• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತುಕ್ಡೆ ತುಕ್ಡೆ ಗ್ಯಾಂಗ್‌ ಕುರಿತು ಯಾವುದೇ ಮಾಹಿತಿಯಿಲ್ಲ – ಗೃಹ ಸಚಿವಾಲಯ

by
January 21, 2020
in ದೇಶ
0
ತುಕ್ಡೆ ತುಕ್ಡೆ ಗ್ಯಾಂಗ್‌ ಕುರಿತು ಯಾವುದೇ ಮಾಹಿತಿಯಿಲ್ಲ – ಗೃಹ ಸಚಿವಾಲಯ
Share on WhatsAppShare on FacebookShare on Telegram

ದಿನ ಬೆಳಗಾದರೆ ಮಾಧ್ಯಮಗಳ ಮುಂದೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ʼತುಕ್ಡೆ ತುಕ್ಡೆ ಗ್ಯಾಂಗ್‌ʼ ಎಂದು ಅರಚಿಕೊಳ್ಳುತ್ತಿರುವ ಬಿಜೆಪಿಯ ನಾಯಕರುಗಳಿಗೆ ಸ್ಪಷ್ಟವಾದ ಉತ್ತರವನ್ನು ಆರ್‌ಟಿಐ ಕಾರ್ಯಕರ್ತರೊಬ್ಬರು ನೀಡಿದ್ದಾರೆ. ಗೃಹ ಸಚಿವಾಲಯಕ್ಕೆ ತುಕ್ಡೆ ತುಕ್ಡೆ ಗ್ಯಾಂಗ್‌ ಕುರಿತು ಮಾಹಿತಿಯನ್ನು ಕೇಳಿ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಅವರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ಗೃಹ ಸಚಿವಾಲಯ ಈ ಕುರಿತು ಯಾವುದೇ ಮಾಹಿತಿ ಸಚವಾಲಯದಲ್ಲಿ ಲಭ್ಯವಿಲ್ಲ ಎಂದು ಹೇಳಿದೆ.

ADVERTISEMENT

ಪ್ರತಿ ಬಾರಿಯೂ ತಮ್ಮ ವಿರೋಧೀಗಳನ್ನು ಸಂಭೋದಿಸಲು ತುಕ್ಡೆ ತುಕ್ಡೆ ಗ್ಯಾಂಗ್‌ ಎಂಬ ಪದ ಪ್ರಯೋಗ ಮಾಡುತ್ತಿದ್ದ ಅಮಿತ್‌ ಶಾ ಹಾಗೂ ಇತರ ನಾಯಕರುಗಳು, ದೇಶವನ್ನು ಇಬ್ಬಾಗ ಮಾಡಲು ಪ್ರಯತ್ನಿಸುತ್ತಿರುವ ಶಕ್ತಿಗಳು ಇವು ಎಂದು ಆರೋಪಿಸುತ್ತಿದ್ದರು. ದೆಹಲಿಯ ಜವಹರ್‌ಲಾಲ್‌ ನೆಹರು ಯತೂನಿವರ್ಸಿಟಿಯಲ್ಲಿ (ಜೆಎನ್‌ಯು) 2016ರಲ್ಲಿ ಆರಂಭವಾದ ಪ್ರತಿಭಟನೆಗಳ ಸಂದರ್ಭದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್‌ ಎಂಬ ಪದ ಪ್ರಯೋಗವನ್ನು ಬಿಜೆಪಿಯು ಆರಂಭಿಸಿತ್ತು. ಈಗ ಆರ್‌ಟಿಐಗೆ ಗೃಹ ಸಚಿವಾಲಯ ನೀಡಿರುವ ಉತ್ತರವನ್ನು ನೋಡಿ, ಸಾಕೇತ್‌ ಅವರು ತುಕ್ಡೆ ತುಕ್ಡೆ ಗ್ಯಾಂಗ್‌ ಎನ್ನುವುದು ಅಮಿತ್‌ ಶಾ ಅವರ ಕಲ್ಪನೆಯ ಒಂದು ಭಾಗವಷ್ಟೇ ಎಂದು ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವ ಸಾಕೇತ್‌ ಅವರು, ಯಾವುದೇ ರಾಜಕೀಯ ಸಮಾರಂಭಗಳಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್‌ ಎಂಬ ಪದ ಪ್ರಯೋಗವನ್ನು ಬಳಸಿದರೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ. “ಅಮಿತ್‌ ಶಾ ಅವರು ತುಕ್ಡೆ ತುಕ್ಡೆ ಗ್ಯಾಂಗ್‌ ಎಂದು ವಿರೋಧಿಗಳನ್ನು ಕರೆಯಲು ಸ್ಪಷ್ಟವಾದ ಕಾರಣವನ್ನು ನೀಡಬೇಕು. ಇಲ್ಲವಾದಲ್ಲಿ ಜನರ ದಿಕ್ಕು ತಪ್ಪಿಸಿದಕ್ಕಾಗಿ ಹಾಗೂ ಸಾರ್ವಜನಿಕವಾಗಿ ಸುಳ್ಳು ಹೇಳಿದಕ್ಕಾಗಿ ದೇಶದ ಜನರಲ್ಲಿ ಬೇಷರತ್‌ ಕ್ಷಮೆ ಯಾಚಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

ಜನವರಿ 5ರಂದು ಜೆಎನ್‌ಯುನಲ್ಲಿ ನಡೆದ ಹಿಂಸಾಚಾರ ನಡೆದ ಮರುದಿನ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಅವರು ಮಾತನಾಡುತ್ತಾ, ತಾವು ಜೆಎನ್‌ಯುನಲ್ಲಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿ ಯಾವುದೇ ತುಕ್ಡೆ ತುಕ್ಡೆ ಗ್ಯಾಂಗ್‌ಗಳು ಸಕ್ರೀಯವಾಗಿರಲಿಲ್ಲ ಎಂದು ಹೇಳಿದ್ದರು. ಈ ಮಾತುಗಳನ್ನಾಡುವ ಹಿಂದಿನ ದಿನ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡಿದ್ದ ದುಷ್ಕರ್ಮಿಗಳ ತಂಡವೊಂದು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಈ ಹಲ್ಲೆಗಳಿಗೆ ಬಲಪಂಥೀಯ ವಿದ್ಯಾರ್ಥಿ ಸಂಘಟನೆಯನ್ನು ಹೊಣೆಗಾರರನ್ನಾಗಿಸಿತ್ತು.

ಇನ್ನು ಮಾಜಿ ವಿತ್ತ ಸಚಿವರಾದ ಅರುಣ್‌ ಜೇಟ್ಲಿ ಅವರು ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪ್ರಣಾಳಿಕೆಯನ್ನು ರಾಃಉಲ್‌ ಗಾಂಧಿಯವರ ಆಪ್ತ ತುಕ್ಡೆ ತುಕ್ಡೆ ಗ್ಯಾಂಗ್‌ ಸಿದ್ದಪಡಿಸಿದೆ. ಆ ಪ್ರಣಾಳಿಕೆಯನ್ನು ದೇಶದಲ್ಲಿ ಅನುಷ್ಟಾನಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಡಿಸೆಂಬರ್‌ 26ರಲ್ಲಿ ನಡೆದ ರ‍್ಯಾಲಿಯೊಂದರಲ್ಲಿ ಗೃಹ ಸಚಿವ ಅಮಿತ್‌ ಶಾ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್‌ ಹಾಗೂ ತುಕ್ಡೆ ತುಕ್ಡೆ ಗ್ಯಾಂಗ್‌ಗಳು ಕಾರಣ ಎಂದು ಆರೋಪಿಸಿದ್ದರು. ಏಪ್ರಿಲ್‌ 10, 2019ರಲ್ಲಿ ಚುನಾವಣಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುವಾಗ ಅಮಿತ್‌ ಶಾ ಅವರು ಮೋದಿಯವರಿಂದ ಮಾತ್ರ ಬಲಿಷ್ಠ ಆಡಳಿತ ನೀಡಲು ಸಾಧ್ಯ ತುಕ್ಡೆ ತುಕ್ಡೆ ಗ್ಯಾಂಗ್‌ನಿಂದ ಅಲ್ಲ ಎಂದಿದ್ದರು.

ಈಗ, ತುಕ್ಡೆ ತುಕ್ಡೆಗ್ಯಾಂಗ್‌ ಕುರಿತು ಯಾವುದೇ ಮಾಹಿತಿ ತಮ್ಮಲಿಲ್ಲ ಎಂದು ಗೃಹ ಸಚಿವಾಲಯ ಹೇಳುವ ಮೂಲಕ ತಮ್ಮದೇ ಸಚಿವಾಳಯದ ಸಚಿವರು ಮಾಡುವ ಆರೋಪಗಳಿಗೆ ಬುನಾದಿಯಿಲ್ಲ ಎಂದು ನಿರೂಪಿಸಿದೆ. ಯಾವ ಆಧಾರದ ಮೇಲೆ ತುಕ್ಡೆ ತುಕ್ಡೆ ಗ್ಯಾಂಗ್‌ ಎಂಬ ಪದ ಪ್ರಯೋಗವನ್ನು ಬಿಜೆಪಿಯ ನಾಯಕರು ಪದೇ ಪದೇ ಮಾಡುತ್ತಿದ್ದಾರೆ ಎನ್ನುವುದರ ಕುರಿಉ ಸ್ಪಷ್ಟನೆ ನೀಡುವ ಅಗತ್ಯವಿದೆ.

ಕೃಪೆ: ಸ್ಕ್ರಾಲ್.ಇನ್

Tags: Amit ShahCitizenship Amendment Act 2019Home MinistryS Jaishankartukde-tukde gangಅಮಿತ್ ಶಾಆರ್‌ಟಿಐಗೃಹ ಸಚಿವಾಲಯಜೈ ಶಂಕರ್ತುಕ್ಡೆ ತುಕ್ಡೆ ಗ್ಯಾಂಗ್‌
Previous Post

ಅರ್ಥಪೂರ್ಣವಾಗಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಿದ ಶಿವಮೊಗ್ಗದ ಯುವಕರು

Next Post

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada