• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಗಲಭೆ: ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೆಸರು

by
September 24, 2020
in ದೇಶ
0
ದೆಹಲಿ ಗಲಭೆ: ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೆಸರು
Share on WhatsAppShare on FacebookShare on Telegram

ದೆಹಲಿ ಗಲಭೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ರಾಜಕಾರಣಿಗಳಿಂದ ಹಿಡಿದು ವಕೀಲರು ಮತ್ತು ಕಾರ್ಯಕರ್ತರವರೆಗೆ ವಿವಿಧ ಪ್ರಮುಖ ವ್ಯಕ್ತಿಗಳ ಹೆಸರುಗಳು ಬಂದಿವೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರ ಹೆಸರು ಸೇರಿದೆ.

ADVERTISEMENT

Also Read: ಅರವಿಂದ ಕೇಜ್ರಿವಾಲ್ ಮತ್ತು ದೆಹಲಿ ಗಲಭೆ

ಮಾಜಿ ಕಾಂಗ್ರೆಸ್ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಇನ್ನೋರ್ವ ಆರೋಪಿ ಖಾಲಿದ್ ಸೈಫಿ ಅವರ ಬಹಿರಂಗ ಹೇಳಿಕೆಯಲ್ಲಿ ಪ್ರಶಾಂತ್‌ ಹಾಗೂ ಸಲ್ಮಾನ್‌ ಖುರ್ಷಿದ್ ಹೆಸರುಗಳು ಬಂದಿವೆ. ಇಂತಹ ಹೇಳಿಕೆಗಳನ್ನು ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 25 ರ ಅಡಿಯಲ್ಲಿ ಅನುಮತಿಸಲಾಗುವುದಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್, ವಕೀಲ ಪ್ರಶಾಂತ್ ಭೂಷಣ್, ಕಾರ್ಯಕರ್ತ ಹರ್ಷ್ ಮಾಂದರ್ ಮತ್ತು ಹೋರಾಟಗಾರ ಹಾಗೂ ರಾಜಕಾರಣಿಯಾಗಿರುವ ಯೋಗೇಂದ್ರ ಯಾದವ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಇಶ್ರತ್ ಜಹಾನ್ ತಮ್ಮ ಬಹಿರಂಗ ಹೇಳಿಕೆಯಲ್ಲಿ ನ

Also Read: ದೆಹಲಿ ಗಲಭೆ ಪ್ರಕರಣ; ಚಾರ್ಜ್‌ ಶೀಟ್‌ ನಲ್ಲಿ ʼಪೊಲೀಸ್‌ʼ ಬುದ್ಧಿ ತೋರಿದ ದೆಹಲಿ ತನಿಖಾ ತಂಡ

ಖಾಲಿದ್ ಸೈಫಿ ಮತ್ತು ಇತರ ಸಾಕ್ಷಿಗಳೂ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ಯುಎಪಿಎ, ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಡೆಗಟ್ಟುವ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಬೃಹತ್ ಆರೋಪ ಹೊರಿಸಿದ್ದರು. ಚಾರ್ಜ್‌ಶೀಟ್‌ನ ಪ್ರತಿಯನ್ನು ಸೋಮವಾರ ಆರೋಪಿಗಳ ವಕೀಲರಿಗೆ ಕಳುಹಿಸಲಾಗಿದೆ.

Also Read: ದೆಹಲಿ ಗಲಭೆ: ಸತ್ಯಶೋಧನಾ ವರದಿಯಲ್ಲಿನ ಸುಳ್ಳುಗಳ ಸರಮಾಲೆ| ಭಾಗ – 1

ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿ ಪ್ರತಿಭಟನೆ ನಡೆಯುತ್ತಿರುವಂತೆ, ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನು ಬೆಂಬಲಿಗರು ಕೂಡಾ ʼಕಾನೂನು ಪರವಾಗಿʼ ಸಮಾವೇಶ ನಡೆಸಿದ ಬಳಿಕ ಗಲಭೆ ಬುಗಿಲೆದ್ದಿತು. ಗಲಭೆಯಲ್ಲಿ 53 ಜನರು ಮೃತಪಟ್ಟರೆ ಮತ್ತು ಸುಮಾರು 200 ಕ್ಕೂ ಹೆಚ್ಚು ಜನರು ಗಾಯಗೊಂಡರು.

Also Read: ದೆಹಲಿ ಗಲಭೆ: ʼಸತ್ಯʼಶೋಧನಾ ವರದಿಯಲ್ಲಿ ಬುಡಮೇಲಾದ ಘಟನಾವಳಿಗಳ ವಿಶ್ಲೇಷಣೆ | ಭಾಗ-2

ತಾಹಿರ್ ಹುಸೇನ್, ಸಫೂರಾ ಜರ್ಗರ್, ಗುಲ್ಫಿಶಾ ಖತೂನ್, ದೇವಂಗನಾ ಕಲಿತಾ, ಶಫಾ-ಉರ್-ರೆಹಮಾನ್, ಆಸಿಫ್ ಇಕ್ಬಾಲ್ ತನ್ಹಾ, ನತಾಶಾ ನರ್ವಾಲ್, ಅಬ್ದುಲ್ ಖಾಲಿದ್ ಸೈಫಿ, ಇಶ್ರತ್ ಜಹಾನ್, ಮೀರನ್ ಹೈದರ್, ಶಾದಾಬ್ ಅಹಮದ್, ತಲೀಮ್ ಸಲ್ಮದ್ ಅಹ್ಮದ್ ಖಾನ್ ಮತ್ತು ಅಥರ್ ಖಾನ್‌ ಹೆಸರುಗಳನ್ನು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಾಹೀರ್ ಹುಸೇನ್ ಅವರನ್ನು ಚಾರ್ಜ್‌ಶೀಟ್‌ನಲ್ಲಿ ಮುಖ್ಯ ಆರೋಪಿ ಎಂದು ಹೆಸರಿಸಲಾಗಿದೆ. ಚಾರ್ಜ್‌ಶೀಟ್‌ನಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೊಹಮ್ಮದ್ ಪರ್ವೇಜ್ ಅಹ್ಮದ್, ಮೊಹಮ್ಮದ್ ಇಲಿಯಾಸ್, ಡ್ಯಾನಿಶ್ ಮತ್ತು ಫೈಜಲ್ ಖಾನ್ ಹೆಸರಿಲ್ಲ.ಅವರ ಹೆಸರುಗಳನ್ನು ಪೂರಕ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗುತ್ತದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

Also Read: ದೆಹಲಿ ಗಲಭೆ ತನಿಖೆ: ಪೊಲೀಸರ ವಿರುದ್ಧ ವ್ಯಾಪಕ ಟೀಕೆ, ಫೇಸ್‌ಬುಕ್‌ಗೆ ಛೀಮಾರಿ!

Tags: ದೆಹಲಿ ಗಲಭೆಸಲ್ಮಾನ್‌ ಖುರ್ಷಿದ್ಸಿಎಎ- ಎನ್ಆರ್ ಸಿ
Previous Post

ಸ್ಯಾಂಡಲ್‌ವುಡ್ ಡ್ರಗ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಎಸಿಪಿ ಅಮಾನತು

Next Post

ಭಾರತದ ʼಸ್ಕಾಟ್ಲೆಂಡ್ʼ ಕೊಡಗಿಗೂ ಹಬ್ಬಿರುವ ಮಾದಕ ವಸ್ತು ಜಾಲ

Related Posts

Top Story

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

by ಪ್ರತಿಧ್ವನಿ
November 20, 2025
0

ಬೆಂಗಳೂರು: ಜಾಗತಿಕ ಸೆಮಿಕಂಡಕ್ಟರ್ ವಲಯದ ಮಾರುಕಟ್ಟೆ ಇನ್ನು ಮೂರು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ಡಾಲರ್ (ಸುಮಾರು ರೂ 88 ಲಕ್ಷ ಕೋಟಿ) ಮೌಲ್ಯಕ್ಕೇರಲಿದ್ದು, ಭಾರತಕ್ಕೆ ಹೆಚ್ಚಿನ...

Read moreDetails

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025

Santhosh Lad: ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್‌ ಲಾಡ್‌ ಫೌಂಡೇಶನ್..!!

November 20, 2025
Next Post
ಭಾರತದ ʼಸ್ಕಾಟ್ಲೆಂಡ್ʼ ಕೊಡಗಿಗೂ ಹಬ್ಬಿರುವ ಮಾದಕ ವಸ್ತು ಜಾಲ

ಭಾರತದ ʼಸ್ಕಾಟ್ಲೆಂಡ್ʼ ಕೊಡಗಿಗೂ ಹಬ್ಬಿರುವ ಮಾದಕ ವಸ್ತು ಜಾಲ

Please login to join discussion

Recent News

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada