• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಿಜೆ ಹಳ್ಳಿ ಪ್ರಕರಣ: ಬಿಜೆಪಿ–ಕಾಂಗ್ರೆಸ್‌ಗೆ ಎಚ್.ಡಿ ಕುಮಾರಸ್ವಾಮಿ ಬಹಿರಂಗ ಪತ್ರ

by
August 21, 2020
in ಕರ್ನಾಟಕ
0
ಡಿಜೆ ಹಳ್ಳಿ ಪ್ರಕರಣ: ಬಿಜೆಪಿ–ಕಾಂಗ್ರೆಸ್‌ಗೆ ಎಚ್.ಡಿ ಕುಮಾರಸ್ವಾಮಿ ಬಹಿರಂಗ ಪತ್ರ
Share on WhatsAppShare on FacebookShare on Telegram

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕುರಿತಂತೆ ಹೆಚ್‌ ಡಿ ಕುಮಾರಸ್ವಾಮಿ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಗಲಭೆಯ ಕುರಿತಂತೆ ಎರಡೂ ಪಕ್ಷಗಳು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದಿರುವ ಕುಮಾರಸ್ವಾಮಿ ಬಹಿರಂಗ ಪ್ರಶ್ನೆಗಳ ಮೂಲಕ ಎರಡೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಡಿ.ಜೆ ಹಳ್ಳಿ ಗಲಭೆಯು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ ನಡವಳಿಕೆಯನ್ನು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ ಪ್ರದರ್ಶಿಸಬೇಕಾಗಿತ್ತು. ಆದರೆ, ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ಪ್ರತಿ ಘಟನೆಯಲ್ಲೂ ರಾಜಕೀಯ ಧ್ರುವೀಕರಣಕ್ಕೆ ಬೇಕಾಗುವ ಅಂಶ ಹುಡುಕುವ ಈ ಎರಡೂ ಪಕ್ಷಗಳು ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರಿಸಬಲ್ಲವೇ? ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಕಾಂಗ್ರೆಸ್‌ಗೆ ಪ್ರಶ್ನೆ: ಅಲ್ಪ ಸಂಖ್ಯಾತರನ್ನು ರಕ್ಷಿಸಬೇಕಾದ್ದು ಯಾವಾಗ?

  1. ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತು ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಅನ್ಯ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್‌, ಪೌರತ್ವ ತಿದ್ದುಪಡಿ ಕಾಯ್ದೆಯಂಥ ದುರಿತ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ? ಮಂಗಳೂರಿನಲ್ಲಿ ಗೋಲಿಬಾರ್‌ ಆಗಿ ಅಲ್ಪಸಂಖ್ಯಾತ ಯುವಕರು ಮೃತಪಟ್ಟಾಗ ಎಲ್ಲಿ ಹೋಗಿತ್ತು ಈ ಕಾಳಜಿ? ಕ್ರೈಂ ಸಂಭವಿಸಿದಾಗ ಮಾತ್ರವೇ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ರಕ್ಷಣೆ ಕಾಣಿಸುತ್ತದೆಯೇ?

  2. ಗಲಭೆಯಲ್ಲಿ ನಷ್ಟವನ್ನು ಗಲಭೆಕೋರರಿಂದ ಸಂಗ್ರಹಿಸಲು ಹೊರಟ ಸರ್ಕಾರಕ್ಕೆ ಕಾಂಗ್ರೆಸ್‌ ಸಲಹೆಯೊಂದನ್ನು ನೀಡಿದೆ. ‘ಇನ್ನೊಂದು ಕಡೆಯವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ, ಆ ‘ಇನ್ನೊಂದು ಕಡೆಯವರು’ ಯಾರು ಎಂದು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ?

  3. ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್‌ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‌ಗೆ ಏನು ಲಾಭವಿದೆ? ಇದರ ವಿವರಣೆ ನೀಡಬಹುದೇ?

  4. ಗಲಭೆಯಲ್ಲಿ ಏನೋ ರಾಜಕೀಯ ಷಡ್ಯಂತ್ರವಿದೆ ಎಂಬುದು ಕಾಂಗ್ರೆಸ್ ಆರೋಪ. ಆ ಷಡ್ಯಂತ್ರ ಕಾಂಗ್ರೆಸ್‌ ಒಳಗಿನದ್ದೋ, ಹೊರಗಿನದ್ದೋ? ಟಿಕೆಟ್‌ ಆಕಾಂಕ್ಷಿಗಳದ್ದೋ? ಗುಟ್ಟಾಗಿರುವ ಈ ವಿಷಯ ಬಹಿರಂಗಗೊಳಿಸಲು ಕಾಂಗ್ರೆಸ್‌ಗೆ ತಾಕತ್ತು ಇದೆಯೇ? ಬೇರೆ ಪಕ್ಷಗಳಿಂದ ಕರೆದುಕೊಂಡು ಹೋದ ಮುಖಂಡರು ಕಾಂಗ್ರೆಸ್‌ಗೆ ಕೆಲ ಬಾರಿ ಅಪಥ್ಯವಾಗುತ್ತಾರೆಯೇ?

  5. ಆಂತರಿಕ ಸಮಸ್ಯೆಯನ್ನು ಗಲಭೆಯಾಗಿ ಪರಿವರ್ತಿಸಿ, ಎರಡು ಕೋಮುಗಳ ನಡುವೆ ಮನಸ್ಥಾಪ ತಂದಿಟ್ಟು, ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಬಗ್ಗೆ ಕಾಂಗ್ರೆಸ್‌ಗೆ ಸ್ವಲ್ಪವಾದರೂ ಅಳುಕಿದೆಯೇ?

ಬಿಜೆಪಿಗೆ ಪ್ರಶ್ನೆ: ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣ ಮಾಡುವಿರೇ?

  1. ಡಿಜೆ ಹಳ್ಳಿ ಪ್ರಕರಣ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗೃಹ ಇಲಾಖೆ, ಗುಪ್ತಚರ ಇಲಾಖೆ ಮತ್ತು ಸರ್ಕಾರದ ಅತಿ ದೊಡ್ಡ ವೈಫಲ್ಯ. ಇದರ ಹೊಣೆ ಹೊರಬೇಕಾದ ಬಿಜೆಪಿ ಸರ್ಕಾರ ಅಕ್ಷರಶಃ ಹೊಣೆಗೇಡಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಯಾವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ? ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಇದರಲ್ಲಿ ರಾಜಕೀಯ ಧ್ರುವೀಕರಣದ ಸಂಚು ನಡೆಸುತ್ತಿದೆ. ನಾಚಿಕೆಯಾಗದೇ ಬಿಜೆಪಿಗೆ?

  2. ಡಿಜೆ ಹಳ್ಳಿ ಘಟನೆಯಲ್ಲಿ ಕಾಂಗ್ರೆಸ್ಸಿಗರೇ ದುಷ್ಕೃತ್ಯ ನಡೆಸಿದ್ದಾರೆ, ಕಾಂಗ್ರೆಸ್‌ನ ಕೈವಾಡವಿದೆ ಎಂದು ಬೀದಿಯಲ್ಲಿ ಹೇಳುತ್ತಿರುವ ಬಿಜೆಪಿಯ ವಾಚಾಳಿ, ಬಾಯಿಬಡುಕ ಮಂತ್ರಿ, ಶಾಸಕರು ತಮ್ಮ ಬಳಿ ಇರುವ ಕಾಂಗ್ರೆಸ್‌ ವಿರುದ್ಧದ ಸಾಕ್ಷಿಯನ್ನು ತನಿಖಾಧಿಕಾರಿಗಳಿಗೆ ಕೊಡಬಾರದು ಏಕೆ? ಹೇಗಿದ್ದರು ಸರ್ಕಾರವೇ ಬಿಜೆಪಿಯದ್ದಾಗಿದೆ. ಸೂಕ್ತ ತನಿಖೆ ನಡೆಸಿ ಕಾಂಗ್ರೆಸ್‌ ವಿರುದ್ಧ ಕ್ರಮ ಕೈಗೊಳ್ಳಬಾರದೇಕೆ? ಸಾಕ್ಷ್ಯವಿಲ್ಲವಾದರೆ ಬಿಜೆಪಿಯದ್ದೂ ಕೇವಲ ರಾಜಕೀಯ ಧ್ರುವೀಕರಣ ಉದ್ದೇಶದ ಬಡಾಯಿತನವೇ?

  3. ಗಲಭೆ ಸೃಷ್ಟಿಸಲೆಂದೇ ಅನ್ಯ ರಾಜ್ಯಗಳಿಂದ ಗೂಂಡಾಗಳನ್ನು ಕರೆತರಲಾಗಿತ್ತು ಎಂದು ಬಿಜೆಪಿ ಆರಂಭದಲ್ಲಿ ಹುಯಿಲೆಬ್ಬಿಸಿತು. ಹಾಗಾದರೆ, ಘಟನೆಗೆ ಸಂಬಂಧಿಸಿದಂತೆ ಈ ವರೆಗೆ ಬಂಧನಕ್ಕೊಳಗಾಗಿರುವ ಅನ್ಯರಾಜ್ಯದ ಗೂಂಡಾಗಳು ಎಷ್ಟು ಜನ? ಕೋವಿಡ್‌ ಸಂದರ್ಭದಲ್ಲಿ ಗಡಿಯಲ್ಲಿ ಸಂಚಾರ ಕಷ್ಟವಿರುವಾಗ ಗೂಂಡಾಗಳು ಗುಂಪು ಗುಂಪಾಗಿ ನಮ್ಮ ಚೆಕ್‌ ಪೋಸ್ಟ್‌ಗಳನ್ನು ದಾಟಿ ಬಂದದ್ದು ಹೇಗೆ? ಬಂದಿದ್ದೇ ಆದರೆ, ವೈಫಲ್ಯ ಯಾರದ್ದು?

  4. ದೊಡ್ಡ ಅಂತರದ ಮತಗಳಿಂದ ಗೆದ್ದ ಶಾಸಕನೊಬ್ಬನ ಮನೆಗೇ ರಕ್ಷಣೆ ಹಾಗೂ ಪೊಲೀಸ್ ಠಾಣೆಗೆ ರಕ್ಷಣೆ ನೀಡಲಾರದಷ್ಟು ದುರ್ಬಲವಾಗಿರುವ, ಶಕ್ತಿಹೀನ ಸರ್ಕಾರ ಸಾಮಾನ್ಯರಲ್ಲಿ ಸಾಮಾನ್ಯರ ಹಿತ ಕಾಯಲು ಶಕ್ತವಾಗಿದೆಯೇ? ಹಾಗಿಲ್ಲ ಎಂದಮೇಲೆ ಸರ್ಕಾರ ಇದ್ದು ಪ್ರಯೋಜನವೇನು? ಇಲ್ಲವೇ, ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಇಂಥದ್ದೊಂದು ಗಲಭೆ ಬೇಕಾಗಿತ್ತೇ?

  5. ಕೋಮು ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ನೂಕು ನುಗ್ಗಲಿನಲ್ಲೂ ಮುಂದೆ ಬರುವ ಬಿಜೆಪಿಗೆ ನೈತಿಕ ರಾಜಕಾರಣದ ಅರ್ಥವೇನಾದರೂ ಗೊತ್ತಿದೆಯೇ?

ಅಧಿಕಾರ ಪಡೆಯುವುದು ಎಲ್ಲ ರಾಜಕೀಯ ಪಕ್ಷಗಳ ಪರಮ ಗುರಿ ಹೌದು. ಆದರೆ, ಅದರಲ್ಲಿ ಸಾಮಾಜಿಕ ಜವಾಬ್ದಾರಿಗಳಿರಬೇಕು, ಉತ್ತರದಾಯಿತ್ವವಿರಬೇಕು, ಪ್ರಾಮಾಣಿಕತೆ ಇರಬೇಕು. ಸಾಮಾಜಿಕ ಸಾಮರಸ್ಯಕ್ಕೆ ಸಂಬಂಧಿಸಿದ ವಿಚಾರವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡೆದುಕೊಳ್ಳುತ್ತಿರುವ ರೀತಿಯಲ್ಲಿ ಇದ್ಯಾವುದೂ ಇಲ್ಲ. ಇನ್ನಾದರೂ ಸಣ್ಣತನದ ರಾಜಕೀಯ ಬಿಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Tags: ಕಾಂಗ್ರೆಸ್ಕೆಜಿ ಹಳ್ಳಿಡಿಜೆ ಹಳ್ಳಿಬಿಜೆಪಿಬೆಂಗಳೂರು ಗಲಭೆಹೆಚ್‌ ಡಿ ಕುಮಾರಸ್ವಾಮಿ
Previous Post

ಪತ್ರಕರ್ತರ ಬದುಕು ಹಾಗೆ ಮಾತ್ರವಲ್ಲ ಹೀಗೂ ಇರುತ್ತೆ!!

Next Post

ಅಯೋಧ್ಯೆಯಿಂದ ಫೇಸ್‌ಬುಕ್‌ವರೆಗೆ; ಹಾದಿ ತಪ್ಪಿದ ಕಾಂಗ್ರೆಸ್ ತಂತ್ರಗಾರಿಕೆ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
ಅಯೋಧ್ಯೆಯಿಂದ ಫೇಸ್‌ಬುಕ್‌ವರೆಗೆ; ಹಾದಿ ತಪ್ಪಿದ ಕಾಂಗ್ರೆಸ್ ತಂತ್ರಗಾರಿಕೆ

ಅಯೋಧ್ಯೆಯಿಂದ ಫೇಸ್‌ಬುಕ್‌ವರೆಗೆ; ಹಾದಿ ತಪ್ಪಿದ ಕಾಂಗ್ರೆಸ್ ತಂತ್ರಗಾರಿಕೆ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada