Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕ್ಲೈಮ್ಯಾಕ್ಸ್ ಹಂತ ತಲುಪಿದ ಮಧ್ಯಪ್ರದೇಶ  ಬಿಕ್ಕಟ್ಟು… ಇಂದು ನಡೆಯಲಿದೆ ವಿಶ್ವಾಸಮತ!     

ಕ್ಲೈಮ್ಯಾಕ್ಸ್ ಹಂತತಲುಪಿದ ಮಧ್ಯಪ್ರದೇಶ  ಬಿಕ್ಕಟ್ಟು... ಇಂದು ನಡೆಯಲಿದೆ ವಿಶ್ವಾಸಮತ! 
ಕ್ಲೈಮ್ಯಾಕ್ಸ್ ಹಂತ ತಲುಪಿದ ಮಧ್ಯಪ್ರದೇಶ  ಬಿಕ್ಕಟ್ಟು... ಇಂದು ನಡೆಯಲಿದೆ ವಿಶ್ವಾಸಮತ!      

March 20, 2020
Share on FacebookShare on Twitter

ಅಂತೂ ಇಂತೂ ಸುಪ್ರೀಂ ಅಂಗಳದಲ್ಲೂ ಮಧ್ಯಪ್ರದೇಶ ಸರಕಾರ ಬಿಕ್ಕಟ್ಟು ಬಗೆಹರಿದಿದ್ದು, ಕಮಲ್‌ನಾಥ್ ಸರಕಾರಕ್ಕೆ ಇದ್ದ ಕೊನೆಯ ಅವಕಾಶವೂ ‘ಕೈ’ ಜಾರಿದೆ. ಇಂದೇ ಮಧ್ಯಪ್ರದೇಶ ಸರಕಾರ ಬಹುಮತ ಸಾಬೀತಪಡಿಸಬೇಕಿದೆ. ಈ ನಡುವೆ ಇಂದು ಬೆಳಗ್ಗಿನ ಜಾವ ಮಧ್ಯಪ್ರದೇಶ ಸ್ಪೀಕರ್‌ ಅವರು ರಾಜಿನಾಮೆ ಸಲ್ಲಿಸಿದ್ದ ಕಾಂಗ್ರೆಸ್‌ನ ಉಳಿದ 16 ಜನ ಶಾಸಕರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಮಾರ್ಚ್ 10 ರ ನಂತರ ಮಧ್ಯಪ್ರದೇಶ ಕಾಂಗ್ರೆಸ್ ಸರಕಾರದಲ್ಲಿ ನಡೆದ ರಾಜಕೀಯ ಬೆಳವಣಿಗೆ ಕೇವಲ ಹದಿನೈದು ತಿಂಗಳಲ್ಲೇ ಸರಕಾರ ಪತನಕ್ಕೆ ಮುನ್ನುಡಿ ಬರೆದಂತಿದೆ. ಕಾಂಗ್ರೆಸ್ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಅದ್ಯಾವಾಗ ಕಾಂಗ್ರೆಸ್‌ಗೆ ‘ಕೈ’ ಕೊಟ್ಟರೋ ಆ ನಂತರ ಅವರನ್ನೇ ಅನುಸರಿಸಿದ 22 ಶಾಸಕರು ಸಾಮೂಹಿಕವಾಗಿ ಸಿಂಧ್ಯಾ ಪರವಹಿಸಿ ಸರಕಾರದ ವಿರುದ್ಧವೇ ಬಂಡಾಯವೆದ್ದಿದ್ದರು. ಬಿಜೆಪಿ ಸರಕಾರವಿರುವ ಕರ್ನಾಟಕದ ರಾಜಧಾನಿ ಬೆಂಗಳೂರಿನ ರೆಸಾರ್ಟ್‌ನಲ್ಲಿರುವ ಬಂಡಾಯ ಶಾಸಕರಿಗೆ ರಾಜ್ಯದ ಬಿಜೆಪಿ ನಾಯಕರು ಹಾಗೂ ಪೊಲೀಸರು ರಕ್ಷಣೆ ಕೊಡುತ್ತಿದ್ದರೆ, ಅತ್ತ ಸುಪ್ರೀಂ ಅಂಗಳದಲ್ಲಿ ಮಧ್ಯಪ್ರದೇಶ ಕಾಂಗ್ರೆಸ್‌ಗೆ ನಿರಾಸೆ ಎದುರಾಗಿದೆ. ಈಗಾಗಲೇ ಅಲ್ಪಮತಕ್ಕೆ ಕುಸಿದಿರುವ ಮಧ್ಯಪ್ರದೇಶ ಸರಕಾರ ಬಹುತೇಕ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಮೂಲಕವೇನಾದ್ರೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಸಾಬೀತುಪಡಿಸಲಾಗದೆ ಪತನಗೊಂಡರೆ, ಕರ್ನಾಟಕ ನಂತರ ಮತ್ತೊಂದು ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೇರಲಿದೆ.

ಇಂದು ಸಂಜೆ 5 ಗಂಟೆಯೊಳಗಾಗಿ ಮಧ್ಯಪ್ರದೇಶ ಸರಕಾರ ತನ್ನ ಬಹುಮತ ಸಾಬೀತಪಡಿಸಬೇಕಿದೆ. ಒಂದು ಹಂತದಲ್ಲಿ ಸ್ಪೀಕರ್ ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ಮಾರ್ಚ್ 26 ಕ್ಕೆ ಮುಂದೂಡಿದ್ದ ಅಧಿವೇಶನ ನಾಳೆಯಿಂದ ಮತ್ತೆ ಆರಂಭವಾಗಲಿದೆ. ಅಲ್ಲದೇ ಸರಕಾರದ ಬಜೆಟ್ ಅಧಿವೇಶನವೂ ಆಗಿದ್ದು, ಆಡಳಿತ ಪಕ್ಷ ಕಡ್ಡಾಯವಾಗಿ ಬಹುಮತ ಸಾಬೀತುಪಡಿಸಲೇಬೇಕಿದೆ. ಸಿಂಧ್ಯಾ ಬೆಂಬಲಿಗ 22 ಶಾಸಕರ ರಾಜೀನಾಮೆಯಿಂದ ಸದ್ಯ ಕಾಂಗ್ರೆಸ್ 92 ಸ್ಥಾನಗಳಿಗೆ ಕುಸಿದಿದೆ. ಒಟ್ಟು 230 ವಿಧಾನಸಭಾ ಬಲಾಬಲ ಹೊಂದಿರುವ ಮಧ್ಯಪ್ರದೇಶದಲ್ಲಿ ಈಗಾಗಲೇ 22 ಸ್ಥಾನ ತೆರವುಕೊಂಡಿರುವ ಪರಿಣಾಮ ಸದ್ಯ ಬಲಾಬಲ 206 ಇದ್ದು, ಅದರಲ್ಲಿ ರಾಜೀನಾಮೆ ನೀಡಿದ 22 ಮಂದಿಯನ್ನು ಸಿಎಂ ಆದೇಶದಂತೆ ಸ್ಪೀಕರ್ ಅನರ್ಹಗೊಳಿಸಿದ್ದಾರೆ. ಇದರಿಂದಾಗಿ 206 ವಿಧಾನಸಭಾ ಸ್ಥಾನಕ್ಕೆ ಇಳಿದಿರುವ ಸ್ಥಾನಗಳಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು 104 ಮ್ಯಾಜಿಕ್ ನಂಬರ್ ತಲುಪಲೇಬೇಕಿದೆ. ಆದರೆ ಸದ್ಯ ಕಾಂಗ್ರೆಸ್ ಬತ್ತಳಿಕೆಯಲ್ಲಿರುವುದು ಕೇವಲ 92 ಸ್ಥಾನಗಳಷ್ಟೇ. ಅದ್ಯಾವ ಸರ್ಕಸ್ ಮಾಡಿದರೂ ಸರಕಾರ ಉಳಿಸುವ ಕಮಲ್‌ನಾಥ್ ಪ್ರಯತ್ನ ಕೈಗೂಡುವ ಸಾಧ್ಯತೆ ಕಡಿಮೆ.

ಬಿಜೆಪಿಗೆ ಲಾಭ ತಂದುಕೊಡಲಿದೆ ರಾಜಿನಾಮೆ ಅಂಗೀಕಾರ!

ಇನ್ನೊಂದೆಡೆ ಬಿಜೆಪಿ ಬಳಿ ೧೦೭ ಸ್ಥಾನವಿದ್ದು ತಾವೇ ಕೂಡಿಟ್ಟ ‘ಕೈ’ ಶಾಸಕರ ರಾಜಿನಾಮೆ ತಡರಾತ್ರಿ ಅಂಗೀಕಾರವಾಗಿದ್ದು ಇವರಿಗೆ ಲಾಭ ತಂದುಕೊಡಲಿದೆ. ವಿಶ್ವಾಸ ಮತ ನಿರ್ಣಯಕ್ಕೆ ಅಂಗೀಕಾರವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಹಾಜರಿರುವ ಸಂಖ್ಯೆ ಮೇಲೆ ಮೇಲೆ ಕೈ ಎತ್ತುವ ಮೂಲಕ ಮತದಾನ ನಡೆಯುತ್ತೆ. ಮೊದಲೇ ಕೈ ಕೊಟ್ಟ 22 ಶಾಸಕರು ದೂರ ನಿಂತರೆ ಸಾಕು ತನ್ನಿಂತಾನಾಗಿಯೇ ಕಮಲ್‌ನಾಥ್ ಸರಕಾರ ಅಲ್ಪಮತಕ್ಕೆ ಕುಸಿಯುತ್ತದೆ. ಮೊದಲೇ 107 ಸ್ಥಾನ ಹೊಂದಿರುವ ಬಿಜೆಪಿಗೆ ಸರಕಾರ ರಚಿಸಲು ಮಾರ್ಗ ಸುಲಭವಾಗಲಿದೆ. ಆ ಮೂಲಕ ಕಳೆದ 2019 ರ ಜುಲೈ ತಿಂಗಳಿನಲ್ಲಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸರಕಾರ ಪತನಗೊಂಡ ಮಾದರಿಯಲ್ಲೇ, ಮಧ್ಯಪ್ರದೇಶ ಸರಕಾರ ಹದಿನೈದು ತಿಂಗಳಲ್ಲೇ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆಯೇ?

ಇನ್ನು ಇಂದು ನಡೆಯಲಿರುವ ವಿಶ್ವಾಸ ಮತಯಾಚನೆ ಸಂದರ್ಭ ಹಲವು ಸೂಚನೆಗಳನ್ನು ಪಾಲಿಸುವಂತೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಇಂದು ಸಂಜೆಯೊಳಗಾಗಿ ಮಧ್ಯಪ್ರದೇಶ ಸರಕಾರದ ಚಿತ್ರಣ ಬದಲಾಗಲಿದೆ. ಮಾರ್ಚ್ 16 ರಂದು ವಿಶ್ವಾಸ ಮತಯಾಚನೆ ಬಗ್ಗೆ ಸಾಕಷ್ಟು ಕುತೂಹಲವಿತ್ತಾದರೂ ವಿಧಾನಸಭೆಯಲ್ಲಿ ರಾಜ್ಯಪಾಲ ಲಾಲ್ ಜಿ ಟಂಡನ್ ಹಾಗೂ ಸ್ಪೀಕರ್ ಪ್ರಜಾಪತಿ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾರ್ಚ್ 26 ಕ್ಕೆ ಕರೊನಾ ಭೀತಿ ಹಿನ್ನೆಲೆ ಅಧಿವೇಶನ ಮುಂದೂಡಿದ್ದರು. ಆ ಮೂಲಕವಾದರೂ ಸರಕಾರ ಉಳಿಸುವ ಕನಸು ಕಂಡಿದ್ದ ಕಮಲ್‌ನಾಥ್ ಸರಕಾರಕ್ಕೆ ಸುಪ್ರೀಂ ಆದೇಶ ಹಿನ್ನಡೆ ತಂದಿಟ್ಟಿದೆ.

ಒಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸರಕಾರ ಆಡಳಿತ ಕಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ ದೋಸ್ತಿ ಸರಕಾರ ಉಳಿಸಲು ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಪ್ರಯತ್ನ ನಡೆಸಿದ್ರೆ, ಮಧ್ಯಪ್ರದೇಶದಲ್ಲಿ ಸ್ಪೀಕರ್ ಎನ್‌ಪಿ ಪ್ರಜಾಪತಿ ಹಾಗೂ ಸಿಎಂ ಕಮಲ್‌ನಾಥ್ ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?
Top Story

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

by ಮಂಜುನಾಥ ಬಿ
March 17, 2023
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh
Top Story

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

by ಪ್ರತಿಧ್ವನಿ
March 20, 2023
ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ
Top Story

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

by ಮಂಜುನಾಥ ಬಿ
March 21, 2023
ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ
Top Story

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

by ಪ್ರತಿಧ್ವನಿ
March 23, 2023
CONGRESS | ದಲಿತರಿಗೆ ನಾವು ರಕ್ಷಣೆ ಕೊಡ್ತೀವಿ ಎಂದು ಭಾಷಣ ಬಿಗಿತ್ತಿದ್ದ ಬಿಜೆಪಿಗರೇ… ಇದೇನಾ ನಿಮ್ಮ ರಕ್ಷಣೆ
ಇದೀಗ

CONGRESS | ದಲಿತರಿಗೆ ನಾವು ರಕ್ಷಣೆ ಕೊಡ್ತೀವಿ ಎಂದು ಭಾಷಣ ಬಿಗಿತ್ತಿದ್ದ ಬಿಜೆಪಿಗರೇ… ಇದೇನಾ ನಿಮ್ಮ ರಕ್ಷಣೆ

by ಪ್ರತಿಧ್ವನಿ
March 23, 2023
Next Post
ಕರ್ನಾಟಕದ ಬಳಿಕ ಮಧ್ಯಪ್ರದೇಶದಲ್ಲೂ ‘ಆಪರೇಷನ್ ಕಮಲ’ ಯಶಸ್ವಿ; ಕಾಂಗ್ರೆಸ್ ಸರ್ಕಾರ ಪತನ

ಕರ್ನಾಟಕದ ಬಳಿಕ ಮಧ್ಯಪ್ರದೇಶದಲ್ಲೂ ‘ಆಪರೇಷನ್ ಕಮಲ’ ಯಶಸ್ವಿ; ಕಾಂಗ್ರೆಸ್ ಸರ್ಕಾರ ಪತನ

ಕಿಯೋನಿಕ್ಸ್ ಕರ್ಮಕಾಂಡ: ಎಂಡಿ ಪರಮಾಧಿಕಾರ ಪ್ರಶ್ನಿಸುವಂತಿಲ್ಲ!

ಕಿಯೋನಿಕ್ಸ್ ಕರ್ಮಕಾಂಡ: ಎಂಡಿ ಪರಮಾಧಿಕಾರ ಪ್ರಶ್ನಿಸುವಂತಿಲ್ಲ!

ಪೇಟೆಯಲ್ಲಿ ತಾತ್ಕಾಲಿಕ ಚೇತರಿಕೆ; ಡಾಲರ್ ವಿರುದ್ಧ ನಿಲ್ಲದ ರುಪಾಯಿ ಮೌಲ್ಯ ಇಳಿಕೆ

ಪೇಟೆಯಲ್ಲಿ ತಾತ್ಕಾಲಿಕ ಚೇತರಿಕೆ; ಡಾಲರ್ ವಿರುದ್ಧ ನಿಲ್ಲದ ರುಪಾಯಿ ಮೌಲ್ಯ ಇಳಿಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist