Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ದೊಡ್ಡವರ ಮಕ್ಕಳ ಅಸಹ್ಯಕರ ಆಟ!

ದೊಡ್ಡವರ ಮಕ್ಕಳ ಅಸಹ್ಯಕರ ಆಟ!
ದೊಡ್ಡವರ ಮಕ್ಕಳ ಅಸಹ್ಯಕರ ಆಟ!

December 19, 2019
Share on FacebookShare on Twitter

ಮಕ್ಕಳ ಕೈಗೆ ಮೊಬೈಲ್ ಗಳನ್ನು ಕೊಟ್ಟರೆ ಏನೆಲ್ಲಾ ಅವಾಂತರಗಳು ಆಗುತ್ತವೆ ಎಂಬುದಕ್ಕೆ ಮುಂಬೈನ ಹೆಸರಾಂತ ಶಾಲೆಯೊಂದರ ಮಕ್ಕಳು ನಡೆಸಿರುವ ಕೃತ್ಯ ನಿದರ್ಶನವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಇಲ್ಲಿನ ಕೆಲವು ಬಾಲಕರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ಬಗ್ಗೆ ಅವಹೇಳನಾಕಾರಿ ಮತ್ತು ಅಶ್ಲೀಲ ಸಂದೇಶಗಳನ್ನು ವಾಟ್ಸಪ್ ನಲ್ಲಿ ಹರಿ ಬಿಟ್ಟು ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಮತ್ತು ಶಾಲೆಗೆ ಇರಿಸು ಮುರಿಸು ಉಂಟು ಮಾಡಿದ್ದಾರೆ.

ಈ ತಪ್ಪಿಗಾಗಿ 8 ವಿದ್ಯಾರ್ಥಿಗಳನ್ನು ಶಾಲೆಯಿಂದ ಅಮಾನತು ಮಾಡಲಾಗಿದೆ. ಇವರೆಲ್ಲಾ 13 ರಿಂದ 14 ವರ್ಷ ವಯೋಮಾನದವರಾಗಿದ್ದಾರೆ.

ದೇಶದ ಹೆಸರಾಂತ ಶಾಲೆಯಾಗಿರುವ ಐಬಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿರುವುದು.

ಎಂಟು ವಿದ್ಯಾರ್ಥಿಗಳು ಸೇರಿ ನವೆಂಬರ್ 8 ರಿಂದ 30 ರ ಅವಧಿಯಲ್ಲಿ ನೂರಕ್ಕೂ ಹೆಚ್ಚು ಬಾರಿ ಚಾಟ್ ಮಾಡಿದ್ದಾರೆ. ಅಶ್ಲೀಲ ಪದಗಳ ಬಳಕೆ, ಅತ್ಯಾಚಾರ, ಕೊಲೆ ಮಾಡುವುದು. . . ಹೀಗೆ ಹಲವು ವಿಧದಲ್ಲಿ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರು ಬಾಲಕಿಯರನ್ನು ಗುರಿಯಾಗಿಟ್ಟುಕೊಂಡು ಅವರ ಮೇಲೆ ಅತ್ಯಾಚಾರ ಮಾಡಲಾಗುತ್ತದೆ ಎಂದೆಲ್ಲಾ ಮನಸಿಗೆ ಬಂದಂತೆ ಮೆಸೇಜ್ ಗಳನ್ನು ಮಾಡಿಕೊಂಡಿದ್ದಾರೆ.

ಇಬ್ಬರು ವಿದ್ಯಾರ್ಥಿನಿಯರ ತಾಯಂದಿರ ತಮ್ಮ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಶಾಲೆಗೆ ಈ ಬಗ್ಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಕೆಲವು ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೆ, ಪೋಷಕರು ಈ ಬಗ್ಗೆ ಹೆಚ್ಚೇನೂ ತಲೆಕೆಡಿಸಿಕೊಂಡಿರಲಿಲ್ಲ.

ಬಾಲಕರು ನಡೆಸಿರುವ ಚಾಟ್ 100 ಪೇಜಿಗೂ ಅಧಿಕವಾಗಿದೆ. ‘gang bang’, ‘rape’, “for one night”, “Then one night we just go and bang her”, “should I go full on and kill her existence” ಹೀಗೆ ಹಲವು ರೀತಿಯಲ್ಲಿ ಅಸಹ್ಯ ಹುಟ್ಟಿಸುವಂತಹ ಸಂದೇಶಗಳನ್ನು ಈ ವಿದ್ಯಾರ್ಥಿಗಳು ಪರಸ್ಪರ ಹಂಚಿಕೊಂಡಿದ್ದಾರೆ.

ನವೆಂಬರ್ 23 ರಂದು ನಡೆಸಿರುವ ಸಂಭಾಷಣೆಯಲ್ಲಿ ಬಾಲಕನೋರ್ವ ಹುಡುಗಿಯರನ್ನು ಒಂದು ರಾತ್ರಿಗೆ ಕರೆದೊಯ್ಯುವುದು ಎಂಬರ್ಥ ಬರುವ ರೀತಿಯಲ್ಲಿ ಹೇಳಿದ್ದಾನೆ.

ಇನ್ನೊಬ್ಬ ಕಿರಾತಕ ಬಾಲಕ ಹಾಗಾದರೆ ನಾವು ಆ ಹುಡುಗಿಯನ್ನು ಒಂದು ರಾತ್ರಿ ಕರೆತಂದು ….. ಮಾಡೋಣ ಎಂದು ಹೇಳಿದ್ದಾನೆ. ಈ ಹುಡುಗರು ಚಾಟ್ ಮಾಡಿದ ಬಹುತೇಕ ಸಂದರ್ಭಗಳಲ್ಲಿ ಹುಡುಗಿಯರನ್ನು ಕೀಳಾಗಿ ಕಂಡಿದ್ದಾರೆ ಮತ್ತು ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿಕೊಂಡಿದ್ದಾರೆ.

ಅತ್ಯಾಚಾರ, ಸಲಿಂಗಕಾಮ, ಸಲಿಂಗಕಾಮಿಗಳ ರೀತಿಯಲ್ಲಿ ಹುಡುಗರು ಅಣಕ ಮಾಡಿದ್ದಾರೆ. ಈ ರೀತಿ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಮತ್ತು ಅಶ್ಲೀಲ ಶಬ್ದಗಳ ಬಳಕೆ ಮಾಡಿರುವುದು ಮಕ್ಕಳ ವಿಕೃತ ಮನಸ್ಥಿತಿಯನ್ನು ಅನಾವರಣ ಮಾಡಿದೆ.

ಇನ್ನೂ ಪ್ರೌಢಶಾಲೆಯಲ್ಲಿರುವ ಮಕ್ಕಳು ಈ ರೀತಿ ಹಾಳಾಗುತ್ತಿರುವುದು ಪ್ರಜ್ಞಾವಂತ ಸಮಾಜಕ್ಕೆ ಒಂದು ಎಚ್ಚರಿಕೆ ಗಂಟೆಯಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳು ಮತ್ತು ಪೋಷಕರು ತಮ್ಮ ಮಕ್ಕಳ ಮೇಲೆ ಸದಾ ಒಂದು ಕಣ್ಣಿಟ್ಟಿರಬೇಕಾಗುತ್ತದೆ. ಒಂದು ವೇಳೆ ಅಡ್ಡದಾರಿ ತುಳಿಯುತ್ತಿರುವ ಸೂಕ್ಷ್ಮಗಳು ಗೊತ್ತಾದ ತಕ್ಷಣ ಅವರನ್ನು ಸರಿ ದಾರಿಗೆ ತರುವಂತೆ ಮಾಡಬೇಕು.

ಇದರೊಂದಿಗೆ ಇಂತಹ ಮನಸ್ಥಿತಿಯ ಮಕ್ಕಳಿಗೆ ಸೂಕ್ತವಾದ ಕೌನ್ಸೆಲಿಂಗ್ ನಡೆಸಿ ಅವರ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಂತೆ ಮಾಡಬೇಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR
ಇದೀಗ

DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR

by ಪ್ರತಿಧ್ವನಿ
March 20, 2023
KS ESHWARAPPA | ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರು ಕಾಂಗ್ರೆಸ್ ಅವ್ರೆ ಸೋಲಿಸುತಾರೆ #PRATIDHVANI
ಇದೀಗ

KS ESHWARAPPA | ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರು ಕಾಂಗ್ರೆಸ್ ಅವ್ರೆ ಸೋಲಿಸುತಾರೆ #PRATIDHVANI

by ಪ್ರತಿಧ್ವನಿ
March 23, 2023
ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..
Top Story

ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..

by ಕೃಷ್ಣ ಮಣಿ
March 22, 2023
ಶೋಷಣೆಯ ಬಯಲೂ ಮಾರುಕಟ್ಟೆಯ ಸಂಕೋಲೆಯೂ..ನವ ಉದಾರವಾದದ ಚೌಕಟ್ಟಿನಲ್ಲಿ ಕಾರ್ಮಿಕ ಕಾಯ್ದೆಗಳನ್ನು ಮಾರುಕಟ್ಟೆಯೇ ನಿರ್ಧರಿಸುತ್ತದೆ
Top Story

ಶೋಷಣೆಯ ಬಯಲೂ ಮಾರುಕಟ್ಟೆಯ ಸಂಕೋಲೆಯೂ..ನವ ಉದಾರವಾದದ ಚೌಕಟ್ಟಿನಲ್ಲಿ ಕಾರ್ಮಿಕ ಕಾಯ್ದೆಗಳನ್ನು ಮಾರುಕಟ್ಟೆಯೇ ನಿರ್ಧರಿಸುತ್ತದೆ

by ನಾ ದಿವಾಕರ
March 26, 2023
ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
ಸಿನಿಮಾ

ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

by ಪ್ರತಿಧ್ವನಿ
March 23, 2023
Next Post
ಪೌರತ್ವ ಕಾನೂನು ವಿರುದ್ಧ `ದಂಗೆ’ಯೆದ್ದ INDIA

ಪೌರತ್ವ ಕಾನೂನು ವಿರುದ್ಧ `ದಂಗೆ’ಯೆದ್ದ INDIA

ಇಬ್ಬರು ಅಮಾಯಕರ ಬಲಿ ತೆಗೆದುಕೊಂಡ CAA

ಇಬ್ಬರು ಅಮಾಯಕರ ಬಲಿ ತೆಗೆದುಕೊಂಡ CAA

ರಾಜ್ಯ ಕಾಂಗ್ರೆಸ್ಸಿನಲ್ಲಿ ಬದಲಾಗಬೇಕಿರುವುದು ನಾಯಕತ್ವವಲ್ಲ

ರಾಜ್ಯ ಕಾಂಗ್ರೆಸ್ಸಿನಲ್ಲಿ ಬದಲಾಗಬೇಕಿರುವುದು ನಾಯಕತ್ವವಲ್ಲ, ನಾಯಕರ ಧೋರಣೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist