Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ, ಕರಿಮೆಣಸಿಗೆ ಕೊಳೆ ರೋಗ

ಕೊಡಗಿನಲ್ಲಿ ಅಬ್ಬರದ ಮಳೆಗೆ ಕಾಫಿ, ಕರಿಮೆಣಸಿಗೆ ಕೊಳೆ ರೋಗ
ಕೊಡಗಿನಲ್ಲಿ ಅಬ್ಬರದ ಮಳೆಗೆ  ಕಾಫಿ

October 4, 2019
Share on FacebookShare on Twitter

ಕಳೆದ ಎರಡು ತಿಂಗಳಿನಿಂದ ಕೊಡಗಿನಲ್ಲಿ ಸುರಿದಿರುವ ಭಾರಿ ಮಳೆಯಿಂದಾಗಿ ಕಾಫಿಗೆ ಕೊಳೆ ರೋಗ (ಕೊಳೆಯುವ ರೋಗ) ಬಾಧಿಸುತ್ತಿದೆ. ಕೆಲವು ತಗ್ಗು ಪ್ರದೇಶದಲ್ಲಿರುವ ತೋಟಗಳಲ್ಲಿ ನದಿ ನೀರು ತಿಂಗಳುಗಟ್ಟಲೆ ನಿಂತಿದ್ದರಿಂದ ಗಿಡಗಳು ಸಂಪೂರ್ಣ ಕೊಳೆತು ಹೋಗಿವೆ. ಒಂದೆಡೆ ಕಾಫಿ ದರ ಕುಸಿದು ಬೆಳೆಗಾರರು ಕಂಗಾಲಾಗಿರುವ ಸಮಯದಲ್ಲೇ ಗಿಡಗಳೂ ನಾಶವಾಗಿರುವುದು ಬೆಳೆಗಾರರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ.

ಹೆಚ್ಚು ಓದಿದ ಸ್ಟೋರಿಗಳು

ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಕೊಡಗಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಸರಾಸರಿ ಮಳೆ 2685.96 ಮಿ.ಮೀ ಆಗಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 3882.84 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕಿಂತ ಕಡಿಮೆ ಮಳೆ ಆಗಿದ್ದರೂ ಕೂಡ ಕಾಫಿ ತೋಟಗಳಿಗೆ ಗಣನೀಯ ಪ್ರಮಾಣದಲ್ಲೇ ಹಾನಿಯಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷವೇ ವಾಡಿಕೆ ಮಳೆಗಿಂತ ದುಪ್ಪಟ್ಟು ಮಳೆ ಆಗಿತ್ತು. ಆಗಲೂ ಕೃಷಿ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿತ್ತು.

ಕೊಡಗಿನಲ್ಲಿ ಈ ಬಾರಿ ವಾಡಿಕೆ ಮಳೆಗಿಂತಲೂ ಹೆಚ್ಚೇ ಮಳೆ ಆಗಿದ್ದು ಈಗಾಗಲೇ ಮನೆಗಳು ,ರಸ್ತೆ, ಸೇತುವೆ, ವಿದ್ಯುತ್ ಲೈನ್ ಗಳಿಗೆ ಮತ್ತು ಭತ್ತ , ಕಾಫಿ , ಕರಿ ಮೆಣಸು ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಆಗಿದೆ. ದೇಶದಲ್ಲಿ ವಾರ್ಷಿಕವಾಗಿ ಒಟ್ಟು 3.4 ಲಕ್ಷ ಟನ್‌ ಕಾಫಿ ಉತ್ಪಾದನೆ ಅಗುತಿದ್ದರೆ, ಜಿಲ್ಲೆಯ ಉತ್ಪಾದನೆ 1.2 ಲಕ್ಷ ಟನ್‌ ಗಳಷ್ಟಿದೆ. ಅಂದರೆ ದೇಶದಲ್ಲಿ ಉತ್ಪಾದನೆಯಾಗುವ ಒಟ್ಟು ಕಾಫಿ ಬೆಳೆಯ ಮೂರನೇ ಒಂದರಷ್ಟು ಪಾಲನ್ನು ಹೊಂದಿರುವ ಹೆಗ್ಗಳಿಕೆ ಜಿಲ್ಲೆಯದ್ದಾಗಿದೆ.

ಆದರೆ ಬೆಳೆಗಾರರು ಮಾತ್ರ ಇನ್ನೂ ಸಂಕಷ್ಟದಲ್ಲೇ ಇದ್ದಾರೆ. ಕಳೆದ ವರ್ಷದಿಂದ ಕಾಫಿಗೆ ದರ ಕುಸಿದಿದ್ದು 50 ಕೆಜಿ ರೋಬಸ್ಟಾ ಪಾರ್ಚ್‍ಮೆಂಟ್ ಕಾಫಿ ದರ 9,500 ರೂಪಾಯಿಗಳಿಂದ 7,000 ರೂಪಾಯಿಗಳ ಆಸು ಪಾಸಿಗೆ ಕುಸಿದಿದೆ. ಕಾಫಿಯ ಮಿಶ್ರ ಬೆಳೆ ಆಗಿರುವ ಕರಿಮೆಣಸಿನ ದರ ಕೂಡ ಪಾತಾಳ ಕಂಡಿದೆ. ಕೇವಲ ಎರಡು ವರ್ಷಗಳ ಹಿಂದೆ ಕೆಜಿಯೊಂದರ 8000 ರೂಪಾಯಿಗಳಿಗೆ ಮಾರಾಟವಾಗುತಿದ್ದ ಕರಿಮೆಣಸು ಇಂದಿನ ಮಾರುಕಟ್ಟೆಯ ದರ ಕೇವಲ 280 ರೂಪಾಯಿಗಳಾಗಿದೆ. ಹೀಗಾಗಿ ಕೊಡಗಿನ ರೈತ ಸಂಕಷ್ಟದಲ್ಲಿದ್ದಾನೆ.

ಜಿಲ್ಲೆಯ ಕಾಫಿ ಬೆಳೆಗೆ ವಾರ್ಷಿಕ ಸುಮಾರು 60 ರಿಂದ 80 ಇಂಚಿನಷ್ಟು ಮಳೆ ಅನುಕೂಲಕರವಾಗಿದೆ. ಆದರೆ ವಿಪರೀತ ಮಳೆಯಿಂದಾಗಿ ಕಾಫಿ ಬೆಳೆಗಾರರು ತತ್ತರಿಸಿಹೋಗಿದ್ದಾರೆ. ಮಡಿಕೇರಿ ತಾಲ್ಲೂಕು ನಾಪೋಕ್ಲು ಸಮೀಪದ ಬೇತು ಗ್ರಾಮದ ರೈತ ಪಿ ಎಂ ಬೋಪಯ್ಯ ಅವರನ್ನು ಮಾತಾಡಿಸಿದಾಗ ಚಿಂತೆಯೆ ಸರಮಾಲೆಯನ್ನೇ ತೆರೆದಿಟ್ಟರು. ಒಂದೆಡೆ ಕೊಡಗಿನಲ್ಲಿ ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರ ಕೊರತೆ ಇದ್ದು ಗಂಡಸರಿಗೆ ದಿನಕೂಲಿ 350-400 ರೂಪಾಯಿ ತಲುಪಿದೆ. ಆದರೆ ಕಾಫಿ ದರ ಮಾತ್ರ ಕುಸಿದಿದೆ. ಹೀಗಾದರೆ ತೋಟಗಳನ್ನು ನಿರ್ವಹಿಸುವುದೇ ಕಷ್ಟ ಎಂದರು.

ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಸಣ್ಣ ರೈತ ಹೂವಯ್ಯ ಅವರನ್ನು ಮಾತಾಡಿಸಿದಾಗ ತೋಟಕ್ಕೆ ಬಳಸುವ ಗೊಬ್ಬರ , ಕ್ರಿಮಿನಾಶಕ, ರಾಸಾಯನಿಕ, ಎಲ್ಲಾ ವಸ್ತುಗಳ ಬೆಲೆ ಮೂರು ಪಟ್ಟು ಜಾಸ್ತಿಯಾಗಿದೆ ಅದರೆ ಉತ್ಪನ್ನಗಳ ಬೆಲೆ ಕುಸಿದಿರುವುದು ಶೋಚನೀಯ. ಕೇಂದ್ರ ಸರ್ಕಾರ ಕಾಫಿ ಹಾಗೂ ಕರಿಮೆಣಸಿಗೆ ಬೆಂಬಲ ಬೆಲೆ ನೀಡಿದರೆ ಮಾತ್ರ ತೋಟಗಳು ಉಳಿಯುತ್ತವೆ ಎಂದರು.

ಕಾಫಿ ಬೆಳೆಗಾರರ ಸಂಘದ ಅದ್ಯಕ್ಷ ಮೋಹನ್‌ ಬೋಪಣ್ಣ ಅವರು, “ಈಗಾಗಲೇ ಬೆಳೆಗಾರರ ನಿಯೋಗ ದೆಹಲಿಗೆ ತೆರಳಿ ವಾಣಿಜ್ಯ ಸಚಿವರಿಗೆ ನಮ್ಮ ಸಂಕಷ್ಟ ಮನದಟ್ಟು ಮಾಡಿದೆ. ಕೊಡಗು , ಹಾಸನ , ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಕಾಫಿ ಬೆಳೆಗಾರ ಸಂಘಗಳೂ ನಿರ್ಣಯವೊಂದನ್ನು ಮಾಡಿಕೊಂಡಿದ್ದು ಎಲ್ಲ ಕಾರ್ಮಿಕರಿಗೂ ದಿನಕ್ಕೆ ಎಂಟು ಗಂಟೆಗಳ ಕೆಲಸ ಮಾಡಲೇಬೆಕೆಂದು ಸೂಚಿಸಲಾಗಿದೆ. ಏಕೆಂದರೆ ಸರ್ಕಾರ ನಿಗದಿಪಡಿಸಿದ ದಿನ ಕೂಲಿಯನ್ನೇ ಎಲ್ಲರೂ ನೀಡುತ್ತಿದ್ದಾರೆ. ಹೀಗಿರುವಾಗ 8 ಘಂಟೆ ಕೆಲಸ ಮಾಡುವುದು ನ್ಯಾಯ ಸಮ್ಮತ ಎಂದರು. ಕೆಲವೆಡೆಗಳಲ್ಲಿ ಬೆಳಿಗ್ಗೆ 9.30 ಘಂಟೆಗೆ ಕೆಲಸಕ್ಕೆ ಬಂದು ಮೂರು ಗಂಟೆಗೇ ಹೋಗುತ್ತಾರೆ. ಇದರಿಂದ ಬೆಳೆಗಾರರು ಇನ್ನಷ್ಟು ನಷ್ಟ ಅನುಭವಿಸುತಿದ್ದಾರೆ,’’ ಎಂದರು.

ಕಾಫಿ ಮಂಡಳಿಯು ಪ್ರತೀ ವರ್ಷ ಉತ್ಪಾದನೆಯ ಅಂದಾಜನ್ನು ಮಾಡುತ್ತಿದ್ದು ಇದನ್ನು ವರ್ಷದಲ್ಲಿ ಎರಡು ಬಾರಿ, ಅಂದರೆ ಮಳೆಗೂ ಮುನ್ನ ಹಾಗೂ ಮಳೆಯ ನಂತರ ಮಾಡಲಾಗುತ್ತದೆ. ಕಳೆದ ವರ್ಷ ದೇಶದ ಒಟ್ಟು ಕಾಫಿ ಉತ್ಪಾದನೆ ಸುಮಾರು 3.19 ಲಕ್ಷ ಟನ್‌ ಗಳಿಗೆ ಕುಸಿದಿದೆ. ಕಾಫಿ ಮಂಡಳಿಯ ಈ ವರ್ಷದ ಬೆಳೆ ಅಂದಾಜಿನ ಪ್ರಕಾರ ದೇಶದ ಒಟ್ಟು ಉತ್ಪಾದನೆ 3 ಲಕ್ಷ ಟನ್‌ ಗಳನ್ನು ಮೀರುವುದಿಲ್ಲ. ಏಕೆಂದರೆ, ಕಳೆದ ವರ್ಷ ಕೊಡಗಿನಲ್ಲಿ ಮಾತ್ರ ಕಾಫಿ ಬೆಳೆ ನಾಶವಾಗಿತ್ತು. ಆದರೆ, ಈ ಬಾರಿ ಚಿಕ್ಕಮಗಳೂರಿನಲ್ಲಿಯೂ ಹೆಚ್ಚಿನ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ವೀರಾಜಪೇಟೆ ಉಪ ವಿಭಾಗದ ಕಾಫಿ ಮಂಡಳಿಯ ಉಪ ನಿರ್ದೇಶಕ ಸತೀಶ್‌ ಚಂದ್ರ ಅವರನ್ನು ಮಾತಾಡಿಸಿದಾಗ ವೀರಾಜಪೇಟೆ ತಾಲ್ಲೂಕು ಒಂದರಲ್ಲೇ ಈ ಬಾರಿ ಶೇಕಡಾ 25 ರಷ್ಟು ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು. ಕೊಡಗಿನಲ್ಲಿ ಈ ಬಾರಿ ಹೆಚ್ಚು ಭೂಕುಸಿತ ಮತ್ತು ಮಳೆ ಆಗಿದ್ದು ಕಳೆದ ವರ್ಷ ಮಡಿಕೇರಿಯಲ್ಲಿ ಹೆಚ್ಚು ಬೆಳೆ ನಷ್ಟ ಆಗಿತ್ತು ಎಂದರು. ಈ ಬಾರಿ ನದಿ ಪಕ್ಕದ ತೋಟಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ನೀರು ನಿಂತದ್ದರಿಂದ ಗಿಡಗಳೇ ಕೊಳೆತು ಹೋಗಿವೆ ಎಂದರು. ಅನೇಕ ತೋಟಗಳಲ್ಲಿ ಕಾಫಿಯು ಹಣ್ಣಾಗುವ ಮೊದಲೇ ಉದುರಿರುವುದೂ ನಷ್ಟದ ತೀವ್ರತೆ ಹೆಚ್ಚಿಸಲಿದೆ ಎಂದೂ ಅವರು ಅಭಿಪ್ರಾಯಿಸಿದರು. ಕೇಂದ್ರ ಸರ್ಕಾರ ಬೆಳೆಗಾರರ ನೋವಿಗೆ ಶೀಘ್ರ ಸ್ಪಂದಿಸುವುದೇ ಎಂದು ಕಾದು ನೋಡಬೇಕಷ್ಟೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains
Top Story

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

by ಪ್ರತಿಧ್ವನಿ
March 19, 2023
ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement
Top Story

ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement

by ಡಾ | ಜೆ.ಎಸ್ ಪಾಟೀಲ
March 19, 2023
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh
Top Story

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

by ಪ್ರತಿಧ್ವನಿ
March 20, 2023
ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?
ಕರ್ನಾಟಕ

ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?

by ಪ್ರತಿಧ್ವನಿ
March 18, 2023
ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ;  ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?
Top Story

ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ; ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?

by ಮಂಜುನಾಥ ಬಿ
March 18, 2023
Next Post
ಬಿಜೆಪಿಯ ಪೊಳ್ಳು ಅಭಿವೃದ್ಧಿ ಅನಾವರಣಗೊಳಿಸಿದ ಉತ್ತರದ ‘ನೆರೆ‘

ಬಿಜೆಪಿಯ ಪೊಳ್ಳು ಅಭಿವೃದ್ಧಿ ಅನಾವರಣಗೊಳಿಸಿದ ಉತ್ತರದ ‘ನೆರೆ‘

ಬಡ್ಡಿ ದರದ ಜತೆಗೆ ಅಭಿವೃದ್ಧಿ ದರವನ್ನೂ ತಗ್ಗಿಸಿದ ರಿಸರ್ವ್  ಬ್ಯಾಂಕ್

ಬಡ್ಡಿ ದರದ ಜತೆಗೆ ಅಭಿವೃದ್ಧಿ ದರವನ್ನೂ ತಗ್ಗಿಸಿದ ರಿಸರ್ವ್  ಬ್ಯಾಂಕ್

ಪ್ರಕೃತಿ ವಿಕೋಪದಲ್ಲಿ ಕೇಂದ್ರದಿಂದ ತಕ್ಷಣ ಪರಿಹಾರ ಬಂದಿದ್ದೇ ಇಲ್ಲ

ಪ್ರಕೃತಿ ವಿಕೋಪದಲ್ಲಿ ಕೇಂದ್ರದಿಂದ ತಕ್ಷಣ ಪರಿಹಾರ ಬಂದಿದ್ದೇ ಇಲ್ಲ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist