ADVERTISEMENT
  • Home
  • About Us
  • ಕರ್ನಾಟಕ
Friday, May 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಕೋವಿಡ್-19’ ದಾಳಿಗೆ ತತ್ತರಿಸಿದ ಷೇರುಪೇಟೆಯಲ್ಲಿ ಮುಂದುವರೆದ ಮಹಾಮಾರಣಹೋಮ

by
March 18, 2020
in ದೇಶ
0
‘ಕೋವಿಡ್-19’ ದಾಳಿಗೆ ತತ್ತರಿಸಿದ ಷೇರುಪೇಟೆಯಲ್ಲಿ ಮುಂದುವರೆದ ಮಹಾಮಾರಣಹೋಮ
Share on WhatsAppShare on FacebookShare on Telegram

ಸುನಾಮಿಯಂತೆ ಅಪ್ಪಳಿಸಿರುವ ‘ಕೋವಿಡ್-19’ ಎಬ್ಬಿಸಿರುವ ತಲ್ಲಣಗಳಿಂದ ಜಾಗತಿಕ ಷೇರುಪೇಟೆ ಮತ್ತು ಹಣಕಾಸು ಮಾರುಕಟ್ಟೆ ತತ್ತರಿಸಿ ಹೋಗಿವೆ. ಕುಸಿಯುತ್ತಲೇ ಸಾಗಿರುವ ಜಾಗತಿಕ ಷೇರುಪೇಟೆಗಳ ಸೂಚ್ಯಂಕಗಳು ದಿನದಿನಕ್ಕೆ ಪಾತಾಳದತ್ತ ಶರವೇಗದಲ್ಲಿ ಸಾಗುತ್ತಿವೆ. ಹೂಡಿಕೆದಾರರ ಹಲವು ಲಕ್ಷ ಕೋಟಿಗಳಷ್ಟು ಸಂಪತ್ತು ತ್ವರಿತವಾಗಿ ನಾಶವಾಗಿದೆ. ದೇಶೀಯ ಮಾರುಕಟ್ಟೆಗಳು ಜಾಗತಿಕ ಮಾರುಕಟ್ಟೆಗಳಿಗಿಂತ ತ್ವರಿತವಾಗಿ ಕುಸಿಯುತ್ತಿವೆ. ಭಾರತೀಯ ಷೇರುಪೇಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ 36 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ವಿಸ್ತೃತ ಮಾರುಕಟ್ಟೆಯ ಬಹುತೇಕ ಸೂಚ್ಯಂಕಗಳೂ ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಕುಸಿತದ ಅಂತ್ಯ ಎಲ್ಲಿ ಮತ್ತು ಯಾವಾಗ ಎಂಬುದು ಗೊತ್ತಾಗದೇ ಹೂಡಿಕೆದಾರರು ತತ್ತರಿಸಿದ್ದಾರೆ.

ADVERTISEMENT

ಮಾರ್ಚ್ 18ರ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ತಮ್ಮ ಪ್ರಬಲ ಸುಭದ್ರತಾ ಮಟ್ಟವಾದ 30,000 ಮತ್ತು 8,500 ಅಂಶಗಳ ಮಟ್ಟದಿಂದ ಕುಸಿದಿವೆ. ಹೀಗಾಗಿ ಪೇಟೆಯ ಕುಸಿತಕ್ಕೆ ಕೊನೆ ಎಂಬುದೇ ಇಲ್ಲವೆಂಬಂತೆ ಹೂಡಿಕೆದಾರರು ತೀವ್ರಗತಿಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಬುಧವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.5.59 ರಷ್ಟು ಅಂದರೆ 1709.58 ಅಂಶಗಳಷ್ಟು ಕುಸಿದು 28869ಕ್ಕೆ ಸ್ಥಿರಗೊಂಡಿದೆ. ನಿಫ್ಟಿ ಶೇ.5.56 ರಷ್ಟು ಅಂದರೆ 498.25 ಅಂಶಗಳಷ್ಟು ಕುಸಿದು 8468.8ಕ್ಕೆ ಸ್ಥಿರಗೊಂಡಿದೆ. ಷೇರುಪೇಟೆಯ ಮಾರಣಹೋಮದ ನಡುವೆ ಚಿನ್ನ ತನ್ನ ಹೊಳಪನ್ನೂ ರುಪಾಯಿ ತನ್ನ ಮೌಲ್ಯವನ್ನೂ ಕಳೆದುಕೊಂಡಿದೆ. ದಿನದ ವಹಿವಾಟಿನಲ್ಲಿ ಚಿನ್ನಪ್ರತಿ 10 ಗ್ರಾಮ್ ಗೆ 313 ರುಪಾಯಿ ಕುಸಿದು 39931ಕ್ಕೆ ಇಳಿದಿದೆ. ಹಿಂದಿನ ಐದುವಹಿವಾಟಿನಲ್ಲಿ ಸುಮಾರು 5000 ರುಪಾಯಿ ಕುಸಿತ ದಾಖಲಿಸಿತ್ತು. ಸತತ ಕುಸಿತದ ಹಾದಿಯಲ್ಲಿರುವ ರುಪಾಯಿ ದಿನದ ವಹಿವಾಟಿನಲ್ಲಿ ಮತ್ತಷ್ಟು ಕುಸಿತ ದಾಖಲಿಸಿದೆ. ದಿನದ ಅಂತ್ಯಕ್ಕೆ ಡಾಲರ್ ವಿರುದ್ಧ ರುಪಾಯಿ ಮೌಲ್ಯವು74.37ಕ್ಕೆ ಕುಸಿದಿದೆ.

ಸೆನ್ಸೆಕ್ಸ್ ನ 30 ಷೇರುಗಳ ಪೈಕಿ ಒಎನ್ಜಿಸಿ ಮತ್ತು ಐಟಿಸಿ ಹೊರತು ಪಡಿಸಿದರೆ ಉಳಿದ 28 ಷೇರುಗಳು ಶೇ.2ರಿಂದ 23ರಷ್ಟು ಕುಸಿತ ದಾಖಲಿಸಿವೆ. ಷೇರುಪೇಟೆಯ ಸುರಕ್ಷಿತ ಮತ್ತು ಲಾಭದಾಯಕ ಷೇರುಗಳೆಂದೇ ಹೆಸರಾಗಿರುವ ಎಚ್ಡಿಎಫ್ಸಿ ಬ್ಯಾಂಕ್, ಕೋಟಕ್ ಮಹಿಂದ್ರ ಬ್ಯಾಂಕ್, ಬಜಾಜ್ ಫೈನಾನ್ಸ್, ಎಚ್ಡಿಎಫ್ಸಿ ಶೇ.10-12ರಷ್ಟು ಕುಸಿತ ದಾಖಲಿಸಿವೆ. ಮತ್ತೊಂದು ಬ್ಲೂಚಿಪ್ ಷೇರು ಇಂಡಸ್ ಇಂಡ್ ಬ್ಯಾಂಕು ಶೇ.23ರಷ್ಟು ಕುಸಿತ ದಾಖಲಿಸಿದೆ. ಒಂದು ಹಂತದಲ್ಲಿ ಶೇ.36ರಷ್ಟು ಕುಸಿದಿದ್ದ ಇಂಡಸ್ ಇಂಡ್ ಬ್ಯಾಂಕ್ ದಿನದ ಅಂತ್ಯದ ವಹಿವಾಟಿನಲ್ಲಿ ಕೊಂಚ ಚೇತರಿಸಿಕೊಂಡಿತು. ಹೆಚ್ಚು ಏರಿಳಿತ ಇಲ್ಲದೇ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಕಾಪಾಡುವ ಇನ್ಫೊಸಿಸ್, ರಿಲಯನ್ಸ್, ಟಿಸಿಎಸ್ ಸಹ ಸತತ ಕುಸಿತದ ಹಾದಿಯಿಂದ ಹೊರಬಂದಿಲ್ಲ.

50 ಷೇರುಗಳನ್ನೊಗೊಂಡ ನಿಫ್ಟಿ ಸೂಚ್ಯಂಕದ ಐದು ಷೇರುಗಳು ಶಾರ್ಟ್ ಕವರಿಂಗ್ ಕಾರಣಕ್ಕಾಗಿ ಏರು ಹಾದಿಯಲ್ಲಿ ಸಾಗಿದ್ದರೂ, ಉಳಿದ 45 ಷೇರುಗಳು ತ್ವರಿತವಾಗಿ ಕುಸಿತ ದಾಖಲಿಸಿವೆ. ಬಹುತೇಕ ಷೇರುಗಳು ಶೇ.3ರಿಂದ 23ರಷ್ಟು ಕುಸಿತ ದಾಖಲಿಸಿವೆ.

ಜಾಗತಿಕ ಷೇರುಪೇಟೆಗಳ ಪೈಕಿ ನಾಸ್ಡಾಕ್ ಹೊರತಾಗಿ ಉಳಿದೆಲ್ಲ ಸೂಚ್ಯಂಕಗಳು ಕುಸಿತದ ಹಾದಿಯಲ್ಲೇ ಸಾಗಿವೆ. ಎಫ್ಟಿಎಸ್ಇ, ಸಿಎಸಿ, ಡಿಎಎಕ್ಸ್, ನಿಕ್ಕೀ, ಸ್ಟ್ರೈಟ್ ಟೈಮ್ಸ್, ಕೋಪ್ಸಿ, ಜಕಾರ್ತಾ ಕಾಂಪೋಸಿಟ್, ಶಾಂಗೈ ಕಾಂಪೋಸಿಟ್ ಶೇ.2ರಿಂದ 5ರಷ್ಟು ಕುಸಿತ ದಾಖಲಿಸಿವೆ. ನ್ಯಾಸ್ಡಾಕ್ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅಲ್ಲಿ ಲಿಸ್ಟಾಗಿರುವ ಭಾರತೀಯ ಕಂಪನಿಗಳ ಎಡಿಆರ್ (ಅಮೆರಿಕನ್ ಡಿಪಾಸಿಟರಿ ರಿಸಿಪ್ಟ್) ಏರುಹಾದಿಯಲ್ಲಿ ಸಾಗಿದವು. ಡಾ.ರೆಡ್ಡಿ ಎಡಿಆರ್, ಎಚ್ಡಿಎಫ್ಸಿ ಬ್ಯಾಂಕ್ ಎಡಿಆರ್, ಇನ್ಫೊಸಿಸ್ ಎಡಿಆರ್, ಟಾಟಾ ಮೋಟಾರ್ಸ್ ಎಡಿಆರ್ ಮತ್ತು ವಿಪ್ರೊ ಎಡಿಆರ್ ಶೇ.1ರಿಂದ 6ರಷ್ಟು ಏರಿಕೆ ದಾಖಲಿಸಿವೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದಲ್ಲಿ ಪುನಾನಿರ್ಮಾಣ ಯೋಜನೆ ಸಿದ್ದವಾಗಿರುವ ಯೆಸ್ ಬ್ಯಾಂಕ್ ದಿನದ ವಹಿವಾಟಿನಲ್ಲಿ ಶೇ.50ರಷ್ಟು ಏರಿಕೆ ದಾಖಲಿಸಿತ್ತು. ನಂತರ ಬಹಳಷ್ಟು ಏರಿಕೆ ಕುಸಿದು ಶೇ.10ರಷ್ಟು ಏರಿಕೆಯೊಂದಿಗೆ ವಹಿವಾಟು ಮುಗಿಸಿದೆ. ಕೆಲವೇ ವಹಿವಾಟು ದಿನಗಳಲ್ಲಿ ಶೇ.1,400ರಷ್ಟು ಏರಿಕೆ ದಾಖಲಿಸಿದೆ. ಒಂದು ಹಂತದಲ್ಲಿ 5.50 ರುಪಾಯಿಗೆ ಕುಸಿದಿದ್ದ ಯೆಸ್ ಬ್ಯಾಂಕ್ ಈಗ 60 ರುಪಾಯಿಗಳ ಆಜುಬಾಜಿನಲ್ಲಿ ವಹಿವಾಟಾಗುತ್ತಿದೆ.

ಬುಧವಾರದ ವಹಿವಾಟಿನಲ್ಲಿ ಅತಿ ಹೆಚ್ಚು ನಷ್ಟಕ್ಕೀಡಾಗಿದ್ದು ನಿಫ್ಟಿ ಬ್ಯಾಂಕ್ ಸೂಚ್ಯಂಕ. ಶೇ.7.25ರಷ್ಟು ಕುಸಿತ ದಾಖಲಿಸಿ 20,580ಕ್ಕೆ ಸ್ಥಿರಗೊಂಡಿದೆ. ಸರಾಸರಿ ಒಟ್ಟು ಆದಾಯ (ಕುರಿತಂತೆ) ತಾನು ನೀಡಿರುವ ಆದೇಶವನ್ನು ಪಾಲಿಸುವಲ್ಲಿ ಕೇಂದ್ರ ದೂರಸಂಪರ್ಕ ಸಚಿವಾಲಯ ಮತ್ತು ಟೆಲಿಕಾಂ ಕಂಪನಿಗಳು ಹಿಂದೇಟು ಹಾಕುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದು, ಈ ಬಾಕಿ ಪಾವತಿ ಕುರಿತಂತೆ ಈ ಹಿಂದೆ ನೀಡಿರುವ ಆದೇಶವನ್ನು ತ್ವರಿತ ಪಾಲಿಸುವಂತೆ ತಾಕೀತು ಮಾಡಿದೆ. ಇದರ ಪರಿಣಾಮವಾಗಿ ಟೆಲಿಕಾಂ ಕಂಪನಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಿರುವ ಬ್ಯಾಂಕುಗಳ ಷೇರುಗಳು ತೀವ್ರ ಹಾನಿ ಅನುಭವಿಸಿದವು. ಇಂಡಸ್ ಇಂಡ್, ಕೊಟಕ್ ಮಹಿಂದ್ರ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್ ತೀವ್ರ ಮಾರಾಟ ಒತ್ತಡಕ್ಕೆ ಸಿಲುಕಿದವು. ಬ್ಯಾಂಕೇತರ ಹಣಕಾಸು ಸಂಸ್ಥೆಗಳಾದ ಇಡಿಲ್ವೀಸ್, ಎಲ್ಅಂಡ್ ಟಿ ಫೈನಾನ್ಸ್, ಬಜಾಜ್ ಫೈನಾನ್ಸ್, ಎಚ್ಡಿಎಫ್ಸಿ, ಆದಿತ್ಯ ಬಿರ್ಲಾ ಫೈನಾನ್ಸ್ ಸೇರಿದಂತೆ ಬಹುತೇಕ ಕಂಪನಿಗಳ ಷೇರುಗಳು ತೀವ್ರ ಕುಸಿತ ದಾಖಲಿಸಿವೆ.

‘ಕೋವಿಡ್-19’ ಹರಡಿರುವ ಭೀತಿಯಿಂದಾಗಿ ಜಾಗತಿಕವಾಗಿ ತೈಲ ಬಳಕೆ ತಗ್ಗುವ ಹಿನ್ನೆಲೆಯಲ್ಲಿ ಈಗಾಗಲೇ ಪಾತಾಳಕ್ಕೆ ಇಳಿದಿರುವ ಕಚ್ಚಾ ತೈಲ ಬೆಲೆಯು ಮತ್ತಷ್ಟು ಕುಸಿದಿದೆ. ಡಬ್ಲ್ಯುಟಿಐ ಕ್ರೂಡ್ 25.62 ಡಾಲರ್ ಗೆ ಮತ್ತು ಬ್ರೆಂಟ್ ಕ್ರೂಡ್ 29 ಡಾಲರ್ ಗೆ ಕುಸಿದಿವೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಮಂದಗತಿಯಲ್ಲಿರುವ ಆರ್ಥಿಕತೆಯು ಹಿಂಜರಿತವಾಗಿ ಪರಿವರ್ತನೆಗೊಳ್ಳುವ ಅಪಾಯದ ಮುನ್ಸೂಚನೆಯಿಂದಾಗಿ ಷೇರುಪೇಟೆಗಳಲ್ಲಿ ತಕ್ಷಣಕ್ಕೆ ಚೇತರಿಕೆ ಕಾಣುವ ಸಾಧ್ಯತೆ ಇಲ್ಲ ಎಂಬುದು ಮಾರುಕಟ್ಟೆ ತಜ್ಞರ ಅಭಿಪ್ರಾಯ. ‘ಕೋವಿಡ್-19’ ಸಂಪೂರ್ಣವಾಗಿ ನಿವಾರಣೆ ಆಗುವವರೆಗೂ ಈಗಿರುವ ಅಸ್ಥಿರತೆ ಮುಂದುವರೆಯಲಿದೆ ಮತ್ತು ಅಂದರಿಂದಾಗುವ ಆರ್ಥಿಕ ನಷ್ಟವು 2008ರಲ್ಲಾದ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾದ ನಷ್ಟದ ಬಹಳಷ್ಟು ಪಟ್ಟು ಹೆಚ್ಚಿರುತ್ತದೆ ಎಂಬ ಎಚ್ಚರಿಕೆಯನ್ನೂ ಮಾರುಕಟ್ಟೆ ತಜ್ಞರು ನೀಡಿದ್ದಾರೆ.

Tags: Covid 19Share Marketಕೋವಿಡ್-19ಷೇರುಪೇಟೆ
Previous Post

ಪುತ್ರ ವ್ಯಾಮೋಹಕ್ಕೆ ಬಲಿಯಾಗಿ ದೇವೇಗೌಡರಂತೆ ಮೂಲೆಗುಂಪು ಆಗುತ್ತಾರ ಯಡಿಯೂರಪ್ಪ?

Next Post

ಊಟ ಕೇಳಿದರೆ FIR ಹಾಕ್ತೀವಿ: ಅನಿವಾಸಿ ಭಾರತೀಯರ ಮೇಲೆ ದೆಹಲಿ ಪೊಲೀಸರ ದರ್ಪ

Related Posts

40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?
Top Story

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

by ಕೃಷ್ಣ ಮಣಿ
May 22, 2025
0

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ ಪ್ರಕರಣ ಸಂಬಂಧ ಅಧಿಕಾರಿಗಳ ಪರಿಶೀಲನೆ ಮುಕ್ತಾಯವಾಗಿದೆ. 27 ಗಂಟೆಗಳ ಬಳಿಕ ED ಶೋಧ ಪೂರ್ಣಗೊಳಿಸಿ ಕಾಲೇಜಿನ ಹಿಂಬದಿಯ ಗೇಟ್‌ನಿಂದ...

Read moreDetails
ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

May 22, 2025
ಜಾತಿ ಜನಗಣತಿ – ಕೇಂದ್ರ ಸರ್ಕಾರದ ಮುಂದಿನ ಸವಾಲುಗಳು

ಜಾತಿ ಜನಗಣತಿ – ಕೇಂದ್ರ ಸರ್ಕಾರದ ಮುಂದಿನ ಸವಾಲುಗಳು

May 20, 2025

ಕಾಂಗ್ರೆಸ್​ 2ನೇ ವರ್ಷದ ಸಂಭ್ರಮಾಚರಣೆ.. ಜನರ ಸಂಕಷ್ಟಕ್ಕೆ ಮುಕ್ತಿ ಯಾವಾಗ..?

May 20, 2025
ನವಾಜ್ ಷರೀಫ್ ಮಗಳನ್ನು ಭೇಟಿಯಾಗಿದ್ದ ಜ್ಯೋತಿ ಮಲ್ಹೋತ್ರಾ ! ಬಗೆದಷ್ಟು ಬಯಲಾಗ್ತಿದೆ ಯೂಟ್ಯೂಬರ್ ಗೂಢಚಾರಿಕೆ ರಹಸ್ಯ ! 

ನವಾಜ್ ಷರೀಫ್ ಮಗಳನ್ನು ಭೇಟಿಯಾಗಿದ್ದ ಜ್ಯೋತಿ ಮಲ್ಹೋತ್ರಾ ! ಬಗೆದಷ್ಟು ಬಯಲಾಗ್ತಿದೆ ಯೂಟ್ಯೂಬರ್ ಗೂಢಚಾರಿಕೆ ರಹಸ್ಯ ! 

May 19, 2025
Next Post
ಊಟ ಕೇಳಿದರೆ FIR ಹಾಕ್ತೀವಿ: ಅನಿವಾಸಿ ಭಾರತೀಯರ ಮೇಲೆ ದೆಹಲಿ ಪೊಲೀಸರ ದರ್ಪ

ಊಟ ಕೇಳಿದರೆ FIR ಹಾಕ್ತೀವಿ: ಅನಿವಾಸಿ ಭಾರತೀಯರ ಮೇಲೆ ದೆಹಲಿ ಪೊಲೀಸರ ದರ್ಪ

Please login to join discussion

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 
Top Story

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

by Chetan
May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 
Top Story

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

by Chetan
May 23, 2025
ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?
Top Story

ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?

by ಪ್ರತಿಧ್ವನಿ
May 23, 2025
RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 
Top Story

RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 

by Chetan
May 23, 2025
40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?
Top Story

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

by ಕೃಷ್ಣ ಮಣಿ
May 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

May 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada