Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಜೆಡಿಎಸ್‌ನಲ್ಲಿ ಮುಗಿಯದ ಆಂತರಿಕ ಕ್ಷೋಭೆ; ವರಿಷ್ಠರಿಗೆ ತಲೆನೋವು!

ಜೆಡಿಎಸ್‌ನ ಲ್ಲಿ ಮುಗಿಯದ ಆಂತರಿಕ ಕ್ಷೋಭೆ; ವರಿಷ್ಠರಿಗೆ ತಲೆನೋವು!
ಜೆಡಿಎಸ್‌ನಲ್ಲಿ ಮುಗಿಯದ ಆಂತರಿಕ ಕ್ಷೋಭೆ; ವರಿಷ್ಠರಿಗೆ ತಲೆನೋವು!

March 4, 2020
Share on FacebookShare on Twitter

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷ ಅತಿಹೆಚ್ಚು ಸ್ಥಾನಗಳಿಸಿದರೂ ಜೆಡಿಎಸ್ ಕಿಂಗ್ ಮೇಕರ್ ಎಂಬ ಹಣೆಪಟ್ಟಿ ಕಳೆದ ಎರಡು ದಶಕಗಳಿಂದ ಗಟ್ಟಿಯಾಗಿತ್ತು. ಕರ್ನಾಟಕದ ಪಾಲಿನ ಪ್ರಬಲ ಪ್ರಾದೇಶಿಕ ಪಕ್ಷ ಎಂಬ ಶ್ರೇಯ ಒಂದು ಕಾಲದಲ್ಲಿ ಜೆಡಿಎಸ್ ಗೆ ಇದ್ದದ್ದು ನಿಜ ಆದರೆ, ಜೆಡಿಎಸ್ ಕೋಟೆ ಈಗ ಮುಂಚಿನಂತೆ ಭದ್ರವಾಗಿಲ್ಲ. ಕೆ.ಆರ್. ಪೇಟೆ ಸೋಲಿನ ನಂತರ ಸ್ವತಃ ಮಂಡ್ಯದಲ್ಲೇ ಜೆಡಿಎಸ್ ಬುನಾದಿ ಮೆಲ್ಲನೆ ಅಲುಗಾಡುತ್ತಿರುವುದು ತಿಳಿಯದ ವಿಚಾರವೇನಲ್ಲ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಜೆಡಿಎಸ್‌ನ ಲ್ಲಿ ಪರಿಸ್ಥಿತಿ ಇದೀಗ ಹೇಗಾಗಿದೆ ಎಂದರೆ ಪಕ್ಷದ ವರಿಷ್ಠ ಮಾಜಿ ಸಿಎಂ ಕುಮಾರಸ್ವಾಮಿ ಮಾತಿಗಿರಲಿ, ಸ್ವತಃ ಮಾಜಿ ಪ್ರಧಾನಿ ದೇವೇಗೌಡರ ಮಾತಿಗೂ ಶಾಸಕರು ಕ್ಯಾರೇ ಎನ್ನುತ್ತಿಲ್ಲ. ಜಿ.ಟಿ. ದೇವೇಗೌಡರಂತಹ ಹಿರಿಯ ನಾಯಕರು ಬಹಿರಂಗವಾಗಿಯೇ ಬಿಜೆಪಿಯನ್ನು ಸಮರ್ಥಿಸಿಕೊಂಡು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸುತ್ತಿದ್ದಾರೆ.

ಅಲ್ಲದೆ, ಯಾವುದೇ ಸಮಯದಲ್ಲಿ ಮತ್ತಷ್ಟು ಶಾಸಕರು ಬಿಜೆಪಿ ಪಾಲಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಕನಿಷ್ಟ 13ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದರೂ ಅಚ್ಚರಿ ಇಲ್ಲ ಎನ್ನುತ್ತಿವೆ ರಾಜ್ಯ ರಾಜಕೀಯ ವಠಾರ. ಇದಕ್ಕೆ ಕಾರಣಗಳು ಇಲ್ಲದೇ ಏನಿಲ್ಲ.

ಹಾಗೆ ನೋಡಿದರೆ ಕಿಂಗ್ ಮೇಕರ್ ಎಂಬ ಜೆಡಿಎಸ್ ಕೋಟೆಯನ್ನು ಕೆಡವಿ ಈ ಕೋಟೆಯ ಶವ ಪೆಟ್ಟಿಗೆಗೆ ಮೊದಲ ಮೊಳೆ ಹೊಡೆದದ್ದೇ ಶಾಸಕ ಜಮೀರ್ ಅಹಮದ್ ಅಂಡ್ ಟೀಮ್.

2017ರಲ್ಲಿ ಶಾಸಕ ಜಮೀರ್ ಅಹಮದ್, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಒಟ್ಟು 9 ಶಾಸಕರು ಹೋಲ್ಸೇಲ್ ಆಗಿ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮೊದಲ ಆಘಾತ ನೀಡಿದ್ದರು. ಜೆಡಿಎಸ್ ಈ ಶಾಕ್ನಿಂದ ಹೊರ ಬರುವುದು ಅಷ್ಟು ಸುಲಭದ ಮಾತಲ್ಲ ಎನ್ನಲಾಗಿತ್ತು. ಆದರೂ, 2018ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ರಾಜ್ಯಾದ್ಯಂತ ಮಿಂಚಿನಂತೆ ಪ್ರಚಾರ ಕಾರ್ಯ ನಡೆಸಿದ್ದರು. ಪರಿಣಾಮ ಜೆಡಿಎಸ್ 37 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ತದನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧಿಸಿ ಒಂದು ವರ್ಷ ಅಧಿಕಾರ ನಡೆಸಿದ್ದು, ಕುಮಾರಸ್ವಾಮಿ ಎರಡನೇ ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ತರುವಾಯ ಈ ಸರ್ಕಾರವನ್ನೂ ಬೀಳಿಸಿ ಆಪರೇಷನ್ ಕಮಲದ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಿದ್ದು ಯಡಿಯೂರಪ್ಪ ಸಿಎಂ ಆಗಿದ್ದು ಇಂದು ಇತಿಹಾಸ.

ಆದರೆ, ಬಹುನಿರೀಕ್ಷಿತ ಉಪ ಚುನಾವಣೆಗೂ ಮುನ್ನ ಜೆಡಿಎಸ್ ಶಾಸಕರ ಸಭೆಯಲ್ಲಿ ಶಾಸಕರು ಬಹಿರಂಗವಾಗಿಯೇ ಕುಮಾರಸ್ವಾಮಿಗೆ ಬೆದರಿಕೆ ಹಾಕಿದ್ದರು. ಬಿಜೆಪಿಗೆ ಬಾಹ್ಯ ಬೆಂಬಲ ನೀಡದಿದ್ದರೆ ಪಕ್ಷ ತೊರೆಯುವ ಬೆದರಿಕೆ ಬ್ಲಾಕ್ಮೇಲ್ ಮಾಡಿದ್ದರು. ಇದೇ ಕಾರಣಕ್ಕೆ ಕುಮಾರಸ್ವಾಮಿ ಮೈತ್ರಿಯಿಮದ ಹಿಂದೆ ಸರಿದು ಬಿಜೆಪಿ ಅಧಿಕಾರಕ್ಕೆ ಏರಲು ಅನುವು ಮಾಡಿಕೊಟ್ಟರು ಎನ್ನುತ್ತಿವೆ ಜೆಡಿಎಸ್ ಮೂಲಗಳು.

ಜೆಡಿಎಸ್‌ನಲ್ಲಿ ವರಿಷ್ಠರ ವಿರುದ್ಧವೇ ಬ್ಲ್ಯಾಕ್‌ಮೇಲ್‌ ತಂತ್ರ:

ಹಾಗೆ ನೋಡಿದರೆ ಮೈತ್ರಿ ಸರ್ಕಾರವನ್ನು ಬೀಳಿಸಿದ್ದೆ ಬಿಜೆಪಿ ಮತ್ತು ಬಿ.ಎಸ್. ಯಡಿಯೂರಪ್ಪ ಎಂಬ ವಿಚಾರ ಇದೀಗ ಗುಟ್ಟಾಗೇನು ಉಳಿದಿಲ್ಲ. ಹೀಗಾಗಿ 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸಲು ಜೆಡಿಎಸ್ ನಾಯಕರು ಮತ್ತೆ ಕಾಂಗ್ರೆಸ್ ಜೊತೆಗೂಡಿ ಮೈತ್ರಿಯಾಗಿಯೇ ಸೆಣಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಉಬಯ ಪಕ್ಷದ ಪ್ರಮುಖ ನಾಯಕರು ಕೊನೆವರೆಗೂ ಉಪ ಚುನಾವಣೆಯನ್ನೂ ಮೈತ್ರಿಯಾಗಿಯೇ ಎದುರಿಸಲಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಮೈತ್ರಿ ಮುರಿದು ಬಿದ್ದಿತ್ತು. ಪರಿಣಾಮ ಚುನಾವಣೆ ಎದುರಿಸಿದ್ದ 14 ಅನರ್ಹ ಶಾಸಕರ ಪೈಕಿ 12 ಜನ ಗೆಲುವು ಸಾಧಿಸಿದ್ದರು ಮತ್ತು ಈ ಗೆಲುವಿನ ಹಿಂದೆ ಇದ್ದದ್ದು ಸ್ವತಃ ಜೆಡಿಎಸ್ ಶಾಸಕರೇ ಎನ್ನಲಾಗುತ್ತಿದೆ.

ಬಲ್ಲ ಮೂಲಗಳ ಪ್ರಕಾರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮತ್ತೆ ಮೈತ್ರಿ ಸಾಧಿಸುವ ಮೂಲಕ ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು ಎಂಬುದೇ ಜೆಡಿಎಸ್ ವರಿಷ್ಠರ ಆಶಯವೂ ಆಗಿತ್ತು.

ಆದರೆ, ಚುನಾವಣೆಗೂ ಮುಂಚಿತವಾಗಿ ನಡೆದ ಪಕ್ಷದ ಸಭೆಯಲ್ಲಿ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧವೇ ತಿರುಗಿ ಬಿದ್ದಿದ್ದರು. “ತಾವು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲ, ಹೀಗಾಗಿ ಬಿಜೆಪಿ ಸರ್ಕಾರವನ್ನು ಬೀಳಿಸಬಾರದು. ಅಕಸ್ಮಾತ್ ಚುನಾವಣೆ ನಂತರ ಸಂಖ್ಯೆ ಕೊರತೆ ಆದರೂ ಸಹ ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಪಕ್ಷದ 13 ಜನ ಶಾಸಕರು ಈಗಿಂದೀಗಲೆ ಬಿಜೆಪಿಗೆ ಪಕ್ಷಾಂತರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇದಕ್ಕೆ ಪೂರಕವಾಗಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಯ್ಯ ತಾವು ಜೆಡಿಎಸ್ ತೊರೆಯುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಕೊನೆಗೆ ಪಕ್ಷದಿಂದಲೇ ಉಚ್ಛಾಟಿತರಾಗಿದ್ದರು. ಇನ್ನೂ ಹಿರಿಯ ನಾಯಕ ಬಸವರಾಜ ಹೊರಟ್ಟಿ ಪಕ್ಷದಲ್ಲಿ ನಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ನೇರಾ ನೇರ ಆರೋಪ ಮಾಡಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅದಾಗಲೇ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಾಗಿತ್ತು. ಅಲ್ಲದೆ, ಉಪ ಚುನಾವಣೆ ನಂತರ ಮತ್ತಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳು ಜೆಡಿಎಸ್ ವರಿಷ್ಠರಲ್ಲಿ ಆತಂಕ ಹುಟ್ಟುಹಾಕಿದ್ದು ಸುಳ್ಳಲ್ಲ.

ಇದೇ ಕಾರಣಕ್ಕೆ ಚುನಾವಣೆ ಸಂದರ್ಭದಲ್ಲಿ ಸ್ವತಃ ಕುಮಾರಸ್ವಾಮಿ ಮತ್ತು ದೇವೇಗೌಡ ಬಹಿರಂಗವಾಗಿಯೇ ತಾವು ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂಬಂತಹ ಹೇಳಿಕೆಗಳನ್ನು ನೀಡಲು ಮುಂದಾದದ್ದು. ಕೊನೆಗೂ ಅಂದುಕೊಂಡತೆ ಬಿಜೆಪಿ ಏನೋ ಈ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ, ಜೆಡಿಎಸ್ ಒಳಗಿನ ಆಂತರಿಕ ಕ್ಷೋಭೆ ಮಾತ್ರ ಈವರೆಗೆ ಶಮನವಾಗಿಲ್ಲ.

ಪರಿಷತ್ ಚುನಾವಣೆಯಿಂದ ದಳ ಹಿಂದೆ ಸರಿಯಲು ಕಾರಣವೇನು?:

ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ದಾಖಲಿಸಬೇಕಾದಂತಹ ಅನಿವಾರ್ಯತೆಗೆ ಸಿಲುಕಿದ್ದರು. ಹೀಗಾಗಿ ಸವದಿಗೆ ಸೋಲುಣಿಸುವ ಸಲುವಾಗಿಯೇ ಕಾಂಗ್ರೆಸ್-ಜೆಡಿಎಸ್ ಒಂದಾಗಿತ್ತು. ಪರಿಣಾಮ ಅನಿಲ್ ಕುಮಾರ್ ಎಂಬುವವರು ಕೊನೆ ಗಳಿಗೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ, ಈ ಸಂದರ್ಭದಲ್ಲೂ ಸಹ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಅಕಸ್ಮಾತ್ ಚುನಾವಣೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಸೋಲನುಭವಿಸಿದರೆ ತಾವು ಪಕ್ಷ ಬಿಡುವುದಾಗಿ ಮತ್ತು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಅಂದು ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಭಾಗವಹಿಸಿದ್ದರೆ 15ಕ್ಕಿಂತ ಹೆಚ್ಚು ಶಾಸಕರು ಅಡ್ಡ ಮತದಾನ ಮಾಡಲು ಸಿದ್ದರಿದ್ದರು.

ಇದರ ವಾಸನೆ ಅರಿತಿದ್ದ ಕಾರಣಕ್ಕೆ ಕುಮಾರಸ್ವಾಮಿ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹೊರ ನಡೆದಿದ್ದರು. ಅಲ್ಲದೆ, ಮೈತ್ರಿ ಅಭ್ಯರ್ಥಿಗೆ ತಮ್ಮ ಬೆಂಬಲ ಇಲ್ಲ ಎಂದು ಘೋಷಿಸುವ ಮೂಲಕ ಪ್ರತ್ಯಕ್ಷವಾಗಿಯೇ ಸವದಿ ಗೆಲುವಿಗೆ ಕಾರಣರಾಗಿದ್ದರೂ. ಆದರೆ, ಈ ಚುನಾವಣೆಯಲ್ಲೂ ಸಹ ಹಿರಿಯ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬಿಜೆಪಿ ಪರ ಮತ ಚಲಾಯಿಸುವ ಮೂಲಕ ಪಕ್ಷದ ವರಿಷ್ಠರಿಗೆ ಸವಾಲ್ ಹಾಕಿದ್ದರು.

ಜೆಡಿಎಸ್ ಶವಪೆಟ್ಟಿಗೆಯ ಕೊನೆಯ ಮೊಳೆ ಜಿಟಿಡಿ ಕೈಲಿದೆ:

ಮಂಡ್ಯ ಮತ್ತು ಹಳೆ ಮೈಸೂರು ಭಾಗದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ನಾಯಕ ಜಿ.ಟಿ. ದೇವೇಗೌಡ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನೇ ಸೋಲಿಸುವಷ್ಟು ತಾಕತ್ ಇರುವ ಜೆಡಿಎಸ್ ನ ಏಕೈಕ ನಾಯಕ ಅವರು.

ಆದರೆ, ಕಳೆದ ದಿನಗಳಿಂದ ‘ಜಿಟಿಡಿ ನಡೆ ಬಿಜೆಪಿ ಕಡೆ’ ಎಂಬಂತಹ ವಾತಾವರಣ ನಿರ್ಮಾಣವಾಗಿದೆ. ಜೆಡಿಎಸ್ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿರುವ ಜಿ.ಟಿ. ದೇವೇಗೌಡರು, ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ನಾಯಕರ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ವರಿಷ್ಠರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಈ ನಡುವೆ ಪಕ್ಷದಲ್ಲಿರುವ ಮತ್ತೊಂದು ಅಸಮಾಧಾನಿತರ ಗುಂಪನ್ನು ಮುನ್ನಡೆಸುತ್ತಿರುವುದೇ ಜಿ.ಟಿ. ದೇವೇಗೌಡ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಎ.ಟಿ. ರಾಮಸ್ವಾಮಿ ಸೇರಿದಂತೆ 12 ರಿಂದ 13 ಶಾಸಕರು ಬಿಜೆಪಿ ಪಾಲಾಗಲಿದ್ದಾರೆ. ಈ ಮೂಲಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷದ ಶವ ಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲಿದ್ದಾರೆ ಎಂದು ವಿಶ್ಲೇಷಿಸುತ್ತಿದೆ ರಾಜಕೀಯ ಪಡಸಾಲೆ.

ಆದರೆ, ರಾಜಕೀಯದಲ್ಲಿ ಯಾವುದೂ ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಆದರೆ, ಜೆಡಿಎಸ್‌ನಲ್ಲಿ ತಲ್ಲಣ ಆರಂಭವಾಗಿರುವುದಂತೂ ಸತ್ಯ. ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಸಾಕ್ಷಾತ್ ದೇವೇಗೌಡ ಮತ್ತು ಕುಮಾರಸ್ವಾಮಿಯಂತವರನ್ನೂ ಸಹ ಹಣ್ಣುಗಾಯಿ ನೀರುಗಾಯಿ ಮಾಡಿರುವುದು ನಿಜ.

ರಾಜಕೀಯ ಜೀವಮಾನದುದ್ದಕ್ಕೂ ಜಾತ್ಯಾತೀತ ಪಕ್ಷ, ನಮ್ಮದು ಜಾತ್ಯಾತೀತ ಶಕ್ತಿ ಎಂದು ಪದೇ ಪದೇ ಉದ್ಘರಿಸುತ್ತಿದ್ದ ಜೆಡಿಎಸ್ ವರಿಷ್ಠರು ಕೊನೆ ಕೊನೆಗೆ ಬಹಿರಂಗವಾಗಿ ಕೋಮುವಾದಿಗಳ ಬಿಜೆಪಿ ಸರ್ಕಾರ ಉರುಳುವುದಕ್ಕೆ ನಾವು ಬಿಡುವುದಿಲ್ಲ ಎನ್ನುತ್ತಾರೆ ಎಂದರೆ ಅವರ ಅಸಹಾಯಕ ಸ್ಥಿತಿಯನ್ನು ಊಹಿಸಬಹುದು.

ಆದರೆ, ರಾಜಕೀಯದಲ್ಲಿ ಯಾವುದೂ ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಹೀಗಾಗಿ ಜೆಡಿಎಸ್ ಪಕ್ಷದ ಆಂತರಿಕ ಕ್ಷೋಭೆ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ, ಕುಮಾರಸ್ವಾಮಿ ನಡೆ ಏನು? ಎಂಬುದನ್ನು ಕಾದು ನೋಡಬೇಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

by ಪ್ರತಿಧ್ವನಿ
March 20, 2023
ರಾಹುಲ್ ಗಾಂಧಿ ಅನರ್ಹತೆ : ಎಲ್ಲರಿಗೂ ಒಂದೇ ಕಾನೂನು ; ಸಿಎಂ ಬೊಮ್ಮಾಯಿ
Top Story

ರಾಹುಲ್ ಗಾಂಧಿ ಅನರ್ಹತೆ : ಎಲ್ಲರಿಗೂ ಒಂದೇ ಕಾನೂನು ; ಸಿಎಂ ಬೊಮ್ಮಾಯಿ

by ಪ್ರತಿಧ್ವನಿ
March 25, 2023
ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ
Uncategorized

ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ

by ಡಾ | ಜೆ.ಎಸ್ ಪಾಟೀಲ
March 23, 2023
ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI
ಕರ್ನಾಟಕ

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

by ಪ್ರತಿಧ್ವನಿ
March 25, 2023
ದಕ್ಷಿಣ ಕನ್ನಡ ಜಿಲ್ಲೆಯ ಮೂರು  ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!

by ಮಂಜುನಾಥ ಬಿ
March 25, 2023
Next Post
ಅರವಿಂದ ಕೇಜ್ರಿವಾಲ್ ಮತ್ತು ದೆಹಲಿ ಗಲಭೆ

ಅರವಿಂದ ಕೇಜ್ರಿವಾಲ್ ಮತ್ತು ದೆಹಲಿ ಗಲಭೆ

ಗಣಿಗಾರಿಕೆಗೆ ಮೂರು ಅಭಯಾರಣ್ಯವನ್ನೇ ಆಹುತಿ ಕೊಟ್ಟ ಸರ್ಕಾರ!

ಗಣಿಗಾರಿಕೆಗೆ ಮೂರು ಅಭಯಾರಣ್ಯವನ್ನೇ ಆಹುತಿ ಕೊಟ್ಟ ಸರ್ಕಾರ!

ಜೆಡಿಎಸ್ ವರಿಷ್ಠರಿಗೆ ಪಕ್ಷಕ್ಕಿಂತ ಕುಟುಂಬದ ಕುಡಿಯ ರಾಜಕೀಯ ಭವಿಷ್ಯವೇ ಮುಖ್ಯವಾಯಿತೇ?

ಜೆಡಿಎಸ್ ವರಿಷ್ಠರಿಗೆ ಪಕ್ಷಕ್ಕಿಂತ ಕುಟುಂಬದ ಕುಡಿಯ ರಾಜಕೀಯ ಭವಿಷ್ಯವೇ ಮುಖ್ಯವಾಯಿತೇ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist