ಇಡೀ ದೇಶವನ್ನು ಲಾಕ್ ಡೌನ್ ಮಾಡಿದ್ದು ಅಷ್ಟೇ. ಇದೀಗ ಕೇಂದ್ರ ಸರ್ಕಾರದ ಕೆಲಸಗಳು ಟೀಕಾಕಾರರ ಬಾಯಿಗೆ ಶರಬತ್ತಾಗಿದೆ ಎಂದರೆ ತಪ್ಪಲ್ಲ.

ಕೇಂದ್ರದ ಆರೋಗ್ಯ ಸಚಿವರು ತುಂಬಾ ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರಾ ಎಂದರೆ ಅದೂ ಇಲ್ಲ. ಕರೋನಾ ದೇಶಕ್ಕೆ ಕಾಲಿಟ್ಟ ದಿನದಿಂದಲೂ ಆರೋಗ್ಯ ಸಚಿವರು ಎಲ್ಲಿದ್ದಾರೆ ಎನ್ನುವುದೇ ದೇಶಕ್ಕೆ ತಿಳಿಯದಾಗಿದೆ. ಕರೋನಾ ಬಗ್ಗೆ ಏನೇ ಘೋಷಣೆ ಇದ್ದರೂ ಪ್ರಧಾನಿ ನರೇಂದ್ರ ಮೋದಿ ಅವರೇ ಘೋಷಣೆ ಮಾಡುತ್ತಿದ್ದಾರೆ. ಯಾವುದೇ ಮಾಹಿತಿ ಇದ್ದರೂ ಪ್ರಧಾನಿಯೇ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿರುವ ಡಾ. ಹರ್ಷವರ್ಧನ್ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ದೇಶದ ನಾಗರಿಕರನ್ನು ಕಾಡುತ್ತಿದೆ. ಡಾ. ಹರ್ಷವರ್ಧನ್ ತಮ್ಮ ಪತ್ನಿ ಜೊತೆ ಕುಳಿತು ಪಗಡೆ ಆಡುತ್ತಿರುವ ಚಿತ್ರವನ್ನು ಹಿಡಿದು ಟ್ವಿಟರ್ ನಲ್ಲಿ ಪರ ವಿರೋಧ ಟೀಕೆಗಳು ವ್ಯಕ್ಯವಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರೇ ಎಲ್ಲಾ ವಿಚಾರಗಳನ್ನು ನೋಡಿಕೊಳ್ಳುವುದಾದರೆ ಆರೋಗ್ಯ ಇಲಾಖೆಗೆ ಮಂತ್ರಿ ಎಂದು ಇರಬೇಕಾ? ಎನ್ನುವ ಪ್ರಶ್ನೆಯನ್ನೂ ಕೇಳುವಂತಾಗಿದೆ.

India’s health minister rn.

Let that sink in.. #CoronavirusPandemic pic.twitter.com/3j8R3LIC2I

— Raksha Ramaiah (@RakshaRamaiah) March 29, 2020


ADVERTISEMENT

ಪ್ರತಿಧ್ವನಿ ಕೆಲವು ದಿನಗಳ ಹಿಂದೆ ಒಂದು ವರದಿ ಮಾಡಿತ್ತು ‘ವಿಪಕ್ಷ ನಾಯಕರ ಟೀಕೆಯನ್ನು ನಿರ್ಲಕ್ಷಿಸಿದ್ದೇ ದೇಶಕ್ಕೆ ದುಬಾರಿ ಆಯಿತೇ?’ ಎಂದು. ಹೌದು ಜನವರಿ 30 ರಂದು ಕರೋನಾ ಮಹಾಮಾರಿ ಬಾಗಿಲು ತೆರೆದು ದೇಶದ ಒಳಕ್ಕೆ ಬಂದಾಗಲೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 12 ದಿನಗಳ ಬಳಿಕ ಸಣ್ಣದೊಂದು ಟ್ವೀಟ್ ಮಾಡಿದ್ದರು. ಕರೋನಾ ವೈರಸ್ ತುಂಬಾ ಡೇಂಜರ್
ಎನಿಸುತ್ತಿದೆ. ನಮ್ಮ ದೇಶದ ಜನರು ಹಾಗೂ ಆರ್ಥಿಕತೆಗೆ ಬೆದರಿಕೆ ಹಾಕುವಂತಿದೆ. ಆದರೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದಿದ್ದರು. ಈ ಟ್ವೀಟ್ ಗೆ ಕೇಂದ್ರ ಸರ್ಕಾರ ಕಿಂಚಿತ್ತು ಬೆಲೆ ಕೊಡಲಿಲ್ಲ. ಮಾರ್ಚ್ 15ರಿಂದ ವಿದೇಶಿ ವಿಮಾನ ಹಾರಾಟ ರದ್ದು ಮಾಡಿದ ಕೇಂದ್ರ ಸರ್ಕಾರ, ಮಾರ್ಚ್ 18ರಂದು ವಿದೇಶಗಳಿಗೆ ರಫ್ತಾಗುತ್ತಿದ್ದ ಮಾಸ್ಕ್ ಹಾಗೂ ವೆಂಟಿಲೇಟರ್ ಗಳ ಮೇಲೆ ನಿರ್ಬಂಧ ಹೇರಿತ್ತು. ಇದೀಗ ಲಾಕ್ ಡೌನ್ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ದೇಶದ ಜನರ ಎದುರು ಪ್ರಧಾನಿ ನರೇಂದ್ರ ಮೋದಿ ಕ್ಷಮಾಪಣೆ ಕೇಳುತ್ತಿದ್ದಾರೆ.

Also Read: ‘ಲಾಕ್ ಡೌನ್’ ಸಂಕಷ್ಟ ನಿವಾರಣೆಗೆ ಸೋನಿಯಾಗಾಂಧಿ ಮತ್ತು ಚಿದಂಬರಂ ಪ್ರಧಾನಿಗೆ ನೀಡಿದ ಸಲಹೆಗಳೇನು ಗೊತ್ತಾ?

ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ದೇಶವನ್ನು ಲಾಕ್ ಡೌನ್
ಮಾಡಿರುವ ಕಾರಣ ಲಕ್ಷಾಂತರ ಮಂದಿಗೆ ಉಣ್ಣಲು ಅನ್ನ ಸಿಗುತ್ತಿಲ್ಲ. ಹಸಿವಿನಿಂದ ಜೀವನ ನಡೆಸುವಂತಾಗಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 3 ರೂಪಾಯಿ ದರದ ಅಕ್ಕಿ ಇನ್ನು ಜನಸಾಮಾನ್ಯರ ಕೈ ಸೇರಿಲ್ಲ. ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಮುಂದಿನ 2 ತಿಂಗಳ ಅಕ್ಕಿಯನ್ನು ಒಂದೇ ಬಾರಿಗೆ ಕೊಡುವ ನಿರ್ಧಾರವೂ ಇನ್ನೂ ಜಾರಿಯಾಗಿಲ್ಲ. ಆದರೆ ನಮ್ಮ ದೇಶದಿಂದ ಮಾಲ್ಡೀವ್ಸ್ ಗೆ ಪ್ರಮುಖ ಆಹಾರ ಹಾಗೂ ಔಷಧಿಗಳನ್ನು ರಫ್ತು ಮಾಡಲಾಗಿದೆ. ಇದಕ್ಕೆ ಸಾಕ್ಷಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ನಷೀದ್ ಮಾಡಿರುವ ಫೋಟೋ ಟ್ವೀಟ್. ಜೊತೆಗೆ ಈ ರೀತಿಯ ಕಠಿಣ ಪರಿಸ್ಥಿತಿಯಲ್ಲಿ ಭಾರತ ನಮಗೆ ನೆರವು ನೀಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಮಾಲ್ಡೀವ್ಸ್
ನಲ್ಲಿ ಇಲ್ಲೀವರೆಗೂ ಪತ್ತೆಯಾಗಿರುವ ಕರೋನಾ ವೈರಸ್

ಸೋಂಕಿನ ಸಂಖ್ಯೆ ಕೇವಲ 17, ಅದರಲ್ಲಿ 13 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಉಳಿದಿದ್ದು ಕೇವಲ 4 ಜನರು ಮಾತ್ರ ಟ್ರೀಟ್ ಮೆಂಟ್ ಪಡೆಯುತ್ತಿದ್ದಾರೆ. ಅಂದರೆ ನಮ್ಮ ದೇಶಕ್ಕಿಂತಲೂ ಮಾಲ್ಡೀವ್ಸ್ ತುಂಬಾ ಉತ್ತಮ ಪರಿಸ್ಥಿತಿಯಲ್ಲಿದೆ. ನಮ್ಮ ದೇಶದಲ್ಲೇ ಪರಿಸ್ಥಿತಿ ಹದಗೆಟ್ಟಿರುವಾಗ ಬೇರೆ ದೇಶಕ್ಕೆ ಸಹಾಯ ಹಸ್ತ ಚಾಚಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಎದುರಾಗಿದೆ. ಸಹಾಯ ಮಾಡುವುದು ಮಾನವೀಯ ಧರ್ಮ. ಅದರಲ್ಲೂ ನಮ್ಮ ಭಾರತದ ಸಂಸ್ಕೃತಿ. ಆದರೆ ನಮಗೇ ತಿನ್ನಲು ಅನ್ನ ಇಲ್ಲದಿರುವಾಗ ಎನ್ನುವುದು ಯೋಚಿಸಬೇಕಾದ ವಿಚಾರ.

ಸಹಾಯದ ವಿಚಾರ ಒಂದು ಕಡೆಗೆ ಇರಲಿ. ಕರೋನಾ ವೈರಸ್ ರಾಜ್ಯಕ್ಕೆ ದಾಂಗುಡಿ ಇಟ್ಟ ಕೂಡಲೇ ಆರೋಗ್ಯ ಸಚಿವರು ನಾಪತ್ತೆಯಾಗಿದ್ದರು. ಮಾಧ್ಯಮಗಳು ಆರೋಗ್ಯ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡಿದಾಗ ಸಿಕ್ಕಿದ್ದು, ಮಗಳ ಮದುವೆಯಲ್ಲಿ ಬ್ಯುಸಿ ಎನ್ನುವ ಉತ್ತರ. ಆರೋಗ್ಯ ಸಚಿವರು ಕರೋನಾ ವೈರಸ್ ಪತ್ತೆಯಾದ ಮೇಲೂ ಮದುವೆ ತುಂಬಾ ಸರಳವಾಗಿರಲಿ, ನೂರು ಜನರ ಸಂಖ್ಯೆ ಮೀರುವುದು ಬೇಡ ಎಂದು ಸಿಎಂ ಆದೇಶ ಮಾಡಿದ ಬಳಿಕವೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿ ಮದುವೆ ಕಾರ್ಯಕ್ರಮ ನಡೀತು. ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರುಮುಖದಲ್ಲಿ ಸಾಗುತ್ತಿದ್ದರೂ ವಾರದ ಕಾಲ ಆರೋಗ್ಯ ಸಚಿವರು ತಿರುಗಿಯೂ ನೋಡಲಿಲ್ಲ. ಆ ಬಳಿಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ನಾನು ನೋಡಿಕೊಳ್ತಿದ್ದೇನೆ, ಎಂದು ಬಂದರು. ಆಗ ಯಾವ ಇಲಾಖೆ ಕರೋನಾ ವೈರಸ್
ಸೋಂಕಿನ ಬಗ್ಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಚಿವರು ಕಿತ್ತಾಡಿಕೊಂಡರು. ಆರೋಗ್ಯ ಇಲಾಖೆ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳ ಜವಾಬ್ದಾರಿ, ವೈದ್ಯಕೀಯ ಶಿಕ್ಷಣ ಇಲಾಖೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಎಂದು ವಿಂಗಡಿಸಿದ್ದು, ಇನ್ನೂ ಕೂಡ ಗೊಂದಲ ಬಗೆಹರಿದಿಲ್ಲ.

ಯಾರೂ ಹೇಗಾದರೂ ಕೆಲಸ ಮಾಡಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜವಾಬ್ದಾರಿಯುತವಾಗಿ ಕೆಲಸ ಮಾಡದಿದ್ದರೂ ಪರವಾಗಿಲ್ಲ. ಜನರೇ ನೀವು ಮಾತ್ರ ಮನೆಯಿಂದ ಹೊರಕ್ಕೆ ಬರದಿರಿ. ಕರೋನಾ ವೈರಸ್ ನಿಂದ ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕು. ಸರ್ಕಾರಗಳು ಸತ್ತ ಮೇಲೆ ಲೆಕ್ಕಕ್ಕೆ ಬರುವಂತಿದೆ.

Tags: Central Health MinisterCorona VirusDr harshwardhanPM Narendra Modiಕರೋನಾ ಸೋಂಕುಕೇಂದ್ರ ಆರೋಗ್ಯ ಮಂತ್ರಿ
Previous Post

ಕರೋನಾ ಕಾಲದಲ್ಲೂ ವರ್ಚಸ್ಸು ವೃದ್ಧಿಯ ಖಯಾಲಿಗೆ ‘ಪಿಎಂ ಕೇರ್ಸ್’?

Next Post

ʼವರ್ಕ್‌ ಫ್ರಂ ಹೋಮ್‌ʼ – ʼವರ್ಕ್‌ ಫಾರ್‌ ಹೋಮ್‌ʼ ; ಉದ್ಯೋಗಸ್ಥ ಗೃಹಿಣಿಯರಿಗೆ ಕರೋನಾ ತಂದಿಟ್ಟ ಫಜೀತಿ..!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ʼವರ್ಕ್‌ ಫ್ರಂ ಹೋಮ್‌ʼ - ʼವರ್ಕ್‌ ಫಾರ್‌ ಹೋಮ್‌ʼ ; ಉದ್ಯೋಗಸ್ಥ ಗೃಹಿಣಿಯರಿಗೆ ಕರೋನಾ ತಂದಿಟ್ಟ ಫಜೀತಿ..!

ʼವರ್ಕ್‌ ಫ್ರಂ ಹೋಮ್‌ʼ - ʼವರ್ಕ್‌ ಫಾರ್‌ ಹೋಮ್‌ʼ ; ಉದ್ಯೋಗಸ್ಥ ಗೃಹಿಣಿಯರಿಗೆ ಕರೋನಾ ತಂದಿಟ್ಟ ಫಜೀತಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada