Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಚುನಾವಣೆ ಗೆಲ್ಲಲು ಬಿಜೆಪಿ ನನ್ನನ್ನು ರಾಜಕೀಯವಾಗಿ ಬಳಸಿಕೊಂಡಿತು – ಅಣ್ಣಾ ಹಜ಼ಾರೆ 

ಚುನಾವಣೆ ಗೆಲ್ಲಲು ಬಿಜೆಪಿ ನನ್ನನ್ನು ರಾಜಕೀಯವಾಗಿ ಬಳಸಿಕೊಂಡಿತು - ಅಣ್ಣಾ ಹಜ಼ಾರೆ
ಚುನಾವಣೆ ಗೆಲ್ಲಲು ಬಿಜೆಪಿ ನನ್ನನ್ನು ರಾಜಕೀಯವಾಗಿ ಬಳಸಿಕೊಂಡಿತು - ಅಣ್ಣಾ ಹಜ಼ಾರೆ 

February 7, 2020
Share on FacebookShare on Twitter

ದೇಶದಲ್ಲಿ ಲೋಕಪಾಲ್‌ ಜಾರಿಯಾಗಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರ ಆರಂಭಿಸಿದ ಹೋರಾಟಗಾರ ಅಣ್ಣಾ ಹಜ಼ಾರೆ ಎಂದೇ ಪ್ರಖ್ಯಾತರಾಗಿರುವ ಕಿಸಾನ್‌ ಬಾಬುರಾಲ್‌ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ತಮ್ಮನ್ನು ಉಪಯೋಗಿಸಿಕೊಂಡು ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ್ದಾರೆ. ತಾನು ಪ್ರಾರಂಭಿಸಿದ್ದ ಚಳವಳಿಯನ್ನು ದಾಳವಾಗಿ ಬಳಸಿಕೊಂಡು ಬಿಜೆಪಿ ಚುನಾವಣೆಯನ್ನು ಎದುರಿಸಿತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ನೀರಿನ ಬಾಟಲ್‌ ಗಾಗಿ ಜಗಳ: ಚಲಿಸುವ ರೈಲಿನಿಂದ ಪ್ರಯಾಣಿಕನ್ನು ಹೊರಗೆ ಎಸೆದ ಸಿಬ್ಬಂದಿ!

ಬಿಜೆಪಿ ಜೊತೆಗಿನ ಮೈತ್ರಿ: ನಿತೀಶ್‌ ಕುಮಾರ್ ನಾಳೆ ನಿರ್ಧಾರ ಪ್ರಕಟ!

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

“ಪ್ರತಿಯೊಬ್ಬರಿಗೂ ಗೊತ್ತು. ಲೋಕಪಾಲ್‌ ಜಾರಯಾಗಬೇಕೆಂದು ಸತ್ಯಾಗ್ರಹವನ್ನು ಆರಂಭಿಸಿದ್ದು ನಾನು. ಆ ಅವಕಾಶವನ್ನು ಬಳಸಿಕೊಂಡು ಬಿಜೆಪಿ ಮತ್ತು ಆಮ್‌ ಆದ್ಮಿ ಪಕ್ಷವು ಅಧಿಕಾರವನ್ನು ಹಿಡಿದವು. ಆ ಎರಡೂ ಪಕ್ಷಗಳು ನನ್ನ ದೃಷ್ಟಿಯಲ್ಲಿ ಗೌರವವನ್ನು ಕಳೆದುಕೊಂಡಿವೆ,” ಎಂದು ಅಣ್ಣಾ ಹಜ಼ಾರೆಯವರು ತಮ್ಮ ಹಳ್ಳಿಯಾದ ರಾಲೆಗಾಂವ್-ಸಿದ್ದಿಯಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಕಾರ್ಯ ವೈಕರಿಯ ಕುರಿತು ಅಸಮಾಧಾನ ಹೊರ ಹಾಕಿದ ಅಣ್ಣಾ, ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ದೇಶದ ಜನರ ದಾರಿ ತಪ್ಪಿಸುತ್ತಿದೆ ಹಾಗೂ ಪ್ರಧಾನಿ ಮೋದಿ ದೇಶವನ್ನು ನಿರಂಕುಶತ್ವದೆಡೆಗೆ ಕೊಂಡೊಯ್ಯುತ್ತಿದ್ದಾರೆ, ಎಂದರು. ಇನ್ನು ಮಹಾರಾಷ್ಟ್ರದ ಹಿಂದಿನ ಬಿಜೆಪಿ ಸರ್ಕಾರದ ಕುರಿತು ಆ ಸರ್ಕಾರವು ಸುಳ್ಳನ್ನು ಹೇಳಿ ನಾಲ್ಕು ವರ್ಷಗಳನ್ನು ಕಳೆದಿದೆ ಎಂದು ಆರೋಪಿಸಿದರು.

“ಸುಳ್ಳು ಎಷ್ಟು ಸಮಯ ಬದುಕಬಹುದು? ಈ ಸರ್ಕಾರ ದೇಶದ ಜನರ ಕೈ ಬಿಟ್ಟಿದೆ. ಹಿಂದಿನ ಮಹಾರಾಷ್ಟ್ರ ಸರ್ಕಾರ ನನ್ನ ಶೇ. 90 ಬೇಡಿಕೆಗಳನ್ನು ಈಡೇರಿಸಿದೆ ಎಂದು ಸುಳ್ಳು ಹೇಳಿತ್ತು. ನನ್ನ ಹೋರಾಟದಿಂದ ಯಾರೆಲ್ಲಾ ಲಾಭ ಪಡೆದುಕೊಂಡಿದ್ದಾರೆಯೋ, ಅವರೆಲ್ಲಾ ನನಗೆ ಕೈ ಕೊಟ್ಟಿದ್ದಾರೆ. ನನ್ನ ಯಾವುದೇ ಬೇಡಿಕೆಗಳನ್ನು ಈವರೆಗೆ ಈಡೇರಿಸಲಾಗಲಿಲ್ಲ,” ಎಂದು ವಿಷಾದ ವ್ಯಕ್ತ ಪಡಿಸಿದರು.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ತಮ್ಮನ್ನು ಭೇಟಿ ಮಾಡಲು ಬರುತ್ತೇನೆಂದು ಕೇಳಿಕೊಳ್ಳುತ್ತಾರೆ. ನನ್ನ ಬೇಡಕೆಗಳನ್ನು ಈಡೇರಿಸುತ್ತೇನೆಂದು ಆಶ್ವಾಸನೆಗಳನ್ನು ನೀಡುತ್ತಾರೆ. ಆದರೆ, ನಾನು ಯಾರನ್ನೂ ಭೇಟಿಯಾಗಲು ಇಚ್ಚಿಸುವುದಿಲ್ಲ. ಅದು ಜನರಿಗೆ ತಪ್ಪು ಸಂದೇಶ ನೀಡುತ್ತದೆ. ರಾಜಕೀಯ ನಾಯಕರು ಒಂದು ಧೃಡ ನಿರ್ಧಾರ ತೆಗೆದುಕೊಳ್ಳಲಿ. ನನ್ನ ಬೇಡಿಕೆಗಳನ್ನು ಈಡೆರಿಸುತ್ತೇವೆಂದು ನನಗೆ ಬರೆದು ನೀಡಲಿ, ಎಂದು 81 ವರ್ಷ ಪ್ರಾಯದ ಹೋರಾಟಗಾರ ಅಣ್ಣಾ ಹಜ಼ಾರೆ ಆಗ್ರಹಿಸಿದ್ದಾರೆ.

ಅರವಿಂದ ಕೇಜ್ರಿವಾಲ್‌ ಅವರನ್ನು ನೀವು ಮತ್ತೆ ಸ್ವಾಗತಿಸುತ್ತೀರೋ ಎಂಬ ಪ್ರಶ್ನೆಗೆ, ಅವರಿಗೆ ನನ್ನ ಹೋರಾಟದಲ್ಲಿ ಯಾವಾಗಲೂ ಸ್ವಾಗತವಿದೆ. ಆದರೆ, ನಾನು ಯಾವತ್ತೂ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಖಾರವಾಗಿ ನುಡಿದಿದ್ದಾರೆ.

ಸತತ ಏಳು ದಿನಗಳಿಂದ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಅಣ್ಣಾ ಹಜ಼ಾರೆಯವರು ಇನ್ನೂ ಐದು ದಿನಗಳ ಕಾಲ ನನಗೇನು ಆಗುವುದಿಲ್ಲ. ದೇವರು ನನ್ನೊಂದಿಗೆ ಇದ್ದಾರೆ ಎಂಬ ವಿಶ್ವಾಸದ ನುಡಿಗಳನ್ನು ನುಡಿದರು. ಒಂದು ವೇಳೆ ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ವಾಪಸು ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

RS 500
RS 1500

SCAN HERE

don't miss it !

ಮನೆಮನೆಯಲಿ ಧ್ವಜ ಹಾರಿಸಿ, ಮನಮನದಲಿ ಸಂವಿಧಾನವನ್ನೂ ಸ್ಥಾಪಿಸಿ!
ದೇಶ

ಮನೆಮನೆಯಲಿ ಧ್ವಜ ಹಾರಿಸಿ, ಮನಮನದಲಿ ಸಂವಿಧಾನವನ್ನೂ ಸ್ಥಾಪಿಸಿ!

by ನಾ ದಿವಾಕರ
August 3, 2022
ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್
ಕರ್ನಾಟಕ

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

by ರಮೇಶ್ ಎಸ್‌.ಆರ್
August 6, 2022
SDPI, PFI ಸಂಘಟನೆಯವರನ್ನು ನಾವೆ ನುಗ್ಗಿ ಹೊಡೆಯಬೇಕಾಗುತ್ತೆ : ಕುಲಕರ್ಣಿ
ಕರ್ನಾಟಕ

SDPI, PFI ಸಂಘಟನೆಯವರನ್ನು ನಾವೆ ನುಗ್ಗಿ ಹೊಡೆಯಬೇಕಾಗುತ್ತೆ : ಕುಲಕರ್ಣಿ

by ಪ್ರತಿಧ್ವನಿ
August 5, 2022
5ನೇ ಟಿ-20: ಭಾರತಕ್ಕೆ 88 ರನ್ ಜಯ, 4-1ರಿಂದ ಟಿ-20 ಸರಣಿ ವಶ
ಕ್ರೀಡೆ

5ನೇ ಟಿ-20: ಭಾರತಕ್ಕೆ 88 ರನ್ ಜಯ, 4-1ರಿಂದ ಟಿ-20 ಸರಣಿ ವಶ

by ಪ್ರತಿಧ್ವನಿ
August 8, 2022
ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಿಗೆ ಇಂದು ರಜೆ ಘೋಷಣೆ!
ಕರ್ನಾಟಕ

ಇಂದು, ನಾಳೆ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ

by ಪ್ರತಿಧ್ವನಿ
August 5, 2022
Next Post
ಬಜೆಟ್‌ 2020: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಬಿತ್ತು ಕತ್ತರಿ 

ಬಜೆಟ್‌ 2020: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಗೆ ಬಿತ್ತು ಕತ್ತರಿ 

ಹಳೆ ಮೈಸೂರು: ಒಕ್ಕಲಿಗರ ಕೋಟೆಗೆ ಲಗ್ಗೆ ಇಡುತ್ತಿದೆ ಬಿಜೆಪಿ

ಹಳೆ ಮೈಸೂರು: ಒಕ್ಕಲಿಗರ ಕೋಟೆಗೆ ಲಗ್ಗೆ ಇಡುತ್ತಿದೆ ಬಿಜೆಪಿ

ದೆಹಲಿ ಗದ್ದುಗೆ ಅಖಾಡದಲ್ಲಿ ಕುಸ್ತಿ ಶುರು! ಅಭಿವೃದ್ಧಿಯೋ? ದೇಶಭಕ್ತಿಯೋ?

ದೆಹಲಿ ಗದ್ದುಗೆ ಅಖಾಡದಲ್ಲಿ ಕುಸ್ತಿ ಶುರು! ಅಭಿವೃದ್ಧಿಯೋ? ದೇಶಭಕ್ತಿಯೋ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist