Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕೇಂದ್ರದ ಕಣ್ಗಾವಲಿನಲ್ಲಿ ಜೋಡೆತ್ತು, ರಾಜ್ಯ ರಾಜಕೀಯ ದಿಕ್ಸೂಚಿ ಬದಲು?

ಕೇಂದ್ರದ ಕಣ್ಗಾವಲಿನಲ್ಲಿ ಜೋಡೆತ್ತು, ರಾಜ್ಯ ರಾಜಕೀಯ ದಿಕ್ಸೂಚಿ ಬದಲು?
ಕೇಂದ್ರದ ಕಣ್ಗಾವಲಿನಲ್ಲಿ ಜೋಡೆತ್ತು
Pratidhvani Dhvani

Pratidhvani Dhvani

September 1, 2019
Share on FacebookShare on Twitter

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜೋಡುತ್ತೆಗಳಾಗಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಡಿ ಕೆ ಶಿವಕುಮಾರ್ ಭಿನ್ನ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯಗಳ ತೆಕ್ಕೆಯಲ್ಲಿ ಸಿಲುಕುವ ಮೂಲಕ ಪರೋಕ್ಷವಾಗಿ ಬಿಜೆಪಿ ಕೇಂದ್ರ ನಾಯಕತ್ವದ ಮುಂದೆ ನಿಂತಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಶಾಸಕ ಜಮೀರ್ ಅಹ್ಮದ್ಗೆ ಎಸಿಬಿ ಶಾಕ್

ಡಿಕೆಶಿ ಬೆಳವಣಿಗೆಗೆ ತೋಡಿರುವ ಗುಂಡಿಯೇ ಸಿದ್ದರಾಮೋತ್ಸವ : ಬಿಜೆಪಿ ಸರಣಿ ಟ್ವೀಟ್‌

ಡಿಕೆಶಿ ಸಿದ್ದರಾಮೋತ್ಸವಕ್ಕೆ ವಿರೋಧಿಸಿರುವುದು ಕಟ್ಟು ಕಥೆ : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌

ಸ್ವಪಕ್ಷದ ಪ್ರಬಲ ಧ್ವನಿ ಹಾಗೂ ವಿರೋಧಿ ಪಾಳಯದ ಪ್ರಬಲ ತನಿಖಾ ಸಂಸ್ಥೆಗಳ ಹದ್ದಿನ ಕಣ್ಣಿಗೆ ಗುರಿಯಾಗಿರುವುದು ಸಹಜವಾಗಿ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೈ ಮೇಲಾಗುವಂತೆ ಮಾಡಿದೆ ಎಂದು ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಇದರಿಂದ ರಾಜ್ಯ ರಾಜಕೀಯದ ಹೋರಾಟ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ನೇರ ಹಣಾಹಣಿಯಾಗಿ ಬದಲಾಗಲಿದೆ.

ಈಚೆಗೆ ಸಮ್ಮಿಶ್ರ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದಿದ್ದ ಕುಮಾರಸ್ವಾಮಿ ಹಾಗೂ ಅವರ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಮೇಲೆ ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಡಿ ಕೆ ಶಿವಕುಮಾರ್ ಸೇರಿದಂತೆ ಯಾರೊಬ್ಬರೂ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲಲಿಲ್ಲ. “ಅಕ್ರಮ ಹಣ ಸಾಗಣೆ ಪ್ರಕರಣದ ಆರೋಪದಲ್ಲಿ ಜಾರಿ ನಿರ್ದೇಶನಾಲಯದ ತೆಕ್ಕೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ವಿರುದ್ಧ ಹಗೆ ಸಾಧಿಸಲಾಗುತ್ತಿದೆ. ಗಣೇಶನ ಹಬ್ಬಕ್ಕೂ ಮನೆಗೆ ಹೋಗಲು ಅನುಮತಿ ನೀಡದೇ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎನ್ನುವ ಮೂಲಕ‌ ಕುಮಾರಸ್ವಾಮಿ ಅವರು ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ. ಜಾರಿ ನಿರ್ದೇಶನಾಲಯದ ಸಮನ್ಸ್ ನಂತರ ದೆಹಲಿಗೆ ತೆರಳುವ ಮುನ್ನ ಶಿವಕುಮಾರ್ ಅವರು ದೇವೇಗೌಡರನ್ನು ಭೇಟಿ ಮಾಡಿರುವುದು ಸಹಜವಾಗಿ ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸರ್ಕಾರ ಉರುಳಲು ಕಾರಣ ಎಂದು ಬಹಿರಂಗವಾಗಿ ಜೆಡಿಎಸ್ ನಾಯಕರು ದೂರುತ್ತಿರುವಾಗ ಪಕ್ಷದ ಪರವಾಗಿ ನಿಲ್ಲದ ಡಿಕೆಶಿ, ದೇವೇಗೌಡರ ಮನೆಯ ಕದ ತಟ್ಟಲು‌ ಕಾರಣವೇನು? ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಡಿಕೆಶಿಯವರ ರಾಜಕಾರಣ ಸಾರ್ವಜನಿಕವಾಗಿ ಯಾವ ರೀತಿಯ ಸಂದೇಶ ರವಾನಿಸಲಿದೆ?

ಇನ್ನು, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಕೆಲವು ಅಧಿಕಾರಿಗಳ ಫೋನ್ ಗಳನ್ನು ಅಕ್ರಮವಾಗಿ ಆಲಿಸಲು ಮಾಜಿ‌ ಸಿಎಂ ಕುಮಾರಸ್ವಾಮಿ ಸೂಚಿಸಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಕಾವಲಿಗೆ ಒಳಗಾಗಿರುವ ಕುಮಾರಸ್ವಾಮಿ ಅವರನ್ನು ಅಷ್ಟು ಸುಲಭವಾಗಿ ಬಿಜೆಪಿಯ ಕೇಂದ್ರ ನಾಯಕತ್ವ ಬಿಟ್ಟುಕೊಡಲಾರದು. 2018ರಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶ ಹೊರಬಿದ್ದು ಬಿಜೆಪಿ ಅತಿ ಹೆಚ್ಚು ಸ್ಥಾನ‌ ಗೆದ್ದಾಗಲೂ ಸರ್ಕಾರ ರಚಿಸಲಾಗಲಿಲ್ಲ. ಕೇಂದ್ರ ಬಿಜೆಪಿ ನಾಯಕರು ಕುಮಾರಸ್ವಾಮಿ ಸೆಳೆಯಲು ಸಾಕಷ್ಟು ಪ್ರಯತ್ನ ಪಟ್ಟರಾದರೂ ಎಚ್ ಡಿ ಕೆ ಬಿಜೆಪಿಯತ್ತ ವಾಲಲಿಲ್ಲ.

ಈ ಸಂದರ್ಭದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಮೋದಿ-ಶಾ ಜೋಡಿಗೆ ಭಾರಿ ಹಿನ್ನಡೆಯುಂಟು ಮಾಡಿದ್ದವು. ಈ ಹೋರಾಟದಲ್ಲಿ ಮೋದಿ-ಶಾ ಎದುರಾಗಿ ನಿಂತು ಬಹಿರಂಗವಾಗಿ ಗುರುತಿಸಿಕೊಂಡವರು ಶಿವಕುಮಾರ್ ಹಾಗೂ ಕುಮಾರಸ್ವಾಮಿ. ಈ ಇಬ್ಬರನ್ನೂ ಹಣಿಯುವ ಮೂಲಕ ಒಕ್ಕಲಿಗ ಸಮುದಾಯದ ಮೇಲೆ ಈ ಇಬ್ಬರೂ ನಾಯಕರು‌ ಸಾಧಿಸಿರುವ ಹಿಡಿತವನ್ನು ಸಡಿಲಿಸಿ, ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿ ಯುವ ನಾಯಕತ್ವವನ್ನು ಬೆಳೆಸಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ. ಕನಿಷ್ಠ ಪಕ್ಷ ಯಡಿಯೂರಪ್ಪ ಸರ್ಕಾರಕ್ಕೆ ಚ್ಯುತಿಯಾಗದ ರೀತಿಯಲ್ಲಿ ಕುಮಾರಸ್ವಾಮಿ ಅವರನ್ನು ಫೋನ್ ಕದ್ದಾಲಿಕೆ ಪ್ರಕರಣ ಮುಂದಿಟ್ಟುಕೊಂಡು ಕೇಂದ್ರ ಬಿಜೆಪಿ ನಿರ್ವಹಿಸಲಿದೆ. ಡಿಕೆಶಿ ಬಂಧಿಸುವ ಮೂಲಕ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದೇವೆ ಎಂದು ಬಿಜೆಪಿ ಬಿಂಬಿಸಲು ಮುಂದಾದರೂ ಆಶ್ಚರ್ಯವಿಲ್ಲ.

ಸಮಗ್ರವಾಗಿ ನೋಡುವುದಾದರೆ ದೇವೇಗೌಡ-ಶಿವಕುಮಾರ್ ಭೇಟಿ ಹಾಗೂ ಶಿವಕುಮಾರ್ ಬೆಂಬಲಿಸಿ ಕುಮಾರಸ್ವಾಮಿ ಟ್ವೀಟ್ ಮಾಡಿರುವ ಬೆಳವಣಿಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜಾತಿ ರಾಜಕಾರಣ ತೀವ್ರ ಸ್ವರೂಪ ಪಡೆಯುವ ಮುನ್ಸೂಚನೆಯಂತೆ ಭಾಸವಾಗುತ್ತಿದೆ. ರಾಜ್ಯದ ಎರಡು ಪ್ರಬಲ ಕೋಮುಗಳಾದ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ದಶಕಗಳಿಂದ ರಾಜಕೀಯವಾಗಿ ಎದುರು ಬದುರು ನಿಂತು ಹೋರಾಟ ನಡೆಸುತ್ತಾ ಬಂದಿವೆ. ಈ ಎರಡೂ ಸಮುದಾಯಗಳಿಗೆ ಸೇರದ ಹಿಂದುಳಿದ ವರ್ಗಗಳ ನೇತಾರನಾಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವಿರೋಧ ಪಕ್ಷದ ನಾಯಕ‌ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗುವ ಸಾಧ್ಯತೆಯನ್ನೂ ತಳ್ಳಿಹಾಕಲಾಗದು.

ಸೈದ್ಧಾಂತಿಕವಾಗಿ ಬಿಜೆಪಿಯನ್ನು ಎದುರುಗೊಳ್ಳುವ ಚಾಕಚಕ್ಯತೆ ಹಾಗೂ ಜನಬಲ ಕಾಂಗ್ರೆಸ್ ನಲ್ಲಿ ಯಾವ ನಾಯಕನಿಗೂ ಇಲ್ಲ. ಇಲ್ಲಿಯವರೆಗೂ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಥವಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ ಎನ್ನುವ ವರದಿಗಳು ಹಬ್ಬಿದ್ದವು. ಈಗ ಡಿ ಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ಬಲೆಗೆ ಸಿಲುಕಿರುವುದರಿಂದ ಅವರಿಗೆ ಪ್ರಮುಖ ಸ್ಥಾನ ನೀಡುವ ಮೂಲಕ ಮತ್ತೊಂದು ಅಸ್ತ್ರವನ್ನು ಬಿಜೆಪಿಗೆ ವರ್ಗಾಯಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುವ ಸಾಧ್ಯತೆ ಕಡಿಮೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಹಾದಿ ಸುಗಮವಾದಂತಿದೆ. ರಾಜ್ಯ ರಾಜಕೀಯವು ಪಕ್ಷಾತೀತವಾಗಿ ಹಲವು ಬದಲಾವಣೆಗೆ ಸಾಕ್ಷಿಯಾಗುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.

RS 500
RS 1500

SCAN HERE

don't miss it !

ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
ಕರ್ನಾಟಕ

ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ : ಸಿಎಂ ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
July 1, 2022
ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸಿ : ಬಾಷ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಕರ್ನಾಟಕ

ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸಿ : ಬಾಷ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

by ಪ್ರತಿಧ್ವನಿ
June 30, 2022
ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರೆ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!
ದೇಶ

ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರೆ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

by ಪ್ರತಿಧ್ವನಿ
July 3, 2022
ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಗಿ ಅಲೋಕ್‌ ಆರಾಧೆ ನೇಮಕ
ಕರ್ನಾಟಕ

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಗಿ ಅಲೋಕ್‌ ಆರಾಧೆ ನೇಮಕ

by ಪ್ರತಿಧ್ವನಿ
June 30, 2022
ಪಾತಾಳಕ್ಕೆ ಕುಸಿದರೂ ಜಾಗತಿಕವಾಗಿ ರೂಪಾಯಿ ಉತ್ತಮ ಮಟ್ಟದಲ್ಲಿದೆ : ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ದೇಶ

ಪಾತಾಳಕ್ಕೆ ಕುಸಿದರೂ ಜಾಗತಿಕವಾಗಿ ರೂಪಾಯಿ ಉತ್ತಮ ಮಟ್ಟದಲ್ಲಿದೆ : ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್

by ಪ್ರತಿಧ್ವನಿ
July 1, 2022
Next Post
ಹಿಂದೀ ಮಂದಿ: ದಕ್ಷಿಣಕ್ಕೊಂದು ಉತ್ತರದ ಕಿಟಕಿ

ಹಿಂದೀ ಮಂದಿ: ದಕ್ಷಿಣಕ್ಕೊಂದು ಉತ್ತರದ ಕಿಟಕಿ

ಮಳೆ ಹಾನಿ: ಸಹಜತೆಯತ್ತ ಮರಳುತ್ತಿದೆ ಧಾರವಾಡ ಜಿಲ್ಲೆ

ಮಳೆ ಹಾನಿ: ಸಹಜತೆಯತ್ತ ಮರಳುತ್ತಿದೆ ಧಾರವಾಡ ಜಿಲ್ಲೆ

ಸ್ಥಳೀಯ ನಾಯಕತ್ವವಿಲ್ಲದೆ ರಾಷ್ಟ್ರೀಯ ಪಕ್ಷಗಳಿಗೆ ಅವಕಾಶವಿಲ್ಲ

ಸ್ಥಳೀಯ ನಾಯಕತ್ವವಿಲ್ಲದೆ ರಾಷ್ಟ್ರೀಯ ಪಕ್ಷಗಳಿಗೆ ಅವಕಾಶವಿಲ್ಲ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist