Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು  

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು
ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ

January 31, 2020
Share on FacebookShare on Twitter

ಬಹುದಿನಗಳಿಂದ ರಾಜ್ಯದಲ್ಲಿ ಚರ್ಚೆಯಲ್ಲಿದ್ದ ಸಂಪುಟ ಪುನರಾಚನೆ ವಿಷಯಕ್ಕೆ ಸಂಬಂಧಿಸಿ ಹೊಸ ತಿರುವು ಲಭಿಸಿದೆ. ದೆಹಲಿಯಲ್ಲಿ ಅಮಿತ್‌ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಕೊನೆಗೊಂಡಿದ್ದು, ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಮಾಡುವುದಿಲ್ಲ ಎಂದು ಯಡಿಯೂರಪ್ಪನವರು ತಿಳಿಸಿದ್ದಾರೆ. ಇನ್ನು ಮೂರು ದಿನಗಳ ಗಡುವು ನೀಡಿರುವ ಯಡಿಯೂರಪ್ಪ, ಬೆಂಗಳೂರಿನಲ್ಲಿ ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿ, ಮುಖಂಡರ ಮನವೊಲಿಕೆಯ ನಂತರ ಸಂಪುಟ ವಿಸ್ತರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ಕಳೆದ ಒಂದು ತಿಂಗಳಿನಿಂದ ಹೈಕಮಾಂಡ್‌ ಭೇಟಿಗಾಗಿ ಕಾದು ಕುಳಿತಿದ್ದ ಯಡಿಯೂರಪ್ಪನವರಿಗೆ ಇಂದು ಆ ಭಾಗ್ಯ ಒದಗಿ ಬಂತು. ಇಂದು ಸಂಜೆ ನಾಲ್ಕು ಗಂಟೆಗೆ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪನವರು ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಅಮಿತ್‌ ಶಾ ಮನವೊಲಿಸಲು ಸಫಲರಾದರು. ಆದರೆ, ಯಡಿಯೂರಪ್ಪನವರ ಪಟ್ಟಿಯಲ್ಲಿದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುವುದು ಸೂಕ್ತವಲ್ಲ ಎಂದು ಬಿಜೆಪಿ ಹೈಕಮಾಂಡ್‌ ಅಭಿಪ್ರಾಯಪಟ್ಟಿದೆ. ಹೀಗಾಗಿ ಉಪಚುನಾವಣೆಯಲ್ಲಿ ಗೆದ್ದಂತಹ ಶಾಸಕರಿಗೆ ನಿರಾಸೆಯನ್ನು ತಂದಿದೆ.

ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ ನೀಡ್ತೀರಾ ಎಂದ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿರುವ ಸಿಎಂ ಯಡಿಯೂರಪ್ಪ, ಇನ್ನೊಂದು ಎರಡು ದಿನಗಳು ಕಾಯುವಂತೆ ಸೂಚಿಸಿದ್ದಾರೆ. ಅವರ ಮಾತಿನಲ್ಲಿ ಎಲ್ಲರಿಗೂ ಸಚಿವ ಸ್ಥಾನ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಸೋತವರ ಕಥೆ ಏನು ಎಂದಿದ್ದಕ್ಕೂ ಸಿಎಂ ಯಡಿಯೂರಪ್ಪ ಉತ್ತರ ಕೊಟ್ಟಿಲ್ಲ. ಇನ್ನು ಡಿಸಿಎಂ ಪೋಸ್ಟ್ ಕೊಡ್ತೀರಾ ಎಂದಿದ್ದಕ್ಕೆ ಮಾತ್ರ ಖಡಕ್ ಉತ್ತರ ಕೊಟ್ಟಿರುವ ಸಿಎಂ ಯಡಿಯೂರಪ್ಪ, ಈಗಿರುವ ಮೂವರು ಉಪಮುಖ್ಯಮಂತ್ರಿಗಳನ್ನು ಬಿಟ್ಟು ಮತ್ತೆ ಡಿಸಿಎಂ ಪೋಸ್ಟ್ ಕೊಡುವುದಿಲ್ಲ ಎಂದಿದ್ದಾರೆ. ಒಟ್ಟಾರೆ ಯಡಿಯೂರಪ್ಪ ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಹೈಕಮಾಂಡ್ ಮುಖ ತಿರುಗಿಸಿದ್ದು, ಕೆಲವರ ಹೆಸರನ್ನು ಕೈಬಿಡುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. ಇನ್ನು ನೂತನವಾಗಿ ಗೆದ್ದವರಲ್ಲಿ ಕೇವಲ 6 ಮಂದಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ಕೊಟ್ಟು ಉಳಿದವರನ್ನು ಸಮಾಧಾನ ಮಾಡಲು ಸೂಚನೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಯಾರಿಗೆ ಕೊಡೋದು ಯಾರನ್ನು ಸಮಾಧಾನ ಮಾಡೋದು ಅನ್ನೋ ಯೋಚನೆಯಲ್ಲಿ ಯಡಿಯೂರಪ್ಪ ಬೆಂಗಳೂರು ಕಡೆಗೆ ಹೊರಡಲು ಸಿದ್ಧತೆ ನಡೆಸಿದ್ದಾರೆ.

ದೆಹಲಿ ದೊರೆಗಳ ದರ್ಬಾರ್‌ಗೆ ಕಂಗಾಲಾದ ಯಡಿಯೂರಪ್ಪ! ಉಳಿದ ಮಾರ್ಗ ರಾಜೀನಾಮೆ..?

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕರ್ನಾಟಕ ಮಾಧ್ಯಮಗಳಲ್ಲಿ ರಾಜಾಹುಲಿ ಹುಲಿ ಎಂಬ ಬಿರುದು ಪಡೆದಿದ್ದಾರೆ. ಆದ್ರೆ ದೆಹಲಿಯ ಬಿಜೆಪಿ ನಾಯಕರ ಮನೆ ಮುಂದೆ ಬೆಕ್ಕಿನ ಮರಿಯಂತೆ ಅತ್ತಿಂದ ಇತ್ತಿಂದ ಓಡಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಆಗುತ್ತಿರುವ ಅವಮಾನವನ್ನು ರಾಜ್ಯದ ಜನರೇ ಸಹಿದ ರೀತಿಯಲ್ಲಿ ಸ್ವಪಕ್ಷೀಯರಿಂದ ಭಾರೀ ಅಪಮಾನಕ್ಕೆ ತುತ್ತಾಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಹಿರಿಯ ವಯಸ್ಸಿನಲ್ಲಿ ಯಡಿಯೂರಪ್ಪ ಇಷ್ಟೊಂದು ಅವಮಾನ ಅನುಭವಿಸಬೇಕೆ ಎಂದು ಓರ್ವ ಸಾಮಾನ್ಯ ನಾಗರಿಕ ಪ್ರಶ್ನಿಸುವ ಹಾಗಿದೆ ಯಡಿಯೂರಪ್ಪ ಅವರ ಇಂದಿನ ಪರಿಸ್ಥಿತಿ. ದೆಹಲಿಗೆ ಬರಬೇಡಿ ಎಂಬ ಸಂದೇಶವಿದ್ದರೂ ದೆಹಲಿಗೆ ತೆರಳಿದ ಯಡಿಯೂರಪ್ಪ ಮಾಧ್ಯಮಗಳ ಎದುರು ಬರಲು ಸಾಧ್ಯವಾಗದೆ ಕರ್ನಾಟಕ ಭವನದ ಕೊಠಡಿಯಲ್ಲಿ ಅಡಗಿ ಕುಳಿತುಕೊಳ್ಳುವ ಪರಿಸ್ಥಿತಿ ಬಂದಿತ್ತು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಉದ್ದೇಶದಿಂದ ನಿನ್ನೆ ಬೆಳಗ್ಗೆ ಇಬ್ಬರು ಮಕ್ಕಳ ಸಮೇತ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಂಡಿದ್ದರು. ಕೇಂದ್ರ ಸಚಿವ ಧಮರ್ೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ ರಾಜ್ಯದ ಕೆಲವೊಂದು ಯೋಜನೆಗಳು ಹಾಗು ರಾಜ್ಯಕ್ಕೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದ್ದರು. ಆ ಬಳಿಕ ರಾತ್ರಿ 9 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಿವಾಸಕ್ಕೆ ತೆರಳಿದ ಯಡಿಯೂರಪ್ಪಗೆ ಜೆ.ಪಿ ನಡ್ಡಾ ಸಿಗಲಿಲ್ಲ. ಜೆ.ಪಿ ನಡ್ಡಾ ಮನೆಗೆ ವಾಪಸ್ ಬರುವ ತನಕ ಕಾದು ಕುಳಿತ ಯಡಿಯೂರಪ್ಪ ಮೈಸೂರು ಪೇಟ ತೊಡಿಸಿ, ಪುಷ್ಪಗುಚ್ಚ ಕೊಟ್ಟು ರಾಷ್ಟ್ರೀಯ ಅಧ್ಯಕ್ಷ ಆಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಭೇಟಿಯಾದ ಸಿಎಂ ಯಡಿಯೂರಪ್ಪ ಕೆಲವೇ ನಿಮಿಷಗಳಲ್ಲಿ ಭೇಟಿ ಮುಗಿಸಿ ಮನೆಯಿಂದ ವಾಪಸ್ ಆಗಿದ್ದಾರೆ. ಆದರೆ ಅಮಿತ್ ಶಾ ಭೇಟಿಗೆ ನಿನ್ನೆ ಅವಕಾಶ ಕೊಟ್ಟಿರಲಿಲ್ಲ. ಆದರೂ ಯಡಿಯೂರಪ್ಪ ಅಮಿತ್ ಶಾ ನಿವಾಸಕ್ಕೆ ತೆರಳಲು ಯತ್ನಿಸಿ ವಿಫಲರಾದರು ಎನ್ನಲಾಗಿದೆ. ಅಷ್ಟಕ್ಕೂ ಜೆ.ಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಹಾಗಿದ್ದ ಮೇಲೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಜೆ.ಪಿ ನಡ್ಡಾ ಬಳಿಯೇ ಚರ್ಚೆ ಮಾಡಬೇಕಿತ್ತು. ಅಮಿತ್ ಷಾ ಬಳಿ ಹೋಗುವ ಅವಶ್ಯಕತೆಯೇ ಇರಲಿಲ್ಲ. ಅಮಿತ್ ಶಾ ಜೊತೆ ಚರ್ಚೆ ಮಾಡುವುದಾಗಿದ್ದರೆ, ಅಮಿತ್ ಷಾ ಬೆಂಗಳೂರಿಗೆ ಬಂದಾಗಲೇ ಚರ್ಚೆ ಮಾಡಬಹುದಿತ್ತು. ಅಮಿತ್ ಷಾ ಹುಬ್ಬಳ್ಳಿಗೆ ಬಂದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡ್ತೇನೆ ಎಂದು ಯಡಿಯೂರಪ್ಪ ಹೇಳಿದ್ದರು. ಅವಕಾಶ ಸಿಗದೆ ಪೆಚ್ಚು ಮೋರೆ ಹಾಕಿಕೊಂಡು ವಾಪಸ್ ಬಂದಿದ್ದರು.

ಇವೆಲ್ಲಾ ಬೆಳವಣಿಗೆಗಳನ್ನು ನೋಡಿದರೆ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುವುದು ಬಿಜೆಪಿ ಹೈಕಮಾಂಡ್‌ಗೇ ಸುತರಾಂ ಇಷ್ಟವಿಲ್ಲ ಎನ್ನುವ ಸಂದೇಶವನ್ನು ನೀಡುತ್ತವೆ. ಹೀಗಾಗಿ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆಗೆ ಅವಕಾಶವನ್ನೂ ಈವರೆಗೆ ನೀಡಿರಲಿಲ್ಲ. ಇಂದು ನಡೆದ ಸಭೆಯೂ ಸಂಪುಟ ವಿಸ್ತರಣೆಯ ಪೂರ್ವಭಾವಿ ಸಭೆಯಾಗಿ ಕಾಣುತ್ತಷ್ಟೇ ಹೊರತು, ಯಡಿಯೂರಪ್ಪನವರ ಮಾತಿಗೆ ಬೆಲೆ ಕೊಟ್ಟು ಅವರ ಪಟ್ಟಿಯನ್ನು ಪುರಸ್ಕರಿಸುವ ಶಿಷ್ಟಾಚಾರ ಬಿಜೆಪಿ ಹೈಕಮಾಂಡ್‌ ತೋರಲಿಲ್ಲ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ನಾನು ಯಾವ ಮಗನಿಗೂ ಹೆದರೋದಿಲ್ಲ, ತಾಕತ್ತಿದ್ರೆ ಚುನಾವಣೆ ಅಖಾಡಕ್ಕೆ ಬನ್ನಿ ; ಜೆಡಿಎಸ್‌, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿದ ನಾರಾಯಣಗೌಡ..!
Top Story

ನಾನು ಯಾವ ಮಗನಿಗೂ ಹೆದರೋದಿಲ್ಲ, ತಾಕತ್ತಿದ್ರೆ ಚುನಾವಣೆ ಅಖಾಡಕ್ಕೆ ಬನ್ನಿ ; ಜೆಡಿಎಸ್‌, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿದ ನಾರಾಯಣಗೌಡ..!

by ಪ್ರತಿಧ್ವನಿ
April 1, 2023
ಕಾಂಗ್ರೆಸ್​ ಕ್ಷೇತ್ರದಲ್ಲಿ ಕಮಲ ಅರಳಿಸೋಕೆ ಬಿಜೆಪಿ ಅಣ್ಣಾಮಲೈ ಅಸ್ತ್ರ
Top Story

ಕಾಂಗ್ರೆಸ್​ ಕ್ಷೇತ್ರದಲ್ಲಿ ಕಮಲ ಅರಳಿಸೋಕೆ ಬಿಜೆಪಿ ಅಣ್ಣಾಮಲೈ ಅಸ್ತ್ರ

by ಮಂಜುನಾಥ ಬಿ
March 31, 2023
ಒಂದು ಕಡೆ ಲಕ್ಷ.. ಕೋಟಿಗೆ ರೇಟು ಫಿಕ್ಸ್ ಮಾಡ್ತಾರೆ.. ಇನ್ನೊಂದು ಕಡೆ ಮೀಸಲಾತಿ ಅಂತಾರೆ : ಬಿಜೆಪಿ ವಿರುದ್ಧ ಹೆಚ್‌ಡಿಕೆ ಕಿಡಿ
Top Story

ಒಂದು ಕಡೆ ಲಕ್ಷ.. ಕೋಟಿಗೆ ರೇಟು ಫಿಕ್ಸ್ ಮಾಡ್ತಾರೆ.. ಇನ್ನೊಂದು ಕಡೆ ಮೀಸಲಾತಿ ಅಂತಾರೆ : ಬಿಜೆಪಿ ವಿರುದ್ಧ ಹೆಚ್‌ಡಿಕೆ ಕಿಡಿ

by ಪ್ರತಿಧ್ವನಿ
March 28, 2023
SIDDARAMAIAH : ಧ್ರುವನಾರಾಯಣ್ ಹಾದಿಯಲ್ಲೇ ಮಗ ದರ್ಶನ್‌ ನಡೀತಾನೆ ..! | DHRUVA NARAYAN | DARSHAN |
ಇದೀಗ

SIDDARAMAIAH : ಧ್ರುವನಾರಾಯಣ್ ಹಾದಿಯಲ್ಲೇ ಮಗ ದರ್ಶನ್‌ ನಡೀತಾನೆ ..! | DHRUVA NARAYAN | DARSHAN |

by ಪ್ರತಿಧ್ವನಿ
March 29, 2023
ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ
Top Story

ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
March 31, 2023
Next Post
ಜಾಮಿಯಾ ಗುಂಡಿನ ಸದ್ದು ಬೇರೆಲ್ಲೂ ಕೇಳಿಸದಿರಲಿ!

ಜಾಮಿಯಾ ಗುಂಡಿನ ಸದ್ದು ಬೇರೆಲ್ಲೂ ಕೇಳಿಸದಿರಲಿ!

CAA ವಿರೋಧಿಸಿ ಪ್ರತಿಭಟಿಸುವವರಿಗೆ ಅವಮಾನದ ಬಹುಮಾನ 

CAA ವಿರೋಧಿಸಿ ಪ್ರತಿಭಟಿಸುವವರಿಗೆ ಅವಮಾನದ ಬಹುಮಾನ 

ಪಿಸ್ತೂಲ್ ಖರೀದಿಗಿಂತ ರೆಸ್ಟಾರಂಟ್‌ ತೆರೆಯಲು ಹೆಚ್ಚು ದಾಖಲೆ ಸಲ್ಲಿಸಬೇಕು! 

ಪಿಸ್ತೂಲ್ ಖರೀದಿಗಿಂತ ರೆಸ್ಟಾರಂಟ್‌ ತೆರೆಯಲು ಹೆಚ್ಚು ದಾಖಲೆ ಸಲ್ಲಿಸಬೇಕು! 

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist