Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಚಾರ್ಮಾಡಿ, ಶಿರಾಡಿ, ಸಂಪಾಜೆ – ಮೂರೂ ಘಾಟ್ ರಸ್ತೆ ಬಂದ್

ಚಾರ್ಮಾಡಿ, ಶಿರಾಡಿ, ಸಂಪಾಜೆ ಮೂರು ಘಾಟ್ ರಸ್ತೆ ಬಂದ್
ಚಾರ್ಮಾಡಿ
Pratidhvani Dhvani

Pratidhvani Dhvani

August 9, 2019
Share on FacebookShare on Twitter

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಆಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಪರಿಣಾಮ ಹಾಸನ, ಮೈಸೂರು ಮತ್ತು ಬೆಂಗಳೂರು ಮಹಾನಗರಗಳನ್ನು ಸಂಪರ್ಕಿಸುವ ಮೂರು ಪ್ರಮುಖ ಘಾಟಿ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರಾಂತಕವಾಗಿದ್ದರೂ, ಶುಕ್ರವಾರ ಅಪರಾಹ್ನ ಉದನೆ-ಶಿರಾಡಿ ನಡುವೆ ರಸ್ತೆಗೆ ನೀರು ನುಗ್ಗಿದ ಪರಿಣಾಮ ವಾಹನ ಸಂಚಾರ ಸ್ಥಗಿತವಾಗಿದೆ. ಶಿರಾಡಿ ಗ್ರಾಮದಿಂದ 26 ಕಿ.ಮೀ. ಮೇಲೆ ಕಾಂಕ್ರೀಟ್ ರಸ್ತೆ ಮುಗಿದ ನಂತರ ಎತ್ತಿನಹಳ್ಳ ಎಂಬ ಸ್ಥಳದಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದಿದೆ. ಬೃಹತ್‌ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಬಿದ್ದಿದ್ದು, ಅದರೊಂದಿಗೆ ಮರಗಳು ಕೂಡಾ ರಸ್ತೆಗೆ ಬಿದ್ದಿವೆ.
ಕಳೆದ ವರ್ಷವೂ ಇದೇ ಭಾಗದಲ್ಲಿ ಗುಡ್ಡ ಕುಸಿತವುಂಟಾಗಿ ಹೆದ್ದಾರಿಗೆ ಮಣ್ಣು ಜರಿದು ಬಿದ್ದು ಹೆದ್ದಾರಿ ತಡೆಯುಂಟಾಗಿತ್ತು. ಇದೀಗ ಮತ್ತೆ ಈ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹೆದ್ದಾರಿಗೆ ಜರಿದು ಬಿದ್ದ ಮಣ್ಣನ್ನು ಜೆಸಿಬಿಗಳ ಮೂಲಕ ತೆರವುಗೊಳಿಸಲಾಗುತ್ತಾ ಇದೆ. ಕಂಟ್ರೋಲ್ ರೂಂ ನಿಂದ ಆಗಲೇ ಶಿರಾಡಿ ಘಾಟಿಯಲ್ಲಿ ಸಂಚಾರ ಅಲ್ಪಕಾಲದ ಮಟ್ಟಿಗೆ ತಡೆಹಿಡಿಯಬೇಕು ಎನ್ನುವ ಆದೇಶ ಬಂದಿದೆ.
ಶುಕ್ರವಾರ ರಾತ್ರಿಯವರೆಗೂ ಮಣ್ಣಿನ ತೆರವು ಗೊಳಿಸುವ ಕಾರ್ಯ ಮುಂದುವರಿಯಲಿದೆ.
ಆಗಸ್ಟ್ 14ರ ತನಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಈ ಬಾರಿಯ ಮಳೆಯಲ್ಲಿ ಮೊದಲ ಬಾರಿಗೆ ಶಿರಾಡಿ ಘಾಟಿಯಲ್ಲಿ ಆಗಸ್ಟ್ 12ರ ತನಕ ವಾಹನ ಸಂಚಾರ ನಿಷೇಧಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತದಿಂದ ವಾಹನ ಸಂಚಾರ ಅಡಚಣೆ ಆಗಿತ್ತು.
ಬೆಂಗಳೂರು ಸಂಪರ್ಕಿಸುವ ಮತ್ತೊಂದು ಹೆದ್ದಾರಿ ಚಾರ್ಮಾಡಿ -ಕೊಟ್ಟಿಗೆಹಾರ ರಸ್ತೆ ಒಂದು ವಾರದಿಂದ ಬಂದ್ ಆಗಿದೆ. ಮಂಗಳೂರಿನಿಂದ ಮಡಿಕೇರಿ ಮೈಸೂರು ಮೂಲಕ ಬೆಂಗಳೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕೂಡ ವಾಹನ ಸಂಚಾರ ಅಡಚಣೆಯಾಗಿದೆ. ಕಳೆದ ವರ್ಷ ಸುಳ್ಯ ಮಡಿಕೇರಿ ನಡುವೆ ಸಂಪಾಜೆ ಸಮೀಪ ಭಾರಿ ಪ್ರಮಾಣದ ಭೂಕುಸಿತದಿಂದ ಮೂರು ವಾರಗಳ ಕಾಲ ವಾಹನ ಸಂಚಾರ ನಿಲುಗಡೆ ಆಗಿತ್ತು.

ಹೆಚ್ಚು ಓದಿದ ಸ್ಟೋರಿಗಳು

ಬೆಂಗಳೂರು ಜೈಲಿನಿಂದಲೇ ವಿಡಿಯೋ ಪೋಸ್ಟ್‌ ಮಾಡಿದ ಹರ್ಷ ಕೊಲೆ ಆರೋಪಿ!

ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಧರೆಗುರುಳಿದ ವಿದ್ಯುತ್ ಕಂಬಗಳು!

ಶಿರಾಡಿ ಘಾಟಿ ಭೂಕುಸಿತ ತೆರವು ಕಾರ್ಯ

ಶಿವಮೊಗ್ಗ ಮೂಲಕ ಬಯಲುಸೀಮೆ ಮತ್ತು ಹೈದರಾಬಾದ್ ಕರ್ನಾಟಕದ ಜಿಲ್ಲೆಗಳ ಸಂಪರ್ಕ ರಸ್ತೆ ಚಾರ್ಮಾಡಿಯಲ್ಲಿ ಅಗಲ ಕಿರಿದಾಗಿರುವುದರಿಂದ ಪರಿಹಾರ ಕಾರ್ಯ ವಿಳಂಬ ಆಗುತ್ತದೆ. ಅಪಾಯಕಾರಿ ತಿರುವುಗಳಿರುವ ಚಾರ್ಮಾಡಿ ಘಾಟಿಯಲ್ಲಿ ತುರ್ತು ಕೆಲಸಗಳು ನಡೆದಿವೆ.
ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟಿ ರಸ್ತೆಗಳು ಬಂದ್ ಆಗಿರುವುದರಿಂದ ಜನಸಂಚಾರ ಮತ್ತು ವ್ಯಾಪಾರ ವಹಿವಾಟಿಗೆ ಹಿನ್ನಡೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 9ರ ಬೆಳಗ್ಗಿನ ತನಕ ಒಂದೇ ದಿನ 69 ಎಂಎಂ ಮಳೆಯಾಗಿದೆ. ಕಳೆದ ಎಂಟು ದಿವಸಗಳಲ್ಲಿ 500 ಎಂಎಂ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 233ಎಂಎಂ ಮಳೆ ಸುರಿದಿದ್ದರೆ, ಆಗಸ್ಟ್ ತಿಂಗಳ ಸರಾಸರಿ 856 ಎಂಎಂ ಆಗಿತ್ತು.
ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಕೆಂಪುಹೊಳೆಯಲ್ಲಿ ನೀರಿನ ಪ್ರವಾಹ ಹೆಚ್ಚಾಗುತ್ತಿದ್ದು, ಉದನೆ ಪೇಟೆಯಲ್ಲಿ ಹೆದ್ದಾರಿಯ ಇಕ್ಕೆಲಗಳಲ್ಲಿ ನದಿ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ.
ಇನ್ನೊಂದೆಡೆ, ಚಾರ್ಮಾಡಿ ತಪ್ಪಲಿನ ಸಮೀಪದ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಮನೆ, ಕೃಷಿ ತೋಟಗಳು ಜಲಾವೃತವಾಗಿದೆ. ಅರೆಮಲೆನಾಡು ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶದಲ್ಲಿಯೂ ಅತಿ ಹೆಚ್ಚಿನ ಮಳೆ ಆಗುತ್ತಿದೆ.

ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶನಿವಾರವೂ ರಜೆಯನ್ನು ವಿಸ್ತರಿಸಲಾಗಿದೆ. ನಿರಂತರವಾಗಿ ಮೂರನೇ ದಿನ ಕರಾವಳಿಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇದೇ ಮೊದಲ ಬಾರಿಗೆ ರಜೆ ನೀಡಲಾಗುತ್ತಿದೆ. ಭಾನುವಾರ ವಾರದ ರಜೆ ಆಗಿದ್ದು, ಸೋಮವಾರ ಬಕ್ರೀದ್ ಇರುವುದರಿಂದ ನಿರಂತರ ಐದು ದಿನ ರಜೆ ದೊರೆದಂತಾಗಿದೆ. ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ಒಂದು ದಿನ ಮೊದಲೇ ರಜೆ ನೀಡಲಾಗಿತ್ತು. ನೀರು ಇರುವ ತಗ್ಗು ಪ್ರದೇಶ, ಕೆರೆ ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಸೂಚಿಸಿದ್ದಾರೆ.

RS 500
RS 1500

SCAN HERE

don't miss it !

Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್
ಕರ್ನಾಟಕ

Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್

by ಚಂದನ್‌ ಕುಮಾರ್
July 2, 2022
ಜಿಎಸ್‌ ಟಿ ಹೊಸ ದರ ಏರಿಕೆ: ಬ್ಯಾಂಕ್‌ ಚೆಕ್‌, ಬ್ರ್ಯಾಂಡೆಂಡ್‌ ಆಹಾರ ಪೊಟ್ಟಣ ದುಬಾರಿ!
ದೇಶ

ಜಿಎಸ್‌ ಟಿ ಹೊಸ ದರ ಏರಿಕೆ: ಬ್ಯಾಂಕ್‌ ಚೆಕ್‌, ಬ್ರ್ಯಾಂಡೆಂಡ್‌ ಆಹಾರ ಪೊಟ್ಟಣ ದುಬಾರಿ!

by ಪ್ರತಿಧ್ವನಿ
June 29, 2022
ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು
ದೇಶ

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

by ಪ್ರತಿಧ್ವನಿ
July 3, 2022
ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!
ದೇಶ

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

by ಪ್ರತಿಧ್ವನಿ
June 30, 2022
ಉದಯಪುರ ಕೊಲೆ ಪ್ರಕರಣ : ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್!
ದೇಶ

ಉದಯಪುರ ಕೊಲೆ ಪ್ರಕರಣ : ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್!

by ಪ್ರತಿಧ್ವನಿ
June 29, 2022
Next Post
ಎಲ್ಲ ಉದ್ಯಮಗಳು ಸಂಕಷ್ಟದಲ್ಲಿವೆ ಏಕೆ ?

ಎಲ್ಲ ಉದ್ಯಮಗಳು ಸಂಕಷ್ಟದಲ್ಲಿವೆ ಏಕೆ ?

ನೆರೆಯ ನೀರು: ಉತ್ತರ ಕರ್ನಾಟಕ ತತ್ತರ

ನೆರೆಯ ನೀರು: ಉತ್ತರ ಕರ್ನಾಟಕ ತತ್ತರ

ಉತ್ತರ ಕರ್ನಾಟಕಕ್ಕೆ ವಾರದಲ್ಲಿ ವರ್ಷದ ಮಳೆ

ಉತ್ತರ ಕರ್ನಾಟಕಕ್ಕೆ ವಾರದಲ್ಲಿ ವರ್ಷದ ಮಳೆ, ಕೋಲಾರದಲ್ಲಿ ಬರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist