• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?

by
December 10, 2019
in ರಾಜಕೀಯ
0
ಕರ್ನಾಟಕ ರಾಷ್ಟ್ರೀಯ ಟ್ರೆಂಡ್ ಗೆ ವಿರುದ್ಧವೇಕೆ?
Share on WhatsAppShare on FacebookShare on Telegram

ಕರ್ನಾಟಕ ಉಪಚುನಾವಣೆಯ ಫಲಿತಾಂಶದ ಮೂಲಕ ಬಿಜೆಪಿ ತನ್ನ ಪ್ರಭುತ್ವವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಕಮಲ ಪಾಳೆಯದ ಪರವಾದ ಫಲಿತಾಂಶ ಹೊರಬೀಳುವುದರೊಂದಿಗೆ ಐತಿಹಾಸಿಕ ಘಟನೆಯೊಂದು ಮುಂದುವರಿದಿದೆ. ಇಡೀ ದೇಶವೇ ಒಂದು ರೀತಿಯಲ್ಲಿ ವರ್ತಿಸಿದರೆ ಕರ್ನಾಟಕ ಕೇಂದ್ರದಲ್ಲಿರುವ ಆಡಳಿತ ಪಕ್ಷದ ಪರವಾಗಿಯೇ ವರ್ತಿಸುತ್ತಿರುವುದು ವಾಡಿಕೆಯಾಗಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಮೂರು ದಶಕಗಳ ಮಿತ್ರ ಬಿಜೆಪಿಯನ್ನು ಹೊರಗಿಟ್ಟು ಸರ್ಕಾರ ರಚಿಸಿ ಶಿವಸೇನೆಯು ಬಿಜೆಪಿಗೆ ಮರ್ಮಾಘಾತ ನೀಡಿತ್ತು. ಸಮಕಾಲೀನ ಭಾರತದ ಪ್ರಚಂಡ ಜೋಡಿ ಮೋದಿ-ಶಾ ಗೆ ತೀವ್ರ ಮುಖಭಂಗ ಉಂಟು ಮಾಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ವಿರುದ್ಧ ಅಸಹನೆಯ ಕಿಚ್ಚು ಹೇಳುವಂತೆ ಮಾಡುವಲ್ಲಿ ಶಿವಸೇನೆ-ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಗಡಿ ಸರ್ಕಾರ ಯಶಸ್ವಿಯಾಗಿದೆ.

ADVERTISEMENT

ಈ ಮಧ್ಯೆದಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಹುತೇಕ ಕಡೆ ಬಿಜೆಪಿಯ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ. ಆದರೆ, ಕರ್ನಾಟಕದಲ್ಲಿ ಮಾತ್ರ ಬಿಜೆಪಿಯ ವಿರುದ್ಧ ಅಸಹನೆಯಿಲ್ಲ ಎಂಬ ಅಂಶವನ್ನು ಉಪಸಮರದ ಫಲಿತಾಂಶ ಸ್ಪಷ್ಟವಾಗಿ ರವಾನಿಸಿದೆ. ಜೂನ್ ನಲ್ಲಿ ಕಾಂಗ್ರೆಸ್-ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 17 ಮಂದಿಯಿಂದ ರಾಜೀನಾಮೆ ಕೊಡಿಸಿದ ಬಿಜೆಪಿಯು ಮೈತ್ರಿ ಸರ್ಕಾರವನ್ನು ಪತನಗೊಳಿಸಿತ್ತು. ಅತೃಪ್ತ ಶಾಸಕರನ್ನು ಮುಂಬೈನ ಪಂಚತಾರ ಹೋಟೆಲ್ ನಲ್ಲಿ ಇಟ್ಟು ಮೈತ್ರಿ ಸರ್ಕಾರವನ್ನು ಅಲ್ಪ ಮತಕ್ಕೆ ಕುಸಿಯುವಂತೆ ಮಾಡಿದ ಬಿಜೆಪಿಯ ಕೇಂದ್ರ ನಾಯಕರು ಕರ್ನಾಟಕದಲ್ಲಿ ಅಧಿಕಾರ ಹಿಡಿಯುವಲ್ಲಿ ಸಫಲರಾಗಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಕರ್ನಾಟಕದ ಅರ್ಧಕ್ಕೂ ಮಿಕ್ಕಿದ ಜಿಲ್ಲೆಗಳ ಜನರು ಪ್ರವಾಹಕ್ಕೆ ತುತ್ತಾಗಿ ಯಾತನೆ ಅನುಭವಿಸುವಂತಾಯಿತು.‌ ಈ ಸಂದರ್ಭದಲ್ಲಿ ಏಕ ಸದಸ್ಯ ಸಂಪುಟ ಸಭೆ ನಡೆಸಿ ಹಲವು ತೀರ್ಮಾನಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೈಗೊಂಡರೂ ಸಚಿವ ಸಂಪುಟವಿಲ್ಲದ ಸರ್ಕಾರ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಕೇಂದ್ರ ಸರ್ಕಾರವೂ ನಿರೀಕ್ಷಿತ ಪ್ರಮಾಣದಲ್ಲಿ ಬಿಎಸ್ವೈ ಗೆ ಬೆಂಬಲ ನೀಡದೇ ಸತಾಯಿಸಿದ್ದನ್ನೂ ರಾಜ್ಯ ಕಂಡಿದೆ. ಇಷ್ಟೆಲ್ಲಾ ಘಟನೆಗಳಿಗೆ ಬಿಜೆಪಿ ಸರ್ಕಾರ ಸಾಕ್ಷಿಯಾದರೂ ಜನಾಭಿಪ್ರಾಯ ಅದೇ ಪಕ್ಷದ ಪರವಾಗಿ ಬರುತ್ತದೆ ಎನ್ನುವುದಾದರೆ‌ ಅದನ್ನು ಅರ್ಥೈಸಿಕೊಳ್ಳಬೇಕಾದ ಬಗೆ ಯಾವುದು?

1970ರ ದಶಕದಲ್ಲಿ ಭಾರತ ಎಂದೂ ಕಂಡರಿಯದ ವಿದ್ಯಮಾನಕ್ಕೆ ಸಾಕ್ಷಿಯಾಗಿತ್ತು.‌ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ಕೋರ್ಟ್ ಅನರ್ಹಗೊಳಿಸಿತ್ತು. ಇದನ್ನು ದಿಕ್ಕರಿಸಿದ್ದ ಇಂದಿರಾ ತುರ್ತು ಪರಿಸ್ಥಿತಿ‌ ಘೋಷಿಸಿ ದೇಶವನ್ನು ಕತ್ತಲೆಯ ಕೂಪಕ್ಕೆ ನೂಕಿದ್ದರು.‌ ಭಾರತದ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ಉಳಿದಿರುವ ತುರ್ತು ಪರಿಸ್ಥಿತಿಯ ನಂತರ ನಡೆದ ಹಲವು ರಾಜ್ಯಗಳ ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಇಂದಿರಾ ಕಾಂಗ್ರೆಸ್ ನೆಲ ಕಚ್ಚಿತ್ತು. ಆದರೆ, ಕರ್ನಾಟಕ ಕಂಡ ಅಪ್ರತಿಮ ರಾಜಕಾರಣಿ ಡಿ. ದೇವರಾಜ ಅರಸು ನೇತೃತ್ವದ ಕಾಂಗ್ರೆಸ್ ಕರ್ನಾಟಕದಲ್ಲಿ ವಿಜಯದುಂದುಭಿ ಹಾರಿಸುವ ಮೂಲಕ ಅಧಿಕಾರ ಹಿಡಿದಿತ್ತು. ತುರ್ತು ಪರಿಸ್ಥಿತಿ‌ ಹೇರಿದ ಸರ್ವಾಧಿಕಾರಿ‌ಇಂದಿರಾ ಗಾಂಧಿ ಮನೋಭಾವವನ್ನು ಲೆಕ್ಕಿಸದ ಕರ್ನಾಟಕ ಕಾಂಗ್ರೆಸ್ ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿತ್ತು. ಅರಸು ಆಡಳಿತದಲ್ಲಿ ಜಾರಿಗೊಂಡಿದ್ದ ಹಲವು ಸುಧಾರಣೆಗಳಿಂದ ಪ್ರೇರಿತಗೊಂಡಿದ್ದ ಕರ್ನಾಟಕದ ಜನತೆ ಅವರನ್ನು ನೋಡಿ ಮತನೀಡಿದ್ದರೆ ವಿನಾ ಇಂದಿರಾ ಗಾಂಧಿಯನ್ನಲ್ಲ ಎಂಬುದು ವಾಸ್ತವ. ಆದರೆ, ಯಡಿಯೂಪ್ಪನವರ ಸರ್ಕಾರದ ವಿಚಾರದಲ್ಲಿ ಈ ಮಾತನ್ನು ಹೇಳಲಾಗದು. ಕಾರಣ ಬೇರೆ ಇದ್ದರೂ ಐತಿಹಾಸಿಕವಾಗಿ ಕರ್ನಾಟಕವು ರಾಷ್ಟ್ರ ಮತ್ತು ರಾಜ್ಯದ ರಾಜಕಾರಣದ ವಿಷಯದಲ್ಲಿ ವಿಭಿನ್ನ ನಿಲುವು ತಳೆಯುತ್ತಾ ಬಂದಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿಯೂ ಕರ್ನಾಟಕದ ಜನತೆ ಬಿಜೆಪಿ ಅಥವಾ ಇನ್ಯಾವುದೇ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿರಲಿಲ್ಲ. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಷ್ಟ್ರರಾಜಕಾರಣದಲ್ಲಿ ಬದಲಾವಣೆಯಾಗಬಹುದು ಎಂಬುದನ್ನು ಅರಿತು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸರ್ಕಾರ ರಚಿಸಿದ್ದವು. ಆದರೆ, ಹಲವು ವಿಚಾರಗಳಲ್ಲಿ ವಿಭಿನ್ನ ನಿಲುವು ಹೊಂದಿರುವ ಕಾಂಗ್ರೆಸ್-ಜೆಡಿಎಸ್ ತಮ್ಮ ಪಕ್ಷಗಳ ಶಾಸಕರ ಅಧಿಕಾರ ದಾಹ ತೀರಿಸುವಲ್ಲಿ ವಿಫಲವಾಗಿದ್ದವು. ಇದರ ನಿರೀಕ್ಷೆಯಲ್ಲಿದ್ದ ಬಿಜೆಪಿಯು ಸರ್ಕಾರ ಪತನಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಕೇಂದ್ರ ನಾಯಕತ್ವದ ಮೂಲಕ ಮಾಡಿಸಿ ಕುಮಾರಸ್ಚಾಮಿ ಸರ್ಕಾರ ಕೆಡವಿತ್ತು. ಈಗ ಬಲವಂತವಾಗಿ ಜಾರಿಗೊಳಿಸಲಾದ ಉಪಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿ, ಗೆದ್ದು ಬೀಗಿದೆ. ಇದಕ್ಕಾಗಿ ನೂರಾರು ಕೋಟಿ ರುಪಾಯಿಗಳನ್ನು ವೆಚ್ಚ ಮಾಡಿರುವುದು ಗುಟ್ಟಿನ ವಿಚಾರವೇನಲ್ಲ. ಬಿಜೆಪಿಯ ವರ್ಚಸ್ಸನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಎದುರಾಗಬಹುದಾದ ಮುಜುಗರವನ್ನು ತಪ್ಪಿಸಿಕೊಳ್ಳಲು ಬಿಜೆಪಿ ಉಪ ಸಮರದ ಹೋರಾಟದಲ್ಲಿ ಗೆಲ್ಲಬೇಕಾಗಿದ್ದು ಅನಿವಾರ್ಯವಾಗಿತ್ತು. ಇಲ್ಲವಾದಲ್ಲಿ ರಾಜ್ಯ ಸರ್ಕಾರ ಪತನದ ಜೊತೆಗೆ ಮೋದಿ-ಶಾ‌ ಜೋಡಿಗೆ ಮತ್ತೊಮ್ಮೆ‌ ತೀವ್ರ ಮುಖಭಂಗವಾಗಿತ್ತು. ಇಷ್ಟು ಮಾತ್ರಕ್ಕೆ ಬಿಜೆಪಿಯ ಪೀಕಲಾಟ ನಿಲ್ಲುವುದಿಲ್ಲ. ಇಷ್ಟು ದಿನ ಕಾಂಗ್ರೆಸ್ ಅನ್ನು ಕಾಡುತ್ತಿದ್ದ ಮೂಲ ಮತ್ತು ವಲಸೆ ಬಂದವರು ಎನ್ನುವ ಸಂಕಥನ ಬಿಜೆಪಿಯ ಬೆನ್ನು ಬೀಳಬಹುದು. ಆಂತರಿಕ ಭಿನ್ನಮತ ತಾರಕಕ್ಕೇರಿದರೆ ಸಹಜವಾಗಿ ಯಡಿಯೂರಪ್ಪ ಸರ್ಕಾರ ಉಳಿಯುವುದು ದುರ್ಲಭವಾಗಲಿದೆ.

Tags: Amit ShaBJPBJP GovernmentBS YeddyurappabypollsCandidateHD KumaraswamyJDSKarnatakaNarendra ModiSiddaramiahಅಮಿತ್ ಶಾಉಪ ಚುನಾವಣೆಎಚ್ ಡಿ ಕುಮಾರಸ್ವಾಮಿಕರ್ನಾಟಕಕಾಂಗ್ರೆಸ್ಜೆಡಿಎಸ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ ಪಕ್ಷಬಿಜೆಪಿ ಸರ್ಕಾರಸಿದ್ದರಾಮಯ್ಯ
Previous Post

ಪಕ್ಷಾಂತರ ನಿಷೇಧ ಕಾಯ್ದೆ ಕಠಿಣವಾಗಲಿ: ಸಂತೋಷ್ ಹೆಗ್ಡೆ

Next Post

ಕೆಲ ಧರ್ಮಗಳ ತುಷ್ಠೀಕರಣಕ್ಕೆ ಪೌರತ್ವ ಮಸೂದೆ ತಿದ್ದುಪಡಿ?

Related Posts

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
0

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
Next Post
ಕೆಲ ಧರ್ಮಗಳ ತುಷ್ಠೀಕರಣಕ್ಕೆ ಪೌರತ್ವ ಮಸೂದೆ ತಿದ್ದುಪಡಿ?

ಕೆಲ ಧರ್ಮಗಳ ತುಷ್ಠೀಕರಣಕ್ಕೆ ಪೌರತ್ವ ಮಸೂದೆ ತಿದ್ದುಪಡಿ?

Please login to join discussion

Recent News

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
January 9, 2026
“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

January 9, 2026
“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada