Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕೊಡಗಿನಲ್ಲಿ ಮತ್ತೆ ಬಿರುಸುಗೊಂಡ ಮಳೆ

ಕೊಡಗಿನಲ್ಲಿ ಮತ್ತೆ ಬಿರುಸುಗೊಂಡ ಮಳೆ
ಕೊಡಗಿನಲ್ಲಿ ಮತ್ತೆ ಬಿರುಸುಗೊಂಡ ಮಳೆ
Pratidhvani Dhvani

Pratidhvani Dhvani

September 5, 2019
Share on FacebookShare on Twitter

ಕಳೆದ ತಿಂಗಳ ಭೀಕರ ಪ್ರವಾಹ ಮತ್ತು ಭೂ ಕುಸಿತಕ್ಕೆ ಸಿಲುಕಿ ನಿಧಾನವಾಗಿ ಚೇತರಿಸಿಕೊಳ್ಳುತಿದ್ದ ಕೊಡಗಿನಲ್ಲಿ ಮಂಗಳವಾರದಿಂದ ಮಳೆ ಬಿರುಸುಗೊಂಡಿದ್ದು ಗುಡ್ಡ ಗಾಡಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಜನತೆ ಆತಂಕದಲ್ಲಿ ಬದುಕುವಂತಾಗಿದೆ. ಬಿರುಸುಗೊಂಡಿರುವ ಮಳೆಯಿಂದಾಗಿ ಜಿಲ್ಲಾಡಳಿತ ಸೆಪ್ಟೆಂಬರ್‌ 5 ರಂದು ರಜೆ ಘೋಷಿಸಿದೆ. ಅಷ್ಟೇ ಅಲ್ಲ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬುಧವಾರ ಮತ್ತು ಗುರುವಾರ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ಇದೆ.. ಬಜೆಟ್ ಇದೆ : ಆದರೂ BMRCL ನಿಂದಾಗಿ ಬಿಬಿಎಂಪಿಗೆ ತಲೆನೋವು !

ಮೋದಿ ಬರ್ತಾರೆ ಅಂತ ರಸ್ತೆ ಉಬ್ಬು ತೆರವು ಮಾಡಿದ ಬಿಬಿಎಂಪಿ : ಪ್ರತಿ ದಿನ ಅಪಘಾತಕ್ಕೆ ಕಾರಣ !

ಬಿಬಿಎಂಪಿ ಡಿ ಲಿಮಿಟೇಷನ್ ವಿರೋಧಿಸಿ ಸಾರ್ವಜನಿಕರು ನೀಡುತ್ತಿರುವ ಕಾರಣವೇನು ಗೊತ್ತಾ !

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ಸರಾಸರಿ 2283.88 ಮಿ. ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 3782.88 ಮಿ. ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 3035.57 ಮಿ. ಮೀ. ಕಳೆದ ವರ್ಷಇದೇ ಅವಧಿಯಲ್ಲಿ 5474.43 ಮಿ. ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ 2309.80 ಮಿ. ಮೀ. ಮಳೆ ಆಗಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 2861.98 ಮಿ. ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ 1506.27 ಮಿ. ಮೀ. ಮಳೆ ಆಗಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 3012.24 ಮಿ. ಮೀ. ಮಳೆಯಾಗಿತ್ತು. ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 7500 ಕ್ಯೂಸೆಕ್ಸ್‌ ತಲುಪಿದ್ದು ಅಷ್ಟೇ ಪ್ರಮಾಣದ ನೀರನ್ನು ನಾಲೆ ಹಾಗೂ ನದಿ ಮೂಲಕ ಹೊರಗೆ ಹರಿಸಲಾಗುತ್ತಿದೆ.

ಕಳೆದ ತಿಂಗಳ ರಕ್ಕಸ ಮಳೆಗೆ ಸಿಲುಕಿ ಜಿಲ್ಲೆಯಲ್ಲಿ ಸುಮಾರು 579 ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ಕಳೆದ ವರ್ಷದ ನಷ್ಟ ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕವಾಗಿತ್ತು. ಈ ಬಾರಿಯ ನಷ್ಟದಲ್ಲಿ ಬೆಳೆ ಹಾನಿಗೆ ಸುಮಾರು 266.5 ಕೋಟಿ ರೂಪಾಯಿ, ಮೂಲಭೂತ ಸೌಕರ್ಯಕ್ಕೆ 350.4 ಕೋಟಿ ರೂಪಾಯಿ ಹಾಗೂ ಮನೆಗಳಿಗೆ ಒಟ್ಟು 68.7 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಿಗೆ 56.3 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕಳೆದ ವಾರ ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾನಿ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆಯನ್ನೂ ನಡೆಸಿ ಜಿಲ್ಲೆಗೆ 536 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್‌ ಘೋಷಿಸಿದ್ದು ಅದರಲ್ಲಿ 100 ಕೋಟಿ ರೂಪಾಯಿಗಳನ್ನು ಇದೇ ವಾರ ಬಿಡುಗಡೆ ಮಾಡುವುದಾಗಿಯೂ ತಿಳಿಸಿದ್ದರು. ಬುಧವಾರ ಜಿಲ್ಲೆಗೆ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳಿಗೆ ಶಾಸಕರಾದ ಅಪ್ಪಚ್ಚು ರಂಜನ್‌ ಹಾಗೂ ಕೆ ಜಿ ಬೋಪಯ್ಯನವರ ಜತೆ ತೆರಳಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮಡಿಕೇರಿ ಮಂಗಳೂರು ರಸ್ತೆಗಾಗಿರುವ ಹಾನಿಯನ್ನು ಗಮನಿಸಿ ಹೆಚ್ಚುವರಿಯಾಗಿ 56 ಕೋಟಿ ರೂಪಾಯಿಗಳ ನೆರವನ್ನೂ ಘೋಷಿಸಿದ್ದಾರೆ.

ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಬೇಕು ಎನ್ನುವ ಹೊತ್ತಿನಲ್ಲೇ ಮಳೆ ಬಿರುಸು ಪಡೆದುಕೊಂಡಿರುವುದು ಅಧಿಕಾರಿಗಳನ್ನು ಸಮಸ್ಯೆಗೆ ಸಿಲುಕಿಸಿದೆ. ಕಳೆದ ವರ್ಷದ ಮಳೆಗೆ ಹಾನಿಗೀಡಾದ 1010 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಸಂತ್ರಸ್ತರಿಗೆ ಇನ್ನೂ ಹಂಚಿಕೆ ಆಗಬೇಕಾಗಿದೆ. ಕಳೆದ ವರ್ಷ ಅಧಿಕಾರಿಗಳು 6 ತಿಂಗಳಿನಲ್ಲೇ ನೂತನ ತಂತ್ರಜ್ಞಾನದ ಮೂಲಕ ಭೂಕುಸಿತ ತಾಳಿಕೊಳ್ಳಬಲ್ಲ ಮನೆಗಳನ್ನು ನಿರ್ಮಿಸಿ ಸಂತ್ರಸ್ಥರಿಗೆ ಕೊಡುವುದಾಗಿ ಹೇಳಿದರೂ ಇನ್ನೂ ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ. ಇದೀಗ ಮತ್ತೆ ಆರಂಭಗೊಂಡ ಮಳೆ ಮನೆಗಳ ನಿರ್ಮಾಣ ಕಾರ್ಯಕ್ಕೂ ಅಡಚಣೆ ತಂದಿದೆ.

15 ದಿನಗಳ ಹಿಂದೆ ಈ ವರ್ಷ ಜಿಲೆಯಲ್ಲಿ ಸುಮಾರು 549 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿತ್ತು. ಆದರೆ, ಮೊನ್ನೆ ದಿನಾಂಕ 31 ರಂದು ಸಿದ್ದಪಡಿಸಿದ ಅಂದಾಜಿನಂತೆ ಜಿಲ್ಲೆಯಲ್ಲಿ 363 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು ಶೇಕಡಾ 15 ರಿಂದ 75ರವರೆಗೆ 643 ಮನೆಗಳು ಮತ್ತು ಶೇಕಡಾ 15 ರಿಂದ 25 ರವರೆಗೆ ಒಟ್ಟು 1032 ಮನೆಗಳು ಹಾನಿಗೀಡಾಗಿವೆ ಎಂದು ಅಂದಾಜಿಸಿದೆ. ಪೂರ್ಣ ಹಾನಿಗೀಡಾದ ಮನೆಗಳ ಸಂತ್ರಸ್ಥರಿಗೆ ತಲಾ 5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ನಿರ್ಮಿಸಿ ಕೊಡುವುದಾಗಿ ತಿಳಿಸಿದ್ದು, ಅಲ್ಲಿ ತನಕ ತಿಂಗಳಿಗೆ 5,000 ರೂಪಾಯಿಗಳ ಬಾಡಿಗೆಯನ್ನೂ ಸಂತ್ರಸ್ತರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಶೇಕಡಾ 75 ರವರೆಗೆ ಹಾನಿಯಾದ ಮನೆಗಳ ಸಂತ್ರಸ್ಥರಿಗೆ ಪರಿಹಾರವಾಗಿ ಒಂದು ಲಕ್ಷ ರೂಪಾಯಿಗಳನ್ನೂ, ಅಲ್ಪ ಹಾನಿಗೀಡಾದ ಮನೆಗಳ ಸಂತ್ರಸ್ಥರಿಗೆ ಮನೆ ರಿಪೇರಿ ಮಾಡಿಕೊಳ್ಳಲು 25 ಸಾವಿರ ರೂಪಾಯಿಗಳ ನೆರವನ್ನೂ ಘೋಷಿಸಲಾಗಿದೆ. ಈ ಮಧ್ಯೆ ಮಳೆ ಹೆಚ್ಚಾಗುತ್ತಿರುವುದರಿಂದ ಈ ಸಂತ್ರಸ್ತರ ಪಟ್ಟಿಯನ್ನೂ ಪರಿಷ್ಕರಿಸುವುದು ಅನಿವಾರ್ಯವಾಗಲಿದೆ.

ಆಗಸ್ಟ್‌ ತಿಂಗಳಿನ ಎರಡನೇ ವಾರದಲ್ಲಿ ಜಿಲ್ಲೆಯಲ್ಲಿ 50 ಸಂತ್ರಸ್ತರ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು 3 ಸಾವಿರಕ್ಕೂ ಅಧಿಕ ಸಂತ್ರಸ್ತರು ಆಶ್ರಯ ಪಡೆದುಕೊಂಡಿದ್ದರು. ಸೆಪ್ಟೆಂಬರ್‌ 5 ಕ್ಕೆ ಜಿಲ್ಲೆಯಲ್ಲಿ ಸಂತ್ರಸ್ತರ ಸಂಖ್ಯೆ 204 ಕ್ಕೆ ಇಳಿದಿದ್ದು ಈಗ ಸಿದ್ದಾಪುರ ಸಮೀಪದ ಕರಡಿಗೋಡು ಮತ್ತು ನೆಲ್ಲಿಹುದಿಕೇರಿಯಲ್ಲಿ ಮಾತ್ರ ಎರಡು ಸಂತ್ರಸ್ತ ಪರಿಹಾರ ಕೇಂದ್ರಗಳಿವೆ. ಮಳೆ ಬಿರುಸಾದರೆ ಪುನಃ ಜಿಲ್ಲಾಡಳಿತ ಸಂತ್ರಸ್ತರ ಪರಿಹಾರ ಕೇಂದ್ರಗಳನ್ನುತೆರೆಯಬೇಕಾಗುತ್ತದೆ. ಹಾಗಾಗದಿರಲಿ ಎಂದು ಆಶಿಸೋಣ.

RS 500
RS 1500

SCAN HERE

don't miss it !

ಚಾರ್ ಧಾಮ್ ಯಾತ್ರೆ: 2 ತಿಂಗಳಲ್ಲಿ 203 ಯಾತ್ರಿಗಳ ಸಾವು
ದೇಶ

ಚಾರ್ ಧಾಮ್ ಯಾತ್ರೆ: 2 ತಿಂಗಳಲ್ಲಿ 203 ಯಾತ್ರಿಗಳ ಸಾವು

by ಪ್ರತಿಧ್ವನಿ
June 27, 2022
ಆಸ್ಪತ್ರೆಯ ಮಹಡಿ ತುದಿಯಲ್ಲಿ ಕುಳಿತ ರೋಗಿ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ!
ದೇಶ

ಆಸ್ಪತ್ರೆಯ ಮಹಡಿ ತುದಿಯಲ್ಲಿ ಕುಳಿತ ರೋಗಿ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ!

by ಪ್ರತಿಧ್ವನಿ
June 25, 2022
ಉದಯಪುರ ಕೊಲೆ ಪ್ರಕರಣ; NIA ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ದೇಶ

ಉದಯಪುರ ಕೊಲೆ ಪ್ರಕರಣ; NIA ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

by ಪ್ರತಿಧ್ವನಿ
June 29, 2022
ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ
ಕರ್ನಾಟಕ

ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

by ಪ್ರತಿಧ್ವನಿ
June 26, 2022
ದೇಶ

ಆಂಧ್ರ ಪ್ರದೇಶಕ್ಕೆ ಪ್ರಧಾನಿ ಭೇಟಿ: ನಟ ಚಿರಂಜೀವಿಗೆ ವಿಶೇಷ ಆಹ್ವಾನ

by ಪ್ರತಿಧ್ವನಿ
June 29, 2022
Next Post
‘ಶಿಕ್ಷಕರ ದಿನಾಚರಣೆ ಎಂದರೆ ಕೇವಲ ರಾಧಾಕೃಷ್ಣರನ್ನು ನೆನೆಸಿಕೊಳ್ಳುವುದಲ್ಲ’

‘ಶಿಕ್ಷಕರ ದಿನಾಚರಣೆ ಎಂದರೆ ಕೇವಲ ರಾಧಾಕೃಷ್ಣರನ್ನು ನೆನೆಸಿಕೊಳ್ಳುವುದಲ್ಲ’

1975ರಿಂದಲೂ ಕಾನೂನಿಗಿಂತ ರಾಜಕೀಯ ದ್ವೇಷವೇ ಬಲಶಾಲಿ

1975ರಿಂದಲೂ ಕಾನೂನಿಗಿಂತ ರಾಜಕೀಯ ದ್ವೇಷವೇ ಬಲಶಾಲಿ

ಹೆಚ್ಚಿನ ದಂಡದ ಕಾಯ್ದೆಯ ಜೊತೆ ಹೆಚ್ಚಿದೆ ಪೊಲೀಸರ ಜವಾಬ್ದಾರಿ

ಹೆಚ್ಚಿನ ದಂಡದ ಕಾಯ್ದೆಯ ಜೊತೆ ಹೆಚ್ಚಿದೆ ಪೊಲೀಸರ ಜವಾಬ್ದಾರಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist