Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಗದಗ್‌ನ 7 ವರ್ಷದ ಬಾಲಕಿಗೆ ಸಿಕ್ಕಿತು ಡಾಕ್ಟರೇಟ್

ಗದಗ್‌ನ 7 ವರ್ಷದ ಬಾಲಕಿಗೆ ಸಿಕ್ಕಿತು ಡಾಕ್ಟರೇಟ್
ಗದಗ್‌ನ 7 ವರ್ಷದ ಬಾಲಕಿಗೆ ಸಿಕ್ಕಿತು ಡಾಕ್ಟರೇಟ್

January 29, 2020
Share on FacebookShare on Twitter

ಅವಳಿನ್ನೂ ಎರಡನೆಯ ತರಗತಿ, ಆದರೂ ಗೌರವ ಡಾಕ್ಟರೇಟ್ ಪಡೆದಿದ್ದಾಳೆ. ಗದಗ್ ಜಿಲ್ಲೆಯ ನರಗುಂದ ಪಟ್ಟಣದ ಈ ಪುಟ್ಟ ಬಾಲಕಿ ಅತಿ ಚಿಕ್ಕ ವಯಸ್ಸಿನಲ್ಲೇ ಡಾಕ್ಟರ್ ಎನಿಸಿಕೊಂಡಿದ್ದಾಳೆ.

ಹೆಚ್ಚು ಓದಿದ ಸ್ಟೋರಿಗಳು

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ಜೈಶಂಕರ್

ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಳೆದುಕೊಳ್ಳುತ್ತೇನೆ : ಉದಯನಿಧಿ ಸ್ಟಾಲಿನ್

ಹೌದು, ಮುದ್ರಣ ಕಾಶಿ ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ತಮಿಳುನಾಡಿನ ಯೂನಿವರ್ಸಲ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಜಿಲ್ಲೆಯ ನರಗುಂದ ಪಟ್ಟಣದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವೈದೃತಿ ನಾಗರಾಜ ಕೋರಿಶೆಟ್ಟರ್ ಬಾಲಕಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಯೂನಿವರ್ಸಲ್ ವಿವಿ ಗೌರವ ಡಾಕ್ಟರೇಟ್ ನೀಡಿದೆ.

ಅಗಾಧ ಸ್ಮರಣ ಶಕ್ತಿ:

ಕೇವಲ 7 ವರ್ಷದವಳಾದ ವೈದೃತಿ ಆಗಾಧವಾದ ಜ್ಞಾನ ಹಾಗೂ ನೆನಪಿನ ಶಕ್ತಿ ಹೊಂದುವುದರೊಂದಿಗೆ ಎಲ್ಲರ ಗಮನ ಸೆಳೆದಿದ್ದಾಳೆ. ರಾಜಕೀಯ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ಪ್ರಾದೇಶಿಕ ಹಾಗೂ ಅಂತರಾಷ್ಟ್ರ ಹೀಗೇ ವಿವಿಧ ವಿಷಯಗಳ ಸಂಬಂಧಪಟ್ಟಂತೆ ಅಪಾರ ಜ್ಞಾನ ಹೊಂದಿರುವ ಈ ಬಾಲಕಿಯು ಯಾವುದೇ ಪ್ರಶ್ನೇ ಕೇಳಿದರೂ ಪಟಪಟನೆ ಉತ್ತರ ನೀಡುತ್ತಾಳೆ. ಬಾಲಕಿಯು ಜನರು ಕೇಳುವ ಪ್ರಶ್ನೆಗೆ ತಟ್ ಅಂತ ಉತ್ತರಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬಾರಿ ಮೆಚ್ಚುಗೆಗೆ ಪಾತ್ರವಾಗಿವೆ. ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿ ಕೊಂಡಿರುವ ವೈದೃತಿ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಗೌರವ ಡಾಕ್ಟರೇಟ್ ಪಡೆದು ಗಮನ ಸೆಳೆದಿದ್ದಾಳೆ. ಮೂಲತ ಬಳ್ಳಾರಿ ಜಿಲ್ಲೆ, ಹಗರಿಬೊಮ್ಮನಹಳ್ಳಿಯವರಾದ ವೈದೃತಿ ಕುಟುಂಬದವರು ಸಧ್ಯ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ವಾಸವಾಗಿದ್ದಾರೆ. ತಾಯಿ ಭಾರತಿ ನರಗುಂದ ದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಂದೆ ನಾಗರಾಜ ಖಾಸಗಿ ವೃತ್ತಿಯಲ್ಲಿ ತೊಡಗಿದ್ದು, ತಮ್ಮ ಮಗಳ ಈ ಸಾಧನೆಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ವೈದೃತಿ ಚಿಕ್ಕ ವಯಸ್ಸಿನಲ್ಲಿರುವಾಗಲೇ ಎಲ್ಲವನ್ನು ನೆನಪಿಟ್ಟುಕೊಳ್ಳುತ್ತಿದ್ದಳು. ಈ ವಿಶಿಷ್ಟ ಪ್ರತಿಭೆಯನ್ನು ಗುರುತಿಸಿದ ಪಾಲಕರು ಅವಳಿಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ತಿಳಿಸಿದರು. ಈಗ ಅವಳು ಕನ್ನಡದ ಜ್ಞಾನಪೀಠ ಪ್ರಶಸ್ತಿ ವಿಜೇತರ ಪಟ್ಟಿ, ಕರ್ನಾಟಕದ ಮುಖ್ಯಮಂತ್ರಿಗಳು ಹೆಸರು, ಕರ್ನಾಟಕದ ಜಿಲ್ಲೆಗಳು, ಭಾರತದ ಮಂತ್ರಿಗಳು ಹೀಗೆ ಎಲ್ಲ ಪ್ರಶ್ನೆಗಳಿಗೆ ುಸಿರು ಬಿಡದೇ ಉತ್ತರಿಸುತ್ತಾಳೆ.

ನಾಗರಾಜ ಕೋರಿಶೆಟ್ಟರ್, ವೈದೃತಿ ತಂದೆ, ಪ್ರತಿಧ್ವನಿ ತಂಡಕ್ಕೆ ಹೇಳಿದ್ದು ಹೀಗೆ, “ನನ್ನ ಮಗಳು ಇಷ್ಟು ಚಿಕ್ಕ ವಯಸ್ಸಿನಲ್ಲೇ ಡಾಕ್ಟರೇಟ್ ಪಡೆದಿದ್ದು ಖುಷಿ ತಂದಿದೆ. ಹೆಣ್ಣು ಮಕ್ಕಳು ಏನು ಬೇಕಾದದ್ದನ್ನು ಸಾಧಿಸುತ್ತಾರೆ. ಹೆಣ್ಣೆಂದು ಹೀಯಾಳಿಸದಿರಿ. ಇವತ್ತು ನಾನು ವೈದೃತಿ ತಂದೆ ಎಂದು ಎಲ್ಲರೂ ಗುರುತಿಸುತ್ತಾರೆ. ಮುಂದೆ ಅವಳು ಯು.ಪಿ.ಎಸ್. ಸಿ. ಪರೀಕ್ಷೆಗೆ ತಯಾರಿ ನಡೆಸಿ ದೊಡ್ಡ ಹುದ್ದೆ ಪಡೆದು ಸಮಾಜ ಮುಖಿ ಕೆಲಸ ಮಾಡಲಿ ಎಂಬುದು ನಮ್ಮ ಹಾರೈಕೆ. ವೈದೃತಿಯ ಸ್ಮರಣ ಶಕ್ತಿ ಅವಳಿಗೆ ವರವಾಗಿ ಪರಿಣಮಿಸಿದೆ. ಇದೀಗ ಹತ್ತು ಹಲವು ಪ್ರಶಸ್ತಿಗಳು ಸನ್ಮಾನಗಳು ಅವಳ ಮುಡಿಗೇರಿದ್ದು, ಈಗ ಡಾಕ್ಟರೇಟ್ ಸಿಕ್ಕಿದೆ. ನಾವಷ್ಟೇ ಅಲ್ಲ, ನರಗುಂದ ಹಾಗೂ ಗದಗ್ ಜಿಲ್ಲೆಯೇ ಈ ಸಂತೋಷವನ್ನು ಸಂಭ್ರಮಿಸುತ್ತಿದೆ. ಒಬ್ಬ ತಂದೆಯಾಗಿ ನನಗೆ ಇನ್ನೇನು ಬೇಕು”.

ಮುತ್ತಣ್ಣ ತಿರ್ಲಾಪುರ, ನರಗುಂದ ಗಾಂಧಿ ವೇಷಧಾರಿ ಎಂದೇ ಪರಿಚಿತರು ಹೇಳಿದ್ದು, “ವೈದೃತಿಯನ್ನು ನಾನು ಮೂರು ವರ್ಷಗಳಿಂದ ನೋಡುತ್ತಿದ್ದೇನೆ. ಅವಳು ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿ ಹಾಗೂ ಅನೇಕ ಕಡೆಗೆ ಅತಿಥಿಯಾಗಿ ಪಾಲ್ಗೊಂಡಿದ್ದಳೆ ಹಾಗೂ ಸನ್ಮಾನಗಳಂತೂ ಲೆಕ್ಕವೇ ಇಲ್ಲ. ಈಗ ಮದುರೈಗೆ ಹೋಗಿ ಡಾಕ್ಟರೇಟ್ ತಂದಿದ್ದು ಕೇಳಿದ ಕೂಡಲೇ ಖುಷಿ ತಡೆಯದೇ ಅವಳ ಮನೆಗೆ ಹೋಗಿ ಶುಭಾಶಯ ತಿಳಿಸಿದೆ, ಇವಳು ಗದಗ್ ಜಿಲ್ಲೆಗೆ ಹೆಮ್ಮೆ”.

ಫಾರೂಕ್, ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯ ಮುಖ್ಯ ಶಿಕ್ಷಕರು ಅಭಿಪ್ರಾಯ ಹಂಚಿಕೊಂಡರು, “ವೈದೃತಿ ಡಾಕ್ಟರೇಟ್ ಹಲವು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದೆ. ಏನಾದರೂ ಸಾಧನೆ ಮಾಡಬೇಕು ಎಂಬ ಛಲವನ್ನು ಬಿತ್ತಿದೆ. ಅವಳು ನಮ್ಮ ಶಾಲೆಉ ವಿದ್ಯಾರ್ಥಿ ಎಂದು ಹೇಳುವುದಕ್ಕೆ ಅತೀವ ಸಂತೋಷವೆನಿಸುತ್ತದೆ. ಅವಳು ಇನ್ನೂ ಹಲವು ಪ್ರಶಸ್ತಿ ಪಡೆಯಲಿ, ಉತ್ತಮ ಭವಿಷ್ಯ ಪಡೆಯಲಿ ಎಂದು ತುಂಬು ಹೃದಯದೊಂದಿಗೆ ಹಾರೈಸುತ್ತೇವೆ”.

RS 500
RS 1500

SCAN HERE

Pratidhvani Youtube

«
Prev
1
/
5518
Next
»
loading
play
D K Shivakumar | ಮೂರು ವರ್ಷದಲ್ಲಿ ನಾವು ಡ್ಯಾಮ್ ಕಟ್ಟುವ ವ್ಯವಸ್ಥೆ ಮಾಡುತ್ತೇವೆ | @PratidhvaniNews
play
Congress | DCM ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ.
«
Prev
1
/
5518
Next
»
loading

don't miss it !

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ
Top Story

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

by ಪ್ರತಿಧ್ವನಿ
September 25, 2023
10 ವರ್ಷಗಳ ಹಿಂದೆಯೇ ಮಹಿಳೆಯರಿಗೆ ಮೀಸಲಾತಿ ನೀಡುವ ಈ ವಿಧೇಯಕ ಜಾರಿಗೆ ಬರಬೇಕಿತ್ತು : ರಾಹುಲ್‌ ಗಾಂಧಿ
Top Story

10 ವರ್ಷಗಳ ಹಿಂದೆಯೇ ಮಹಿಳೆಯರಿಗೆ ಮೀಸಲಾತಿ ನೀಡುವ ಈ ವಿಧೇಯಕ ಜಾರಿಗೆ ಬರಬೇಕಿತ್ತು : ರಾಹುಲ್‌ ಗಾಂಧಿ

by ಪ್ರತಿಧ್ವನಿ
September 22, 2023
ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!
Top Story

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

by ಪ್ರತಿಧ್ವನಿ
September 26, 2023
ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!
ಇದೀಗ

ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!

by Prathidhvani
September 21, 2023
ರಾಜ್ಯದ ಮೂರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
Top Story

ರಾಜ್ಯದ ಮೂರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

by ಪ್ರತಿಧ್ವನಿ
September 22, 2023
Next Post
ಐರೋಪ್ಯ  ಸಂಸತ್‌ನಲ್ಲಿ ಮೋದಿಗೆ ‘ಪೌರತ್ವ’ ಚರ್ಚೆ ಒಡ್ಡಬಹುದಾದ ಸವಾಲುಗಳೇನು?

ಐರೋಪ್ಯ ಸಂಸತ್‌ನಲ್ಲಿ ಮೋದಿಗೆ ‘ಪೌರತ್ವ’ ಚರ್ಚೆ ಒಡ್ಡಬಹುದಾದ ಸವಾಲುಗಳೇನು?

ಸಂವಿಧಾನಕ್ಕೆ ಬಹುಮತ ಇರಲಿಲ್ಲ ಎಂದ ಉಪಕುಲಪತಿ!

ಸಂವಿಧಾನಕ್ಕೆ ಬಹುಮತ ಇರಲಿಲ್ಲ ಎಂದ ಉಪಕುಲಪತಿ!

ಹಾಲಿ ಡಿಸಿಎಂ ರದ್ದು ಇಲ್ಲ: ಹೆಚ್ಚುವರಿ ಹುದ್ದೆ ಸೃಷ್ಟಿಗೆ ಅವಕಾಶ ಇಲ್ಲ

ಹಾಲಿ ಡಿಸಿಎಂ ರದ್ದು ಇಲ್ಲ: ಹೆಚ್ಚುವರಿ ಹುದ್ದೆ ಸೃಷ್ಟಿಗೆ ಅವಕಾಶ ಇಲ್ಲ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist