• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಡೊನಾಲ್ಡ್ ಟ್ರಂಪ್ ಭೇಟಿಯಿಂದ ಭಾರತಕ್ಕೆ ಏನು ಲಾಭ?

by
February 23, 2020
in ದೇಶ
0
ಡೊನಾಲ್ಡ್ ಟ್ರಂಪ್ ಭೇಟಿಯಿಂದ ಭಾರತಕ್ಕೆ ಏನು ಲಾಭ?
Share on WhatsAppShare on FacebookShare on Telegram

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ಕ್ಕೆ ಭಾರತಕ್ಕೆ ಬರುತ್ತಿದ್ದಾರೆ. ಭಾರತ ಕೂಡ ವಿಶ್ವದ ದೊಡ್ಡಣ್ಣನನ್ನು ಸ್ವಾಗತ ಮಾಡಲು ತುಗಾಲಲ್ಲಿ ನಿಂತಿದೆ. ಟ್ರಂಪ್ ಸ್ವಾಗತಕ್ಕಾಗಿ ಗುಜರಾತ್‌ನ ಅಹಮಾದಾಬಾದ್‌ನಲ್ಲಿ ರತ್ನಗಂಬಳಿ ಸ್ವಾಗತಕ್ಕೆ ಸಜ್ಜಾಗಿ ನಿಂತಿದೆ. ಈಗಾಗಲೇ ಅಮೆರಿಕದಿಂದ ನಾಲ್ಕನೇ ಯುಎಸ್ ಏರ್ ಫೋರ್ಸ್ನ ವಿಮಾನ ಅಧ್ಯಕ್ಷರ ಕುಂಟುಂಬದ ಸಾಮಗ್ರಿಗಳನ್ನು ಹೊತ್ತು ತಂದಿದೆ. ಕೇವಲ 36 ಗಂಟೆಗಳ ಪ್ರವಾಸ ಕೈಗೊಂಡಿರುವ ಡೊನಾಲ್ಡ್ ಟ್ರಂಪ್ ಬಂದ ಪುಟ್ಟ.. ಹೋದ ಪುಟ್ಟ ಎನ್ನುವಂತೆ ತನ್ನ ಸ್ವಂತ ಲಾಭಕ್ಕೆ ಏನೇನು ಬೇಕು ಅದನ್ನು ಮಾತ್ರ ಮಾಡಿಕೊಂಡು ವಾಪಸ್ ಹೋಗ್ತಾರಾ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ. ಇದಕ್ಕೆ ಕಾರಣ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಂಬಂಧದ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದಿದ್ದಾರೆ.

ADVERTISEMENT

ಮೋದಿ ತವರೂರು ಗುಜರಾತ್ ಡೊನಾಲ್ಡ್ ಟ್ರಂಪ್ ಕಾರ್ಯಕ್ರಮಕ್ಕಾಗಿ ಬರೋಬ್ಬರಿ 85 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಉದ್ಘಾಟನೆ ಮಾಡಲು ವೇದಿಕೆ ಸಜ್ಜಾಗಿದೆ. 1 ಲಕ್ಷದ 10 ಸಾವಿರ ಜನರು ಸೇರಬಹುದಾದ ಸ್ಟೇಡಿಯಂನಲ್ಲಿ ನಮಸ್ತೇ ಟ್ರಂಪ್ ಕಾರ್ಯಕ್ರಮ ನಡೆಯಲಿದೆ. ಆದರೆ ಭಾರತ, ಅಮೆರಿಕ ನಡುವಣ ಯಾವೆಲ್ಲಾ ವಿಚಾರಗಳು ಚರ್ಚೆ ಆಗಲಿದೆ ಎನ್ನುವುದು ಮಾತ್ರ ಇಲ್ಲೀವರೆಗೂ ಬಹಿರಂಗವಾಗಿಲ್ಲ. ಡೊನಾಲ್ಡ್ ಟ್ರಂಪ್ ಜೊತೆ ಹಿರಿಯ ಅಧಿಕಾರಿಗಳ ತಂಡ ಕೂಡ ಆಗಮಿಸಲಿದ್ದು, ಎರಡೂ ದೇಶಗಳ ನಡುವೆ ಸ್ನೇಹ ವೃದ್ಧಿ ಹಾಗು ವ್ಯವಹಾರದ ಬಗ್ಗೆ ಮಹತ್ವದ ಮಾತುಗಳು ನಡೆಯಲಿವೆ ಎನ್ನಲಾಗಿದೆ. ಯಾವೆಲ್ಲಾ ಕಾರ್ಯಕ್ರಮಗಳು ಚರ್ಚೆಯ ಭಾಗವಾಗಲಿವೆ ಎನ್ನುವ ವಿಚಾರವನ್ನು ಗುಪ್ತವಾಗಿ ಇಡಲಾಗಿದೆ.

ಡೊನಾಲ್ಡ್ ಟ್ರಂಪ್ ರೀತಿ 2006ರಲ್ಲಿ ಅಮೆರಿಕ ಅಧ್ಯಕ್ಷರಾಗಿದ್ದ ಜಾಜ್ ಡಬ್ಲ್ಯೂ ಬುಷ್ ಭಾರತಕ್ಕೆ ಬಂದಿದ್ದರು. ಮನೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರಪತಿ ಆಗಿದ್ದರು. ಆ ವೇಳೆ ಇಷ್ಟೊಂದು ಅಬ್ಬರ ಇಲ್ಲದಿದ್ದರು ಭಾರತೀಯ ಸೇನೆ ಸದೃಢವಾಗಲು ಬೇಕಾದ ನಾಗರಿಕ ಪರಮಾಣು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈ ಬಾರಿ ಡೊನಾಲ್ಡ್ ಟ್ರಂಪ್, ಈಗಾಗಲೇ ವ್ಯಾಪಾರ ವಹಿವಾಟಿನ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು ಎಂದಿದ್ದಾರೆ. ಅಂದರೆ ಚರ್ಚೆ ವಿಷಯಗಳ ಪಟ್ಟಿಯಲ್ಲಿ ಭಾರತ ಹಾಗು ಅಮೆರಿಕ ನಡುವಿನ ವ್ಯಾಪಾರ ವೃದ್ಧಿ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎನ್ನುವುದು ಸ್ಪಷ್ಟ. ಆದ್ರೆ ಅಚ್ಚರಿಯ ಬೆಳವಣಿಗೆಯಲ್ಲಿ ವ್ಯಾಪಾರ ವ್ಯವಹಾರದ ಬಗ್ಗೆ ಮಹತ್ವದ ಒಪ್ಪಂದ ನಡೆದರೂ ನಡೆಯಬಹುದು ಎನ್ನುವ ಮಾಹಿತಿ ವೈಟ್‌ಹೌಸ್ ಮೂಲದಿಂದ ಹೊರಬಿದ್ದಿದೆ.

ಇಂದಿಗೂ ಅಮೆರಿಕ ಹಾಗು ಭಾರತದ ನಡುವೆ ದೊಡ್ಡ ಸಮಸ್ಯೆ ಎಂದರೆ ಹೆಚ್ 1 ಬಿ ವೀಸಾ ಸಮಸ್ಯೆ. ಟ್ರಂಪ್ ಭಾರತಕ್ಕೆ ಆಗªಮಿಅಸುತ್ತಿರುವ ಈ ಸಮಯದಲ್ಲಿ ನರೇಂದ್ರ ಮೋದಿ ಪ್ರಬಾವ ಬೀರುವ ಮೂಲಕ ಸಮಸ್ಯೆಗೆ ಇತಿಶ್ರೀ ಹಾಡಿದರೆ, ಲಕ್ಷಾಂತರ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಲು ಅನುಕೂಲ ಆಗಲಿದೆ. ಜೊತೆಗೆ ಹಲವಾರು ಜನರು ಅಮೆರಿಕದಲ್ಲಿ ಉದ್ಯೂಗ ಗಿಟ್ಟಿಸುವ ಬಾಗಿಲು ತೆರೆದಂತಾಗುತ್ತದೆ.

2020ರ ಏಪ್ರಿಲ್ 1ನೂತನ ವೀಸ ನೀತಿ ಜಾರಿ ಮಾಡುವ ಬಗ್ಗೆ ಈ ಹಿಂದೆಯೇ ಟ್ರಂಪ್ ಘೋಷಣೆ ಮಾಡಿದ್ದಾರೆ. ಅದನ್ನು ಭಾರತದಲ್ಲಿ ಮೊದಲ ಬಾರಿಗೆ ಸಹಿ ಮಾಡ್ತಾರಾ ಎನ್ನುವುದನ್ನು ಕಾದು ನೋಡ್ಬೇಕು. ಆದ್ರೆ ಗೋದ್ರಾ ಹತ್ಯಾಕಾಂಡದ ಬಳಿಕ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ವೀಸಾ ಕೊಟ್ಟಿರಲಿಲ್ಲ. ಭಾರತದ ಪ್ರಧಾನಿಯಾದ ಬಳಿಕವಷ್ಟೇ ನರೇಂದ್ರ ಮೋದಿ ಅವರಿಗೆ ಅಮೆರಿಕ ವೀಸಾ ಕೊಟ್ಟಿದೆ. ಇದೀಗ ವಿದ್ಯಾರ್ಥಿಗಳು ಹಾಗು ಉದ್ಯೋಗಿಗಳಿಗೆ ಪಾಸ್‌ಪೋರ್ಟ್ ಕೊಡಿಸ್ತಾರಾ ಕಾದು ನೋಡ್ಬೇಕು.

Tags: ModiNuclear DealTrump in IndiaUS India tradeಡೊನಾಲ್ಡ್ ಟ್ರಂಪ್ಭಾರತ
Previous Post

ದ್ವಿಚಕ್ರ ವಾಹನವಿರಲಿ, ಕಾರೇ ಇರಲಿ, ದೇಶದ ಮಂದಿಗೆ ಜಪಾನೀ ಬ್ರಾಂಡ್‌ಗಳೇ ಫೇವರಿಟ್‌!

Next Post

ಅಧಿಕಾರವಿಲ್ಲದಿದ್ದರೂ ಪೌರತ್ವ ಸಾಬೀತು ಪಡಿಸಲು ನೋಟಿಸ್‌ ನೀಡಿದ UIDAI 

Related Posts

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
0

ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಬಳಿಕ ಎನ್ ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್) ಹಾಗೂ ಮಹಾ ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ದೊಡ್ಡ...

Read moreDetails
ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

January 31, 2026
Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

January 30, 2026

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

January 29, 2026
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

January 29, 2026
Next Post
ಅಧಿಕಾರವಿಲ್ಲದಿದ್ದರೂ ಪೌರತ್ವ ಸಾಬೀತು ಪಡಿಸಲು ನೋಟಿಸ್‌ ನೀಡಿದ UIDAI 

ಅಧಿಕಾರವಿಲ್ಲದಿದ್ದರೂ ಪೌರತ್ವ ಸಾಬೀತು ಪಡಿಸಲು ನೋಟಿಸ್‌ ನೀಡಿದ UIDAI 

Please login to join discussion

Recent News

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada