• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದಲ್ಲಿ ರೈತರ ಕಣ್ಣಿಗೆ ಮಣ್ಣೆರಚಿದ ಕಾಂಗ್ರೆಸ್‌ ಸರ್ಕಾರ!

by
February 22, 2020
in ದೇಶ
0
ಕೃಷಿ ಸಾಲ ಮನ್ನಾ: ಮಧ್ಯಪ್ರದೇಶದಲ್ಲಿ ರೈತರ ಕಣ್ಣಿಗೆ ಮಣ್ಣೆರಚಿದ ಕಾಂಗ್ರೆಸ್‌ ಸರ್ಕಾರ!
Share on WhatsAppShare on FacebookShare on Telegram

ಮಧ್ಯ ಪ್ರದೇಶದಲ್ಲಿಅಧಿಕಾರಕ್ಕೆ ಬಂದರೆ ಹತ್ತು ದಿನಗಳ ಒಳಗಾಗಿ ರೈತರ ಕೃಷಿ ಸಾಲ ಮನ್ನಾ ಮಾಡುವ ಭರವಸೆಯನ್ನು ನೀಡಿ ಡಿಸೆಂಬರ್‌ 2018ರಲ್ಲಿ ಗದ್ದುಗೆ ಏರಿದ್ದ ಕಾಂಗ್ರೆಸ್‌ ಸರ್ಕಾರ ಇಂದಿನವರೆಗೂ ತನ್ನ ಭರವಸೆಯನ್ನು ಈಡೇರಿಸದೇ, ರೈತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ಈವರೆಗೆ ಸಾಲ ಮನ್ನಾ ಮಾಡುತ್ತೇವೆಂದು ಕೇವಲ ಪೇಪರ್‌ಗಳನ್ನು ತೋರಿಸಿ ಹೇಳಿಕೆಗಳನ್ನು ನೀಡುತ್ತಿದ್ದ ಕಮಲ್‌ನಾಥ್‌ ನೇತೃತ್ವದ ಸರ್ಕಾರದಿಂದ ಇನ್ನೂ 50 ಶೇಕಡಾ ರೈತರ ಸಾಲವನ್ನು ಮನ್ನಾ ಮಾಡಲಾಗಲಿಲ್ಲ.

ಕಮಲ್‌ನಾಥ್‌ ಅಧಿಕಾರ ವಹಿಸಿಕೊಂಡ ಎರಡನೇ ದಿನಕ್ಕೆ ಕೃಷಿ ಸಾಲ ಮನ್ನಾ ಮಾಡುವ ಯೋಜನೆಗೆ ಸಹಿ ಹಾಕಿದ ನಂತರ ಆಗಿನ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಎದೆಯುಬ್ಬಿಸಿ ಟ್ವೀಟ್‌ ಮಾಡಿದ್ದರು. ಹತ್ತು ದಿನಗಳನ್ನು ಕೇಳಿದ್ದೆವು, ಆದರೆ ಎರಡೇ ದಿನದಲ್ಲಿ ಮಧ್ಯ ಪ್ರದೇಶ್‌, ಛತ್ತೀಸ್‌ಘಡ್‌ ಹಾಗೂ ರಾಜಸ್ತಾನದಲ್ಲಿ ಸಾಲ ಮನ್ನಾ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ, ಮಧ್ಯ ಪ್ರದೇಶದ Ground Reality ನೋಡಿದರೆ ರಾಹುಲ್‌ ಗಾಂಧಿ ಮಾತಿಗೆ ತದ್ವಿರುದ್ದವಾಗಿದೆ. 36,500 ಕೋಟಿ ರೂಪಾಯಿಗಳನ್ನು ಈ ಯೋಜನೆಗೆ ಸರ್ಕಾರ ಮೀಸಲಿಡಬೇಕಿತ್ತು. ಸರ್ಕಾರ ಮೀಸಲಿಟ್ಟಿದ್ದು ಬರೀ 13,000ಕೋಟಿಯಷ್ಟೇ.

It's done!

Rajasthan, Madhya Pradesh & Chhattisgarh have waived farm loans.

We asked for 10 days.

We did it in 2.

— Rahul Gandhi (@RahulGandhi) December 19, 2018


ADVERTISEMENT

ಇನ್ನು ಮುಖ್ಯಮಂತ್ರಿ ಕಮಲ್‌ನಾಥ್‌ ಹೇಳುವ ಪ್ರಕಾರ ರೈತರ ಸಾಲವನ್ನು ಮೂರು ಹಂತಗಳಲ್ಲಿ ಮನ್ನಾ ಮಾಡುವ ಯೋಜನೆ ಮಧ್ಯ ಪ್ರದೇಶದ ಕಾಂಗ್ರೆಸ್‌ ಹೊಂದಿದೆ. ಮೊದಲ ಹಂತದಲ್ಲಿ 50,000ರೂ. ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು, ಎರಡನೇ ಹಂತದಲ್ಲಿ 50,000 – 1,00,000ರೂ. ವರೆಗಿನ ಸಾಲ ಮನ್ನಾ ಮಾಡಲಾಗುವುದು ಹಾಗೂ ಮೂರನೇ ಹಂತದಲ್ಲಿ 1,00,000 – 2,00,000 ರೂ. ವರೆಗಿನ ಸಾಲ ಮನ್ನಾ ಮಾಡಲಾಗುವುದು. ಈಗಾಗಲೇ ಮೊದಲ ಹಂತ ಮುಗಿದಿದ್ದು ಸುಮಾರು 21 ಲಕ್ಷ ರೈತರ 50,000 ವರೆಗಿನ ಕೃಷಿ ಸಾಲ ಮನ್ನಾ ಆಗಿದೆ ಎಂದು ಮಧ್ಯಪ್ರದೇಶ ಸರ್ಕಾರ ವಿವರ ನೀಡಿದೆ. ಹಾಗಾದಲ್ಲಿ ಮನ್ನಾ ಆಗಿದ್ದು 10,500ಕೋಟಿ ರೂ. ಮಾತ್ರ. ಕೇವಲ ಹತ್ತೇ ದಿನಗಳಲ್ಲಿ ಎರಡು ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದ ಕಾಂಗ್ರೆಸ್‌, ಯೋಜನೆಯ ರೂಪು ರೇಷೆಗಳ ಕುರಿತು ಯೋಚಿಸಲೇ ಇಲ್ಲವೇ? ಎನ್ನುವ ಪ್ರಶ್ನೆ ಇಲ್ಲಿ ಉದ್ಬವವಾಗುತ್ತದೆ. ಸದ್ಯಕ್ಕೆ ಎರಡನೇ ಹಂತದ ಸಾಲ ಮನ್ನಾ ಕಾರ್ಯ ಸಾಗುತ್ತಿದೆ. ಮೂರನೇ ಹಂತದ ಸಾಲ ಮನ್ನಾ ಇನ್ನೂ ಶುರುವಾಗುವಾಗಲೇ ಇಲ್ಲ.

37 ಲಕ್ಷ ರೈತರಿಂದ 48ಲಕ್ಷ ಅರ್ಜಿ!

ಮಧ್ಯಪ್ರದೇಶದಲ್ಲಿ ಜಾರಿಯಾಗುತ್ತಿರುವ ಯೋಜನೆಯ ಪ್ರಕಾರ, ಒಂದು ಕುಟುಂಬದ ಒಂದೇ ಸಾಲವನ್ನು ಮನ್ನಾ ಮಾಡಲಾಗುವುದು. ಆದರೆ ಕೆಲವು ರೈತರು, ಒಂದೇ ಕೃಷಿ ಭೂಮಿಯ ದಾಖಲೆಗಳನ್ನು ಬೇರೆ ಬೇರೆ ಬ್ಯಾಂಕುಗಳಿಗೆ ನೀಡಿ ಹೆಚ್ಚುವರಿ ಸಾಲ ಪಡೆದಿದ್ದಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಅವುಗಳ ವಿಲೇವಾರಿ ಮಾಡುವುದು ಕೂಡಾ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಗಳ ಕುರಿತ ಅರ್ಜಿ ವಿಲೇವಾರಿ ಇನ್ನೂ ಬಾಕಿ ಇದ್ದು ಸಹಕಾರಿ ಹಾಗೂ ಗ್ರಾಮೀಣ ಬ್ಯಾಂಕುಗಳ ಅರ್ಜಿಯನ್ನು ಮಾತ್ರ ಈವರೆಗೆ ವಿಲೇವಾರಿ ಮಾಡಲಾಗಿದೆ. ಇನ್ನು ಎರಡನೇ ಹಂತದಲ್ಲಿ ಸಹಕಾರಿ ಹಾಗೂ ಗ್ರಾಮೀಣ ಬ್ಯಾಂಕುಗಳಲ್ಲಿ ಸಾಲ ಮನ್ನಾ ಮಾಡಲು ಹೆಚ್ಚು ಒತ್ತು ನೀಡುತ್ತಿದ್ದು ನಂತರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಸಿಎಂ ಕಮಲ್‌ನಾಥ್‌ ಹೇಳಿದ್ದಾರೆ. ಎರಡನೇ ಹಂತದಲ್ಲಿಯೂ, 7000ಕೋ ರೂಪಾಯಿಗಳಷ್ಟು ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ಮೊದಲನೇ ಹಂತದಲ್ಲೇ ಸಾಲ ಮನ್ನಾ ಆಗಬೇಕಿದ್ದ ಹಲವು ರೈತರಿಗೆ ಇನ್ನೂ ಸಾಲ ಮನ್ನಾ ಆಗಿರುವ ಕುರಿತು ಯಾವುದೇ ಅಧಿಕೃತ ದಾಖಲೆ ನೀಡಿಲ್ಲ. ಈ ಕುರಿತು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ರೈತರೊಬ್ಬರು ಅಳಲು ತೋಡಿಕೊಂಡಿದ್ದು, ಸಾಲ ಮನ್ನಾ ಅಗುತ್ತೆ ಎನ್ನುವ ಕಾರಣಕ್ಕೆ ಸಾಲದ ಕಂತು ಕಟ್ಟಲಿಲ್ಲ. ಈಗ ಚಕ್ರಬಡ್ಡಿ ಕಟ್ಟುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದ್ದಾರೆ. ಇವರಂತೆಯೇ ಹಲವು ರೈತರು ಕೂಡಾ ಈಗ ಚಕ್ರಬಡ್ಡಿಯ ಸುಳಿಯಲ್ಲಿ ಸಿಲುಕಿದ್ದು ಒಳ್ಳೆ ಪೈರು ಮತ್ತು ಬೆಲೆ ಸಿಕ್ಕಿದರೂ ಎಲ್ಲಾ ಕಾಸನ್ನು ಬ್ಯಾಂಕಿಗೆ ಸುರಿಯಬೇಕಾದ ಪರಿಸ್ಥಿತಿ ಎದುರಾಗಿದೆ.

ತಡವಾದಕ್ಕೆ ಕ್ಷಮೆಯಾಚಿಸಿದ ಮಂತ್ರಿ

AICCಯ ಹಿಂದಿನ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ನೀಡಿದ ಭರವಸೆಯನ್ನು ನಮ್ಮಿಂದ ಸಕಾಲದಲ್ಲಿ ಈಡೆರಿಸಲು ಆಗದ್ದಕ್ಕೆ ಕ್ಷಮೆ ಯಾಚಿಸುತ್ತೇನೆಂದು ಮಧ್ಯಪ್ರದೇಶ ಸರ್ಕಾರದ ಮಂತ್ರಿ ಗೋವಿಂದ್‌ ಸಿಂಗ್‌ ಫೆಬ್ರುವರಿ 15ರಂದು ಹೇಳಿದ್ದಾರೆ. ಇವರು ಮೊದಲ ಬಾರಿ ಕ್ಷಮೆ ಯಾಚಿಸುತ್ತಿರುವುದಲ್ಲ. ಈ ಹಿಂದೆ 2019ರ ಸೆಪ್ಟೆಂಬರ್‌ನಲ್ಲಿ ಕೂಡಾ ಸಾಲ ಮನ್ನಾ ಮಾಡಲು ತಡವಾಗಿದ್ದಕ್ಕೆ ಕ್ಷಮೆಯನ್ನು ಕೇಳಿದ್ದರು. ಯೋಜನೆ ಅನುಷ್ಠಾನ ವಿಳಂಬವಾಗಲು ಹಿಂದಿನ ಬಿಜೆಪಿ ಸರ್ಕಾರವನ್ನು ಗೋವಿಂದ್‌ ಸಿಂಗ್‌ ದೂರಿದ್ದಾರೆ.

ಇನ್ನು ಕಮಲ್‌ನಾಥ್‌ ಕೂಡಾ ತಮ್ಮ ಸರ್ಕಾರದ ವೈಫಲ್ಯಕ್ಕೆ ಬಿಜೆಪಿಯೆಡೆಗೆ ಬೊಟ್ಟು ಮಾಡಿ ತೋರಿಸಿದ್ದು ಕಳೆದ ಸರ್ಕಾರ ಬೊಕ್ಕಸವನ್ನು ಖಾಲಿ ಮಾಡಿತ್ತು, ಹಾಗಾಗಿ ಸಾಲ ಮನ್ನಾ ಯೋಜನೆ ಸಕಾಲದಲ್ಲಿ ಅನುಷ್ಠಾನವಾಗಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಬಿಜೆಪಿ ಸರ್ಕಾರ ಬೊಕ್ಕಸವನ್ನು ಬರಿದು ಮಾಡಿ, ಸಾಲದ ಹೊರೆಯನ್ನು ಹೆಚ್ಚಿಸಿದೆ ಎಂದು ಕಮಲ್‌ನಾಥ್‌ ಆರೋಪಿಸಿದ್ದಾರೆ.

ಏನೇ ಆದರೂ, ಹತ್ತು ದಿನಗಳಲ್ಲಿ ಸಾಲ ಮನ್ನಾ ಆಗದೇ ಹೋದಲ್ಲಿ ಮುಖ್ಯಮಂತ್ರಿಯನ್ನೇ ಬದಲಾಯಿಸುತ್ತೇವೆಂದು ಘರ್ಜಿಸಿದ್ದ ರಾಹುಲ್‌ ಗಾಂಧಿ ಈಗ ಈ ವಿಚಾರವಾಗಿ ಮೌನಕ್ಕೆ ಶರಣಾಗಿದ್ದಾರೆ. ಯಾವುದೇ, ರೀತಿಯ ಹೇಳಿಕೆಗಳು ಇನ್ನೂ ಅವರಿಂದ ಬರದೇ ಇರುವುದು ಸರ್ಕಾರದ ವೈಫ್ಯಲ್ಯವನ್ನು ಒಪ್ಪಿಕೊಂಡಂತಾಗುವುದಿಲ್ಲವೇ? ನಿಜವಾದ ವಸ್ತು ಸ್ಥಿತಿಯನ್ನು ಅರಿಯದೇ ವೋಟು ಗಿಟ್ಟಿಸಿಕೊಳ್ಳುವುದಕ್ಕಾಗಿ ರೈತರಿಗೆ ಭರವಸೆ ನೀಡಿದರೆ ಸಾಕೇ? ಅವುಗಳನ್ನು ಸಕಾಲದಲ್ಲಿ ನೆರವೇರಿಸುವುದು ಸರ್ಕಾರದ ಕರ್ತವ್ಯವಲ್ಲವೇ? ಇನ್ನುವ ಪ್ರಶ್ನೆಗಳನ್ನು ಮಧ್ಯಪ್ರದೇಶ ಕಾಂಗ್ರೆಸ್‌ ತನಗೆ ತಾನೇ ಕೇಳಿಕೊಳ್ಳಬೇಕಾಗಿದೆ.

Tags: Kamal NathMadhya Pradeshಕಾಂಗ್ರೆಸ್‌ ಸರ್ಕಾರಕೃಷಿ ಸಾಲ ಮನ್ನಾಮಧ್ಯಪ್ರದೇಶ
Previous Post

ಭಾರತಕ್ಕೆ ಬರುವ ಮುನ್ನ ಟ್ರಂಪ್‌ ಮಾತಿನ ದಾಳಿ! ಕುದುರೀತೆ ವ್ಯಾಪಾರ ವಹಿವಾಟು? 

Next Post

ಅಳಿವಿನಂಚಿನಲ್ಲಿರುವ ಅಪರೂಪದ ರಣಹದ್ದುಗಳು ಬಂದವು ವಾಪಸ್!

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಅಳಿವಿನಂಚಿನಲ್ಲಿರುವ ಅಪರೂಪದ ರಣಹದ್ದುಗಳು ಬಂದವು ವಾಪಸ್!

ಅಳಿವಿನಂಚಿನಲ್ಲಿರುವ ಅಪರೂಪದ ರಣಹದ್ದುಗಳು ಬಂದವು ವಾಪಸ್!

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada