• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಲಿಟ್ಟಲ್ಲೆಲ್ಲಾ ಕರಿಬೇವು: ಮಲೆನಾಡಿನಲ್ಲೊಂದು ಭೀಮನ ಕಾಲದ ಬೇವಿನ ಬೆಟ್ಟ

by
February 14, 2020
in ಕರ್ನಾಟಕ
0
ಕಾಲಿಟ್ಟಲ್ಲೆಲ್ಲಾ ಕರಿಬೇವು: ಮಲೆನಾಡಿನಲ್ಲೊಂದು ಭೀಮನ ಕಾಲದ ಬೇವಿನ ಬೆಟ್ಟ
Share on WhatsAppShare on FacebookShare on Telegram

ಪಶ್ಚಿಮಘಟ್ಟ ಕಾಡುಗಳಲ್ಲಿ ಸಾವಿರಾರು ಜಾತಿಯ ಸಸ್ಯ ಪ್ರಬೇಧಗಳಿವೆ. ಅರ್ಧ ಅಡಿಗೊಂದು ಭಿನ್ನ ಜಾತಿಯ ಮರಗಳು ಇರುತ್ತವೆ, ಸ್ವಾಭಾವಿಕವಾಗಿ ಬೆಳೆದುಕೊಂಡ ಕಾಡಿನ ಸುತ್ತ ಕಣ್ಣಾಡಿಸಿದರೆ ಒಂದೇ ಜಾತಿಯ ಮರಗಳು ಹತ್ತಾರು ಒಟ್ಟಿಗೆ ಸಿಗುವುದು ಬಹಳ ಅಪರೂಪ, ಅಂತಹದರಲ್ಲಿ ಕಿಲೋಮೀಟರ್‌ಗಳಷ್ಟು ದೂರ ಕಾಡಿನೊಳಗೆ ಕರಿಬೇವು ಹುಲುಸಾಗಿ ಬೆಳೆದುಕೊಂಡಿದ್ದರೆ ಹೇಗಿರುತ್ತೆ ಊಹಿಸಿ. ಈ ಸೊಬಗನ್ನ ನೋಡಬೇಕಾದರೆ ಮಲೆಘಟ್ಟದ ದಟ್ಟಕಾನನದೊಳಗೆ ನುಸುಳಲೇಬೇಕು.

ADVERTISEMENT

ಶಿವಮೊಗ್ಗ ಮೂಲದ ಪರಿಸರ ಹೋರಾಟಗಾರ ಅಜಯ್‌ಕುಮಾರ್‌ ಶರ್ಮಾ ಕರಿಬೇವಿನ ಕಾಡಿನ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು, ಅವರ ಲೇಖನ ಹೀಗಿತ್ತು., ದಕ್ಷಿಣ ಭಾರತದಲ್ಲಿ ಸಾವಿರಾರು ಹಳ್ಳಿಗಳಲ್ಲಿ ಪಂಚ ಪಾಂಡವರಿಗೆ ಸಂಬಂಧಿಸಿದ ಹಲವಾರು ರೋಚಕ ಕಥೆಗಳು ಸಿಗುತ್ತದೆ. ನಮ್ಮ ಪಶ್ಚಿಮ ಘಟ್ಟದ ಹೃದಯವಾಗಿರುವ ಶಿವಮೊಗ್ಗ ಸಹ ಅಂತಹ ಕಥೆಗಳಿಗೆ ಸಾಕ್ಷಿಯಾಗಿದೆ.

ಪಾಂಡವರು ತಮ್ಮ ವನವಾಸದ ಸಮಯದಲ್ಲಿ ಸ್ವಲ್ಪ ಕಾಲ ಹೊಸನಗರದ ಶರಾವತಿಯ ದಂಡೆಯ ಮೇಲೆ ವಾಸವಿದ್ದರು, ಭಾರತದ ಸರ್ವಶ್ರೇಷ್ಠ ನಳಪಾಕನಾಗಿದ್ದ ಭೀಮಸೇನ ತನ್ನ ಪಕ್ವಾನಗಳು ರುಚಿಕರವಾಗಿರಲು ಅದಕ್ಕೆ ಸ್ವಾಭಾವಿಕವಾಗಿ ಕರಿಬೇವಿನ ಸೊಪ್ಪು ಹಾಕುತ್ತಿದ್ದ. ಭೀಮಸೇನ ತನ್ನ ಹಸ್ತದಿಂದ ನೀರು ಹಾಕಿ ಪೋಷಿಸಿದ ಕರಿಬೇವು, ಕಾಲಾಂತರದಲ್ಲಿ ನೂರಾರು ಹೆಕ್ಟೇರುಗಳಷ್ಟು ವಿಸ್ತರಿಸಿಕೊಂಡು ಕರಿಬೇವಿನ ಕಾಡಾಗಿ ಪರಿವರ್ತನೆಯಾಗಿದೆ, ಶರಾವತಿಗೆ ಅಡ್ಡಲಾಗಿ ಕಟ್ಟಲಾದ ಲಿಂಗನಮಕ್ಕಿ ಆಣೆಕಟ್ಟು, ಇತ್ತೀಚಿನ ದಿನಗಳಲ್ಲಿ ಆಗಿರುವ ಒತ್ತುವರಿಯಿಂದಾಗಿ ಭೀಮಸೇನನ ಈ “ಕರಿಬೇವಿನ ಕಾಡು” ಕೇವಲ ಕೆಲವೇ ಕೆಲವು ಎಕರೆಗಳಿಗೆ ಸೀಮಿತವಾಗಿದೆ. ಇಂದಿಗೂ ಸಹ ಈ ಕಾಡಿನೊಳಗೆ ಹೋದ ತಕ್ಷಣ ನಮ್ಮ ಮೂಗು ಘಮ್ ಎನ್ನುವ ಪರಿಮಳಕ್ಕೆ ಮಾರುಹೋಗುವುದು. ಎಲ್ಲಿ ನೋಡಿದರೂ ನಮಗೆ ಕಾಣಿಸುವುದು ಕೇವಲ ಕರಿಬೇವಿನ ಮರಗಳೇ.

ಅಜಯ್‌ ಕುಮಾರ್‌ ಶರ್ಮಾ ಅವರ ಲೇಖನದ ಜಾಡು ಹಿಡಿದು ಹೊರಟಾಗ ಸಿಕ್ಕಿದ್ದು ಸಂಕೂರು ಎಂಬ ಗ್ರಾಮ, ಹೊಸನಗರ ತಾಲೂಕು ಕೇಂದ್ರದಿಂದ ಎಂಟು ಕಿಲೋಮೀಟರ್‌ ಅಂತರದಲ್ಲಿರುವ ಪಟ್ಟಹಳ್ಳಿ, ಅಲ್ಲಿ ಮೂರು ಹಾದಿ ಕೂಡುವ ಪುಟ್ಟದೊಂದು ಸರ್ಕಲ್‌ ಇದೆ, ಬಲಕ್ಕೆ ತಿರುವಿಕೊಂಡರೆ ಸೀದಾ ಪಟ್ಟುಗುಪ್ಪ ಸೇತುವೆಗೆ ಹೋಗಬಹುದು, ಎಡಕ್ಕೆ ಧೂಮ ಎಂಬ ಪುಟ್ಟ ಗ್ರಾಮದ ಬಳಿಯಲ್ಲಿ ಶರಾವತಿ ಹಿನ್ನೀರಿನ ದಿಕ್ಕಿಗೆ ಕಾಲು ಹಾದಿಗಳಲ್ಲಿ ಸಾಗಿದರೆ ಈ ಬೇವಿನ ಬೆಟ್ಟ ಎದುರಾಗುತ್ತದೆ.

ಇದು ಹರಿದ್ರಾವತಿ ಮತ್ತು ಶರಾವತಿ ನದಿಗಳು ಸೇರುವ ಪುಣ್ಯ ಸಂಗಮ ಕ್ಷೇತ್ರವಾಗಿದ್ದು ಅಕ್ಕಪಕ್ಕದ ಅರಣ್ಯ ಪ್ರದೇಶಗಳಲ್ಲಿ ಪಾಂಡವರು ವಾಸಿಸಿದರು ಎಂದು ಸ್ಥಳ ಪುರಾಣಗಳಿಂದ ತಿಳಿದು ಬರುತ್ತದೆ ಎನ್ನುತ್ತಾರೆ ಅಜಯ್‌ ಶರ್ಮಾ. ಶರಾವತಿ ಕಣಿವೆಯಲ್ಲಿ ದಿನೇ ದಿನೇ ಒತ್ತುವರಿಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಬೇವಿನ ಕಾಡು ಕೂಡ ತನ್ನ ಕುರುಹುಗಳನ್ನ ಹಾಗೂ ಐತಿಹಾಸಿಕ ಹಿನ್ನೆಲೆಯನ್ನ ಕಳೆದುಕೊಳ್ಳಲಿದೆ ಎಂಬುದು ಪರಿಸರವಾದಿಗಳ ಆತಂಕ, ಸರ್ಕಾರ ಹಾಗೂ ಅರಣ್ಯ ಇಲಾಖೆ ಗಮನ ಹರಿಸುವ ಅನಿವಾರ್ಯ ಇದೆ.

Tags: ShivamoggaWestern Ghatsಕರಿಬೇವುಭೀಮ
Previous Post

ನಿರ್ಭಯಾ ಅತ್ಯಾಚಾರ ಪ್ರಕರಣ: ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಪ್ರಕರಣದ ಘಟನಾವಳಿಗಳ ಸಂಪೂರ್ಣ ವಿವರ

Next Post

ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ… ಕಿಚ್ಚಿನಲ್ಲೂ ಲಾಭದ ಲೆಕ್ಕ?!   

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
Next Post
ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ... ಕಿಚ್ಚಿನಲ್ಲೂ ಲಾಭದ ಲೆಕ್ಕ?!    

ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ... ಕಿಚ್ಚಿನಲ್ಲೂ ಲಾಭದ ಲೆಕ್ಕ?!   

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada