• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗಾಂಧಿಯೋ, ಮೋದಿಯೋ ಎಂಬಲ್ಲಿಗೆ ಬಂದು ನಿಂತ ಸಂಕಥನ

by
September 28, 2019
in ದೇಶ
0
ಗಾಂಧಿಯೋ
Share on WhatsAppShare on FacebookShare on Telegram

ಬದುಕಿನ ಬಹುತೇಕ ಕಾಲಮಾನವನ್ನು ಭಾರತದ ಸ್ವಾತಂತ್ರ್ಯ ಚಳವಳಿ, ದೇಶದ ಏಳ್ಗೆಗಾಗಿ ಮುಡಿಪಾಗಿಟ್ಟ ಅಮೆರಿಕಾ, ದಕ್ಷಿಣ ಆಫ್ರಿಕಾ ಹಾಗೂ ಮ್ಯಾನ್ಮಾರ್ ಸೇರಿದಂತೆ ಹಲವು ರಾಷ್ಟ್ರಗಳ ರಾಷ್ಟ್ರೀಯ ಹೋರಾಟಕ್ಕೆ ಪ್ರೇರಣೆಯಾದವರು ಮಹಾತ್ಮ‌ ಗಾಂಧೀಜಿ. ಅಹಿಂಸಾ ತತ್ವದ ಮೂಲಕ ಬ್ರಿಟಿಷರನ್ನು ಭಾರತದಿಂದ ಹೊರಹಾಕುವ ಐತಿಹಾಸಿಕ ಪ್ರಸಿದ್ಧ ರಾಜಕೀಯ ಹೋರಾಟ ನಡೆಸಿ ಮಾನವ ಸಂತತಿ ಇರುವ ತನಕವೂ ಚಿರಸ್ಥಾಯಿಯಾಗಿ ಉಳಿಯಲಿರುವ ಗಾಂಧೀಜಿಯವರನ್ನು ಭಾರತದ ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಈಗ ಈ ಮಹಾನ್ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ವರ್ಗಾಯಿಸಲು ಆಡಳಿತ ಪಕ್ಷದ ಸಚಿವರು ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಪೈಪೋಟಿಗೆ ಇಳಿದಿದ್ದಾರೆ.

ADVERTISEMENT

ಅಮೆರಿಕ ಕಂಡ ಅತ್ಯಂತ ಮೂರ್ಖ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಮೋದಿಯವರನ್ನು ಹೊಗಳುವ ಬರದಲ್ಲಿ ಅವರನ್ನು ಭಾರತದ ರಾಷ್ಟ್ರಪಿತ ಎನ್ನುವ ಧಾಟಿಯಲ್ಲಿ ಮಾತನಾಡಿದ್ದಾರೆ. ಕೇಂದ್ರದ ಸಚಿವರಾದ ಜಿತೇಂದ್ರ ಸಿಂಗ್ ಅವರು‌ ಒಂದು ಹೆಜ್ಜೆ‌ ಮುಂದೆ ಹೋಗಿ ಮೋದಿಯವರನ್ನು ರಾಷ್ಟ್ರಪಿತ ಎಂಬುದಕ್ಕೆ ವಿರೋಧ ವ್ಯಕ್ತಪಡಿಸುವವರು ದೇಶದ್ರೋಹಿಗಳು ಎನ್ನುವ ಮೂಲಕ ತಾನೊಬ್ಬ ಅಯೋಗ್ಯ ಹಾಗೂ ಭಟ್ಟಂಗಿ ಎಂಬುದನ್ನು ಸಾರಿದ್ದಾರೆ.

ಇಷ್ಟಕ್ಕೂ, ಬಿಜೆಪಿಯ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಶಾಖೆಗಳಿಂದ ಹೊರಬಂದ ಅಥವಾ ಸಂಘದ ವಿಚಾರಧಾರೆಗಳಿಂದ ಪ್ರೇರಿತರಾದದವರಿಂದ ಇಂಥ ಮಾತುಗಳು ಹೊರಡುವುದು ಆಶ್ಚರ್ಯ ಉಂಟು ಮಾಡುವ ವಿದ್ಯಮಾನವೇ ಅಲ್ಲ. ಗಾಂಧೀಜಿಯವರನ್ನು ಕೊಂದಿದ್ದು ಆರ್ ಎಸ್ ಎಸ್ ಸಿದ್ಧಾಂತದಿಂದ ಪ್ರೇರಿತನಾಗಿದ್ದ ನಾಥೂರಾಮ್ ಗೋಡ್ಸೆ. ಇದೇ ಸಂಘದ ಕೂಸು ಬಿಜೆಪಿ. ಆದ್ದರಿಂದ ಬಿಜೆಪಿ ಹಾಗೂ ಸಂಘದ ವಿಚಾರಧಾರೆಗಳು ಸಹಜವಾಗಿ ಗಾಂಧಿ ವಿರೋಧಿ ಎಂಬುದರಲ್ಲಿ ಕಿಂಚಿತ್ ಅನುಮಾನವಿಲ್ಲ ಎಂಬುದನ್ನು ಇತ್ತೀಚೆಗೆ ನಡೆದಿರುವ ಹಲವು ಬೆಳವಣಿಗೆಗಳು ಸಾಬೀತುಪಡಿಸಿವೆ.

ಕೆಲವು ದಿನಗಳ‌‌ ಹಿಂದೆ ಆರ್ ಎಸ್ ಎಸ್ ನ ಅಂಗಸಂಸ್ಥೆಯೊಂದು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ದೇವಸ್ಥಾನ ನಿರ್ಮಿಸಿದೆ. ತದನಂತರ ಇನ್ನೊಂದು ಹಿಂದೂಪರ ಸಂಘಟನೆ ಗಾಂಧೀಜಿಯವರ ಪೋಸ್ಟರ್ ಗೆ ಪಿಸ್ತೂಲಿನಲ್ಲಿ ಶೂಟ್ ಮಾಡುವ ವಿಡಿಯೋ‌ ತುಣುಕೊಂದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.‌

ಇದೆಲ್ಲಕ್ಕಿಂತಲೂ ಮಹತ್ತರ ಬೆಳವಣಿಗೆಯೊಂದು ನಡೆದಿದೆ. ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಸದಸ್ಯರಾಗಿ ಚುನಾಯಿತರಾದ, ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ಗಾಂಧಿಯನ್ನು ಕೊಂದ ಗೋಡ್ಸೆಯ ಪರವಾಗಿ ಮಾತನಾಡಿದ್ದರು. ಇದು ದೇಶಾದ್ಯಂತ ಕಿಚ್ಚುಹಬ್ಬಿಸಿತ್ತು. ಆದರೆ, ಆಕೆಯ ವಿರುದ್ಧ ಮೋದಿ-ಶಾ ನೇತೃತ್ವದ ಬಿಜೆಪಿ ಯಾವುದೇ ಕ್ರಮಕೈಗೊಳ್ಳಲಿಲ್ಲ. ಇಂಥ ಮೋದಿ‌ ಇಂದು ಗಾಂಧೀಜಿಯ‌ ಮೇಲೆ ಅಪಾರ ಗೌರವ ಹೊಂದಿರುವುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ನಿಜಕ್ಕೂ ಗಾಂಧೀಜಿಯ ಮೇಲೆ ಅಭಿಮಾನವಿದ್ದರೆ, ಗಾಂಧೀಜಿ ವಿರುದ್ಧವಾದ ನಿಲುವು ವ್ಯಕ್ತಪಡಿಸಿದ ಶಕ್ತಿಗಳಿಗೆ ಕಟುವಾದ ಶಿಕ್ಷೆ ವಿಧಿಸುವ ಸೂಚನೆ ನೀಡುವ ಮೂಲಕ ತನ್ನ ಬದ್ಧತೆಯನ್ನು ಮೋದಿ ಪ್ರದರ್ಶಿಸುತ್ತಿದ್ದರು.

ಆದರೆ, ಅಂಥ ತೀರ್ಮಾನವನ್ನು ಮೋದಿ ಕೈಗೊಳ್ಳುವುದಿಲ್ಲ. ಬದಲಾಗಿ ಐಕನ್ ಗಳನ್ನು ಹೈಜಾಕ್ ಮಾಡುವ ಮೂಲಕ ರಾಜಕೀಯ ಸಂಕಥನ ಸೃಷ್ಟಿಸುವುದು ಬಿಜೆಪಿಯ ತಂತ್ರ. ಇದರ ಭಾಗವಾಗಿಯೇ ಸ್ವಚ್ಛ ಭಾರತ, ಸರ್ದಾರ್ ಪಟೇಲ್ ಅವರ ಪ್ರತಿಮೆ ನಿರ್ಮಾಣವನ್ನು ರೂಪಿಸಲಾಗಿದಯೇ ವಿನಾ ನೈಜವಾಗಿ ಗಾಂಧೀಜಿ ಕಂಡ ಕನಸನ್ನು ಸಾಕಾರಗೊಳಿಸುವ ಬದ್ಧತೆ ಮೋದಿಯ ಸರ್ಕಾರಕ್ಕೆ ಇಲ್ಲ ಎಂಬುದಕ್ಕೆ ದೇಶದ ಉದ್ದಗಲಕ್ಕೂ ತಾಂಡವವಾಡುತ್ತಿರುವ ಅಸ್ಪೃಶ್ಯತೆ, ಮತಾಂಧತೆಗಳು ಕಣ್ಮುಂದೆ ಇವೆ. ಧರ್ಮಾತೀತವಾಗಿ ಸಾಮಾಜಿಕ ಅನಿಷ್ಟಗಳ ವಿರುದ್ಧ ಜೀವನದ ಉದ್ದಕ್ಕೂ ಹೋರಾಡುತ್ತಲೇ ಬಂದ‌‌‌‌ ಗಾಂಧೀಜಿಯವರ 150ನೇ ವರ್ಷಾಚರಣೆ ಮಾಡಲಾಗುತ್ತಿದೆ.

ಆಧುನಿಕ ಭಾರತದ ನಿರ್ಮಾತೃಗಳಾದ ಗಾಂಧೀಜಿ, ಪಂಡಿತ್ ಜವಾಹರಲಾಲ್ ನೆಹರೂ, ಅಂಬೇಡ್ಕರ್ ಅವರ ತೇಜೋವಧೆ ಮಾಡುವ ಪ್ರಕರಣಗಳು‌‌ ಆರ್ ಎಸ್ ಎಸ್ ಹಾಗೂ ಅದರ ಪ್ರೇರಿತ ಸಂಘ-ಸಂಸ್ಥೆಗಳಿಂದ ನಿರಂತರವಾಗಿ ನಡೆಯುತ್ತಿದೆ. ರಾಜಕೀಯ ಸಮೀಕರಣ ಹೊಂದಿಸಲು ಗಾಂಧೀಜಿ ಹಾಗೂ ಅಂಬೇಡ್ಕರ್‌ ಬಗ್ಗೆ ಬಹಿರಂಗವಾಗಿ ನಾಜೂಕಿನಿಂದ ಮಾತನಾಡುವ ಸಂಘ-ಪರಿವಾರ ಹಾಗೂ ಬಿಜೆಪಿಯು ಅಂತರಂಗದಲ್ಲಿ ಇವರನ್ನು ತೀವ್ರವಾಗಿ ವಿರೋಧಿಸುತ್ತವೆ. ಬಿಜೆಪಿಯ ಚುನಾಯಿತ ಸಂಸದರು, ಶಾಸಕರು, ಪದಾಧಿಕಾರಿಗಳು ಹಾಗೂ ಆರ್ ಎಸ್ ಎಸ್ ನ ಪ್ರಮುಖರು ಆಗಾಗ್ಗೆ ಸಂವಿಧಾನ ಹಾಗೂ ಮೀಸಲಾತಿಯ‌ ಬಗ್ಗೆ ಆಡುವ ಮಾತುಗಳು ಅಂಬೇಡ್ಕರ್, ಗಾಂಧಿ, ನೆಹರೂ ವಿರುದ್ಧದ ಅಸಹನೆಯನ್ನು ಹೊರಹಾಕುವ ಬಗೆಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ನೆಹರೂ, ಅಂಬೇಡ್ಕರ್ ಹಾಗೂ ಗಾಂಧೀಜಿಯವರ ತೇಜೋವಧೆ ಮಾಡುವ ಕೃತ್ಯ ವ್ಯಾಪಕವಾಗಿದೆ. ಇವರೆಲ್ಲರೂ ಆಡಳಿತ ಪಕ್ಷದ ನಿಲುವು ಹೊಂದಿರುವವರು ಅಥವಾ ಅದರ ಸಮೀಪ ವರ್ತಿಗಳಾಗಿರುವವರೇ ಆಗಿದ್ದಾರೆ. ಇಂಥ ಸೈದ್ದಾಂತಿಕ ನಿಲುವಿನ ಪಕ್ಷದ ನೇತೃತ್ವ ವಹಿಸಿರುವ ಮೋದಿಯವರ ಚಲನವಲನ ನಾಟಕೀಯ ಹಾಗೂ ಅವರ ಪಕ್ಷದ ನಾಯಕರು ಆಡುವ ಮಾತುಗಳು ಆಕಸ್ಮಿಕವಲ್ಲ. ಇದೊಂದು ದೊಡ್ಡ ಪಿತೂರಿಯ‌ ಭಾಗ ಎಂಬ ಕಟು ಸತ್ಯವನ್ನು ಒಪ್ಪಲೇಬೇಕಿದೆ.

Tags: B R AmbedkarBJPFather of the NationGovernment of IndiaJawaharlal NehruMahtama GandhiNathuram GodsePrime Minister Narendra ModiRSSಆರ್ ಎಸ್ ಎಸ್ಜವಾಹರಲಾಲ್ ನೆಹರುನಾಥೂರಾಮ್ ಗೋಡ್ಸೆಪ್ರಧಾನಿ ನರೇಂದ್ರ ಮೋದಿಬಿ ಆರ್ ಅಂಬೇಡ್ಕರ್ಬಿಜೆಪಿಭಾರತ ಸರ್ಕಾರಮಹಾತ್ಮಾ ಗಾಂಧಿರಾಷ್ಟ್ರಪಿತ
Previous Post

ದೇಶದ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಕೊಳೆಯುತ್ತಿದೆ 30,000 ಕೋಟಿ!

Next Post

ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025
Next Post
ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

ಸುಪ್ರೀಂ ಕೋರ್ಟ್ ಮುಂದಿರುವ `ಅನರ್ಹರಿಗೂ’ ಉಪ ಚುನಾವಣೆಗೂ ಏನು ಸಂಬಂಧ?  

Please login to join discussion

Recent News

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada