Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊರೊನಾ ಇಫೆಕ್ಟ್ ಈಗ ರಾಯಚೂರಿನ ಮುದಗಲ್‌ಗೆ!

ಕೊರೊನಾ ಇಫೆಕ್ಟ್ ಈಗ ರಾಯಚೂರಿನ ಮುದಗಲ್‌ಗೆ!
ಕೊರೊನಾ ಇಫೆಕ್ಟ್ ಈಗ ರಾಯಚೂರಿನ ಮುದಗಲ್‌ಗೆ!

February 27, 2020
Share on FacebookShare on Twitter

ಇತ್ತೀಚೆಗೆ ಕೊರೊನಾ ವೈರಸ್ ಎಂದರೆ ಮನದಲ್ಲಿ ಒಂಥರಾ ಭಯ ಆವರಿಸುತ್ತದೆ. ಕೊರೊನಾ ವೈರಸ್ ನಿಂದ ಚೀನಾ ದಲ್ಲಿ ಸಾವಿನ ಸರಣಿ ನಿರಂತರ ಸಾಗಿದೆ. ಇದರಿಂದ ಇಡೀ ದೇಶವೇ ತಲ್ಲಣಗೊಂಡಿದೆ. ವ್ಯಾಪಾರ ವಹಿವಾಟುಗಳು ಸಂಪೂರ್ಣ ಬಿದ್ದುಹೋಗಿವೆ. ಆದರೆ ಇದರ ಪರಿಣಾಮ ಕರ್ನಾಟಕದ ಮುದಗಲ್ ಗೂ ಆಗಿದೆ. ಹೌದು ಆದರೆ ಈ ಪರಿಣಾಮ ಯಾರ ಮೇಲೂ ಅಲ್ಲ ಆದರೆ ಮುದಗಲ್ ನ ಗ್ರಾನೈಟ್ ವ್ಯವಹಾರದ ಮೇಲೆ…

ಹೆಚ್ಚು ಓದಿದ ಸ್ಟೋರಿಗಳು

ಬಿರುಗಾಳಿಯಾಗಿರುವ ರಾಹುಲ್ ಗಾಂಧಿ ಸುನಾಮಿ ಆಗುಬಲ್ಲರೆ?

ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

ನಂದಿನಿ ಮೊಸರು ಪ್ಯಾಕೆಟ್‌ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!

ಎಲ್ಲಿದೆ ಇದು?

ಮುದಗಲ್ ಕೋಟೆ ಎಂದೇ ಪ್ರಸಿದ್ಧ ಇರುವ ಈ ಊರಿನಲ್ಲಿ ಎಲ್ಲಿ ನೋಡಿದರೂ ಕಲ್ಲು. ಇದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿಗೆ ಒಳಪಡುತ್ತದೆ. ಹುಬ್ಬಳ್ಳಿಯಿಂದ ರಾಯಚೂರಿನ ಕಡೆಗೆ 190 ಕಿಮಿ ದೂರದಲ್ಲಿರುವ ಈ ಮುದಗಲ್ ಕಲ್ಲಿಗೂ ಕೊರೊನಾ ಗೆರೆ ಕೊರೆದಿದೆ.

ಇಲ್ಲಿ ಸುಮಾರು ಏಳೆಂಟು ಗಣಿ ಕಂಪೆನಿಗಳು ಕಾರ್ಯನಿರ್ವಹಿಸುತ್ತಿದ್ದವು. ಪ್ರತಿ ತಿಂಗಳು ಆರು ಕೋಟಿ ಯಷ್ಟು ವ್ಯವಹಾರ. ಆದರೆ ಕೊರೊನಾದಿಂದ ಭಯ ಭೀತರಾದ ಚೀನಿಯರು ಈಗ ಖರೀದಿ ಮಾಡುತ್ತಿಲ್ಲ.

ಮುದಗಲ್ ನ ಗ್ರೇ ಅಥವಾ ಎಂಡಿ 5, ಹಾಗೂ ಆದಾಪುರ ಭಾಗದ ಕ್ಯಾಟ್ ಐ ಎಂಬ ಉತ್ಕೃಷ್ಟ ಗ್ರಾನೈಟ್ ಚೀನಾ, ಥೈವಾನ್ ಹಾಗೂ ಜಪಾನಿಗೆ ಹೆಚ್ಚು ರಫ್ತಾಗುತ್ತಿತ್ತು. ಶೇಕಡಾ 90 ರಷ್ಟು ಖರೀದಿಸುತ್ತಿದ್ದ ಚೀನಿಯರು ಈಗ ಖರೀದಿ ಮಾಡುತ್ತಿಲ್ಲ. ಈಗ ಏಕಾಎಕಿ ಈ ಬೆಳವಣಿಗೆ ಮುದಗಲ್ ನ ಕಲ್ಲು ವ್ಯಾಪಾರಕ್ಕೆ ಕುಂದು ತಂದಿದ್ದು, ಈಗ ಎಲ್ಲ ಕಂಪೆನಿಗಳು ಬಂದ್ ಮಾಡುವ ವಿಚಾರದಲ್ಲಿವೆ. ಕಳೆದ ಎರಡು ತಿಂಗಳಿನಿಂದ ಗ್ರಾನೈಟ್ ಹಾಗೇ ಉಳಿದಿದ್ದು ಉದ್ಯಮ ಸ್ಥಗಿತಗೊಂಡಿದೆ. ಇಲ್ಲಿನ ಗ್ರಾನೈಟ್ ಗೆ ಸ್ಥಳೀಯವಾಗಿ ಮಾರುಕಟ್ಟೆಯಿಲ್ಲ. ಇವರು ವಿದೇಶಿಯರನ್ನೇ ಅವಲಬಿಸಿದ್ದಾರೆ.

ಶಫಿ ಉಲ್ಲಾ, ಗಣಿ ಕಂಪೆನಿ ವ್ಯವಸ್ಥಾಪಕರೊಬ್ಬರನ್ನು ಕೇಳಿದಾಗ, “ಈ ಗ್ರಾನೈಟ್, ಪ್ರತಿ ಸ್ಕೇರ್ ಮೀಟರ್ ಗೆ ಸುಮಾರು 11,231 ರೂ.ಯಂತೆ ಚೀನಾಗೆ ರಫ್ತಾಗುತ್ತಿದ್ದ ಕಚ್ಚಾ ಗ್ರಾನೈಟ್ ಪ್ರತಿ ಕ್ವಾರೆಯಲ್ಲೂ 400 ಚ.ಮೀಗೂ ಅಧಿಕ ಪ್ರಮಾಣದಲ್ಲಿ ಹಾಗೇ ಉಳಿದಿದೆ. ಸ್ಥಳೀಯವಾಗಿ ಪಾಲಿಶ್ ಆಗದ ಹಿನ್ನೆಲೆ ದೊಡ್ಡ ನಷ್ಟ ಉಂಟಾಗುತ್ತಿದೆ. ಚೀನಾದ ದಿಢೀರ್ ಬೆಳವಣಿಗೆ ನಮಗೆ ಹೀಗೆ ಹಾನಿಯುಂಟು ಮಾಡುತ್ತದೆ ಎಂದೂ ಊಹಿಸಿಯೂ ಇರಲಿಲ್ಲ”.

ಎಷ್ಟು ಜನರ ದುಡಿಮೆ ಹೊಡೆತ!

ಇಲ್ಲಿರುವ ಪ್ರತಿಯೊಂದು ಗಣಿ ಸಂಸ್ಥೆಯಲ್ಲಿ 400-450 ಜನ ಕಾರ್ಮಿಕರು ದುಡಿಯುತ್ತಿದ್ದರು. ಆದರೆ ಈಗ ಎರಡು ತಿಂಗಳಿನಿಂದ ಗಣಿ ಬಂದ್ ಆಗಿದ್ದರಿಂದ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇನ್ನಷ್ಟು ಕಾರ್ಮಿಕರು ಕೆಲಸ ಕಳೆದುಕೊಂಡು ಗುಳೆ ಹೋಗುವಂಥ ಸ್ಥಿತಿ ಇದೆ. ಒಂದು ಗಣಿ ನಿರ್ವಹಣೆಗೆ ಮಾಲೀಕರಿಗೆ ತಿಂಗಳಿಗೆ ಕನಿಷ್ಠ 30 ಲಕ್ಷ ರೂ. ಬೇಕಾಗುತ್ತದೆ. ಆದರೆ ವ್ಯಾಪಾರವೇ ಇಲ್ಲದಿರುವುದರಿಂದ ಸುಮಾರು 2,500 ಜನ ಕೆಲಸಗಾರರು ನಿರುದ್ಯೋಗಿಗಳಾಗುತ್ತಿದ್ದಾರೆ. ಈ 2,500 ಜನರು ಗಣಿ ಕೆಲಸ ಮೇಲೆ ಅವಲಂಬಿತರು. ಇವರೆಲ್ಲ ಈಗ ಎಲ್ಲಿ ಹೋಗಬೇಕು. ಇವರ ಮಡದಿ ಮಕ್ಕಳ ಗತಿ!

ಕಾರ್ಮಿಕರು ಏನನ್ನುತ್ತಾರೆ!

ಇಬ್ರಾಯಿಂ ರೋಣದ, “ನಾನು ಹಲವಾರು ವರ್ಷಗಳಿಂದ ಇಲ್ಲೆ ಕೆಲಸ ಮಾಡುತ್ತಿದ್ದೇನೆ. ಕಲ್ಲು ಗಣಿಗಾರಿಕೆ ಬಿಟ್ಟು ಬೇರೆ ಕೆಲಸ ಮಾಡಲು ಬರೋಲ್ಲ. ನಾನು ಇಲ್ಲಿ ಪಾಲಿಶ್ ಮಾಡುತ್ತೇನೆ. ಈಗ ಕೆಲಸವೇ ಇಲ್ಲ, ಬೇರೆಡೆ ಹುಡುಕಿಕೊಳ್ಳಿ ಎಂದು ಮಾಲೀಕರು ಹೇಳುತ್ತಿದ್ದಾರೆ. ಆದರೂ ಇವತ್ತೂ ನಾಳೆನೋ ಮತ್ತೇ ಶುರುವಾಗಬಹುದು ಎಂದು ದಿನವೂ ಸಂಸ್ಥೆಯ ಮುಂದೆ ಓಡಾಡುತ್ತಿರುತ್ತೇನೆ”.

ಚಿನ್ನಮ್ಮ ಎಂಬ ದೇವದುರ್ಗದ ಮಹಿಳೆ, “ನನ್ನ ಗಂಡ ಮತ್ತು ದೊಡ್ಡ ಮಗ ಇಲ್ಲಿ ಕಲ್ಲಿನ ಗಣಿಯಲ್ಲಿ ದುಡಿಯುತ್ತಾರೆ. ನಾನು ಇಲ್ಲಿ ಸಣ್ಣ ಮಿಲ್ಲಿನಲ್ಲಿ ದುಡಿಯುತ್ತೇನೆ. ಈಗ ಕಳೆದ ಹದಿನೈದು ದಿನದಿಂದ ಇಬ್ಬರೂ ಮನೆಯಲ್ಲಿದ್ದಾರೆ. ಕಂಪೆನಿ ಬಂದ್ ಆಯಿತಂತೆ. ಅದೇನೋ ರೋಗ ಇದೆ. ಜನ ಸಾಯ್ತಾಯಿದಾರೆ ಅಂದ್ರು, ನನಗೆ ತಿಳಿಯೋಲ್ಲ, ಓದಿಲ್ಲ, ಬರೆದಿಲ್ಲ..ಆದರೂ ಪರಿಸ್ಥಿತಿ ಸುಧಾರಿಸಿ ನನ್ನ ಗಂಡ ಮತ್ತು ಮಗ ಮತ್ತೇ ಕೆಲಸ ಹೋಗುವ ದಿನ ಯಾವಾಗ ಬರುತ್ತೋ ಎಂದು ಕಾದು ಕುಳಿತಿದ್ದೇನೆ”.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ವಿಧಾನಸಭಾ ಚುನಾವಣೆ ಹಿನ್ನೆಲೆ : ಮೂವರ ವಿರುದ್ಧ ಗೂಂಡಾ ಕಾಯ್ದೆ , 11 ಜನರ ಗಡಿಪಾರಿಗೆ ಶಿಫಾರಸ್ಸು
Top Story

ವಿಧಾನಸಭಾ ಚುನಾವಣೆ ಹಿನ್ನೆಲೆ : ಮೂವರ ವಿರುದ್ಧ ಗೂಂಡಾ ಕಾಯ್ದೆ , 11 ಜನರ ಗಡಿಪಾರಿಗೆ ಶಿಫಾರಸ್ಸು

by ಪ್ರತಿಧ್ವನಿ
March 31, 2023
ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!
Top Story

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

by ಪ್ರತಿಧ್ವನಿ
April 1, 2023
RAHUL GANDHI | ರಾಹುಲ್ ಗಾಂಧಿ ಬಗ್ಗೆ ಬರೀ ಸುಳ್ಳು ಕಥೆಗಳೆ ಹೊರಬರುತ್ತಾ ಇದ್ಯಾ?? #PRATIDHVANI
ಇದೀಗ

RAHUL GANDHI | ರಾಹುಲ್ ಗಾಂಧಿ ಬಗ್ಗೆ ಬರೀ ಸುಳ್ಳು ಕಥೆಗಳೆ ಹೊರಬರುತ್ತಾ ಇದ್ಯಾ?? #PRATIDHVANI

by ಪ್ರತಿಧ್ವನಿ
March 27, 2023
YEDIYURAPPA | ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ..! #PRATIDHVANI
ಇದೀಗ

YEDIYURAPPA | ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ..! #PRATIDHVANI

by ಪ್ರತಿಧ್ವನಿ
March 27, 2023
KALBURGI | PART 12 | ಬಿಸಿಲು ನಾಡಿನಲ್ಲಿ ರಂಗೇರಿದ ಚುನಾವಣಾಕಣ..ಯಾರಾಗ್ತಾರೆ ಭೀಮಾ ತೀರದ ಬಲಿಷ್ಠನಾಯಕ..?
ಇದೀಗ

KALBURGI | PART 12 | ಬಿಸಿಲು ನಾಡಿನಲ್ಲಿ ರಂಗೇರಿದ ಚುನಾವಣಾಕಣ..ಯಾರಾಗ್ತಾರೆ ಭೀಮಾ ತೀರದ ಬಲಿಷ್ಠನಾಯಕ..?

by ಪ್ರತಿಧ್ವನಿ
March 31, 2023
Next Post
ವೋಟ್‌ ಹಾಕಲು ಕನ್ನಡಿಗರು.. ಜೈಕಾರಕ್ಕೆ ಮಹಾರಾಷ್ಟ್ರ.. ಇದು ರಾಜಕಾರಣಿಗಳ ಲೆಕ್ಕಾಚಾರ..!

ವೋಟ್‌ ಹಾಕಲು ಕನ್ನಡಿಗರು.. ಜೈಕಾರಕ್ಕೆ ಮಹಾರಾಷ್ಟ್ರ.. ಇದು ರಾಜಕಾರಣಿಗಳ ಲೆಕ್ಕಾಚಾರ..!

ಭಾರತದ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರು ಮತ್ತು ಕೆಲವು ಪ್ರಕರಣಗಳು

ಭಾರತದ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುತ್ತಿರುವ ವಕೀಲರು ಮತ್ತು ಕೆಲವು ಪ್ರಕರಣಗಳು

ಮಹಾದಾಯಿ ನದಿ ವಿವಾದದ ಕುರಿತು ಭಾರತ ಸರ್ಕಾರ ಹೊರಡಿಸಿದ ಗೆಜೆಟ್‌

ಮಹಾದಾಯಿ ನದಿ ವಿವಾದದ ಕುರಿತು ಭಾರತ ಸರ್ಕಾರ ಹೊರಡಿಸಿದ ಗೆಜೆಟ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist