Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಮತ್ತೊಂದು ಗರಿ

ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಮತ್ತೊಂದು ಗರಿ
ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಮತ್ತೊಂದು ಗರಿ

December 7, 2019
Share on FacebookShare on Twitter

ದೇಶದ ಅತ್ಯಂತ ಹೆಚ್ಚು ಪ್ರಯಾಣಿಕರು ಬಂದು ಹೋಗುವ ವಿಮಾನನಿಲ್ದಾಣಗಳಲ್ಲಿ ಒಂದಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. 2019 ರ ಡಿಸೆಂಬರ್ 6 ರ ಸಂಜೆ 4.37 ಕ್ಕೆ ಈ ವಿಮಾನನಿಲ್ದಾಣ ಹೊಸದಾದ ಮೈಲಿಗಲ್ಲನ್ನು ಸ್ಥಾಪಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಅಧಿಕಾರಕ್ಕೆ ಬಂದ ಮೇಲೆ ಜನರ ಮತ್ತು ವಿಪಕ್ಷಗಳ ಹಕ್ಕಗಳನ್ನು ದಮನ ಮಾಡುತ್ತಿದ್ದಾರೆ : ಡಾ.ಯತೀಂದ್ರ ಸಿದ್ದರಾಮಯ್ಯ

ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

ಇಲ್ಲಿನ ದಕ್ಷಿಣ ಭಾಗಕ್ಕಿರುವ ಎರಡನೇ ರನ್ ವೇ ಕಾರ್ಯಾರಂಭ ಮಾಡುವ ಮೂಲಕ ಈ ಹೊಸ ಮೈಲಿಗಲ್ಲನ್ನು ಸ್ಥಾಪಿಸಿತು. 4000 ಮೀಟರ್ ಉದ್ದ ಮತ್ತು 45 ಮೀಟರ್ ಗಳಷ್ಟು ಅಗಲವಿರುವ ಈ ಹೊಸ ಏರ್ ಸ್ಟ್ರಿಪ್ ನಿಂದ ಮೊದಲ ವಿಮಾನ ಸಂಜೆ 4.37 ಕ್ಕೆ ಟೇಕಾಫ್ ಆಗುವ ಮೂಲಕ ದೇಶದಲ್ಲಿ ಪರ್ಯಾಯ ರನ್ ವೇಗಳನ್ನು ಸ್ವತಂತ್ರವಾಗಿ ನಿರ್ವಹಣೆ ಮಾಡುವ ಮೊದಲ ವಿಮಾನನಿಲ್ದಾಣ ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಈ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

ಇದರ ಮತ್ತೊಂದು ವಿಶೇಷವೆಂದರೆ ಮುಂಬೈ ವಿಮಾನ ನಿಲ್ದಾಣವನ್ನು ಹಿಂದೆ ಸರಿಸಿ ದೇಶದ ಎರಡನೇ ಅತಿ ಹೆಚ್ಚು ಪ್ರಯಾಣಿಕರ ದಟ್ಟಣೆ ಹೊಂದಿದ ವಿಮಾನ ನಿಲ್ದಾಣವಾಗುವತ್ತ ಹೆಜ್ಜೆ ಇಟ್ಟಿದೆ. ಇದುವರೆಗೆ ಒಂದೇ ರನ್ ವೇಯಲ್ಲಿ ಅತಿ ಹೆಚ್ಚು ವಿಮಾನಗಳ ಹಾರಾಟ ಮತ್ತು ಇಳಿಯುವ ಚಟುವಟಿಕೆಗಳನ್ನು ನಿರ್ವಹಣೆ ಮಾಡುತ್ತಿದ್ದ ಏಕೈಕ ವಿಮಾನನಿಲ್ದಾಣ ಎಂಬ ಖ್ಯಾತಿಯನ್ನು ಪಡೆದಿತ್ತು.

ಇದೀಗ ಎರಡನೇ ರನ್ ವೇ ಕಾರ್ಯಾರಂಭ ಮಾಡಿರುವುದರಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಹಿಂದೆ ಸರಿಸಲಿದೆ. ಈ ಮೂಲಕ ಮುಂಬೈ ವಿಮಾನ ನಿಲ್ದಾಣವನ್ನು ಹಿಂದಕ್ಕೆ ಹಾಕಿ ಎರಡನೇ ಸ್ಥಾನವನ್ನು ಅಲಂಕರಿಸಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಇನ್ನೂ ಹೆಚ್ಚು ವಿಮಾನಗಳು ಕಾರ್ಯ ನಿರ್ವಹಿಸಲಿವೆ. ಅಂದಹಾಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ಹೆಚ್ಚು ದಟ್ಟಣೆ ಇರುವ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿದೆ.

ಇದುವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರತಿದಿನ 731 ವಿಮಾನಗಳನ್ನು ನಿರ್ವಹಣೆ ಮಾಡುತ್ತಿತ್ತು. ಹೆಚ್ಚಿನ ಒತ್ತಡವಿದ್ದರೂ ಅವುಗಳನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತಿತ್ತು. ಆದಾಗ್ಯೂ, ಇದ್ದ ಒಂದೇ ರನ್ ವೇಯಲ್ಲಿಯೇ ಇಷ್ಟೊಂದು ಪ್ರಮಾಣದ ವಿಮಾನಗಳನ್ನು ನಿಯಂತ್ರಣ ಮಾಡುವ ಮೂಲಕ ವಿಶ್ವದ ಅತ್ಯಂತ ದಟ್ಟಣೆ ಇರುವ ರನ್ ವೇ ಎಂಬ ಹೆಗ್ಗಳಿಕೆಯನ್ನೂ ಹೊಂದಿತ್ತು.

ಈ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ವಾರ್ಷಿಕ ಅಭಿವೃದ್ಧಿ ದರವು ಶೇ.22 ರಷ್ಟಿದ್ದು, ಹಾಲಿ ಇರುವ ರನ್ ವೇ ಮೂಲಕ ಪ್ರತಿ ಗಂಟೆಗೆ 34 ವಿಮಾನಗಳ ಹಾರಾಟ ಮತ್ತು ಇಳಿಯುವಿಕೆ ಚಟುವಟಿಕೆಗಳಿಗೆ ಅವಕಾಶವಿತ್ತು. ಇದೀಗ ಎರಡನೇ ರನ್ ವೇ ಕಾರ್ಯಾರಂಭ ಮಾಡಿರುವುದರಿಂದ ವಿಮಾನಗಳ ಹಾರಾಟ ಮತ್ತು ಇಳಿಯುವಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗುವ ನಿರೀಕ್ಷೆಗಳಿವೆ.

ಇನ್ನು ಪ್ರಯಾಣಿಕ ಸಂಖ್ಯೆಯನ್ನು ಗಮನಿಸುವುದಾದರೆ 2016 ರಲ್ಲಿ ಈ ವಿಮಾನ ನಿಲ್ದಾಣದ ಮೂಲಕ 2.2 ಕೋಟಿ ಪ್ರಯಾಣಿಕರು ಪ್ರಯಾಣ ನಡೆಸಿದ್ದಾರೆ. ಈ ಪೈಕಿ ದೇಶಿ ಪ್ರಯಾಣಿಕರ ಸಂಖ್ಯೆಯೇ ಅಧಿಕವಾಗಿದೆ. ಅಂದರೆ, 1.85 ಕೋಟಿ ದೇಶಿ ಪ್ರಯಾಣಿಕರು ಇಲ್ಲಿಂದ ಪ್ರಯಾಣ ನಡೆಸಿದ್ದರೆ, 3.56 ಲಕ್ಷ ಮಂದಿ ವಿದೇಶಿ ಪ್ರಯಾಣಿಕರಾಗಿದ್ದಾರೆ. ಒಟ್ಟಾರೆ ಈ ವಿಮಾನನಿಲ್ದಾಣದಿಂದ ಪ್ರತಿದಿನ ಸರಾಸರಿ 60 ಸಾವಿರ ಪ್ರಯಾಣೀಕರು ಪ್ರಯಾಣಿಸುತ್ತಿದ್ದಾರೆ.

ಈಗ ಎರಡೂ ರನ್ ವೇಗಳು ಕಾರ್ಯಾಚರಣೆ ನಡೆಸುತ್ತಿರುವುದರಿಂದ ವಾರ್ಷಿಕವಾಗಿ ಸುಮಾರು 6 ಕೋಟಿಯಷ್ಟು ಪ್ರಯಾಣಿಕರು ಪ್ರಯಾಣಿಸಬಹುದು ಎಂದು ಅಂದಾಜಿಸಲಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda
Top Story

ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda

by ಕೃಷ್ಣ ಮಣಿ
March 21, 2023
ದಿನಸಿ ಕಿಟ್​, ಉಡುಗೊರೆ ಸೀಜ್​.. ಕಾನೂನು ಮಾನ್ಯತೆ ಇದೆಯಾ..?
Top Story

ದಿನಸಿ ಕಿಟ್​, ಉಡುಗೊರೆ ಸೀಜ್​.. ಕಾನೂನು ಮಾನ್ಯತೆ ಇದೆಯಾ..?

by ಕೃಷ್ಣ ಮಣಿ
March 19, 2023
ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!
Top Story

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

by ಪ್ರತಿಧ್ವನಿ
March 19, 2023
RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI
ಇದೀಗ

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

by ಪ್ರತಿಧ್ವನಿ
March 23, 2023
ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains
Top Story

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

by ಪ್ರತಿಧ್ವನಿ
March 19, 2023
Next Post
ಉಳಿಯಲೇ ಇಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಉಳಿಯಲೇ ಇಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ನೇಪಥ್ಯಕ್ಕೆ ಸರಿಯಲಿದೆಯೇ ಕರುನಾಡಿನ ಬಿಇಎಂಎಲ್?

ನೇಪಥ್ಯಕ್ಕೆ ಸರಿಯಲಿದೆಯೇ ಕರುನಾಡಿನ ಬಿಇಎಂಎಲ್?

ಪ್ರಿಯಾಂಕ ರೆಡ್ಡಿ ಅತ್ಯಾಚಾರ ಪ್ರಕರಣ - ಇಲ್ಲಿದೆ ಘಟನಾವಳಿಗಳ ಸಂಪೂರ್ಣ ವಿವರ  

ಪ್ರಿಯಾಂಕ ರೆಡ್ಡಿ ಅತ್ಯಾಚಾರ ಪ್ರಕರಣ - ಇಲ್ಲಿದೆ ಘಟನಾವಳಿಗಳ ಸಂಪೂರ್ಣ ವಿವರ  

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist