• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದಿನೇಶ್ ಗುಂಡೂರಾವ್-ಸೋನಿಯಾ ಗಾಂಧಿ ಭೇಟಿ ಹಿಂದಿನ ಮರ್ಮವೇನು?

by
February 20, 2020
in ಕರ್ನಾಟಕ
0
ದಿನೇಶ್ ಗುಂಡೂರಾವ್-ಸೋನಿಯಾ ಗಾಂಧಿ ಭೇಟಿ ಹಿಂದಿನ ಮರ್ಮವೇನು?
Share on WhatsAppShare on FacebookShare on Telegram

ಒಂದೆಡೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ನೇಮಕದಲ್ಲಿ ಪಕ್ಷದ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರ ಪರಿಣಾಮ ಪಕ್ಷದ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿಲ್ಲ. ಇನ್ನೊಂದೆಡೆ ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ಬಾರದ ಕಾರಣ ಪ್ರತಿಪಕ್ಷ ನಾಯಕನ ಜತೆ ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲೂ ಮುಂದುವರಿಯುತ್ತಿರುವ ಸಿದ್ದರಾಮಯ್ಯ ಅವರು ದಿನೇ ದಿನೇ ಪಕ್ಷದಲ್ಲಿ ಮತ್ತೆ ಪ್ರಬಲರಾಗುತ್ತಿದ್ದಾರೆ. ಹೈಕಮಾಂಡ್ ನ ಈ ಧೋರಣೆ ಸಿದ್ದರಾಮಯ್ಯ ಅವರ ಬಗ್ಗೆ ಮುನಿಸಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರ ಆಕ್ರೋಶವನ್ನು ಹೆಚ್ಚಿಸುತ್ತಿದೆ. ಕನಿಷ್ಠ ಕೆಪಿಸಿಸಿ ಅಧ್ಯಕ್ಷರನ್ನು ಶೀಘ್ರವೇ ನೇಮಕ ಮಾಡುವಂತೆ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ.

ADVERTISEMENT

ಆದರೆ, ದೆಹಲಿ ವಿಧಾನಸಭೆ ಚುನಾವಣೆಯ ಹೀನಾಯ ಸೋಲಿನಿಂದ ಇನ್ನೂ ಚೇತರಿಸಿಕೊಳ್ಳಲು ಒದ್ದಾಡುತ್ತಿರುವ ಕಾಂಗ್ರೆಸ್ ವರಿಷ್ಠರಿಗೆ ಪಕ್ಷದ ಹಿರಿಯ ನಾಯಕರ ಒತ್ತಡ ಹೊಸ ತಲೆನೋವು ತಂದಿದೆ. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂಗೀಕಾರಕ್ಕಾಗಿ ಕಾಯುತ್ತಿರುವ ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಸೋನಿಯಾ ಗಾಂಧಿ ಅವರು ಗುರುವಾರ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಆದರೆ, ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತ ಸಮಸ್ಯೆ ಇದುವರೆಗೂ ಬಗೆಹರಿದಂತೆ ಕಾಣಿಸುತ್ತಿಲ್ಲ.

ಈ ಮಧ್ಯೆ ಸಿದ್ದರಾಮಯ್ಯ ಅವರು ಪಕ್ಷದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ಹಿರಿಯ ಕಾಂಗ್ರೆಸಿಗರಲ್ಲಿ ಅಸಮಾಧಾನವನ್ನು ಹೆಚ್ಚಿಸಿದೆ. ಹೀಗಾಗಿ ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕನ ಸ್ಥಾನನ್ನು ಪ್ರತ್ಯೇಕಿಸಿ ಬೇರೆಯವರಿಗೆ ನೀಡಬೇಕು ಎಂದು ಒತ್ತಡವನ್ನು ತೀವ್ರಗೊಳಿಸಲು ನಿರ್ಧರಿಸಿರುವ ಅವರು, ಬಜೆಟ್ ಅಧಿವೇಶನ ಆರಂಭವಾಗುವ ಮುನ್ನವಾದರೂ ಈ ಕೆಲಸ ಮಾಡಿ ಎಂದು ಪಕ್ಷದ ರಾಷ್ಟ್ರೀಯ ನಾಯಕರನ್ನು ಆಗ್ರಹಿಸುತ್ತಿದ್ದಾರೆ. ದೆಹಲಿಯಲ್ಲಿರುವ ನಾಯಕರ ಮೂಲಕ ಈ ಕುರಿತು ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸುತ್ತಿದ್ದಾರೆ. ಆದರೂ ತಡವಾಗಿಯಾದರೂ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎನ್ನುತ್ತಿರುವ ಸೋನಿಯಾ ಅವರು ಇವರ ಮಾತುಗಳನ್ನು ಗಂಭೀರವಾಗಿ ತೆರೆದುಕೊಳ್ಳುತ್ತಿಲ್ಲ. ಇದು ಹಿರಿಯ ಕಾಂಗ್ರೆಸ್ಸಿಗರ ಆಕ್ರೋಶವನ್ನು ಇನ್ನಷ್ಟು ಹೆಚ್ಚುವಂತೆ ಮಾಡಿದೆ.

ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರದ್ದೇ ಕಾರುಬಾರು

ವಿಧಾನಮಂಡಲ ಕಲಾಪ ಆರಂಭವಾಗಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅವರ ಧ್ವನಿ ಮಾತ್ರ ಜೋರಾಗಿ ಕೇಳುತ್ತಿದೆ. ಇವರೊಂದಿಗೆ ಅವರ ಆಪ್ತ ವಲಯದಲ್ಲಿರುವ ಶಾಸಕರ ಸದ್ದು ಕೂಡ ಕೇಳಿಸುತ್ತಿದೆ. ಆದರೆ, ಹಿರಿಯ ಕಾಂಗ್ರೆಸ್ಸಿಗರಿಗೆ ಒತ್ತಾಸೆಯಾಗಿ ನಿಂತಿರುವ ಬಹುತೇಕ ಶಾಸಕರು ನಾವೂ ಇದ್ದೇವೆ ಎಂದು ಆಗಾಗ್ಯೆ ತೋರಿಸಿಕೊಳ್ಳುತ್ತಿದ್ದಾರೆಯೇ ಹೊರತು ಗಟ್ಟಿ ದನಿಯಲ್ಲಿ ಮಾತನಾಡುತ್ತಿಲ್ಲ. ಈ ಗುಂಪಿನ ನಾಯಕತ್ವ ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮೌನವಾಗದಿರುವುದು ಇದಕ್ಕೆ ಕಾರಣ. ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ಕಾರುಬಾರು ಜೋರಾಗಿದ್ದು, ತಟಸ್ಥರಾಗಿರುವ ಕಾಂಗ್ರೆಸ್ ಶಾಸಕರು ಕೂಡ ಅವರೊಂದಿಗೆ ಕೈಜೋಡಿಸುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರ ಪ್ರಾಬಲ್ಯ ಮತ್ತೆ ಪಕ್ಷದಲ್ಲಿ ಹೆಚ್ಚುವಂತಾಗಿದೆ. ಇದುವೇ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿರುವ ಹಿರಿಯ ಕಾಂಗ್ರೆಸ್ಸಿಗರಿಗೆ ತಲೆನೋವು ತಂದಿರುವುದು. ಏಕೆಂದರೆ, ಇಂತಹ ಬೆಳವಣಿಗೆಗಳಿಂದಾಗಿ, ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಬದಿಗೆ ಸರಿಸಬೇಕು ಎಂಬ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ.

ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ಅವರಿಗೆ ಹೆಚ್ಚು ಆದ್ಯತೆ ಸಿಗುತ್ತಿತ್ತು. ಸೋನಿಯಾ ಗಾಂಧಿ ಬಂದ ನಂತರ ಇದು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಹೀಗಾಗಿ ಏನಾದರೂ ಮಾಡಿ ಸೋನಿಯಾ ಅವರ ಮೂಲಕ ಸಿದ್ದರಾಮಯ್ಯ ಅವರನ್ನು ಹತೋಟಿಯಲ್ಲಿಡಲು ಹಿರಿಯ ಕಾಂಗ್ರೆಸ್ಸಿಗರು ಮುಂದಾದರು. ಆರಂಭದಲ್ಲಿ ಅದಕ್ಕೆ ಪೂರಕ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು. ಹೀಗಾಗಿಯೇ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕ ಸ್ಥಾನಗಳನ್ನು ವಿಭಜಿಸಿ ಬೇರೆಯವರಿಗೆ ನೀಡಬೇಕು ಎಂಬ ಬೇಡಿಕೆಯನ್ನು ಸೋನಿಯಾ ಅವರ ಮುಂದಿಟ್ಟರು. ಇದಕ್ಕೂ ಹೈಕಮಾಂಡ್ ಕಡೆಯಿಂದ ಪೂರಕ ಪ3ತಿಕ್ರಿಯೆ ಬಂತು. ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ ಯಾವಾಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆ ಕುರಿತಾಗಿ ಪಟ್ಟು ಹಿಡಿದರೋ ಗೊಂದಲ ತೀವ್ರಗೊಂಡಿತು. ಅದು ಎಷ್ಟರ ಮಟ್ಟಿಗೆ ಹೋಯಿತು ಎಂದರೆ, ಕೆಪಿಸಿಸಿ ಅಧ್ಯಕ್ಷರ ಘೋಷಣೆಯನ್ನೇ ವರಿಷ್ಠರು ತಡೆಹಿಡಿದರು.

ನಂತರದಲ್ಲಿ ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕ ಸ್ಥಾನ ಎರಡರಲ್ಲೂ ಸಿದ್ದರಾಮಯ್ಯ ಅವರನ್ನು ಮುಂದುವರಿಸಲು ಹಿರಿಯ ಕಾಂಗ್ರೆಸ್ಸಿಗರು ಒಪ್ಪಿದರಾದರೂ ನಾಲ್ವರು ಕಾರ್ಯಾಧ್ಯಕ್ಷರ ನೇಮಕ ಬೇಡ ಎಂದು ಪಟ್ಟು ಹಿಡಿದರು. ಅಷ್ಟರಲ್ಲಿ ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸಿದ್ದರಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತು. ಇದೀಗ ಚುನಾವಣೆ ಮುಗಿದು ಫಲಿತಾಂಶವೂ ಹೊರಬಂದಿದೆ. ಆದರೆ, ಹೀನಾಯ ಸೋಲು ಕಾಂಗ್ರೆಸ್ ವರಿಷ್ಠರನ್ನು ಚಿಂತೆಗೀಡುಮಾಡಿದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ಪ್ರಾಬಲ್ಯ ಹೆಚ್ಚುತ್ತಿರುವುದರಿಂದ ಶಾಸಕಾಂಗ ಪಕ್ಷದ  ನಾಯಕ ಮತ್ತು ಪ್ರತಿಪಕ್ಷ ನಾಯಕ ಸ್ಥಾನವನ್ನು ವಿಭಜಿಸಬೇಕು ಎಂಬ ಕೋರಿಕೆಯನ್ನು ಹಿರಿಯ ಕಾಂಗ್ರೆಸ್ಸಿಗರು ಮತ್ತೆ ಹೈಕಮಾಂಡ್ ಮುಂದೆ ಪ್ರಬಲವಾಗಿ ಮಂಡಿಸಲಾರಂಭಿಸಿದ್ದಾರೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷರ ಘೋಷಣೆಯನ್ನು ಶೀಘ್ರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಈ ಕಾರಣಕ್ಕಾಗಿಯೇ ದಿನೇಶ್ ಗುಂಡೂರಾವ್ ಅವರನ್ನು ಕರೆಸಿಕೊಂಡಿರುವ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ನೇಮಕ, ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕ ಸ್ಥಾನ ವಿಭಜನೆ ಮಾಡಿ ಇಬ್ಬರನ್ನು ನೇಮಿಸುವ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಸದ್ಯ ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಜತೆ ಉತ್ತಮ ಬಾಂಧವ್ಯ ಹೊಂದಿದ್ದರೂ ಎರಡೂ ಕಡೆಯೂ ಅವರು ಹೊಂದಿಕೊಳ್ಳುತ್ತಾರೆ. ಈ ಕಾರಣಕ್ಕೆ ನಾಯಕತ್ವ ಬದಲಾವಣೆ ಕುರಿತು ಯಾವ ರೀತಿಯಲ್ಲಿ ತೀರ್ಮಾನ ಕೈಗೊಂಡರೆ ಅದರಿಂದ ಒಳ್ಳೆಯದಾಗುತ್ತದೆ ಮತ್ತು ಪಕ್ಷ ಸಂಘಟನೆಗೆ ಸಹಾಯವಾಗುತ್ತದೆ ಎಂಬ ಕುರಿತು ಸೋನಿಯಾ ಅವರು ದಿನೇಶ್ ಗುಂಡೂರಾವ್ ಅವರಿಂದ ಮಾಹಿತಿ ಪಡೆದಿದ್ದಾರೆ.

ಒಂದೊಮ್ಮೆ ದಿನೇಶ್ ಗುಂಡೂರಾವ್ ಅವರ ಸಲಹೆಗಳು ಒಪ್ಪಿಗೆಯಾದರೆ ಇನ್ನು ಕೆಲವೇ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ಘೋಷಣೆಯಾಗಲಿದ್ದು, ಪ್ರತಿಪಕ್ಷ ಮತ್ತು ಶಾಸಕಾಂಗ ಪಕ್ಷ ನಾಯಕ ಸ್ಥಾನವನ್ನು ವಿಭಜಿಸುವ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

Tags: CongessDinesh GunduraoKPCCSonia Gandhiದಿನೇಶ್ ಗುಂಡೂರಾವ್ಸೋನಿಯಾ ಗಾಂಧಿ
Previous Post

ಜಾಮಿಯ ಲಾಠಿ ಚಾರ್ಜ್‌ನಲ್ಲಿ  ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಿದ್ದ ಪಡಿಸಿದ ಪ್ರಬಂಧಕ್ಕೆ ಅವಾರ್ಡ್‌

Next Post

ಟ್ರಂಪ್ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

Related Posts

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
0

ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ "ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"...

Read moreDetails

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025
Next Post
ಟ್ರಂಪ್ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಟ್ರಂಪ್ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

Please login to join discussion

Recent News

Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada