Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಗೆದ್ದು ಸೋತ ಅರವಿಂದ್ ಕೇಜ್ರಿವಾಲ್! ಮೋದಿ ಆರ್ಭಟಕ್ಕೆ ಸಿಗಲಿಲ್ಲ ಕಿಮ್ಮತ್ತು!

ಗೆದ್ದು ಸೋತ ಅರವಿಂದ್ ಕೇಜ್ರಿವಾಲ್! ಮೋದಿ ಆರ್ಭಟಕ್ಕೆ ಸಿಗಲಿಲ್ಲ ಕಿಮ್ಮತ್ತು!
ಗೆದ್ದು ಸೋತ ಅರವಿಂದ್ ಕೇಜ್ರಿವಾಲ್! ಮೋದಿ ಆರ್ಭಟಕ್ಕೆ ಸಿಗಲಿಲ್ಲ ಕಿಮ್ಮತ್ತು!

February 11, 2020
Share on FacebookShare on Twitter

ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಅಂತಿಮ ಘಟ್ಟದತ್ತ ಸಾಗುತ್ತಿದೆ. ಈ ಬಾರಿ ಆಮ್ ಆದ್ಮಿ ಪಾರ್ಟಿಯನ್ನು ಸೋಲಿಸಿ ಅಧಿಕಾರ ಹಿಡಿಯಲೇಬೇಕೆಂದು ಹೊರಟಿದ್ದ ನರೇಂದ್ರ ಮೋದಿ ಟೀಂಗೆ ಮುಖಭಂಗ ಆಗಿದೆ. ಈಗಿನ ಮುನ್ನಡೆ ಪ್ರಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮತ್ತೊಮ್ಮೆ ಅಧಿಕಾರ ಹಿಡಿಯುವತ್ತ ಸಾಗುತ್ತಿದೆ. ಆಮ್ ಆದ್ಮಿ ಪಾರ್ಟಿ 55ರ ಗಡಿ ದಾಟಿದ್ದು, ಬಿಜೆಪಿ 15ರ ಆಸುಪಾಸಿನಲ್ಲಿ ಗೆಲುವಿನ ಸರ್ಕಸ್ ನಡೆಸುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ದೆಹಲಿ ಚುನಾವಣಾ ಪ್ರಚಾರದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದ ಆಮ್ ಆದ್ಮಿ ಹಾಗೂ ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು, ಫಲಿತಾಂಶದಲ್ಲೂ ಭಾರೀ ಪೈಪೋಟಿ ಒಡ್ಡುತ್ತಿದ್ದಾರೆ. ಆಮ್ ಆದ್ಮಿ ಹಾಗೂ ಬಿಜೆಪಿ ಅಭ್ಯರ್ಥಿಗಳು ಕೇವಲ ನೂರು ಮತಗಳ ಅಂತರದಲ್ಲಿ ಹಿಂದೆ ಮುಂದೆ ಇರುವುದು ಫಲಿತಾಂಶದ ನಿಖರ ಅಂದಾಜಿಗೆ ಸಂಕಷ್ಟ ತಂದೊಡ್ಡಿದೆ. ಆಮ್ ಆದ್ಮಿ ಹಾಗು ಬಿಜೆಪಿ ಅಭ್ಯರ್ಥಿಗಳ ಅಬ್ಬರದ ನಡುವೆ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲಂದಂತಾಗಿದೆ. ಈ ಮೂಲಕ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸತತ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ.

ದೆಹಲಿಗೆ ರಾಜ್ಯದ ಸ್ಥಾನಮಾನ ಪಡೆದ ಬಳಿಕ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹ್ಯಾಟ್ರಿಕ್ ಬಾರಿಸಿ ಮೂರು ಬಾರಿ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ್ದರು. ಅದನ್ನು ಬಿಟ್ಟರೆ ಇದೀಗ ಆ ಸ್ಥಾನ ತುಂಬಲು ಅರವಿಂದ್ ಕೇಜ್ರಿವಾಲ್ ಹೊರಟಿದ್ದಾರೆ. ಮೊದಲ ಬಾರಿ ಕೇವಲ 49 ದಿನಗಳಿ ಕಾಲ ಅಧಿಕಾರ ನಡೆಸಿ ರಾಜೀನಾಮೆ ಕೊಟ್ಟಿದ್ದ ಅರವಿಂದ್ ಕೇಜ್ರಿವಾಲ್, ಎರಡನೇ ಬಾರಿ ಸಂಪೂರ್ಣ ಆಡಳಿತ ನಡೆಸಿ ಚುನಾವಣೆ ಹೋಗಿದ್ದರು. ಈ ಬಾರಿ ಅಭಿವೃದ್ಧಿ ಅಜೆಂಡ ಹಿಡಿದು ಚುನಾವಣಾ ಪ್ರಚಾರ ನಡೆಸಿದ್ದ ಅರವಿಂದ್ ಕೇಜ್ರಿವಾಲ್‌, ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಲೆಕ್ಕಾಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಆಮ್ ಆದ್ಮಿ ಪಾರ್ಟಿ 2015 ರಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ದೆಹಲಿಯಲ್ಲಿ ದರ್ಬಾರ್ ನಡೆಸುವ ಮುನ್ಸೂಚನೆ ನೀಡಿತ್ತು. ಕೆಂಪುಕೋಟೆ ಆದಿಪತ್ಯ ಸ್ಥಾಪಿಸುವ ಅರವಿಂದ್ ಕೇಜ್ರಿವಾಲ್ ಕನಸಿಗೆ ಬಿಜೆಪಿ ಪೆಟ್ಟು ಕೊಟ್ಟಿದೆ. ಈ ಬಾರಿ ಆಮ್ ಆದ್ಮಿ ಪಾರ್ಟಿ ಓಟಕ್ಕೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳು ಬ್ರೇಕ್ ಹಾಕಿದ್ದು, ಅರವಿಂದ ಕೇಜ್ರಿವಾಲ್ ತನ್ನ ಆಡಳಿತವನ್ನು ಹಿಂತಿರುಗಿ ನೋಡುವಂತಾಗಿದೆ. ಆಮ್ ಆದ್ಮಿ ಪಕ್ಷ 60 ಸ್ಥಾನಗಳ ಆಸುಪಾಸಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ಬಾರಿಗಿಂತ 10 ಸ್ಥಾನ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆಮ್ ಆದ್ಮಿ ಕಳೆದುಕೊಂಡ ಸ್ಥಾನಗಳಲ್ಲಿ ಬಿಜೆಪಿಯ ಕಮಲ ಅರಳುತ್ತಿರೋದು ಕೇಜ್ರಿವಾಲ್‌ಗೆ ನುಂಗಲಾರದ ತುತ್ತಾಗಿದೆ.

2015 ರಲ್ಲಿ ಹೀನಾಯ ಸೋಲುಂಡಿದ್ದ ಕಾಂಗ್ರೆಸ್ ಪಕ್ಷ, ಈ ಬಾರಿ ಕೂಡ ಹೀನಾಯ ಸೋಲು ತಪ್ಪಿಸಿಕೊಳ್ಳಲು ಶ್ರಮವಿಸಿದ್ದು ಪ್ರಯೋಜನಕ್ಕೆ ಬಾರದಂತಾಗಿದೆ. ಆಮ್ ಆದ್ಮಿ ಪಾರ್ಟಿ ಶೇಕಡವಾರು ಮತದಾನದಲ್ಲೂ ಭರ್ಜರಿ ಮುನ್ನಡೆ ಸಾಧಿಸಿದ್ದು, ಇಲ್ಲೀವರೆಗೂ 53.29ರಷ್ಟು ಮತ ಗಳಿಸಿದೆ. ಅದೇ ರೀತಿ ಬಿಜೆಪಿ 39.07 ರಷ್ಟು ಮತ ಗಳಿಸಿದ್ದರೆ, ಕಾಂಗ್ರೆಸ್ ಕೇವಲ 4.25ರಷ್ಟು ಮತಗಳಿಕೆ ಮಾಡಿದೆ. ಆಮ್ ಆದ್ಮಿ ಪಾರ್ಟಿ ದೆಹಲಿಯ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದೆ. ಈ ಮೂಲಕ ಸರಳ ಬಹುಮತ ಗಳಿಸಿ ಅಧಿಕಾರವನ್ನೂ ಹಿಡಿಯಬಹುದು. ಆದರೂ ಸ್ಥಾನಗಳನ್ನು ಕಳೆದುಕೊಂಡು ಕಹಿ ಅನುಭವಿಸುವಂತಾಗಿದೆ. ಕಳೆದ ಬಾರಿ‌ ಕೇವಲ ಮೂರು ಸ್ಥಾನಗಳಿಗೆ ತೃಪ್ತಿಪಟ್ಟಿದ್ದ ಬಿಜೆಪಿ, ಈ ಬಾರಿ 10 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಯಿದ್ದು, ಮೂರಕ್ಕಿಂತ ಹೆಚ್ಚು ಸ್ಥಾನ ಗಳಿಸಿದ್ದು ಬೋನಸ್ ಎನ್ನುವಂತಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಗೆದ್ದು ಅಧಿಕಾರ ಹಿಡಿಯುತ್ತಿದ್ದರೂ ಬಿಜೆಪಿಗೆ ಹೆಚ್ಚು ಸ್ಥಾನ ಬಿಟ್ಟುಕೊಡುವ ಮೂಲಕ ಸೋಲುಂಡರೇ ಎನ್ನುವ ಪ್ರಶ್ನೆ ಎದುರಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
5477
Next
»
loading
play
Kaveri | ಕಾವೇರಿ ಯಾರಿಗೆ ಸೇರಿದ್ದು..? ಯಾರ್ಯಾರ ರಾಜಕೀಯ ಏನು..? | HD Kumaraswamy | @PratidhvaniNews
play
Lakshmi Hebbalkar | ಆತ್ಮ ವಿಶ್ವಾಸದಿಂದ ಪಕ್ಷ ಸಂಘಟಿಸೋಣ | Congress Leader | @PratidhvaniNews
«
Prev
1
/
5477
Next
»
loading

don't miss it !

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ: ಡಿ.ಕೆ. ಶಿವಕುಮಾರ್ ಆರೋಪ
Top Story

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ: ಡಿ.ಕೆ. ಶಿವಕುಮಾರ್ ಆರೋಪ

by ಪ್ರತಿಧ್ವನಿ
September 23, 2023
ಗೃಹಲಕ್ಷ್ಮಿ
Top Story

ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿದೆ: ಸಿದ್ದರಾಮಯ್ಯ

by ಪ್ರತಿಧ್ವನಿ
September 20, 2023
ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
Top Story

ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
September 17, 2023
ಚಂದ್ರನ ಮೇಲೆ  ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌
ಇದೀಗ

ಚಂದ್ರನ ಮೇಲೆ ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

by Prathidhvani
September 21, 2023
ಟೆಂಪೋ ಟ್ರಾವೆಲರ್ ವಾಹನ ಕಳ್ಳತನ- ಮೂವರ ಬಂಧನ
Top Story

ಟೆಂಪೋ ಟ್ರಾವೆಲರ್ ವಾಹನ ಕಳ್ಳತನ- ಮೂವರ ಬಂಧನ

by ಪ್ರತಿಧ್ವನಿ
September 23, 2023
Next Post
ಹೊಸ ಸಚಿವರ ಖಾತೆ ಒಂದೇ ದಿನಕ್ಕೆ ಬದಲು; ಹಳಬರನ್ನು ಬದಿಗೆ ಸರಿಸುತ್ತಿದ್ದಾರೆಯೇ ಯಡಿಯೂರಪ್ಪ?

ಹೊಸ ಸಚಿವರ ಖಾತೆ ಒಂದೇ ದಿನಕ್ಕೆ ಬದಲು; ಹಳಬರನ್ನು ಬದಿಗೆ ಸರಿಸುತ್ತಿದ್ದಾರೆಯೇ ಯಡಿಯೂರಪ್ಪ?

ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಗೆದ್ದಿದ್ದು ಯಾಕೆ?

ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಗೆದ್ದಿದ್ದು ಯಾಕೆ?

ಮೆಹಬೂಬ ಮುಫ್ತಿಯ ದೋಷಾರೋಪದಲ್ಲಿ ಕಾಶ್ಮೀರದ ಕೋಟಾ ರಾಣಿಯ ಉಲ್ಲೇಖಿಸಿದ ಪೋಲೀಸರು

ಮೆಹಬೂಬ ಮುಫ್ತಿಯ ದೋಷಾರೋಪದಲ್ಲಿ ಕಾಶ್ಮೀರದ ಕೋಟಾ ರಾಣಿಯ ಉಲ್ಲೇಖಿಸಿದ ಪೋಲೀಸರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist