• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೊಡ್ಡವರ ಮಕ್ಕಳ ಅಸಹ್ಯಕರ ಆಟ!

by
December 19, 2019
in ದೇಶ
0
ದೊಡ್ಡವರ ಮಕ್ಕಳ ಅಸಹ್ಯಕರ ಆಟ!
Share on WhatsAppShare on FacebookShare on Telegram

ಮಕ್ಕಳ ಕೈಗೆ ಮೊಬೈಲ್ ಗಳನ್ನು ಕೊಟ್ಟರೆ ಏನೆಲ್ಲಾ ಅವಾಂತರಗಳು ಆಗುತ್ತವೆ ಎಂಬುದಕ್ಕೆ ಮುಂಬೈನ ಹೆಸರಾಂತ ಶಾಲೆಯೊಂದರ ಮಕ್ಕಳು ನಡೆಸಿರುವ ಕೃತ್ಯ ನಿದರ್ಶನವಾಗಿದೆ.

ADVERTISEMENT

ಇಲ್ಲಿನ ಕೆಲವು ಬಾಲಕರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ಬಗ್ಗೆ ಅವಹೇಳನಾಕಾರಿ ಮತ್ತು ಅಶ್ಲೀಲ ಸಂದೇಶಗಳನ್ನು ವಾಟ್ಸಪ್ ನಲ್ಲಿ ಹರಿ ಬಿಟ್ಟು ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಮತ್ತು ಶಾಲೆಗೆ ಇರಿಸು ಮುರಿಸು ಉಂಟು ಮಾಡಿದ್ದಾರೆ.

ಈ ತಪ್ಪಿಗಾಗಿ 8 ವಿದ್ಯಾರ್ಥಿಗಳನ್ನು ಶಾಲೆಯಿಂದ ಅಮಾನತು ಮಾಡಲಾಗಿದೆ. ಇವರೆಲ್ಲಾ 13 ರಿಂದ 14 ವರ್ಷ ವಯೋಮಾನದವರಾಗಿದ್ದಾರೆ.

ದೇಶದ ಹೆಸರಾಂತ ಶಾಲೆಯಾಗಿರುವ ಐಬಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿರುವುದು.

ಎಂಟು ವಿದ್ಯಾರ್ಥಿಗಳು ಸೇರಿ ನವೆಂಬರ್ 8 ರಿಂದ 30 ರ ಅವಧಿಯಲ್ಲಿ ನೂರಕ್ಕೂ ಹೆಚ್ಚು ಬಾರಿ ಚಾಟ್ ಮಾಡಿದ್ದಾರೆ. ಅಶ್ಲೀಲ ಪದಗಳ ಬಳಕೆ, ಅತ್ಯಾಚಾರ, ಕೊಲೆ ಮಾಡುವುದು. . . ಹೀಗೆ ಹಲವು ವಿಧದಲ್ಲಿ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರು ಬಾಲಕಿಯರನ್ನು ಗುರಿಯಾಗಿಟ್ಟುಕೊಂಡು ಅವರ ಮೇಲೆ ಅತ್ಯಾಚಾರ ಮಾಡಲಾಗುತ್ತದೆ ಎಂದೆಲ್ಲಾ ಮನಸಿಗೆ ಬಂದಂತೆ ಮೆಸೇಜ್ ಗಳನ್ನು ಮಾಡಿಕೊಂಡಿದ್ದಾರೆ.

ಇಬ್ಬರು ವಿದ್ಯಾರ್ಥಿನಿಯರ ತಾಯಂದಿರ ತಮ್ಮ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಶಾಲೆಗೆ ಈ ಬಗ್ಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಕೆಲವು ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೆ, ಪೋಷಕರು ಈ ಬಗ್ಗೆ ಹೆಚ್ಚೇನೂ ತಲೆಕೆಡಿಸಿಕೊಂಡಿರಲಿಲ್ಲ.

ಬಾಲಕರು ನಡೆಸಿರುವ ಚಾಟ್ 100 ಪೇಜಿಗೂ ಅಧಿಕವಾಗಿದೆ. ‘gang bang’, ‘rape’, “for one night”, “Then one night we just go and bang her”, “should I go full on and kill her existence” ಹೀಗೆ ಹಲವು ರೀತಿಯಲ್ಲಿ ಅಸಹ್ಯ ಹುಟ್ಟಿಸುವಂತಹ ಸಂದೇಶಗಳನ್ನು ಈ ವಿದ್ಯಾರ್ಥಿಗಳು ಪರಸ್ಪರ ಹಂಚಿಕೊಂಡಿದ್ದಾರೆ.

ನವೆಂಬರ್ 23 ರಂದು ನಡೆಸಿರುವ ಸಂಭಾಷಣೆಯಲ್ಲಿ ಬಾಲಕನೋರ್ವ ಹುಡುಗಿಯರನ್ನು ಒಂದು ರಾತ್ರಿಗೆ ಕರೆದೊಯ್ಯುವುದು ಎಂಬರ್ಥ ಬರುವ ರೀತಿಯಲ್ಲಿ ಹೇಳಿದ್ದಾನೆ.

ಇನ್ನೊಬ್ಬ ಕಿರಾತಕ ಬಾಲಕ ಹಾಗಾದರೆ ನಾವು ಆ ಹುಡುಗಿಯನ್ನು ಒಂದು ರಾತ್ರಿ ಕರೆತಂದು ….. ಮಾಡೋಣ ಎಂದು ಹೇಳಿದ್ದಾನೆ. ಈ ಹುಡುಗರು ಚಾಟ್ ಮಾಡಿದ ಬಹುತೇಕ ಸಂದರ್ಭಗಳಲ್ಲಿ ಹುಡುಗಿಯರನ್ನು ಕೀಳಾಗಿ ಕಂಡಿದ್ದಾರೆ ಮತ್ತು ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿಕೊಂಡಿದ್ದಾರೆ.

ಅತ್ಯಾಚಾರ, ಸಲಿಂಗಕಾಮ, ಸಲಿಂಗಕಾಮಿಗಳ ರೀತಿಯಲ್ಲಿ ಹುಡುಗರು ಅಣಕ ಮಾಡಿದ್ದಾರೆ. ಈ ರೀತಿ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಮತ್ತು ಅಶ್ಲೀಲ ಶಬ್ದಗಳ ಬಳಕೆ ಮಾಡಿರುವುದು ಮಕ್ಕಳ ವಿಕೃತ ಮನಸ್ಥಿತಿಯನ್ನು ಅನಾವರಣ ಮಾಡಿದೆ.

ಇನ್ನೂ ಪ್ರೌಢಶಾಲೆಯಲ್ಲಿರುವ ಮಕ್ಕಳು ಈ ರೀತಿ ಹಾಳಾಗುತ್ತಿರುವುದು ಪ್ರಜ್ಞಾವಂತ ಸಮಾಜಕ್ಕೆ ಒಂದು ಎಚ್ಚರಿಕೆ ಗಂಟೆಯಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳು ಮತ್ತು ಪೋಷಕರು ತಮ್ಮ ಮಕ್ಕಳ ಮೇಲೆ ಸದಾ ಒಂದು ಕಣ್ಣಿಟ್ಟಿರಬೇಕಾಗುತ್ತದೆ. ಒಂದು ವೇಳೆ ಅಡ್ಡದಾರಿ ತುಳಿಯುತ್ತಿರುವ ಸೂಕ್ಷ್ಮಗಳು ಗೊತ್ತಾದ ತಕ್ಷಣ ಅವರನ್ನು ಸರಿ ದಾರಿಗೆ ತರುವಂತೆ ಮಾಡಬೇಕು.

ಇದರೊಂದಿಗೆ ಇಂತಹ ಮನಸ್ಥಿತಿಯ ಮಕ್ಕಳಿಗೆ ಸೂಕ್ತವಾದ ಕೌನ್ಸೆಲಿಂಗ್ ನಡೆಸಿ ಅವರ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಂತೆ ಮಾಡಬೇಕಿದೆ.

Tags: CounsellingHigh School StudentsIB SchoolInternetMobile Usesexually explicitSocial Mediatext messageWhats appಆಶ್ಲೀಲ ಸಂದೇಶಐಬಿ ಶಾಲೆಕೌನ್ಸೆಲಿಂಗ್‌ಫ್ರೌಡಶಾಲೆ ವಿದ್ಯಾರ್ಥಿಗಳುಮೊಬೈಲ್‌ ಬಳಕೆವಾಟ್ಸ್‌ ಆಪ್‌ಸಾಮಾಜಿಕ ಜಾಲತಾಣ
Previous Post

ಹಿಂದೂ ಹೃದಯ ಸಾಮ್ರಾಟನ ‘ವಂದಿ ಮಾಗದರು’ ಭಿನ್ನ ಹಾದಿ ಹಿಡಿಯುತ್ತಿರುವುದೇಕೆ?

Next Post

ಪೌರತ್ವ ಕಾನೂನು ವಿರುದ್ಧ `ದಂಗೆ’ಯೆದ್ದ INDIA

Related Posts

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”
Top Story

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕಾಗದದಲ್ಲಿ 10.65 ಲಕ್ಷ ಟನ್ ಗೊಬ್ಬರ, ರೈತರ ಕೈಯಲ್ಲಿ ಖಾಲಿ ಚೀಲ, ಇದು ಡಿಕೆ ಶಿವಕುಮಾರ್ ಸರ್ಕಾರದ ಕೃಷಿ ನೀತಿ! ಮುಂಗಾರು ಆರಂಭವಾಗಿದೆ. ರೈತರು ಬಿತ್ತನೆಗೆ...

Read moreDetails
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

June 12, 2026
ಬಿಡದಿ ಟೌನ್‌‌ ಶಿಪ್ ನಿರ್ಮಾಣ : ಅಧಿಕೃತವಾಗಿ ಭೂಸ್ವಾಧೀನದ ಅಖಾಡಕ್ಕಿಳಿದ ರಾಜ್ಯ ಸರ್ಕಾರ..

ಬಿಡದಿ ಟೌನ್‌‌ ಶಿಪ್ ನಿರ್ಮಾಣ : ಅಧಿಕೃತವಾಗಿ ಭೂಸ್ವಾಧೀನದ ಅಖಾಡಕ್ಕಿಳಿದ ರಾಜ್ಯ ಸರ್ಕಾರ..

June 12, 2026
ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

June 12, 2026
Next Post
ಪೌರತ್ವ ಕಾನೂನು ವಿರುದ್ಧ `ದಂಗೆ’ಯೆದ್ದ INDIA

ಪೌರತ್ವ ಕಾನೂನು ವಿರುದ್ಧ `ದಂಗೆ’ಯೆದ್ದ INDIA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada