• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚುನಾವಣೆ ಗೆಲ್ಲಲು ಬಿಜೆಪಿ ನನ್ನನ್ನು ರಾಜಕೀಯವಾಗಿ ಬಳಸಿಕೊಂಡಿತು – ಅಣ್ಣಾ ಹಜ಼ಾರೆ 

by
February 7, 2020
in ದೇಶ
0
ಚುನಾವಣೆ ಗೆಲ್ಲಲು ಬಿಜೆಪಿ ನನ್ನನ್ನು ರಾಜಕೀಯವಾಗಿ ಬಳಸಿಕೊಂಡಿತು - ಅಣ್ಣಾ ಹಜ಼ಾರೆ 
Share on WhatsAppShare on FacebookShare on Telegram

ದೇಶದಲ್ಲಿ ಲೋಕಪಾಲ್‌ ಜಾರಿಯಾಗಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರ ಆರಂಭಿಸಿದ ಹೋರಾಟಗಾರ ಅಣ್ಣಾ ಹಜ಼ಾರೆ ಎಂದೇ ಪ್ರಖ್ಯಾತರಾಗಿರುವ ಕಿಸಾನ್‌ ಬಾಬುರಾಲ್‌ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ತಮ್ಮನ್ನು ಉಪಯೋಗಿಸಿಕೊಂಡು ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ್ದಾರೆ. ತಾನು ಪ್ರಾರಂಭಿಸಿದ್ದ ಚಳವಳಿಯನ್ನು ದಾಳವಾಗಿ ಬಳಸಿಕೊಂಡು ಬಿಜೆಪಿ ಚುನಾವಣೆಯನ್ನು ಎದುರಿಸಿತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ADVERTISEMENT

“ಪ್ರತಿಯೊಬ್ಬರಿಗೂ ಗೊತ್ತು. ಲೋಕಪಾಲ್‌ ಜಾರಯಾಗಬೇಕೆಂದು ಸತ್ಯಾಗ್ರಹವನ್ನು ಆರಂಭಿಸಿದ್ದು ನಾನು. ಆ ಅವಕಾಶವನ್ನು ಬಳಸಿಕೊಂಡು ಬಿಜೆಪಿ ಮತ್ತು ಆಮ್‌ ಆದ್ಮಿ ಪಕ್ಷವು ಅಧಿಕಾರವನ್ನು ಹಿಡಿದವು. ಆ ಎರಡೂ ಪಕ್ಷಗಳು ನನ್ನ ದೃಷ್ಟಿಯಲ್ಲಿ ಗೌರವವನ್ನು ಕಳೆದುಕೊಂಡಿವೆ,” ಎಂದು ಅಣ್ಣಾ ಹಜ಼ಾರೆಯವರು ತಮ್ಮ ಹಳ್ಳಿಯಾದ ರಾಲೆಗಾಂವ್-ಸಿದ್ದಿಯಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಕಾರ್ಯ ವೈಕರಿಯ ಕುರಿತು ಅಸಮಾಧಾನ ಹೊರ ಹಾಕಿದ ಅಣ್ಣಾ, ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ದೇಶದ ಜನರ ದಾರಿ ತಪ್ಪಿಸುತ್ತಿದೆ ಹಾಗೂ ಪ್ರಧಾನಿ ಮೋದಿ ದೇಶವನ್ನು ನಿರಂಕುಶತ್ವದೆಡೆಗೆ ಕೊಂಡೊಯ್ಯುತ್ತಿದ್ದಾರೆ, ಎಂದರು. ಇನ್ನು ಮಹಾರಾಷ್ಟ್ರದ ಹಿಂದಿನ ಬಿಜೆಪಿ ಸರ್ಕಾರದ ಕುರಿತು ಆ ಸರ್ಕಾರವು ಸುಳ್ಳನ್ನು ಹೇಳಿ ನಾಲ್ಕು ವರ್ಷಗಳನ್ನು ಕಳೆದಿದೆ ಎಂದು ಆರೋಪಿಸಿದರು.

“ಸುಳ್ಳು ಎಷ್ಟು ಸಮಯ ಬದುಕಬಹುದು? ಈ ಸರ್ಕಾರ ದೇಶದ ಜನರ ಕೈ ಬಿಟ್ಟಿದೆ. ಹಿಂದಿನ ಮಹಾರಾಷ್ಟ್ರ ಸರ್ಕಾರ ನನ್ನ ಶೇ. 90 ಬೇಡಿಕೆಗಳನ್ನು ಈಡೇರಿಸಿದೆ ಎಂದು ಸುಳ್ಳು ಹೇಳಿತ್ತು. ನನ್ನ ಹೋರಾಟದಿಂದ ಯಾರೆಲ್ಲಾ ಲಾಭ ಪಡೆದುಕೊಂಡಿದ್ದಾರೆಯೋ, ಅವರೆಲ್ಲಾ ನನಗೆ ಕೈ ಕೊಟ್ಟಿದ್ದಾರೆ. ನನ್ನ ಯಾವುದೇ ಬೇಡಿಕೆಗಳನ್ನು ಈವರೆಗೆ ಈಡೇರಿಸಲಾಗಲಿಲ್ಲ,” ಎಂದು ವಿಷಾದ ವ್ಯಕ್ತ ಪಡಿಸಿದರು.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ತಮ್ಮನ್ನು ಭೇಟಿ ಮಾಡಲು ಬರುತ್ತೇನೆಂದು ಕೇಳಿಕೊಳ್ಳುತ್ತಾರೆ. ನನ್ನ ಬೇಡಕೆಗಳನ್ನು ಈಡೇರಿಸುತ್ತೇನೆಂದು ಆಶ್ವಾಸನೆಗಳನ್ನು ನೀಡುತ್ತಾರೆ. ಆದರೆ, ನಾನು ಯಾರನ್ನೂ ಭೇಟಿಯಾಗಲು ಇಚ್ಚಿಸುವುದಿಲ್ಲ. ಅದು ಜನರಿಗೆ ತಪ್ಪು ಸಂದೇಶ ನೀಡುತ್ತದೆ. ರಾಜಕೀಯ ನಾಯಕರು ಒಂದು ಧೃಡ ನಿರ್ಧಾರ ತೆಗೆದುಕೊಳ್ಳಲಿ. ನನ್ನ ಬೇಡಿಕೆಗಳನ್ನು ಈಡೆರಿಸುತ್ತೇವೆಂದು ನನಗೆ ಬರೆದು ನೀಡಲಿ, ಎಂದು 81 ವರ್ಷ ಪ್ರಾಯದ ಹೋರಾಟಗಾರ ಅಣ್ಣಾ ಹಜ಼ಾರೆ ಆಗ್ರಹಿಸಿದ್ದಾರೆ.

ಅರವಿಂದ ಕೇಜ್ರಿವಾಲ್‌ ಅವರನ್ನು ನೀವು ಮತ್ತೆ ಸ್ವಾಗತಿಸುತ್ತೀರೋ ಎಂಬ ಪ್ರಶ್ನೆಗೆ, ಅವರಿಗೆ ನನ್ನ ಹೋರಾಟದಲ್ಲಿ ಯಾವಾಗಲೂ ಸ್ವಾಗತವಿದೆ. ಆದರೆ, ನಾನು ಯಾವತ್ತೂ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಖಾರವಾಗಿ ನುಡಿದಿದ್ದಾರೆ.

ಸತತ ಏಳು ದಿನಗಳಿಂದ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಅಣ್ಣಾ ಹಜ಼ಾರೆಯವರು ಇನ್ನೂ ಐದು ದಿನಗಳ ಕಾಲ ನನಗೇನು ಆಗುವುದಿಲ್ಲ. ದೇವರು ನನ್ನೊಂದಿಗೆ ಇದ್ದಾರೆ ಎಂಬ ವಿಶ್ವಾಸದ ನುಡಿಗಳನ್ನು ನುಡಿದರು. ಒಂದು ವೇಳೆ ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ವಾಪಸು ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags: ಅಣ್ಣಾ ಹಜ಼ಾರೆಚುನಾವಣೆಬಿಜೆಪಿರಾಜಕೀಯ
Previous Post

ಸಂಪುಟ ವಿಸ್ತರಣೆ ಗೊಂದಲದ ಬೆಂಕಿಗೆ ತುಪ್ಪ ಸುರಿಯಲಾರಂಭಿಸಿದೆ ಪುನಾರಚನೆಯ ಹೇಳಿಕೆ

Next Post

ಬಜೆಟ್‌ 2020: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಬಿತ್ತು ಕತ್ತರಿ 

Related Posts

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”
Top Story

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

by ಪ್ರತಿಧ್ವನಿ
May 19, 2026
0

ಬೆಂಗಳೂರು : ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ, ಇದು ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

May 19, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಬಜೆಟ್‌ 2020: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಬಿತ್ತು ಕತ್ತರಿ 

ಬಜೆಟ್‌ 2020: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಬಿತ್ತು ಕತ್ತರಿ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada