• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಗಲಭೆ ಏಕಪಕ್ಷೀಯ ವರದಿಯ ಆರೋಪ: BBCಯ ಆಹ್ವಾನ ತಿರಸ್ಕರಿಸಿದ ಪ್ರಸಾರ ಭಾರತಿ ಮುಖ್ಯಸ್ಥ 

by
March 6, 2020
in ದೇಶ
0
ದೆಹಲಿ ಗಲಭೆ ಏಕಪಕ್ಷೀಯ ವರದಿಯ ಆರೋಪ: BBCಯ ಆಹ್ವಾನ ತಿರಸ್ಕರಿಸಿದ ಪ್ರಸಾರ ಭಾರತಿ ಮುಖ್ಯಸ್ಥ 
Share on WhatsAppShare on FacebookShare on Telegram

ಪ್ರಸಾರ ಭಾರತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾದ ಶಶಿ ಶೇಖರ್‌ ವೆಂಪಾಟಿ ಅವರು BBC (British Broadcasting Corporation)ನ ಮಹತ್ವದ ಕಾರ್ಯಕ್ರಮಕ್ಕೆ ನೀಡಿರುವ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ದೆಹಲಿ ಗಲಭೆಯ ಸಮಯದಲ್ಲಿ BBC ಸಂಸ್ಥೆಯಿಂದ ಏಕಪಕ್ಷೀಯವಾದ ವರದಿ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತಾಳಿರುವುದಾಗಿ ತಮ್ಮ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. ನವ ದೆಹಲಿಯಲ್ಲಿ ಮಾರ್ಚ್‌ 8ರಂದು BBC ಸಂಸ್ಥೆಯಿಂದ ಆಯೋಜಿಸಲಾಗಿದ್ದ ಮಹಿಳಾ ಆಟಗಾರ್ತಿಯರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ವೆಂಪಾಟಿ ಅವರಿಗೆ ಆಹ್ವಾನ ನೀಡಲಾಗಿತ್ತು.

ADVERTISEMENT

BBCಯ ಮುಖ್ಯ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಪತ್ರಕರ್ತೆ ಯೋಗಿತಾ ಲಿಮಾಯೆ ಅವರ ವರದಿಯನ್ನು ಉಲ್ಲೇಖ ಮಾಡಲಾಗಿದೆ. ಈ ವರದಿಯು ದೆಹಲಿ ಗಲಭೆಯ ಸಂದರ್ಭದಲ್ಲಿ ಪೊಲೀಸರ ಪಾತ್ರವನ್ನು ವಿಶ್ಲೇಷಿಸಿದ ವರದಿ ಇದಾಗಿತ್ತು. ವರದಿಯಲ್ಲಿ ದೆಹಲಿ ಪೊಲೀಸರು ಗಲಭೆಯನ್ನು ಹುಟ್ಟುಹಾಕುತ್ತಿರುವ ಕೆಲವರಿಗೆ ಸಹಾಯಾಸ್ತ ಚಾಚುತ್ತಿರುವುದು ಹಾಗೂ ಗಲಭೆಯನ್ನು ನಿಯಂತ್ರಿಸಲು ವಿಫಲರಾಗಿರುವುದಕ್ಕೆ ಕಾರಣವನ್ನು ಕೂಡಾ ತೋರಿಸಲಾಗಿತ್ತು. ಹಲವು ಸಾಕ್ಷಿಗಳ ಹೇಳಿಕೆಯ ಮೇರೆಗೆ ಈ ವರದಿಯನ್ನು ನೀಡಲಾಗಿತ್ತು.

BBC ಪ್ರಸಾರ ಮಾಡಿದ್ದ ವಿಡಿಯೋದಲ್ಲಿ ಪೊಲೀಸರು ಗಲಭೆಕಾರರ ಜೊತೆಗೂಡಿ ಕಲ್ಲುತೂರಾಟ ನಡೆಸುವುದು ಕೂಡಾ ಸ್ಪಷ್ಟವಾಗಿ ತೋರಿಸಲಾಗಿತ್ತು. ಇನ್ನು ಗಲಭೆಯಲ್ಲಿ ಪೊಲೀಸರ ದೌರ್ಜನ್ಯದಿಂದ ಮೃತಪಟ್ಟಿದ್ದ 23 ವರ್ಷ ವಯಸ್ಸಿನ ಯುವಕ ಫೈಜಾ಼ನ್‌ ಸಾವಿನ ಕುರಿತಾದ ತನಿಖಾ ವರದಿಯನ್ನು ಕೂಡಾ BBC ಪ್ರಸಾರ ಮಾಡಿತ್ತು. ಈ ತನಿಖಾ ವರದಿಗಳು ದೆಹಲಿ ಪೊಲೀಸರ ಮೇಲೆ ಗಂಭೀರವಾದ ಆರೋಪಗಳನ್ನು ಮಾಡಿತ್ತು.

ಈ ವರದಿಯನ್ನು ಏಕಪಕ್ಷೀಯ ವರದಿ ಎಂದು ಹಾಗೂ ಗಲಭೆಯಿಂದ ಉರಿಯುತ್ತಿದ್ದ ದೆಹಲಿಯಲ್ಲಿ ಮತ್ತಷ್ಟು ಅಶಾಂತಿಯನ್ನು ಉಂಟು ಮಾಡಲು ಕಾರಣವಾಯಿತು ಎಂದು ಪ್ರಸಾರ ಭಾರತಿ ಆರೋಪಿಸಿದೆ. ಗಲಭೆಯನ್ನು ಸಮರ್ಥವಾಗಿ ನಿಭಾಯಿಸಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದ ದೆಹಲಿ ಪೊಲೀಸರ ಕುರಿತು ನಕಾರಾತ್ಮಕವಾಗಿ ವರದಿ ಮಾಡಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಗಲಭೆಕೋರರ ಮಾರಣಾಂತಿಕ ದಾಳಿಯಿಂದ ಗಲಭೆಯನ್ನು ಹತೋಟಿಗೆ ತರಲು ಪ್ರಯತ್ನಿಸಿದ್ದ ಪೊಲೀಸ್‌ ಹೆಡ್‌ ಕಾನ್ಸ್ಟೇಬಲ್‌ ಅವರ ಸಾವಿನ ಕುರಿತು ಹಾಗೂ ಇಂಟೆಲಿಜೆನ್ಸ್‌ ಅಧಿಕಾರಿಯ ಮೇಲೆ ನಡೆದ ಇರಿತದಿಂದ ಅವರು ಮೃತಪಟ್ಟಿರುವ ಕುರಿತು ಯಾವುದೇ ವರದಿಯನ್ನು ಮಾಡಲಾಗಿಲ್ಲ ಎಂದು ವೆಂಪಾಟಿಯವರು ಪತ್ರದಲ್ಲಿ ಹೇಳಿದ್ದಾರೆ.

“ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಭಾರತಿ ಮತ್ತು BBC ಒಳ್ಳೆಯ ಸಂಬಂಧವನ್ನು ಹೊಂದಿದ್ದರೂ, ತಾವೂ ಕಾರ್ಯ ನಿರ್ವಹಿಸುವ ಮೂಲ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಂಡು ಬರುವುದು ಮುಖ್ಯವಾಗಿರುತ್ತದೆ. BBC ಸಂಸ್ಥೆಯು ತನ್ನ ಸಂಪಾದಕೀಯ ನಿಲುವುಗಳನ್ನು ಬದಲಾಯಿಸುವ ಭರವಸೆಯನ್ನು ನಾವು ಹೊಂದಿದ್ದೇವೆ,” ಎಂದು ವೆಂಪಾಟಿ ಹೇಳಿದ್ದಾರೆ.

Tags: BBCBBC Report on Delhi ViolenceDelhi ViolencePrasar BharatiShashishekhar Vempatiದೆಹಲಿ ಗಲಭೆಪ್ರಸಾರ ಭಾರತಿ ಮುಖ್ಯಸ್ಥಶಶಿ ಶೇಖರ್‌ ವೆಂಪಾಟಿ
Previous Post

ಕಡಲು ಪ್ಲಾಸ್ಟಿಕ್‌ ಮಯವಾಗಲು ಮೀನುಗಾರರ ಕೊಡುಗೆಯೂ ಅಪಾರ!

Next Post

Yes Bankನ ಶೋಚನೀಯ ಪರಿಸ್ಥಿತಿಗೆ ಕಾರಣವೇನು?

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

January 6, 2026
Next Post
Yes Bankನ ಶೋಚನೀಯ ಪರಿಸ್ಥಿತಿಗೆ ಕಾರಣವೇನು?

Yes Bankನ ಶೋಚನೀಯ ಪರಿಸ್ಥಿತಿಗೆ ಕಾರಣವೇನು?

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada