Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಜಿದ್ದಾಜಿದ್ದಿಗೆ ಬಿದ್ದ ಜೆಎನ್ ಯು: ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ!

ಜಿದ್ದಾಜಿದ್ದಿಗೆ ಬಿದ್ದ ಜೆಎನ್ ಯು: ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ!
ಜಿದ್ದಾಜಿದ್ದಿಗೆ ಬಿದ್ದ ಜೆಎನ್ ಯು: ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ!
Pratidhvani Dhvani

Pratidhvani Dhvani

December 5, 2019
Share on FacebookShare on Twitter

ಶಿಕ್ಷಣದಲ್ಲಿ ಯಾವಾಗ ರಾಜಕೀಯ ಲೇಪ ಹಚ್ಚಲಾಗುತ್ತದೋ, ಪ್ರತಿಷ್ಠೆ ಮೇಳೈಸುತ್ತದೋ ಅಲ್ಲಿನ ಶಿಕ್ಷಣ ವ್ಯವಸ್ಥೆಯೇ ಅವಸಾನದ ಅಂಚಿಗೆ ಬಂದು ನಿಲ್ಲುತ್ತದೆ. ವಿದ್ಯಾರ್ಥಿಗಳ ಹಿತವನ್ನು ಕಾಪಾಡದ ಶಿಕ್ಷಣ ಸಂಸ್ಥೆ ಅದು ಶಿಕ್ಷಣ ಸಂಸ್ಥೆಯೇ ಆಗಿರುವುದಿಲ್ಲ. ಬದಲಿಗೆ ವ್ಯವಹಾರದ ತಾಣವಾಗಿರುತ್ತದೆ. ಇಂತಹದ್ದೊಂದು ಪರಿಸ್ಥಿತಿ ಇದೀಗ ದೇಶದ ಅತ್ಯಂತ ಹಳೆಯ ಮತ್ತು ಖ್ಯಾತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ಬಂದೊದಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಹುರಾಷ್ಟ್ರೀಯ ಕಂಪನಿಗಳು ಭಾರತವನ್ನು ಏಕೆ ತೊರೆಯುತ್ತಿವೆ?

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

ದೇಶದ ಅತ್ಯಂತ ದುಬಾರಿ ನಗರಿ ಮುಂಬೈ!

ಇಲ್ಲಿ ರಾಜಕೀಯ ಎಂಬುದು ಹಾಸು ಹೊಕ್ಕಾಗಿ ತಾಂಡವವಾಡುತ್ತಿದೆ. ಆಡಳಿತ ಮಂಡಳಿ ದೇಶವನ್ನಾಳುವ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದೆ. ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಬಿಜೆಪಿಯೇತರ ಪಕ್ಷಗಳ ಬೆಂಬಲಿತ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆಂಬ ಏಕೈಕ ಕಾರಣದಿಂದ ವಿದ್ಯಾರ್ಥಿಗಳನ್ನು ಶೋಷಣೆ ಮಾಡಲಾಗುತ್ತಿದೆ.

ಇಷ್ಟೇ ಅಲ್ಲ. ಪರೀಕ್ಷೆಗಳನ್ನು ಬರೆಯದಿದ್ದರೆ ವಿದ್ಯಾರ್ಥಿ ಸದಸ್ಯತ್ವವನ್ನೇ ರದ್ದು ಮಾಡುವುದಾಗಿ ಆಡಳಿತ ಮಂಡಳಿ ವಿದ್ಯಾರ್ಥಿ ಸಮೂಹಕ್ಕೆ ಬೆದರಿಕೆ ಹಾಕಿದೆ.

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯವೆಂದರೆ (ಜೆಎನ್ ಯು) ಅಲ್ಲಿ ಹಿಂದುಳಿದವರು, ತುಳಿತಕ್ಕೆ ಒಳಗಾದವರು, ಆರ್ಥಿಕವಾಗಿ ದುರ್ಬಲರಾದ ಕುಟುಂಬಗಳ ಮಕ್ಕಳು ಅತ್ಯಂತ ಕಡಿಮೆ ಖರ್ಚಿನಲ್ಲಿ ಉನ್ನತ ವ್ಯಾಸಂಗ ಮಾಡುವ ವಿವಿ ಎಂದೇ ಖ್ಯಾತವಾಗಿತ್ತು.

ಆದರೆ, ಇದ್ದಕ್ಕಿದ್ದಂತೆ ಹಾಸ್ಟೆಲ್ ಶುಲ್ಕವನ್ನು ಹೆಚ್ಚಳ ಮಾಡಿ ಈ ಬಡ ವಿದ್ಯಾರ್ಥಿಗಳ ಮೇಲೆ ಬರೆ ಎಳೆಯಲಾಗುತ್ತಿದೆ. ಈ ಉದ್ದೇಶಿತ ಶುಲ್ಕ ಹೆಚ್ಚಳ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಸಾವಿರಾರು ವಿದ್ಯಾರ್ಥಿಗಳು ವಿವಿ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕಳೆದ ಒಂದು ತಿಂಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದರೂ ಆಡಳಿತ ಮಂಡಳಿ ಇದಕ್ಕೆ ಸೊಪ್ಪು ಹಾಕುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ವಿದ್ಯಾರ್ಥಿ ಸಂಘವು ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಬೆಂಬಲಿತವಾಗಿಲ್ಲ. ಒಂದು ವೇಳೆ ಬಿಜೆಪಿಯ ಪಕಳೆಯಾಗಿರುವ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿಗೆ ಸೇರಿದ ವಿದ್ಯಾರ್ಥಿಗಳು ಪದಾಧಿಕಾರಿಗಳಾಗಿದ್ದರೆ, ಶುಲ್ಕ ಹೆಚ್ಚಳದ ನಿರ್ಧಾರವನ್ನೇ ತೆಗೆದುಕೊಳ್ಳದೇ ಇರುತ್ತಿತ್ತು,

ಶುಲ್ಕವನ್ನು ಹೆಚ್ಚಳ ಮಾಡಿರುವ ವಿವಿಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಸಂಘವು ಡಿಸೆಂಬರ್ 12 ರಿಂದ ಆರಂಭವಾಗುವ ಸೆಮಿಸ್ಟರ್ ಪರೀಕ್ಷೆಯನ್ನೇ ಬಹಿಷ್ಕರಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಆದರೆ, ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಆಡಳಿತ ಮಂಡಳಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗುವುದಿಲ್ಲ ಎಂಬ ನಿಲುವು ತಳೆದಿದೆ. ಇದಲ್ಲದೇ, ವಿದ್ಯಾರ್ಥಿ ಸಂಘ ಪರೀಕ್ಷೆಗಳ ಬಹಿಷ್ಕಾರಕ್ಕೆ ಕರೆ ನೀಡಿರುವುದನ್ನೂ ವಿವಿ ಆಡಳಿತ ಮಂಡಳಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ.

ವಿದ್ಯಾರ್ಥಿ ಸಂಘದೊಂದಿಗೆ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿ ಸಮುದಾಯಕ್ಕೆ ಬೆದರಿಕೆ ಹಾಕಲು ಆರಂಭಿಸಿದೆ. ಈ ವರ್ಷದ ಶೈಕ್ಷಣಿಕ ಪಠ್ಯ ಚಟುವಟಿಕೆಗಳು ನಿಗದಿಯಂತೆ ಪೂರ್ಣಗೊಳ್ಳಬೇಕು ಮತ್ತು ಪರೀಕ್ಷೆಗಳೂ ನಿಗದಿಯಂತೆ ನಡೆಸಬೇಕೆಂದು ಆಡಳಿತ ಮಂಡಳಿ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮುಷ್ಕರವನ್ನು ಕೈಬಿಟ್ಟು ವ್ಯಾಸಂಗದ ಕಡೆಗೆ ಗಮನಹರಿಸಬೇಕೆಂದು ಸುತ್ತೋಲೆಯನ್ನು ಹೊರಡಿಸಿದೆ ಆಡಳಿತ ಮಂಡಳಿ.

ಸುತ್ತೋಲೆ ಇಷ್ಟಕ್ಕೇ ಸೀಮಿತವಾಗಿದ್ದರೆ ಯಾವುದೇ ತೊಂದರೆ ಇರುತ್ತಿರಲಿಲ್ಲ. ಉರಿಯುವ ಬೆಂಕಿಗೆ ತುಪ್ಪ ಸುರಿದಂತಿದೆ. ಇನ್ನೂ ಮುಂದುವರಿದು ಡಿಸೆಂಬರ್ 12 ರಂದು ಆರಂಭವಾಗಲಿರುವ ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗದಿದ್ದರೆ ಸ್ಟೂಡೆಂಟ್ ಶಿಪ್ ಅನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂಬ ಬೆದರಿಕೆಯನ್ನೂ ಹಾಕಿದೆ.

ಈ ಪರೀಕ್ಷೆಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ ಗೆ ಪ್ರವೇಶ ಪಡೆಯಲು ಅನರ್ಹರಾಗಲಿದ್ದಾರೆ. ಇಷ್ಟೇ ಅಲ್ಲ, ವ್ಯಾಸಂಗ ಪ್ರಮಾಣ ಪತ್ರವನ್ನೂ ಪಡೆಯಲು ಅನರ್ಹರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿರುವುದು ಈಗ ವಿದ್ಯಾರ್ಥಿ ಸಮುದಾಯವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಒಂದು ಕಡೆ ಹಾಸ್ಟೆಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಉದ್ದೇಶಿತ ದುಬಾರಿ ಶುಲ್ಕದ ವಿರುದ್ಧ ಹೋರಾಟವನ್ನು ಮುಂದುವರಿಸಬೇಕೇ ಅಥವಾ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೇ ಎಂಬ ಗೊಂದಲದಲ್ಲಿ ಬಿದ್ದಿದ್ದಾರೆ.

ಆದರೆ, ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿ ಸಂಘ ಜಿದ್ದಾಜಿದ್ದಿಗೆ ಬಿದ್ದು ಈ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.

RS 500
RS 1500

SCAN HERE

don't miss it !

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!
ದೇಶ

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

by ಪ್ರತಿಧ್ವನಿ
June 30, 2022
ನಾವು ಮುಸಲ್ಮಾನರ ವೋಟಿನ ಮೇಲೆ ಅವಲಂಬಿತರಾಗಿಲ್ಲ : ಕೆ.ಎಸ್.ಈಶ್ವರಪ್ಪ
ಕರ್ನಾಟಕ

ನಾವು ಮುಸಲ್ಮಾನರ ವೋಟಿನ ಮೇಲೆ ಅವಲಂಬಿತರಾಗಿಲ್ಲ : ಕೆ.ಎಸ್.ಈಶ್ವರಪ್ಪ

by ಪ್ರತಿಧ್ವನಿ
June 26, 2022
ನಮ್ಮ ಕ್ಷೇತ್ರ ಎಂದು ಮೆರೆಯುತ್ತಿದ್ದ ಬಿಜೆಪಿ, ಜೆಡಿಎಸ್‌ ಭದ್ರಕೋಟೆಯನ್ನು ಕಸಿದುಕೊಂಡಿದ್ದೇವೆ : ಸಿದ್ದರಾಮಯ್ಯ
ಕರ್ನಾಟಕ

ಪಠ್ಯ ಪುಸ್ತಕ ಪರಿಷ್ಕರಣೆ | ಸರ್ಕಾರ ಹೇಳುತ್ತಿರುವ ಸುಳ್ಳುಗಳನ್ನು ಬಟ್ಟಬಯಲು ಮಾಡಿದ ಸಿದ್ದರಾಮಯ್ಯ!

by ಪ್ರತಿಧ್ವನಿ
June 24, 2022
ಮುರ್ಮುಗಿಂತ ನಾನು ಆದಿವಾಸಿಗಳಿಗಾಗಿ ಹೆಚ್ಚು ಕೆಲಸ ಮಾಡಿದ್ದೇನೆ : ಯಶವಂತ್ ಸಿನ್ಹಾ
ದೇಶ

ಮುರ್ಮುಗಿಂತ ನಾನು ಆದಿವಾಸಿಗಳಿಗಾಗಿ ಹೆಚ್ಚು ಕೆಲಸ ಮಾಡಿದ್ದೇನೆ : ಯಶವಂತ್ ಸಿನ್ಹಾ

by ಪ್ರತಿಧ್ವನಿ
June 24, 2022
ಕರೋನ 3ನೇ ಅಲೆ: 2ನೇ ಅಲೆಯಲ್ಲಿ ಕಲಿತ ಪಾಠಗಳನ್ನು ಸರ್ಕಾರ ಈಗ ಕಾರ್ಯರೂಪಕ್ಕೆ ತರದಿದ್ದರೆ ಮತ್ತಷ್ಟು ಸಾವು ನೋವು.!
ದೇಶ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಕರೋನಾ ಕೇಸ್ ಪತ್ತೆ : 20 ಮಂದಿ ಬಲಿ!

by ಪ್ರತಿಧ್ವನಿ
June 25, 2022
Next Post
ಆರ್ಥಿಕ ಬೆಳವಣಿಗೆ ದರ ತೀವ್ರವಾಗಿ ತಗ್ಗಿಸಿದ ಆರ್ ಬಿಐ: ಬಡ್ಡಿದರ ಯಥಾಸ್ಥಿತಿ

ಆರ್ಥಿಕ ಬೆಳವಣಿಗೆ ದರ ತೀವ್ರವಾಗಿ ತಗ್ಗಿಸಿದ ಆರ್ ಬಿಐ: ಬಡ್ಡಿದರ ಯಥಾಸ್ಥಿತಿ

ದಲಿತನ ಹೆಸರಲ್ಲಿ ಸಿಎಂ ಹುದ್ದೆ ಬೇಡ ಎನ್ನಲು ಕಾರಣಗಳೇನು?

ದಲಿತನ ಹೆಸರಲ್ಲಿ ಸಿಎಂ ಹುದ್ದೆ ಬೇಡ ಎನ್ನಲು ಕಾರಣಗಳೇನು?

ಮಂಗಗಳನ್ನು ಓಡಿಸಲು ಹುಲಿಯಾದ ನಾಯಿ!  

ಮಂಗಗಳನ್ನು ಓಡಿಸಲು ಹುಲಿಯಾದ ನಾಯಿ!  

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist