• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗಾಂಧಿಯೋ, ಮೋದಿಯೋ ಎಂಬಲ್ಲಿಗೆ ಬಂದು ನಿಂತ ಸಂಕಥನ

by
September 28, 2019
in ದೇಶ
0
ಗಾಂಧಿಯೋ
Share on WhatsAppShare on FacebookShare on Telegram

ಬದುಕಿನ ಬಹುತೇಕ ಕಾಲಮಾನವನ್ನು ಭಾರತದ ಸ್ವಾತಂತ್ರ್ಯ ಚಳವಳಿ, ದೇಶದ ಏಳ್ಗೆಗಾಗಿ ಮುಡಿಪಾಗಿಟ್ಟ ಅಮೆರಿಕಾ, ದಕ್ಷಿಣ ಆಫ್ರಿಕಾ ಹಾಗೂ ಮ್ಯಾನ್ಮಾರ್ ಸೇರಿದಂತೆ ಹಲವು ರಾಷ್ಟ್ರಗಳ ರಾಷ್ಟ್ರೀಯ ಹೋರಾಟಕ್ಕೆ ಪ್ರೇರಣೆಯಾದವರು ಮಹಾತ್ಮ‌ ಗಾಂಧೀಜಿ. ಅಹಿಂಸಾ ತತ್ವದ ಮೂಲಕ ಬ್ರಿಟಿಷರನ್ನು ಭಾರತದಿಂದ ಹೊರಹಾಕುವ ಐತಿಹಾಸಿಕ ಪ್ರಸಿದ್ಧ ರಾಜಕೀಯ ಹೋರಾಟ ನಡೆಸಿ ಮಾನವ ಸಂತತಿ ಇರುವ ತನಕವೂ ಚಿರಸ್ಥಾಯಿಯಾಗಿ ಉಳಿಯಲಿರುವ ಗಾಂಧೀಜಿಯವರನ್ನು ಭಾರತದ ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಈಗ ಈ ಮಹಾನ್ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ವರ್ಗಾಯಿಸಲು ಆಡಳಿತ ಪಕ್ಷದ ಸಚಿವರು ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಪೈಪೋಟಿಗೆ ಇಳಿದಿದ್ದಾರೆ.

ADVERTISEMENT

ಅಮೆರಿಕ ಕಂಡ ಅತ್ಯಂತ ಮೂರ್ಖ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಮೋದಿಯವರನ್ನು ಹೊಗಳುವ ಬರದಲ್ಲಿ ಅವರನ್ನು ಭಾರತದ ರಾಷ್ಟ್ರಪಿತ ಎನ್ನುವ ಧಾಟಿಯಲ್ಲಿ ಮಾತನಾಡಿದ್ದಾರೆ. ಕೇಂದ್ರದ ಸಚಿವರಾದ ಜಿತೇಂದ್ರ ಸಿಂಗ್ ಅವರು‌ ಒಂದು ಹೆಜ್ಜೆ‌ ಮುಂದೆ ಹೋಗಿ ಮೋದಿಯವರನ್ನು ರಾಷ್ಟ್ರಪಿತ ಎಂಬುದಕ್ಕೆ ವಿರೋಧ ವ್ಯಕ್ತಪಡಿಸುವವರು ದೇಶದ್ರೋಹಿಗಳು ಎನ್ನುವ ಮೂಲಕ ತಾನೊಬ್ಬ ಅಯೋಗ್ಯ ಹಾಗೂ ಭಟ್ಟಂಗಿ ಎಂಬುದನ್ನು ಸಾರಿದ್ದಾರೆ.

ಇಷ್ಟಕ್ಕೂ, ಬಿಜೆಪಿಯ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಶಾಖೆಗಳಿಂದ ಹೊರಬಂದ ಅಥವಾ ಸಂಘದ ವಿಚಾರಧಾರೆಗಳಿಂದ ಪ್ರೇರಿತರಾದದವರಿಂದ ಇಂಥ ಮಾತುಗಳು ಹೊರಡುವುದು ಆಶ್ಚರ್ಯ ಉಂಟು ಮಾಡುವ ವಿದ್ಯಮಾನವೇ ಅಲ್ಲ. ಗಾಂಧೀಜಿಯವರನ್ನು ಕೊಂದಿದ್ದು ಆರ್ ಎಸ್ ಎಸ್ ಸಿದ್ಧಾಂತದಿಂದ ಪ್ರೇರಿತನಾಗಿದ್ದ ನಾಥೂರಾಮ್ ಗೋಡ್ಸೆ. ಇದೇ ಸಂಘದ ಕೂಸು ಬಿಜೆಪಿ. ಆದ್ದರಿಂದ ಬಿಜೆಪಿ ಹಾಗೂ ಸಂಘದ ವಿಚಾರಧಾರೆಗಳು ಸಹಜವಾಗಿ ಗಾಂಧಿ ವಿರೋಧಿ ಎಂಬುದರಲ್ಲಿ ಕಿಂಚಿತ್ ಅನುಮಾನವಿಲ್ಲ ಎಂಬುದನ್ನು ಇತ್ತೀಚೆಗೆ ನಡೆದಿರುವ ಹಲವು ಬೆಳವಣಿಗೆಗಳು ಸಾಬೀತುಪಡಿಸಿವೆ.

ಕೆಲವು ದಿನಗಳ‌‌ ಹಿಂದೆ ಆರ್ ಎಸ್ ಎಸ್ ನ ಅಂಗಸಂಸ್ಥೆಯೊಂದು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ದೇವಸ್ಥಾನ ನಿರ್ಮಿಸಿದೆ. ತದನಂತರ ಇನ್ನೊಂದು ಹಿಂದೂಪರ ಸಂಘಟನೆ ಗಾಂಧೀಜಿಯವರ ಪೋಸ್ಟರ್ ಗೆ ಪಿಸ್ತೂಲಿನಲ್ಲಿ ಶೂಟ್ ಮಾಡುವ ವಿಡಿಯೋ‌ ತುಣುಕೊಂದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.‌

ಇದೆಲ್ಲಕ್ಕಿಂತಲೂ ಮಹತ್ತರ ಬೆಳವಣಿಗೆಯೊಂದು ನಡೆದಿದೆ. ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಸದಸ್ಯರಾಗಿ ಚುನಾಯಿತರಾದ, ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ಗಾಂಧಿಯನ್ನು ಕೊಂದ ಗೋಡ್ಸೆಯ ಪರವಾಗಿ ಮಾತನಾಡಿದ್ದರು. ಇದು ದೇಶಾದ್ಯಂತ ಕಿಚ್ಚುಹಬ್ಬಿಸಿತ್ತು. ಆದರೆ, ಆಕೆಯ ವಿರುದ್ಧ ಮೋದಿ-ಶಾ ನೇತೃತ್ವದ ಬಿಜೆಪಿ ಯಾವುದೇ ಕ್ರಮಕೈಗೊಳ್ಳಲಿಲ್ಲ. ಇಂಥ ಮೋದಿ‌ ಇಂದು ಗಾಂಧೀಜಿಯ‌ ಮೇಲೆ ಅಪಾರ ಗೌರವ ಹೊಂದಿರುವುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ನಿಜಕ್ಕೂ ಗಾಂಧೀಜಿಯ ಮೇಲೆ ಅಭಿಮಾನವಿದ್ದರೆ, ಗಾಂಧೀಜಿ ವಿರುದ್ಧವಾದ ನಿಲುವು ವ್ಯಕ್ತಪಡಿಸಿದ ಶಕ್ತಿಗಳಿಗೆ ಕಟುವಾದ ಶಿಕ್ಷೆ ವಿಧಿಸುವ ಸೂಚನೆ ನೀಡುವ ಮೂಲಕ ತನ್ನ ಬದ್ಧತೆಯನ್ನು ಮೋದಿ ಪ್ರದರ್ಶಿಸುತ್ತಿದ್ದರು.

ಆದರೆ, ಅಂಥ ತೀರ್ಮಾನವನ್ನು ಮೋದಿ ಕೈಗೊಳ್ಳುವುದಿಲ್ಲ. ಬದಲಾಗಿ ಐಕನ್ ಗಳನ್ನು ಹೈಜಾಕ್ ಮಾಡುವ ಮೂಲಕ ರಾಜಕೀಯ ಸಂಕಥನ ಸೃಷ್ಟಿಸುವುದು ಬಿಜೆಪಿಯ ತಂತ್ರ. ಇದರ ಭಾಗವಾಗಿಯೇ ಸ್ವಚ್ಛ ಭಾರತ, ಸರ್ದಾರ್ ಪಟೇಲ್ ಅವರ ಪ್ರತಿಮೆ ನಿರ್ಮಾಣವನ್ನು ರೂಪಿಸಲಾಗಿದಯೇ ವಿನಾ ನೈಜವಾಗಿ ಗಾಂಧೀಜಿ ಕಂಡ ಕನಸನ್ನು ಸಾಕಾರಗೊಳಿಸುವ ಬದ್ಧತೆ ಮೋದಿಯ ಸರ್ಕಾರಕ್ಕೆ ಇಲ್ಲ ಎಂಬುದಕ್ಕೆ ದೇಶದ ಉದ್ದಗಲಕ್ಕೂ ತಾಂಡವವಾಡುತ್ತಿರುವ ಅಸ್ಪೃಶ್ಯತೆ, ಮತಾಂಧತೆಗಳು ಕಣ್ಮುಂದೆ ಇವೆ. ಧರ್ಮಾತೀತವಾಗಿ ಸಾಮಾಜಿಕ ಅನಿಷ್ಟಗಳ ವಿರುದ್ಧ ಜೀವನದ ಉದ್ದಕ್ಕೂ ಹೋರಾಡುತ್ತಲೇ ಬಂದ‌‌‌‌ ಗಾಂಧೀಜಿಯವರ 150ನೇ ವರ್ಷಾಚರಣೆ ಮಾಡಲಾಗುತ್ತಿದೆ.

ಆಧುನಿಕ ಭಾರತದ ನಿರ್ಮಾತೃಗಳಾದ ಗಾಂಧೀಜಿ, ಪಂಡಿತ್ ಜವಾಹರಲಾಲ್ ನೆಹರೂ, ಅಂಬೇಡ್ಕರ್ ಅವರ ತೇಜೋವಧೆ ಮಾಡುವ ಪ್ರಕರಣಗಳು‌‌ ಆರ್ ಎಸ್ ಎಸ್ ಹಾಗೂ ಅದರ ಪ್ರೇರಿತ ಸಂಘ-ಸಂಸ್ಥೆಗಳಿಂದ ನಿರಂತರವಾಗಿ ನಡೆಯುತ್ತಿದೆ. ರಾಜಕೀಯ ಸಮೀಕರಣ ಹೊಂದಿಸಲು ಗಾಂಧೀಜಿ ಹಾಗೂ ಅಂಬೇಡ್ಕರ್‌ ಬಗ್ಗೆ ಬಹಿರಂಗವಾಗಿ ನಾಜೂಕಿನಿಂದ ಮಾತನಾಡುವ ಸಂಘ-ಪರಿವಾರ ಹಾಗೂ ಬಿಜೆಪಿಯು ಅಂತರಂಗದಲ್ಲಿ ಇವರನ್ನು ತೀವ್ರವಾಗಿ ವಿರೋಧಿಸುತ್ತವೆ. ಬಿಜೆಪಿಯ ಚುನಾಯಿತ ಸಂಸದರು, ಶಾಸಕರು, ಪದಾಧಿಕಾರಿಗಳು ಹಾಗೂ ಆರ್ ಎಸ್ ಎಸ್ ನ ಪ್ರಮುಖರು ಆಗಾಗ್ಗೆ ಸಂವಿಧಾನ ಹಾಗೂ ಮೀಸಲಾತಿಯ‌ ಬಗ್ಗೆ ಆಡುವ ಮಾತುಗಳು ಅಂಬೇಡ್ಕರ್, ಗಾಂಧಿ, ನೆಹರೂ ವಿರುದ್ಧದ ಅಸಹನೆಯನ್ನು ಹೊರಹಾಕುವ ಬಗೆಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ನೆಹರೂ, ಅಂಬೇಡ್ಕರ್ ಹಾಗೂ ಗಾಂಧೀಜಿಯವರ ತೇಜೋವಧೆ ಮಾಡುವ ಕೃತ್ಯ ವ್ಯಾಪಕವಾಗಿದೆ. ಇವರೆಲ್ಲರೂ ಆಡಳಿತ ಪಕ್ಷದ ನಿಲುವು ಹೊಂದಿರುವವರು ಅಥವಾ ಅದರ ಸಮೀಪ ವರ್ತಿಗಳಾಗಿರುವವರೇ ಆಗಿದ್ದಾರೆ. ಇಂಥ ಸೈದ್ದಾಂತಿಕ ನಿಲುವಿನ ಪಕ್ಷದ ನೇತೃತ್ವ ವಹಿಸಿರುವ ಮೋದಿಯವರ ಚಲನವಲನ ನಾಟಕೀಯ ಹಾಗೂ ಅವರ ಪಕ್ಷದ ನಾಯಕರು ಆಡುವ ಮಾತುಗಳು ಆಕಸ್ಮಿಕವಲ್ಲ. ಇದೊಂದು ದೊಡ್ಡ ಪಿತೂರಿಯ‌ ಭಾಗ ಎಂಬ ಕಟು ಸತ್ಯವನ್ನು ಒಪ್ಪಲೇಬೇಕಿದೆ.

Tags: B R AmbedkarBJPFather of the NationGovernment of IndiaJawaharlal NehruMahtama GandhiNathuram GodsePrime Minister Narendra ModiRSSಆರ್ ಎಸ್ ಎಸ್ಜವಾಹರಲಾಲ್ ನೆಹರುನಾಥೂರಾಮ್ ಗೋಡ್ಸೆಪ್ರಧಾನಿ ನರೇಂದ್ರ ಮೋದಿಬಿ ಆರ್ ಅಂಬೇಡ್ಕರ್ಬಿಜೆಪಿಭಾರತ ಸರ್ಕಾರಮಹಾತ್ಮಾ ಗಾಂಧಿರಾಷ್ಟ್ರಪಿತ
Previous Post

ದೇಶದ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಕೊಳೆಯುತ್ತಿದೆ 30,000 ಕೋಟಿ!

Next Post

ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

January 6, 2026
Next Post
ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada