ಕರೊನಾ ನಡುವೆಯೇ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಮೇಲಾಟಕ್ಕಾಗಿ ಜನರ ಪ್ರಾಣದೊಂದಿಗೆ ಆಟವಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕುಟುಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿ ಆಗುತ್ತಾರೆ ಅನ್ನುವುದು ಕಾಂಗ್ರೆಸ್ ನಲ್ಲಿರುವ ಮಾತು. ಹೀಗಾಗಿ ಒಂದು ವೇಳೆ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಡಿ.ಕೆ.ಶಿವಕುಮಾರ್ ಸಿಎಂ ಅಭ್ಯರ್ಥಿಯಾಗಬಹುದು. ಇದನ್ನು ಇದನ್ನು ತಪ್ಪಿಸಲು ಪಕ್ಷದೊಳಗೆ ಪಿತೂರಿ ನಡೆಯುತ್ತಿದೆ ಎಂದರು.
ಸಿದ್ದರಾಮಯ್ಯ ಅವರು ಹೀಗೆ ಪಿತೂರಿ ಮಾಡಿಯೇ ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಇತ್ತ ಡಿ.ಕೆ.ಶಿವಕುಮಾರ್ ಅವರು ನಾನೇ ಮುಂದಿನ ಮುಖ್ಯಮಂತ್ರಿ ಅಂತ ಹೇಳುತ್ತಾ ಸಾಗುತ್ತಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಕೂಡಾ ತಾವೇ ಸಿಎಂ ಅನ್ನುತ್ತಿದ್ದಾರೆ ಎಂದರು.