Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ತೃತೀಯ ಲಿಂಗಿಗಳಿಗೆ ರಕ್ಷಣೆ ನೀಡದ `ರಕ್ಷಣಾ’ ಮಸೂದೆ! 

ತೃತೀಯ ಲಿಂಗಿಗಳಿಗೆ ರಕ್ಷಣೆ ನೀಡದ `ರಕ್ಷಣಾ’ ಮಸೂದೆ!
ತೃತೀಯ ಲಿಂಗಿಗಳಿಗೆ ರಕ್ಷಣೆ ನೀಡದ `ರಕ್ಷಣಾ’ ಮಸೂದೆ! 

December 2, 2019
Share on FacebookShare on Twitter

ಕೇಂದ್ರ ಸರ್ಕಾರ ಮುಂದಿನ ವರ್ಷ ಜಾರಿಗೆ ತರಲು ಉದ್ದೇಶಿಸಿರುವ ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಮಸೂದೆ 2019ನ್ನು ಅನೇಕ ರಾಜ್ಯಸಭಾ ಸದಸ್ಯರ ವಿರೋಧದ ನಡುವೆಯೂ ಕಳೆದ ನವೆಂಬರ್‌ 26 ರಂದು ರಾಜ್ಯಸಭೆಯು ಅನುಮೋದನೆ ನೀಡಿದೆ. ಈ ಮಸೂದೆಯನ್ನು ತಮಿಳುನಾಡಿನ ತಿರುಚ್ಚಿಯ ರಾಜ್ಯಸಭಾ ಸದಸ್ಯ ಶಿವ ಅವರು 2014 ರಲ್ಲೇ ಮಂಡಿಸಿದ್ದರು. ತೃತೀಯ ಲಿಂಗಿಗಳಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಹಕ್ಕುಗಳನ್ನು ನೀಡುವ ಮೂಲಕ ಅವರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಮಸೂದೆಯ ಉದ್ದೇಶವಾಗಿತ್ತು.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಆದರೆ ದೇಶದ ತೃತೀಯ ಲಿಂಗಿಗಳ ಸಮುದಾಯ ಈ ಮಸೂದೆಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು ತಮ್ಮ ವಿರೋಧವನ್ನು ಲಭ್ಯವಿರುವ ಎಲ್ಲ ಸಾಮಾಜಿಕ ತಾಣಗಳ ಮೂಲಕ ಹೊರ ಹಾಕಿದೆ. ಈ ಎಲ್ಲ ಪ್ರತಿರೋಧಗಳ ನಡುವೆಯೂ ಸರ್ಕಾರ ಡಿಸೆಂಬರ್‌ 2018 ರಲ್ಲೇ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದೆ. ಕಳೆದ ಆಗಸ್ಟ್‌ 5 ,2019 ರಂದು ಲೋಕಸಭೆಯು ತೃತೀಯ ಲಿಂಗಿ ಹಕ್ಕುಗಳ ರಕ್ಷಣಾ ಮಸೂದೆ 2019 ನ್ನು ಅನುಮೋದನೆ ಮಾಡಿದ್ದು ಇದನ್ನು ಲೋಕಸಭೆಯಲ್ಲಿ ಮಂಡಿಸುವುದಕ್ಕೂ ಮೊದಲು ತೃತೀಯ ಲಿಂಗಿ ಸಮುದಾಯಕ್ಕಾಗಲೀ , ಎನ್‌ಜಿಓಗಳಿಗಾಗಲೀ ಅಥವಾ ಸಾರ್ವಜನಿಕರಿಗಾಗಲೀ ಇದರ ಅಂಶಗಳು ಲಭ್ಯವಿರಲಿಲ್ಲ. ಕಳೆದ ವಾರ ರಾಜ್ಯಸಭೆಯೂ ಮಸೂದೆಯನ್ನು ಅಂಗೀಕರಿಸಿದ್ದು ಇದು ಕಾನೂನು ಆಗಬೇಕಾದರೆ ರಾಷ್ಟ್ರಪತಿಗಳ ಸಹಿಗಾಗಿ ಕಾಯುತ್ತಿದೆ.

ಸರ್ಕಾರದ ಪ್ರಕಾರ ಈ ಮಸೂದೆಯಿಂದ ಶೋಷಿತ ಸಮುದಾಯವನ್ನು ಸಂಕಷ್ಟದಿಂದ ಮೇಲೆತ್ತುವ ಪ್ರಗತಿಪರ ಪ್ರಯತ್ನ ಎಂದು ಹೇಳಿಕೊಂಡಿದೆ. ಆದರೆ ವಾಸ್ತವವಾಗಿ ಈ ಮಸೂದೆಯಲ್ಲಿನ ಕೆಲವು ಅಂಶಗಳು ಶೋಷಿತ ಸಮುದಾಯದ ವಿರುದ್ಧವೇ ಇವೆ. ತೃತೀಯ ಲಿಂಗಿಗಳ ಅಭಿವೃದ್ದಿಗೆ ಶ್ರಮಿಸುತ್ತಿರುವ ಎನ್‌ಜಿಓ ಒಂದರ ಪ್ರಕಾರ ಈ ಸಂಪೂರ್ಣ ಪ್ರಕ್ರಿಯೆ ತೃತೀಯ ಲಿಂಗಿಗಳ ಅಭಿವೃದ್ದಿಗೆ ಏನೂ ಮಾಡುವುದಿಲ್ಲ ಬದಲಿಗೆ ಅವರಿಗೆ ಈಗಿರುವ ಹಕ್ಕುಗಳನ್ನೂ ಕಸಿದುಕೊಳ್ಳಲಿದೆ ಎನ್ನುತ್ತದೆ.

ಮೊದಲನೇಯದಾಗಿ ಈ ಮಸೂದೆಯಲ್ಲಿ ತೃತೀಯ ಲಿಂಗಿಗಳನ್ನಲ್ಲದೆ ಇತರ ಲಿಂಗಿಯ ವ್ಯಕ್ತಿಗಳನ್ನೂ ಈ ಕಾಯ್ದೆಯಡಿಯಲ್ಲಿ ಸೇರ್ಪಡೆ ಮಾಡಲಾಗಿದ್ದು ಇದು ಕಾಯ್ದೆ ನಿಗದಿಯಾದ ಯಾವುದೇ ಸಮುದಾಯಕ್ಕೆ ಅನುಕೂಲ ಮಾಡಿಕೊಡುವುದಿಲ್ಲ.

ಎರಡನೇಯದಾಗಿ ಈ ಮಸೂದೆಯಲ್ಲಿ ಉಲ್ಲೇಖೀಸಲಾಗಿರುವ ಕುಟುಂಬ ಎಂಬ ಪದವು ಖಚಿತವಾದ ಅರ್ಥ ಕೊಡುವುದಿಲ್ಲ. ಏಕೆಂದರೆ ತೃತೀಯ ಲಿಂಗಿಗಳು ಸಾಮಾನ್ಯವಾಗಿ ತಾವು ಹುಟ್ಟಿ ಬೆಳೆದ ಕುಟುಂಬವನ್ನು ತೊರೆದು ತಮ್ಮದೇ ಸಮುದಾಯದ ಜನರ ನಡುವೆ ವಾಸಿಸುತ್ತಿರುತ್ತಾರೆ. ಹಾಗಾಗಿ ಇವರನ್ನೂ ಕುಟುಂಬ ಎಂದೇ ಪರಿಗಣಿಸಬೇಕಿದೆ.

ಈ ಮಸೂದೆಯಲ್ಲಿ ಸರ್ಕಾರ ತೃತೀಯ ಲಿಂಗಿಗಳ ರಕ್ಷಣೆ , ಭದ್ರತೆ ಮತ್ತು ಪುನರ್ವಸತಿ ಒದಗಿಸಬೇಕಾದ ಬದ್ದತೆಯನ್ನು ಹೊಂದಿದೆ. ಇದು ಕೂಡ ಸ್ಪಷ್ಟತೆಯನ್ನು ಹೊಂದಿಲ್ಲ ಮತ್ತು ಇದನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದ್ದು ತೃತೀಯ ಲಿಂಗಿಗಳು ಈಗ ಹೊಂದಿರುವ ಸ್ವಾತಂತ್ರ್ಯವನ್ನೂ ಕಸಿದುಕೊಳ್ಳುವ ಸಾಧ್ಯತೆ ಇದೆ.

ಈ ಮಸೂದೆಯಲ್ಲಿ ತೃತೀಯ ಲಿಂಗಿ ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಕುರಿತು ಪ್ರಸ್ತಾಪವನ್ನೇ ಮಾಡಿಲ್ಲ. ಇದು ಈ ಸಮುದಾಯದ ಬಹಳ ವರ್ಷಗಳ ಬೇಡಿಕೆ ಆಗಿದೆ. ಇದಲ್ಲದೆ ಮಸೂದೆಯಲ್ಲಿ ಅಡಕವಾಗಿರುವ ಅಂಶಗಳು ತೃತೀಯ ಲಿಂಗಿಗಳಿಗೆ ಸರ್ಕಾರ ಶಿಕ್ಷಣ ಹಾಗೂ ಆರೋಗ್ಯ ಸವಲತ್ತುಗಳನ್ನು ಕಡ್ಡಾಯವಾಗಿ ಒದಗಿಸಬೇಕಾದ ಬದ್ದತೆಯ ಅಂಶವಿಲ್ಲ. ಇದನ್ನು ಸಂಪೂರ್ಣವಾಗಿ ಸರ್ಕಾರಿ ಅಧಿಕಾರಿಗಳ ವಿವೇಚನೆಗೆ ಬಿಡಲಾಗಿದ್ದು ಈ ಕುರಿತು ತೃತೀಯ ಲಿಂಗಿಯೊಬ್ಬನಿಗೆ ಆತನ ಹುಟ್ಟಿನಿಂದ ಬಂದಿರುವ ನ್ಯೂನತೆಯ ಕುರಿತು ಸಂಭಂಧಿಸಿದ ಅಧಿಕಾರಿ ಸರ್ಟಿಫಿಕೇಟ್‌ ನೀಡಬಹುದು. ಆದರೆ ಇದರಲ್ಲೂ ಸ್ಪಷ್ಟತೆ ಇಲ್ಲ.

ಉದ್ದೇಶಿತ ತೃತೀಯ ಲಿಂಗಿಗಳ ಹಕ್ಕುಗಳ ರಾಷ್ಟ್ರೀಯ ಮಂಡಳಿಯ ರಚನೆಯಲ್ಲಿ ಕೇವಲ 5 ತೃತೀಯ ಲಿಂಗಿ ಸದಸ್ಯರಿಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಕೂಡ ಕೇಂದ್ರ ಸರ್ಕಾರ ನಾಮಕರಣ ಮಾಡಬೇಕಿದೆ. ಇದರಿಂದ ಸರ್ಕಾರವು ಸಂಪೂರ್ಣ ಮಂಡಳಿಯಲ್ಲಿ ತನ್ನ ಹಿಡಿತ ಸಾಧಿಸಬಹುದಾಗಿದೆ ಮತ್ತು ಸಮುದಾಯದ ಗಟ್ಟಿ ಧ್ವನಿ ಇರುವ ವ್ಯಕ್ತಿಗಳ ಸಮಸ್ಯೆಗಳನ್ನು ಬಗೆಹರಿಸುವುದು ಶೀಘ್ರವಾಗಲಿದೆಯಾದರೆ ದುರ್ಬಲರ ದ್ವನಿ ಅಡಗಿ ಹೋಗಲಿದೆ.

ಈ ಮಸೂದೆಯಲ್ಲಿ ಭಾರತೀಯ ದಂಡ ಸಂಹಿತೆ 1860 ಹಾಗೂ ಇತರ ಕಾಯ್ದೆಗಳಲ್ಲಿ ಭಿನ್ನವಾದ ಶಿಕ್ಷೆ ವಿಧಿಸುವ ಅವಕಾಶ ನೀಡಲಾಗಿದೆ. ತೃತೀಯ ಲಿಂಗಿಗಳ ಮೇಲೆ ನಡೆಯುವ ಅಪರಾಧಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಉದಾಹರಣೆಗೆ ತೃತೀಯ ಲಿಂಗಿ ಯೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಗರಿಷ್ಟ 2 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಢ ವಿಧಿಸಬಹುದಾಗಿದ್ದರೆ ಆದರೆ ಮಹಿಳೆಯೊಬ್ಬಳ ಮೇಲನ ಲೈಂಗಿಕ ದೌರ್ಜನ್ಯಕ್ಕೆ ಗರಿಷ್ಟ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ನಮ್ಮ ಸಂವಿಧಾನದ ಮೂಲ ಆಶಯದ ಪ್ರಕಾರ ಲೈಂಗಿಕ ಅಲ್ಪಸಂಖ್ಯಾತರಿಗೂ ಕೂಡ ಇತರ ಎಲ್ಲರಿಗೆ ಇರುವಂತೆ ಸಮಾನ ಹಕ್ಕುಗಳನ್ನು ನೀಡಬೇಕು ಮತ್ತು ಕಾನೂನಿನ ರಕ್ಷಣೆಯನ್ನು ಒದಗಿಸಬೇಕಿದೆ. ಇಂದು ಈ ನ್ಯಾಯಬದ್ದವಾದ ಹಕ್ಕುಗಳನ್ನು ಪಡೆಯಲು ಅಧಿಕಾರ ಶಾಹಿಯ ಎದುರು ದಿನಗಟ್ಟಲೆ ನಿಂತು ಮತ್ತಷ್ಟು ಸಮಯ ವ್ಯರ್ಥ ಮಾಡಿಕೊಳ್ಳುವ ಪರಿಸ್ಥಿತಿ ಇದೆ. ತೃತೀಯ ಲಿಂಗಿಗಳು ಇಂದಿಗೂ ನಿತ್ಯದ ಬದುಕಿನಲ್ಲಿ ವಿಶಿಷ್ಟವಾದ ಸಮಸ್ಯೆಗಳನ್ನು ಎದುರಿಸುತಿದ್ದಾರೆ . ಆದರೆ ಅವರ ಸಮಸ್ಯೆ ಮತ್ತು ವಿಷಯಗಳು ಟಿವಿಗಳಲ್ಲಿ ಚರ್ಚೆಗೆ , ಟಾಕ್‌ ಶೋ ಗಳಿಗೆ ಅರ್ಹವಲ್ಲ ಮತ್ತು ಡಾಕ್ಯುಮೆಂಟರಿ ನಿರ್ಮಿಸಲೂ ಯೋಗ್ಯವಾದ ವಸ್ತುವಲ್ಲ ಎಂದು ಸಮಾಜ ಭಾವಿಸಿರುವುದು ನಿಜಕ್ಕೂ ವಿಷಾದನೀಯ ಸಂಗತಿ .

ಒಟ್ಟಿನಲ್ಲಿ ಈ ಉದ್ದೇಶಿತ ಕಾಯ್ದೆಯಿಂದಾಗಿ ತೃತೀಯ ಲಿಂಗಿಗಳಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಸಮುದಾಯದ ಅಭಿಮತವಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket  Fight..!
Top Story

ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket Fight..!

by ಪ್ರತಿಧ್ವನಿ
March 18, 2023
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

by ಮಂಜುನಾಥ ಬಿ
March 20, 2023
ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ
ಸಿನಿಮಾ

ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

by ಪ್ರತಿಧ್ವನಿ
March 23, 2023
ಡಾ.ಬಿ.ಆರ್‌ ಅಂಬೇಡ್ಕರ್‌ ದೃಷ್ಟಿಯಲ್ಲಿ ಮಹಿಳೆ ಮತ್ತು ಸಮಾನ ನಾಗರಿಕ ಸಂಹಿತೆ : Women And Equal Civil Code
ಕರ್ನಾಟಕ

ಡಾ.ಬಿ.ಆರ್‌ ಅಂಬೇಡ್ಕರ್‌ ದೃಷ್ಟಿಯಲ್ಲಿ ಮಹಿಳೆ ಮತ್ತು ಸಮಾನ ನಾಗರಿಕ ಸಂಹಿತೆ : Women And Equal Civil Code

by ನಾ ದಿವಾಕರ
March 18, 2023
ChethanAhimsa : ಕೋರ್ಟ್​ನಿಂದ ಹೊರಬರುವಾಗ ನಟ ಚೇತನ್ ರಿಯಾಕ್ಟ್ . #pratidhvani #chethana #politics #hinduism
ಇದೀಗ

ChethanAhimsa : ಕೋರ್ಟ್​ನಿಂದ ಹೊರಬರುವಾಗ ನಟ ಚೇತನ್ ರಿಯಾಕ್ಟ್ . #pratidhvani #chethana #politics #hinduism

by ಪ್ರತಿಧ್ವನಿ
March 21, 2023
Next Post
ಗ್ರಾಮೀಣ ಭಾರತದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ!

ಗ್ರಾಮೀಣ ಭಾರತದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ!

ಕುಸಿತದ ಹಾದಿಯಲ್ಲಿ ವೇಗವಾಗಿ ಚಲಿಸುತ್ತಿರುವ ವಾಹನಗಳ ಮಾರಾಟ!

ಕುಸಿತದ ಹಾದಿಯಲ್ಲಿ ವೇಗವಾಗಿ ಚಲಿಸುತ್ತಿರುವ ವಾಹನಗಳ ಮಾರಾಟ!

ಏರುದಾರಿಯಲ್ಲಿ ಲಾಲೂ ಪಕ್ಷ- `ಮೇಲ್ಜಾತಿ’ಗೆ ಮಣೆ

ಏರುದಾರಿಯಲ್ಲಿ ಲಾಲೂ ಪಕ್ಷ- `ಮೇಲ್ಜಾತಿ’ಗೆ ಮಣೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist