• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊಡಗಿನಲ್ಲಿ  ಭೂ ಪರಿವರ್ತನೆಗೆ  ಅಸ್ತು ಎಂದ ಸರ್ಕಾರ ; ಪರಿಣಾಮವೇನು ಗೊತ್ತೇ?

by
February 14, 2020
in ಕರ್ನಾಟಕ
0
ಕೊಡಗಿನಲ್ಲಿ  ಭೂ ಪರಿವರ್ತನೆಗೆ  ಅಸ್ತು ಎಂದ ಸರ್ಕಾರ ; ಪರಿಣಾಮವೇನು ಗೊತ್ತೇ?
Share on WhatsAppShare on FacebookShare on Telegram

ಪುಟ್ಟ ಜಿಲ್ಲೆ ಕೊಡಗು ಕಳೆದ ಎರಡು ವರ್ಷಗಳ ಭೀಕರ ಮಳೆ ಹಾಗೂ ಭೂ ಕುಸಿತಕ್ಕೆ ಸಿಲುಕಿ ನಲುಗಿ ಹೋಗಿದೆ. ಪ್ರವಾಸೋದ್ಯಮವೂ ಇನ್ನಷ್ಟೇ ಚೇತರಿಸಿಕೊಳ್ಳಬೇಕಾಗಿದೆ. ಕಳೆದ ವರ್ಷದ ಭೀಕರ ಭೂ ಕುಸಿತದಲ್ಲಿ ಸಾವಿರಾರು ಜನರು ಆಸ್ತಿ ಪಾಸ್ತಿ ಮನೆ ಗಳನ್ನು ಕಳೆದುಕೊಂಡಿದ್ದಾರೆ. ಈ ಕುರಿತು ಸಮೀಕ್ಷೆ ನಡೆಸಿದ ರಾಜ್ಯದ ಹಿರಿಯ ಭೂ ವಿಜ್ಞಾನಿಗಳ ತಂಡ ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣವೂ ಭೂ ಕುಸಿತಕ್ಕೆ ಕಾರಣ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯ ಬೆನ್ನಲ್ಲೇ ರಾಜ್ಯ ಸರ್ಕಾರ ೨೦೧೯ ರ ಸೆಪ್ಟೆಂಬರ್‌ ತಿಂಗಳಿನಲ್ಲಿ ಕೊಡಗಿನಾದ್ಯಂತ ವಾಣಿಜ್ಯಕ್ಕಾಗಿ ಅಥವಾ ಕೃಷಿಯೇತರ ಉದ್ದೇಶಗಳಿಗೆ ಭೂ ಪರಿವರ್ತನೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ,

ADVERTISEMENT

ಜಿಲ್ಲೆಯ ಇಬ್ಬರು ಜನಪ್ರತಿನಿಧಿಗಳಾದ ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ ಅಪ್ಪಚ್ಚು ರಂಜನ್‌ ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ ಜಿ ಬೋಪಯ್ಯ ಅವರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಭೂಪರಿವರ್ತನೆ ಸ್ಥಗಿತದಿಂದ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ ಉಂಟಾಗಿರುವ ಬಗ್ಗೆ ಕೊಡಗು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸರಕಾರದ ಗಮನಕ್ಕೆ ತಂದಿದ್ದರು. ಅಲ್ಲದೆ ಭೂಪರಿವರ್ತನೆಯನ್ನು ಮರು ಕಲ್ಪಿಸಬೇಕೆಂದು ಜಿಲ್ಲೆಯಿಂದ ಸಾವಿರಾರು ಮಂದಿ ಲಿಖಿತ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಡಗಿನ ಜನ ಸಾಮಾನ್ಯರ ಹಿತದೃಷ್ಟಿಯಿಂದ ಭೂಪರಿವರ್ತನಾ ಕಾರ್ಯವನ್ನು ಮರು ಪ್ರಾರಂಭಿಸ ಬೇಕೆಂದು ಮುಖ್ಯಮಂತ್ರಿಗಳ ಕಚೇರಿಯಿಂದಲೂ ಸೂಚನೆ ನೀಡಲಾಗಿತ್ತು.ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ, ಕಂದಾಯ ಅಧಿಕಾರಿಗಳು ಹಾಗೂ ರಾಜ್ಯದ ಉನ್ನತ ಅಧಿಕಾರಿಗಳ ಸಭೆಯನ್ನು ಇಂದು ಬೆಂಗಳೂರಿನಲ್ಲಿ ನಡೆಸಿ , ಭೂಪರಿವರ್ತನೆಗೆ ಮರು ಅವಕಾಶ ಕಲ್ಪಿಸಲು ಕೆಲವು ನಿಬಂಧನೆಗಳೊಂದಿಗೆ ನಿರ್ಧರಿಸಲಾಯಿತು.

ಮುಖ್ಯವಾಗಿ ಬೆಟ್ಟ ಪ್ರದೇಶಗಳಿಂದ ಸಹಜವಾಗಿ ಹರಿದು ಬರುವ ನೀರನ್ನು ತಡೆದು, ಅಂತಹ ಕಡೆಗಳಲ್ಲಿ ರೆಸಾರ್ಟ್ ಇತ್ಯಾದಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲು ಅನುಮತಿ ನೀಡಲಾಗುವುದಿಲ್ಲ. ಒಳಚರಂಡಿಗಳು ಇರುವಂತಹ ಪ್ರದೇಶಗಳಲ್ಲಿ ಗಿರಿಕಂದರಗಳಿಂದ ನೀರು ಹರಿದು ಬರುವಂತಹ ಸ್ಥಳಗಳನ್ನು ಇನ್ನು ಮುಂದೆ ‘ಬಫರ್ ಜೋನ್’ ಎಂದು ಘೋಷಿಸ ಲಾಗುತ್ತದೆ. ಅಂತಹ ಪ್ರದೇಶಗಳಲ್ಲಿ ಮನೆ ಅಥವಾ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲು ನೀರನ್ನು ತಡೆಹಿಡಿಯುವಂತಹ ಕಾರ್ಯಕ್ಕೆ ವಿರಾಮ ಹಾಕಲಾಗುತ್ತದೆ. ಏಕೆಂದರೆ ಹಾಗೆ ಮಾಡಿದಾಗ ಆ ಪ್ರದೇಶಗಳಲ್ಲಿ ಸ್ಥಗಿತಗೊಳ್ಳುವ ನೀರಿನ ಹರಿವು ಬೇರೆಡೆಗೆ ತಿರುವು ಪಡೆದು ಅಲ್ಲಿ ಭೂಕುಸಿತ ಉಂಟಾಗುವ ಅಪಾಯ ಎದುರಾಗುವುದರಿಂದ ಈ ನಿರ್ಬಂಧ ವಿಧಿಸಲಾಗಿದೆ.

ಇದೇ ರೀತಿ ವಾಣಿಜ್ಯ ಕಟ್ಟಡಗಳು, ಶಾಲೆಗಳು, ರೆಸಾರ್ಟ್‍ಗಳು, ಪೆಟ್ರೋಲ್ ಬಂಕ್‍ಗಳು ಅಥವಾ ಖಾಸಗಿ ಉದ್ಯಮಗಳನ್ನು ಪ್ರಾರಂಭಿಸಬೇಕಾದರೆ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಿಂದ ಕಡ್ಡಾಯ ನಿರಾಪೇಕ್ಷಣಾ ಪತ್ರ ಪಡೆದು ಬಳಿಕ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದು ಕಟ್ಟಡಗಳನ್ನು ನಿರ್ಮಿಸಬೇಕಾಗಿದೆ. ಅಲ್ಲದೆ 2018 ಹಾಗೂ 2019ರಲ್ಲಿ ಜಿಲ್ಲೆಯ ಯಾವ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿತ್ತು. ಆ ಪ್ರದೇಶಗಳಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದಿಲ್ಲ. ಇದೇ ಅಲ್ಲದೆ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯಿಂದ ವರದಿ ತರಿಸಿ, ಈ ಹಿಂದೆ ಭೂಕುಸಿತದ ಪ್ರದೇಶವಲ್ಲದೆ ಮುಂದೆಯೂ ಎದುರಾಗಬಹುದಾದ ಭೂಕುಸಿತ ಸಂಭವನೀಯ ಪ್ರದೇಶ ಹಾಗೂ ‘ರೆಡ್ ಅಲರ್ಟ್ ಸ್ಥಳಗಳಲ್ಲಿ ಭೂ ಪರಿವರ್ತನೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸರ್ಕಾರ ನಿರ್ಭಂಧ ವಿಧಿಸಿದ್ದ ಅವಧಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ಮಾತ್ರ 20 ಸೆಂಟ್‌ ಗಳವರೆಗೆ ಅಂದರೆ ಅಂದಾಜು 2700 ಚದರ ಅಡಿಗಳವರೆಗೆ ಪರಿವರ್ತನೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದರಿಂದಾಗಿ ಕೊಡಗಿನಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಒಮ್ಮೆಲೇ ಬ್ರೇಕ್‌ ಬಿದ್ದಂತಾಗಿತ್ತು. ಕೊಡಗಿನಲ್ಲಿ ಬಹುತೇಕ ಬೆಳೆ ಕಾಫಿಯೇ ಆಗಿದ್ದು ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿ ಕಡಿಮೆಯಾಗಿರುವುದು ಮತ್ತು ಕೃಷಿ ಉತ್ಪನ್ನಗಳ ದರ ಕುಸಿತದಿಂದಾಗಿಯೂ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದರು. ಈ ನಡುವೆ ಕೊಡಗಿನಲ್ಲಿ ಅದ್ಬುತ ಬೆಳವಣಿಗೆ ದಾಖಲಿಸುತ್ತಿರುವದೆಂದರೆ ಪ್ರವಾಸೋದ್ಯಮ ಮಾತ್ರ.

ಇಂದು ಕೊಡಗು ಪ್ರವಾಸೀ ಜಿಲ್ಲೆಯಾಗಿಯೇ ಗುರುತಿಸಿಕೊಂಡಿದ್ದು ವಾರ್ಷಿಕವಾಗಿ ಸುಮಾರು ೧೮ ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಐಟಿ ಬಿಟಿ ಉದ್ಯಮ ದಾಪುಗಾಲಿನ ಬೆಳವಣಿಗೆ ದಾಖಲಿಸಿದಂತೆಯೇ ಕೊಡಗಿನಲ್ಲಿ ಪ್ರವಾಸೋದ್ಯಮವೂ ಜತೆಗೇ ಬೆಳೆಯುತ್ತ ಸಾಗಿದೆ. ಬೆಂಗಳೂರಿಗೆ ಹತ್ತಿರದ ಪ್ರವಾಸೀ ಧಾಮ ಕೊಡಗೇ ಅಗಿದ್ದು ಕೇವಲ 250 ಕಿಲೋಮೀಟರ್‌ ದೂರದಲ್ಲಿರುವುದೂ ಇದಕ್ಕೆ ಪ್ರಮುಖ ಕಾರಣವಾಗಿದೆ.

ಇಂದು ಕೊಡಗಿನಲ್ಲಿ ಅಂದಾಜು 3000 ಕ್ಕೂ ಅಧಿಕ ಹೋಂ ಸ್ಟೇ ಗಳಿವೆ. ಅದರೆ ಇದರಲ್ಲಿ ಸರ್ಕಾರದಿಂದ ಅನುಮತಿ ಪಡೆದಿರುವುದು ಕೇವಲ 650 ಮಾತ್ರ. ಇನ್ನುಳಿದ ಹೋಂ ಸ್ಟೇ ಗಳಲ್ಲಿ ನೀತಿ ನಿಯಮಗಳನ್ನೂ ಗಾಳಿಗೆ ತೂರಿ ನಡೆಸಲಾಗುತ್ತಿದೆ. ಹೋಂ ಸ್ಟೇ ಉದ್ಯಮದಿಂದಾಗಿ ಕೊಡಗಿನಲ್ಲಿ ಸಾವಿರಾರು ಉದ್ಯೋಗ ಸೃಷ್ಟಿ ಆಗಿದೆ ಮತ್ತು ಆಗುತ್ತಿದೆ. ಭೂ ಪರಿವರ್ತನೆ ನಿಷೇಧದಿಂದ ನೂತನ ಹೋಂ ಸ್ಟೇ , ರೆಸಾರ್ಟ್‌ ಸ್ಥಾಪನೆಗೆ ತಡೆ ಬಿದ್ದಿತ್ತು. ಈಗ ತಡೆ ಇಲ್ಲದಿರುವುದರಿಂದ ಹೋಂ ಸ್ಟೇ ಗಳು ನಾಯಿ ಕೊಡೆಗಳಂತೆ ತಲೆ ಎತ್ತಲಿವೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸುತಿದ್ದಾರೆ.

ದಿನವೊಂದಕ್ಕೆ ಸುಮಾರು 3 ರಿಂದ 5 ಸಾವಿರ ಪ್ರವಾಸಿಗರು ಕೊಡಗಿಗೆ ಭೇಟಿ ನೀಡುತ್ತಾರೆ ಈ ಸಂಖ್ಯೆ ವೀಕೆಂಡ್‌ ಗಳಲ್ಲಿ 10 ಸಾವಿರ ತನಕ ಉಬ್ಬುತ್ತದೆ. ಇಷ್ಟು ಪ್ರವಾಸಿಗರು ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದಾಗಿ ಕೊಡಗು ಮಲಿನವಾಗುತ್ತಿದೆ ಎಂದು ಮಡಿಕೇರಿಯ ಕಾವೇರಿ ಸೇನೆ ಜಿಲ್ಲಾ ಸಂಚಾಲಕ ರವಿ ಚಂಗಪ್ಪ ಹೇಳಿದರು. ಪ್ರವಾಸಿ ತಾಣಗಳಲ್ಲಿ ಸಾಕಷ್ಟು ದೊಡ್ಡದಾಗಿ ಮಾಲಿನ್ಯ ಮಾಡದಂತೆ ಫಲಕಗಳನ್ನು ಹಾಕಿದ್ದರೂ ಪ್ರವಾಸಿಗರು ಮಲಿನ ಮಾಡುವುದು ತಪ್ಪಿಲ್ಲ ಎಂದೂ ಅವರು ಹೇಳಿದರು. ದಿನವೊಂದಕ್ಕೆ ಅನ್‌ ಲೈನ್‌ ಮೂಲಕ ಇಂತಿಷ್ಟೆ ಪ್ರವಾಸಿಗರಿಗೆ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ನೀಡಬೇಕು ಹಾಗಾದಲ್ಲಿ ಪರಿಸರ ಉಳಿಯಲಿದೆ ಎನ್ನುತ್ತಾರೆ.

ಈ ವರದಿಗಾರನೊಂದಿಗೆ ಮಾತನಾಡಿದ ಮಡಿಕೇರಿಯ ಹೋಂ ಸ್ಟೇ ಮಾಲೀಕ ನಟರಾಜ್‌ ಅವರ ಪ್ರಕಾರ ಕೊಡಗಿನಲ್ಲಿ ಈಗ ಇರುವ ಹೋಂ ಸ್ಟೇ ಗಳ ಸಂಖ್ಯೆಯೇ ಮಿತಿ ಮೀರಿದೆ. ಬಹಳಷ್ಟು ಹೋಂ ಸ್ಟೇ ಮಾಲೀಕರು ನಿಯಮ ಉಲ್ಲಂಘಿಸಿ ಬೇರೆಯವರಿಗೆ ಹೋಂ ಸ್ಟೇ ನಡೆಸಲು ಲೀಸ್‌ ಗೆ ನೀಡುತಿದ್ದಾರೆ. ಈಗ ಇರುವ ಹೋಂ ಸ್ಟೇ ಗಳಿಗೆ ಬಿಸಿನೆಸ್‌ ಇಲ್ಲ , ಇನ್ನು ಹೊಸದಾಗಿ ಹೋಂ ಸ್ಟೇ ಗಳನ್ನು ಆರಂಬಿಸಿದರೆ ಮತ್ತಷ್ಟು ಪರಿಸರ ನಾಶ ಆಗುತ್ತದೆ ಎನ್ನುತ್ತಾರೆ. ಮೊದಲಿಗೆ ಅನಧಿಕೃತ ಹೋಂ ಸ್ಟೇ ಗಳನ್ನು ಮುಚ್ಚಿಸಿ ನೂತನ ಹೋಂ ಸ್ಟೇ ಗಳನ್ನು ಪ್ರಾರಂಬಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಿ ಆ ಸಮಿತಿಯ ಮೂಲಕ ಹೊಸ ಹೋಂ ಸ್ಟೇ ಗಳಿಗೆ ಅನುಮತಿ ನೀಡುವುದು ಉತ್ತಮ ಎಂದೂ ಅವರು ಹೇಳಿದರು.

Tags: ಕೊಡಗಿನಲ್ಲಿ ಭೂ ಪರಿವರ್ತನೆಗೆ ಅಸ್ತು ಎಂದ ಸರ್ಕಾರ ; ಪರಿಣಾಮವೇನು ಗೊತ್ತೇ ?ಭೂ ಪರಿವರ್ತನೆ
Previous Post

ಟ್ರೋಲಿಂಗ್ ಓಕೆ, ಆದರೆ ಸಭ್ಯತೆಯ ಗೆರೆ ದಾಟುವುದು ಯಾಕೆ?

Next Post

ಪ್ರಾದೇಶಿಕ ಪಕ್ಷವಾಗಿ ಅಧಿಕಾರ ಹಿಡಿಯಲು ಜೆಡಿಎಸ್ ಗೆ ಎಲ್ಲಾ ಅವಕಾಶವಿದೆ, ಆದರೆ…

Related Posts

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!
ಇದೀಗ

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

by ಪ್ರತಿಧ್ವನಿ
January 20, 2026
0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Next Post
ಪ್ರಾದೇಶಿಕ ಪಕ್ಷವಾಗಿ ಅಧಿಕಾರ ಹಿಡಿಯಲು ಜೆಡಿಎಸ್ ಗೆ ಎಲ್ಲಾ ಅವಕಾಶವಿದೆ

ಪ್ರಾದೇಶಿಕ ಪಕ್ಷವಾಗಿ ಅಧಿಕಾರ ಹಿಡಿಯಲು ಜೆಡಿಎಸ್ ಗೆ ಎಲ್ಲಾ ಅವಕಾಶವಿದೆ, ಆದರೆ...

Please login to join discussion

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada